Homeಮುಖಪುಟಮಹಾ ಸಿಎಂ ಉದ್ಧವ್‌ ಠಾಕ್ರೆ ಸಂಪುಟ ವಿಸ್ತರಣೆ: ಡಿಸಿಎಂ ಆಗಿ ಅಜಿತ್‌ ಪವಾರ್‌, ಸಚಿವನಾಗಿ ಆದಿತ್ಯ...

ಮಹಾ ಸಿಎಂ ಉದ್ಧವ್‌ ಠಾಕ್ರೆ ಸಂಪುಟ ವಿಸ್ತರಣೆ: ಡಿಸಿಎಂ ಆಗಿ ಅಜಿತ್‌ ಪವಾರ್‌, ಸಚಿವನಾಗಿ ಆದಿತ್ಯ ಠಾಕ್ರೆ..

- Advertisement -
- Advertisement -

ಉದ್ಧವ್ ಠಾಕ್ರೆ ನೇತೃತ್ವದ ಮಹಾರಾಷ್ಟ್ರ ಸರ್ಕಾರವು ತನ್ನ ಸಂಪುಟಕ್ಕೆ ಮೂವತ್ತಾರು ಮಂತ್ರಿಗಳನ್ನು ಸೇರಿಸಿಕೊಳ್ಳಲಾಗಿದೆ. ಇಂದು ಪ್ರಮಾಣ ವಚನ ಸ್ವೀಕರಿಸಿದ ಮಂತ್ರಿಗಳಲ್ಲಿ ಉದ್ಧವ್ ಅವರ 29 ವರ್ಷದ ಮಗ ಆದಿತ್ಯ ಠಾಕ್ರೆ ಸೇರಿದ್ದು, ಮಹಾರಾಷ್ಟ್ರದಲ್ಲಿ ಇದೇ ಮೊದಲ ಬಾರಿಗೆ ತಂದೆ-ಮಗ ಜೋಡಿಯನ್ನು ರಾಜ್ಯದ ಮಂತ್ರಿ ಮಂಡಳಿಯಲ್ಲಿ ನೋಡುವಂತಾಗಿದೆ.

ಎನ್‌ಸಿಪಿ ನಾಯಕ ಅಜಿತ್ ಪವಾರ್ ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.  ಎರಡು ತಿಂಗಳ ಅವಧಿಯಲ್ಲಿ ಎರಡನೇ ಬಾರಿ ಡಿಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ದಾಖಲೆ ಅವರದು. ನವೆಂಬರ್‌ನಲ್ಲಿ ಕೇವಲ ಮೂರು ದಿನಗಳ ಕಾಲ ಬಿಜೆಪಿಯ ದೇವೇಂದ್ರ ಫಡ್ನವೀಸ್ ಅವರೊಂದಿಗೆ ಸರ್ಕಾರ ರಚಿಸುವ ಒಪ್ಪಂದದಲ್ಲಿ ಅವರು ಡಿಸಿಎಂ ಆಗಿದ್ದರು.

ಮಹಾರಾಷ್ಟ್ರದ ಒಟ್ಟು 36 ಮಂತ್ರಿಗಳಲ್ಲಿ (ಒಟ್ಟು ಶಾಸಕರ 15%) 26 ಮಂತ್ರಿಗಳು ಕ್ಯಾಬಿನೆಟ್ ಮಂತ್ರಿಗಳಾಗಿ ಮತ್ತು 10 ಮಂತ್ರಿಗಳು ಕಿರಿಯ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ವಿಸ್ತೃತ ಸಂಪುಟದಲ್ಲಿ ಮೂವರು ಮಹಿಳೆಯರಿದ್ದರೆ, ನಾಲ್ವರು ಮುಸ್ಲಿಮರಿದ್ದಾರೆ.

ಆದಿತ್ಯ ಠಾಕ್ರೆಯವರಲ್ಲದೇ ಹಿರಿಯ ಎನ್‌ಸಿಪಿ ಮುಖಂಡ ಮತ್ತು ಸಂಸದ ಸುನಿಲ್ ತತ್ಕರೆ ಅವರ ಪುತ್ರಿ ಅದಿತಿ ಕೂಡ ಮೊದಲ ಬಾರಿಗೆ ಶಾಸಕರಾಗಿದ್ದರೂ ಸಂಪುಟದಲ್ಲಿ ಸ್ಥಾನ ಪಡೆದಿದ್ದಾರೆ.

ಉದ್ಧವ್ ಠಾಕ್ರೆ ಅವರು ರೈತ ಮುಖಂಡ ಮತ್ತು ವಿದರ್ಭದ ನಾಲ್ಕು ಅವಧಿಯ ಸ್ವತಂತ್ರ ಶಾಸಕ ಬಚು ಕಾಡು, ಅಹಮದ್‌ನಗರದ ಶಂಕರ್ ಗಡ್ಡಖ್, ಕೊಲ್ಹಾಪುರದ ರಾಜೇಂದ್ರ ಯಾದ್ರವ್ಕರ್ ಸೇರಿದಂತೆ ಮೂವರು ಸ್ವತಂತ್ರರಿಗೆ ಸಂಪುಟದಲ್ಲಿ ಅವಕಾಶ ನೀಡಿದ್ದಾರೆ. ಈ ಎಲ್ಲಾ ಸ್ವತಂತ್ರರು ಶಿವಸೇನೆಗೆ ಬೆಂಬಲ ನೀಡಿದ್ದರು.

ಕಾಂಗ್ರೆಸ್ ತನ್ನ ಪಾಲಿನ 10 ಸಚಿವ ಸ್ಥಾನಗಳಲ್ಲಿ ಮಾಜಿ ಮುಖ್ಯಮಂತ್ರಿ ಪೃಥ್ವಿರಾಜ್ ಚವಾಣ್ ಅವರನ್ನು ಕೈಬಿಟ್ಟು, ಮಾಜಿ ಸಿಎಂ ಅಶೋಕ್ ಚವಾಣ್ ಅವರನ್ನು ಪಟ್ಟಿಯಲ್ಲಿ ಸೇರಿಸಿದೆ.

ಶಿವಸೇನೆಯಿಂದ ಠಾಕ್ರೆ ಅವರು ಎಂಎಲ್ಸಿ ಅನಿಲ್ ಪರಬ್ ಅವರಂತಹ ಪಕ್ಷದ ನಿಷ್ಠಾವಂತರಿಗೆ ಮತ್ತು ಮಾಜಿ ಸಚಿವರಾದ ಸಂಜಯ್ ರಾಥೋಡ್, ಗುಲಾಬ್ರಾವ್ ಪಾಟೀಲ್, ದಾದಾ ಭೂಸ್, ಉದಯ್ ಸಮಂತ್, ಶಂಭುರಾಜೆ ದೇಸಾಯಿ ಅವರನ್ನು ಮತ್ತು ಹೊಸಬರಾದ ಸತ್ತಾರ್, ಸಂದೀಪನ್ ಭುಮ್ರೆ (ಮರಾಠವಾಡ)ರವರನ್ನು ಉಳಿಸಿಕೊಂಡಿದ್ದಾರೆ. ಹೊರಗುಳಿದವರಲ್ಲಿ ಮಾಜಿ ಸಚಿವ ರವೀಂದ್ರ ವೈಕರ್, ಸೇನಾ ಸಂಸದ ಸಂಜಯ್ ರೌತ್ ಅವರ ಸಹೋದರ ಸುನಿಲ್ ರೌತ್ ಇತರರು ಸೇರಿದ್ದಾರೆ.

ಇದರಿಂದ ಸಂಸದ ಸಂಜಯ್ ರೌತ್ ಅಸಮಾಧಾನಗೊಂಡಿದ್ದಾರೆ ಎಂದು ವರದಿಯಾಗಿದೆ. ಆದರೆ ಸಂಜಯ್‌ ರಾವತ್‌ ಅದನ್ನು ನಿರಾಕರಿಸಿದ್ದು ತಮ್ಮ ಕೆಲಸವನ್ನು ಮಾತ್ರ ತಾವು ಮಾಡಿದ್ದು ಮತ್ತು ಪ್ರತಿಯಾಗಿ ಏನನ್ನೂ ನಿರೀಕ್ಷಿಸಿರಲಿಲ್ಲ ಎಂದು ಅವರು ಹೇಳಿದ್ದಾರೆ.

ಮೂರು ಪಕ್ಷಗಳು ಸಚಿವರನ್ನು ಆರಿಸುವಲ್ಲಿ ಪ್ರದೇಶ, ಜಾತಿ ಮತ್ತು ಧರ್ಮವನ್ನು ಗಮನದಲ್ಲಿಟ್ಟುಕೊಂಡಿದ್ದಾರೆ ಎನ್ನಲಾಗುತ್ತಿದೆ. ಈ ಮೊದಲೇ ಆರು ಜನ ಸಚಿವರು ಸಿಎಂ ಉದ್ಧವ್‌ ಠಾಕ್ರೆಯವರೊಂದಿಗೆ ಪ್ರಮಾಣ ವಚನ ಸ್ವೀಕರಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಡಿಶಾ | ಆಸ್ಪತ್ರೆಯಲ್ಲಿ ಬೆಂಕಿ ಅವಘಡ : 10 ಮಂದಿ ಸಾವು

ಒಡಿಶಾದ ಕಟಕ್‌ನಲ್ಲಿರುವ ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಟ್ರಾಮಾ ಕೇರ್ ಐಸಿಯುನಲ್ಲಿ ಸೋಮವಾರ (ಮಾರ್ಚ್ 16) ಬೆಂಕಿ ಅವಘಡ ಸಂಭವಿಸಿದ್ದು, ಕನಿಷ್ಠ 10 ರೋಗಿಗಳು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು...

ಆಸ್ಕರ್‌ 2026 : ಮೈಕೆಲ್ ಬಿ. ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ, ಒನ್ ಬ್ಯಾಟಲ್ ಆಫ್ಟರ್ ಅನದರ್‌ಗೆ ಅತ್ಯುತ್ತಮ ಚಿತ್ರ ಪ್ರಶಸ್ತಿ

ಪ್ರತಿಷ್ಠಿತ 98ನೇ ಅಕಾಡೆಮಿ ಪ್ರಶಸ್ತಿ (ಆಸ್ಕರ್ 2026) ಸಮಾರಂಭ ಲಾಸ್ ಏಂಜಲೀಸ್‌ನ ಡಾಲ್ಬಿ ಥಿಯೇಟರ್‌ನಲ್ಲಿ ಮಾರ್ಚ್ 15ರಂದು (ಭಾರತೀಯ ಕಾಲಮಾನ ಮಾರ್ಚ್ 16) ನಡೆಯಿತು. ಖ್ಯಾತ ಹಾಸ್ಯನಟ ಕೋನನ್ ಒಬ್ರೇನ್ ಅವರು ಈ ಕಾರ್ಯಕ್ರಮವನ್ನು ನಡೆಸಿಕೊಟ್ಟರು....

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...