Homeಮುಖಪುಟಹೆಡ್ಗೆವಾರ್ ಸ್ಮಾರಕ ಭೇಟಿ ತಪ್ಪಿಸಿಕೊಂಡ ಅಜಿತ್ ಪವಾರ್ : ನಮ್ಮದು ಅಂಬೇಡ್ಕರ್, ಫುಲೆ ಸಿದ್ಧಾಂತ ಎಂದ...

ಹೆಡ್ಗೆವಾರ್ ಸ್ಮಾರಕ ಭೇಟಿ ತಪ್ಪಿಸಿಕೊಂಡ ಅಜಿತ್ ಪವಾರ್ : ನಮ್ಮದು ಅಂಬೇಡ್ಕರ್, ಫುಲೆ ಸಿದ್ಧಾಂತ ಎಂದ ಎನ್‌ಸಿಪಿ ವಕ್ತಾರ

- Advertisement -
- Advertisement -

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಭಾನುವಾರ (ಡಿ.14) ನಾಗ್ಪುರದಲ್ಲಿರುವ ಆರ್‌ಎಸ್‌ಎಸ್ ಸಂಸ್ಥಾಪಕ ಕೆ.ಬಿ. ಹೆಡ್ಗೆವಾರ್ ಸ್ಮಾರಕ ಭೇಟಿ ಕಾರ್ಯಕ್ರಮದಿಂದ ತಪ್ಪಿಸಿಕೊಂಡಿದ್ದು, ಅವರ ಪಕ್ಷ ಎನ್‌ಸಿಪಿ ರಾಜ್ಯದ ಅಭಿವೃದ್ಧಿಗಾಗಿ ಮಹಾಯುತಿ ಮೈತ್ರಿಕೂಟಕ್ಕೆ ಸೇರಿರುವುದಾಗಿ ಒತ್ತಿ ಹೇಳಿದೆ ಎಂದು ದಿ ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಸಿದ್ಧಾಂತವು (ಸಮಾಜ ಸುಧಾರಕರು) ಶಾಹು, ಫುಲೆ ಮತ್ತು ಅಂಬೇಡ್ಕರ್ ಅವರ ಪ್ರಗತಿಪರ ಆಲೋಚನೆಗಳನ್ನು ಆಧರಿಸಿದೆ” ಎಂದು ಎನ್‌ಸಿಪಿ ವಕ್ತಾರ ಆನಂದ್ ಪರಾಂಜಪೆ ಹೇಳಿದ್ದಾರೆ. ಹೆಡ್ಗೆವಾರ್ ಅವರ ಸ್ಮಾರಕಕ್ಕೆ ಪವಾರ್ ಭೇಟಿ ನೀಡುವುದನ್ನು ತಪ್ಪಿಸಿಕೊಂಡಿದ್ದು ಇದೇ ಮೊದಲಲ್ಲ ಎಂದಿದ್ದಾರೆ ಎಂದು ವರದಿ ಉಲ್ಲೇಖಿಸಿದೆ.

“ನಾವು ನಮ್ಮ ತತ್ವಗಳಿಗೆ ಬದ್ಧರಾಗಿದ್ದೇವೆ ಮತ್ತು ನಮ್ಮ ಗಮನ ರಾಜ್ಯದ ಅಭಿವೃದ್ಧಿಯಾಗಿದೆ” ಎಂದು ಪರಾಂಜಪೆ ಹೇಳಿದ್ದಾರೆ ಎಂದಿದೆ.

ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಆಡಳಿತಾರೂಢ ಬಿಜೆಪಿ, ಶಿವಸೇನೆ ಶಾಸಕರು ಭಾನುವಾರ ಬೆಳಿಗ್ಗೆ ಹೆಡ್ಗೆವಾರ್ ಸ್ಮಾರಕಕ್ಕೆ ಭೇಟಿ ನೀಡಿ ಗೌರವ ಸಲ್ಲಿಸಿದರೆ, ಪವಾರ್ ಮತ್ತು ಇತರ ಎನ್‌ಸಿಪಿ ನಾಯಕರು ಕಾರ್ಯಕ್ರಮಕ್ಕೆ ಗೈರಾಗಿದ್ದರು.

ಮಹಾರಾಷ್ಟ್ರ ವಿಧಾನಸಭೆಯ ಚಳಿಗಾಲದ ಅಧಿವೇಶನವು ಪ್ರಸ್ತುತ ನಾಗ್ಪುರದಲ್ಲಿ ನಡೆಯುತ್ತಿದೆ.

ಪ್ರತಿ ವರ್ಷ ರಾಜ್ಯ ವಿಧಾನಸಭೆಯ ಚಳಿಗಾಲದ ಅಧಿವೇಶನದ ಸಮಯದಲ್ಲಿ ಬಿಜೆಪಿ ಸಚಿವರು ಮತ್ತು ಶಾಸಕರು ರೇಶಿಂಬಾಗ್‌ನ ಸ್ಮೃತಿ ಮಂದಿರದಲ್ಲಿರುವ ಹೆಡ್ಗೆವಾರ್ ಮತ್ತು ಆರ್‌ಎಸ್‌ಎಸ್‌ನ ಎರಡನೇ ಸಂಘಚಾಲಕ ಎಂ.ಎಸ್ ಗೋಲ್ವಾಲ್ಕರ್ ಅವರ ಸ್ಮಾರಕಕ್ಕೆ ಭೇಟಿ ನೀಡುತ್ತಾರೆ.

ಕಳೆದ ವರ್ಷ ಕೂಡ ವಿಧಾನಸಭೆಯಲ್ಲಿ 41 ಶಾಸಕರನ್ನು ಹೊಂದಿದ್ದರೂ, ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿಯಿಂದ ಶಾಸಕರಾದ ರಾಜು ಕರೇಮೋರೆ ಮತ್ತು ರಾಜ್‌ಕುಮಾರ್ ಬಡೋಲೆ ಮಾತ್ರ ಸ್ಮೃತಿ ಮಂದಿರಕ್ಕೆ ಭೇಟಿ ನೀಡಿದ್ದರು.

“ಸಚಿವ ಸಂಪುಟ ಸಭೆಗಳಲ್ಲಿ ಎನ್‌ಸಿಪಿ ಆರ್‌ಎಸ್‌ಎಸ್‌ನ ಸಿದ್ದಾಂತಗಳನ್ನು ಕೇಳುತ್ತಿದೆ. ಅವರು ಅದನ್ನು ಒಪ್ಪಿಕೊಳ್ಳದ ಹೊರತು ಅಧಿಕಾರದಲ್ಲಿ ಇರಲು ಸಾಧ್ಯವಿಲ್ಲ” ಎಂದು ವಿರೋಧ ಪಕ್ಷ ಕಾಂಗ್ರೆಸ್‌ನ ವಕ್ತಾರ ಸಚಿನ್ ಸಾವಂತ್ ಹೇಳಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿರುವ ಸಾವಂತ್ ಆರ್‌ಎಸ್‌ಎಸ್‌ ಅನ್ನು ಟೀಕಿಸಿದ್ದು, “ಅದು ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ದುರ್ಬಲಗೊಳಿಸುವ ಸಿದ್ಧಾಂತಗಳನ್ನು ಉತ್ತೇಜಿಸುತ್ತದೆ” ಎಂದು ಆರೋಪಿಸಿದ್ದಾರೆ.

ಏಕನಾಥ್ ಶಿಂಧೆ ಮತ್ತು ಶಿವಸೇನೆ ಶಾಸಕರು ಹೆಡ್ಗೆವಾರ್ ಸ್ಮಾರಕಕ್ಕೆ ಭೇಟಿ ನೀಡಿರುವುದನ್ನು ಉಲ್ಲೇಖಿಸಿರುವ ಸಾವಂತ್, “ಹಣ ಹಂಚುವ ಮೂಲಕ ಹೇಗೆ ಅಧಿಕಾರ ಪಡೆಯುವುದು ಮತ್ತು ಹೇಗೆ ಸಾಂವಿಧಾನಿಕ ಪ್ರಜಾಪ್ರಭುತ್ವವನ್ನು ನಾಶಮಾಡುವುದು” ಎಂಬುದರ ಮೇಲೆ ಅವರ ಗಮನವಿದೆ ಎಂದು ಟೀಕಿಸಿದ್ದಾರೆ.

“100 ವರ್ಷಗಳಿಗೂ ಹೆಚ್ಚು ಕಾಲದಿಂದ ಅಸ್ತಿತ್ವದಲ್ಲಿದ್ದರೂ, ಹಿಂದುತ್ವ ಏನನ್ನು ಸೂಚಿಸುತ್ತದೆ ಎಂಬುದನ್ನು ಸ್ಪಷ್ಟವಾಗಿ ವ್ಯಾಖ್ಯಾನಿಸುವಲ್ಲಿ ಆರ್‌ಎಸ್‌ಎಸ್ ವಿಫಲವಾಗಿದೆ” ಎಂದು ಕಾಂಗ್ರೆಸ್ ನಾಯಕಿ ಹೇಳಿದ್ದಾರೆ.

“ಕನಿಷ್ಠ ಪಕ್ಷ ಈಗಲಾದರೂ ಹಿಂದುತ್ವ ಎಂದರೆ ಏನು ಎಂಬುದನ್ನು ಅವರು ಸ್ಪಷ್ಟಪಡಿಸಬೇಕು. ಆರ್‌ಎಸ್‌ಎಸ್‌ನಲ್ಲಿ ಉತ್ತಮ ಚರ್ಚೆಗಳು ನಡೆಯುವುದು ಕಡಿಮೆ, ಸಮಾಜವನ್ನು ವಿಭಜಿಸುವ ಚರ್ಚೆಗಳೇ ಹೆಚ್ಚು ಎಂದು ಸಚಿನ್ ಸಾವಂತ್ ಬರೆದುಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...