Homeಮುಖಪುಟವಿಭಜನೆಯಾಗಿದ್ದ ಎನ್‌ಸಿಪಿ ಮತ್ತೆ ಒಂದಾಗುತ್ತಾ?

ವಿಭಜನೆಯಾಗಿದ್ದ ಎನ್‌ಸಿಪಿ ಮತ್ತೆ ಒಂದಾಗುತ್ತಾ?

- Advertisement -
- Advertisement -

ಮೋದಿ ನೇತೃತ್ವದ ನೂತನ ಎನ್‌ಡಿಎ ಸರಕಾರದಲ್ಲಿ ಎನ್‌ಸಿಪಿ ಬಣಕ್ಕೆ ಸಂಪುಟ ದರ್ಜೆಯ ಸ್ಥಾನಮಾನ ಸಿಗಲಿಲ್ಲ ಎಂದು ಅಸಮಾಧಾನಗೊಂಡಿದ್ದ ಅಜಿತ್‌ ಪವಾರ್‌, ಇದೀಗ ಮಾವ ಶರದ್‌ ಪವಾರ್‌ಗೆ ಅಭಿನಂದನೆಯನ್ನು ಸಲ್ಲಿಸಿದ್ದಾರೆ. ಕಳೆದ 24 ವರ್ಷಗಳಿಂದ ಎನ್‌ಸಿಪಿ ಪಕ್ಷವನ್ನು ಮುನ್ನಡೆಸಿದ್ದಕ್ಕಾಗಿ ಚಿಕ್ಕಪ್ಪ ಶರದ್‌ ಪವಾರ್‌ ಅವರನ್ನು ಅಭಿನಂದಿಸಿದ್ದಾರೆ. ಅಜಿತ್‌ ಬಣದಿಂದ ಶರದ್‌ ಬಣಕ್ಕೆ 18ಕ್ಕೂ ಅಧಿಕ ಶಾಸಕರು ತೆರಳಲು ಮುಂದಾಗಿದ್ದಾರೆ ಎಂಬ ಸುದ್ದಿಗಳ ಮಧ್ಯೆ ಈ ಬೆಳವಣಿಗೆ ನಡೆದಿದೆ.

2023ರಲ್ಲಿ ಶರದ್ ಪವಾರ್ ಸ್ಥಾಪಿಸಿದ ಎನ್‌ಸಿಪಿಯಿಂದ ಬೆಂಬಲಿಗ ಶಾಸಕರ ಜೊತೆ ತೆರಳಿದ್ದ ಅಜಿತ್‌ ಪವಾರ್‌ ಶಿಂಧೆ ಸರಕಾರದಲ್ಲಿ ಡಿಸಿಎಂ ಹುದ್ದೆಯನ್ನು ಪಡೆದುಕೊಂಡಿದ್ದರು. ಆ ಬಳಿಕ ಎನ್‌ಡಿಎ ಬಣದ ಭಾಗವಾಗಿದ್ದ ಅಜಿತ್‌ ಬಣ ಚುನಾವಣೆಯಲ್ಲಿನ ಹೀನಾಯ ಸೋಲು, ಕ್ಯಾಬಿನೆಟ್‌ ದರ್ಜೆಯ ಸ್ಥಾನಮಾನ ಸಿಗದ  ಹಿನ್ನೆಲೆ ಮತ್ತೆ ಚಿಕ್ಕಪ್ಪನ ಜೊತೆ ಅಜಿತ್‌ಗೆ ಪ್ರೀತಿ ಹುಟ್ಟಿದ್ದು, ವಿಭಜಿತ ಎನ್‌ಸಿಪಿ ಮತ್ತೆ ಒಂದಾಗುತ್ತಾ ಎಂಬ ಪ್ರಶ್ನೆ ಮೂಡಿದೆ.

ಲೋಕಸಭೆ ಚುನಾವಣೆಯಲ್ಲಿ ಎನ್‌ಸಿಪಿ ಕೇವಲ ಒಂದು ಸ್ಥಾನವನ್ನು ಗಳಿಸುವ ಮೂಲಕ ಹೀನಾಯ ಸೋಲನುಭವಿದೆ. ಎನ್‌ಡಿಎ ಮಿತ್ರಪಕ್ಷವಾಗಿರುವ ಎನ್‌ಸಿಪಿ ಮೋದಿ 3.0 ಸರ್ಕಾರದಲ್ಲಿ ಕ್ಯಾಬಿನೆಟ್ ಸ್ಥಾನಕ್ಕಿಂತ ಕಡಿಮೆ ಇರುವ ಯಾವುದೇ ಸ್ಥಾನಕ್ಕೆ ಒಪ್ಪಿಕೊಳ್ಳುವುದಿಲ್ಲ ಎಂದು ಪುನರುಚ್ಚರಿಸಿದೆ.

ಇತ್ತೀಚಿನ ಸಾರ್ವತ್ರಿಕ ಚುನಾವಣೆಯಲ್ಲಿ, ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ತಾನು ಸ್ಪರ್ಧಿಸಿದ ನಾಲ್ಕು ಸ್ಥಾನಗಳಲ್ಲಿ ಒಂದನ್ನು ಮಾತ್ರ ಗಳಿಸುವಲ್ಲಿ ಯಶಸ್ವಿಯಾಗಿದ್ದರೆ, ಶರದ್ ಪವಾರ್ ನೇತೃತ್ವದ ಪ್ರತಿಸ್ಪರ್ಧಿ ಬಣವು ಸ್ಪರ್ಧಿಸಿದ ಹತ್ತು ಕ್ಷೇತ್ರಗಳಲ್ಲಿ ಎಂಟನ್ನು ಗೆದ್ದುಕೊಂಡಿದೆ. ಅಜಿತ್ ಪತ್ನಿ ಸುನೇತ್ರಾ ಪವಾರ್, ಸೊಸೆ ಸುಪ್ರಿಯಾ ಸುಳೆ ವಿರುದ್ಧ ಬಾರಾಮತಿಯಲ್ಲಿ ಹೀನಾಯ ಸೋಲು ಅನುಭವಿಸಿದ್ದರು.

ಕಳೆದ 24 ವರ್ಷಗಳಿಂದ ಪಕ್ಷವನ್ನು ಮುನ್ನಡೆಸಿದ್ದಕ್ಕಾಗಿ ಶರದ್ ಪವಾರ್ ಅವರಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ ಎಂದು ಅಜಿತ್ ಪವಾರ್ ಹೇಳಿದ್ದಾರೆ.

ಅಜಿತ್ ಪವಾರ್ ಅವರು ಮಹಾರಾಷ್ಟ್ರದಲ್ಲಿ ಶಿವಸೇನೆ-ಬಿಜೆಪಿ ಸರ್ಕಾರಕ್ಕೆ ಸೇರಿದ ಕಾರಣ ಜುಲೈ 2023ರಲ್ಲಿ ಶರದ್ ಪವಾರ್ ಸ್ಥಾಪಿಸಿದ ಎನ್‌ಸಿಪಿಯಿಂದ ಹೊರ ನಡೆದಿದ್ದರು. ಬಳಿಕ ಕೋರ್ಟ್‌ ಮೂಲಕ ತಮ್ಮದೇ ನೈಜ ಎನ್‌ಸಿಪಿ ಎಂದು ಮಾನ್ಯತೆ ಪಡೆದುಕೊಂಡಿದ್ದರು.

ಪಕ್ಷದ ನಾಯಕ ಸುನಿಲ್ ತಟ್ಕರೆ ಅವರು ರಾಯಗಡ ಲೋಕಸಭಾ ಸ್ಥಾನದಲ್ಲಿ ಗೆಲುವನ್ನು ಸಾಧಿಸುವ ಮೂಲಕ ಎನ್‌ಸಿಪಿಯ ಇಮೇಜ್‌ನ್ನು ಉಳಿಸಿಕೊಂಡಿದ್ದಾರೆ. ಎನ್‌ಸಿಪಿಗೆ ಉಂಟಾದ ಚುನಾವಣಾ ಹಿನ್ನಡೆಯಿಂದ ಆಂತರಿಕ ಸಮಸ್ಯೆಗಳನ್ನು ಪರಿಹರಿಸಬೇಕಾಗಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಮೂಲಭೂತ ಹಕ್ಕುಗಳಷ್ಟೇ ಗೌರವಯುತ ಅಂತ್ಯಕ್ರಿಯೆ ಮೃತ ವ್ಯಕ್ತಿಯ ಹಕ್ಕು: ಮುಂಬೈ ಹೈಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

24 ವರ್ಷಗಳ ಮೋದಿ ವರ್ಚಸ್ಸನ್ನು 2 ವಾರಗಳಲ್ಲಿ ಧೂಳೀಪಟ ಮಾಡಿದ ಸಿಜೆಪಿ: CJP ಆಂದೋಲನಕ್ಕೆ ಅರುಂಧತಿ ರಾಯ್ ಮೆಚ್ಚುಗೆ

ಪ್ರಧಾನಿ ನರೇಂದ್ರ ಮೋದಿ ಅವರ ಎರಡು ದಶಕಗಳಿಗೂ ಹೆಚ್ಚಿನ ಸುದೀರ್ಘ ರಾಜಕೀಯ ವರ್ಚಸ್ಸನ್ನು ಕಾಕ್ರೋಚ್ ಜನತಾ ಪಾರ್ಟಿ (CJP) ನಡೆಸಿದ ಪ್ರತಿಭಟನಾ ಆಂದೋಲನವು ಕೇವಲ ಎರಡು ವಾರಗಳಲ್ಲಿ ಬುಡಸಮೇತ ಅಲ್ಲಾಡಿಸಿದೆ. ಇದು ಯಾವುದೇ...

ಕ್ಯಾಬಿನೆಟ್‌ನಲ್ಲಿ ಮಹಿಳೆಯರಿಗಿಲ್ಲ ಸ್ಥಾನ: ಸಿಎಂ ಡಿ.ಕೆ. ಶಿವಕುಮಾರ್ ಗೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆಯಿಂದ ಬಹಿರಂಗ ಪತ್ರ

ಕರ್ನಾಟಕದ ನೂತನ ಸಚಿವ ಸಂಪುಟದಲ್ಲಿ ಒಬ್ಬರೇ ಒಬ್ಬರು ಮಹಿಳಾ ಶಾಸಕರಿಗೆ ಅವಕಾಶ ನೀಡದಿರುವುದನ್ನು ತೀವ್ರವಾಗಿ ಖಂಡಿಸಿರುವ ರಾಜ್ಯದ ಪ್ರಮುಖ ಮಹಿಳಾ ಹಾಗೂ ಜನಪರ ಸಂಘಟನೆಗಳ ಒಕ್ಕೂಟ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆ ಮುಖ್ಯಮಂತ್ರಿಗಳಿಗೆ ಬಹಿರಂಗ...

ಜಾರ್ಖಂಡ್ | ಜೆಪಿಎಸ್‌ಸಿ, ಜೆಎಸ್‌ಎಸ್‌ಸಿ ಪರೀಕ್ಷಾ ಅಕ್ರಮಗಳ ವಿರುದ್ಧ ತೀವ್ರಗೊಂಡ ಪ್ರತಿಭಟನೆ : ಆರು ಮಂದಿಯಿಂದ ಉಪವಾಸ ಸತ್ಯಾಗ್ರಹ

ಜಾರ್ಖಂಡ್ ಲೋಕ ಸೇವಾ ಆಯೋಗ (ಜೆಪಿಎಸ್‌ಸಿ) ಮತ್ತು ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗ (ಜೆಎಸ್ಎಸ್‌ಸಿ) ನಡೆಸಿದ ವಿವಿಧ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಆಪಾದಿತ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ವಿರುದ್ಧದ ಪ್ರತಿಭಟನೆಯು ತೀವ್ರ...

ಸಚಿವ ಸ್ಥಾನ ಸಿಗದಿದ್ದಕ್ಕೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂಬುದು ಸುಳ್ಳು: ಶಾಸಕ ಬಿ. ಆರ್‌ ಪಾಟೀಲ್‌ ಸ್ಪಷ್ಟನೆ

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸಿರುವುದು ನಿಜ. ಆದರೆ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳು...

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...