Homeಮುಖಪುಟವಿಭಜನೆಯಾಗಿದ್ದ ಎನ್‌ಸಿಪಿ ಮತ್ತೆ ಒಂದಾಗುತ್ತಾ?

ವಿಭಜನೆಯಾಗಿದ್ದ ಎನ್‌ಸಿಪಿ ಮತ್ತೆ ಒಂದಾಗುತ್ತಾ?

- Advertisement -
- Advertisement -

ಮೋದಿ ನೇತೃತ್ವದ ನೂತನ ಎನ್‌ಡಿಎ ಸರಕಾರದಲ್ಲಿ ಎನ್‌ಸಿಪಿ ಬಣಕ್ಕೆ ಸಂಪುಟ ದರ್ಜೆಯ ಸ್ಥಾನಮಾನ ಸಿಗಲಿಲ್ಲ ಎಂದು ಅಸಮಾಧಾನಗೊಂಡಿದ್ದ ಅಜಿತ್‌ ಪವಾರ್‌, ಇದೀಗ ಮಾವ ಶರದ್‌ ಪವಾರ್‌ಗೆ ಅಭಿನಂದನೆಯನ್ನು ಸಲ್ಲಿಸಿದ್ದಾರೆ. ಕಳೆದ 24 ವರ್ಷಗಳಿಂದ ಎನ್‌ಸಿಪಿ ಪಕ್ಷವನ್ನು ಮುನ್ನಡೆಸಿದ್ದಕ್ಕಾಗಿ ಚಿಕ್ಕಪ್ಪ ಶರದ್‌ ಪವಾರ್‌ ಅವರನ್ನು ಅಭಿನಂದಿಸಿದ್ದಾರೆ. ಅಜಿತ್‌ ಬಣದಿಂದ ಶರದ್‌ ಬಣಕ್ಕೆ 18ಕ್ಕೂ ಅಧಿಕ ಶಾಸಕರು ತೆರಳಲು ಮುಂದಾಗಿದ್ದಾರೆ ಎಂಬ ಸುದ್ದಿಗಳ ಮಧ್ಯೆ ಈ ಬೆಳವಣಿಗೆ ನಡೆದಿದೆ.

2023ರಲ್ಲಿ ಶರದ್ ಪವಾರ್ ಸ್ಥಾಪಿಸಿದ ಎನ್‌ಸಿಪಿಯಿಂದ ಬೆಂಬಲಿಗ ಶಾಸಕರ ಜೊತೆ ತೆರಳಿದ್ದ ಅಜಿತ್‌ ಪವಾರ್‌ ಶಿಂಧೆ ಸರಕಾರದಲ್ಲಿ ಡಿಸಿಎಂ ಹುದ್ದೆಯನ್ನು ಪಡೆದುಕೊಂಡಿದ್ದರು. ಆ ಬಳಿಕ ಎನ್‌ಡಿಎ ಬಣದ ಭಾಗವಾಗಿದ್ದ ಅಜಿತ್‌ ಬಣ ಚುನಾವಣೆಯಲ್ಲಿನ ಹೀನಾಯ ಸೋಲು, ಕ್ಯಾಬಿನೆಟ್‌ ದರ್ಜೆಯ ಸ್ಥಾನಮಾನ ಸಿಗದ  ಹಿನ್ನೆಲೆ ಮತ್ತೆ ಚಿಕ್ಕಪ್ಪನ ಜೊತೆ ಅಜಿತ್‌ಗೆ ಪ್ರೀತಿ ಹುಟ್ಟಿದ್ದು, ವಿಭಜಿತ ಎನ್‌ಸಿಪಿ ಮತ್ತೆ ಒಂದಾಗುತ್ತಾ ಎಂಬ ಪ್ರಶ್ನೆ ಮೂಡಿದೆ.

ಲೋಕಸಭೆ ಚುನಾವಣೆಯಲ್ಲಿ ಎನ್‌ಸಿಪಿ ಕೇವಲ ಒಂದು ಸ್ಥಾನವನ್ನು ಗಳಿಸುವ ಮೂಲಕ ಹೀನಾಯ ಸೋಲನುಭವಿದೆ. ಎನ್‌ಡಿಎ ಮಿತ್ರಪಕ್ಷವಾಗಿರುವ ಎನ್‌ಸಿಪಿ ಮೋದಿ 3.0 ಸರ್ಕಾರದಲ್ಲಿ ಕ್ಯಾಬಿನೆಟ್ ಸ್ಥಾನಕ್ಕಿಂತ ಕಡಿಮೆ ಇರುವ ಯಾವುದೇ ಸ್ಥಾನಕ್ಕೆ ಒಪ್ಪಿಕೊಳ್ಳುವುದಿಲ್ಲ ಎಂದು ಪುನರುಚ್ಚರಿಸಿದೆ.

ಇತ್ತೀಚಿನ ಸಾರ್ವತ್ರಿಕ ಚುನಾವಣೆಯಲ್ಲಿ, ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ತಾನು ಸ್ಪರ್ಧಿಸಿದ ನಾಲ್ಕು ಸ್ಥಾನಗಳಲ್ಲಿ ಒಂದನ್ನು ಮಾತ್ರ ಗಳಿಸುವಲ್ಲಿ ಯಶಸ್ವಿಯಾಗಿದ್ದರೆ, ಶರದ್ ಪವಾರ್ ನೇತೃತ್ವದ ಪ್ರತಿಸ್ಪರ್ಧಿ ಬಣವು ಸ್ಪರ್ಧಿಸಿದ ಹತ್ತು ಕ್ಷೇತ್ರಗಳಲ್ಲಿ ಎಂಟನ್ನು ಗೆದ್ದುಕೊಂಡಿದೆ. ಅಜಿತ್ ಪತ್ನಿ ಸುನೇತ್ರಾ ಪವಾರ್, ಸೊಸೆ ಸುಪ್ರಿಯಾ ಸುಳೆ ವಿರುದ್ಧ ಬಾರಾಮತಿಯಲ್ಲಿ ಹೀನಾಯ ಸೋಲು ಅನುಭವಿಸಿದ್ದರು.

ಕಳೆದ 24 ವರ್ಷಗಳಿಂದ ಪಕ್ಷವನ್ನು ಮುನ್ನಡೆಸಿದ್ದಕ್ಕಾಗಿ ಶರದ್ ಪವಾರ್ ಅವರಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ ಎಂದು ಅಜಿತ್ ಪವಾರ್ ಹೇಳಿದ್ದಾರೆ.

ಅಜಿತ್ ಪವಾರ್ ಅವರು ಮಹಾರಾಷ್ಟ್ರದಲ್ಲಿ ಶಿವಸೇನೆ-ಬಿಜೆಪಿ ಸರ್ಕಾರಕ್ಕೆ ಸೇರಿದ ಕಾರಣ ಜುಲೈ 2023ರಲ್ಲಿ ಶರದ್ ಪವಾರ್ ಸ್ಥಾಪಿಸಿದ ಎನ್‌ಸಿಪಿಯಿಂದ ಹೊರ ನಡೆದಿದ್ದರು. ಬಳಿಕ ಕೋರ್ಟ್‌ ಮೂಲಕ ತಮ್ಮದೇ ನೈಜ ಎನ್‌ಸಿಪಿ ಎಂದು ಮಾನ್ಯತೆ ಪಡೆದುಕೊಂಡಿದ್ದರು.

ಪಕ್ಷದ ನಾಯಕ ಸುನಿಲ್ ತಟ್ಕರೆ ಅವರು ರಾಯಗಡ ಲೋಕಸಭಾ ಸ್ಥಾನದಲ್ಲಿ ಗೆಲುವನ್ನು ಸಾಧಿಸುವ ಮೂಲಕ ಎನ್‌ಸಿಪಿಯ ಇಮೇಜ್‌ನ್ನು ಉಳಿಸಿಕೊಂಡಿದ್ದಾರೆ. ಎನ್‌ಸಿಪಿಗೆ ಉಂಟಾದ ಚುನಾವಣಾ ಹಿನ್ನಡೆಯಿಂದ ಆಂತರಿಕ ಸಮಸ್ಯೆಗಳನ್ನು ಪರಿಹರಿಸಬೇಕಾಗಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಮೂಲಭೂತ ಹಕ್ಕುಗಳಷ್ಟೇ ಗೌರವಯುತ ಅಂತ್ಯಕ್ರಿಯೆ ಮೃತ ವ್ಯಕ್ತಿಯ ಹಕ್ಕು: ಮುಂಬೈ ಹೈಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...