Homeಮುಖಪುಟಮುಖ್ಯಮಂತ್ರಿಯಾಗುವ ಬಯಕೆ ವ್ಯಕ್ತಪಡಿಸಿದ ಅಜಿತ್ ಪವಾರ್: ಸಿಎಂ ಬದಲಾವಣೆಯಿಲ್ಲವೆಂದ ಬಿಜೆಪಿ

ಮುಖ್ಯಮಂತ್ರಿಯಾಗುವ ಬಯಕೆ ವ್ಯಕ್ತಪಡಿಸಿದ ಅಜಿತ್ ಪವಾರ್: ಸಿಎಂ ಬದಲಾವಣೆಯಿಲ್ಲವೆಂದ ಬಿಜೆಪಿ

- Advertisement -
- Advertisement -

ಮಹಾರಾಷ್ಟ್ರದಲ್ಲಿನ ರಾಜಕೀಯ ಬೆಳವಣಿಗೆಗಳು ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿವೆ. ಎನ್‌ಸಿಪಿಯಿಂದ ಸಿಡಿದು ಬಂದು ಮಹಾರಾಷ್ಟ್ರದ ಡಿಸಿಎಂ ಆಗಿರುವ ಅಜಿತ್ ಪವಾರ್ ತಾನೂ ಮುಖ್ಯಮಂತ್ರಿಯಾಗಬೇಕೆಂಬ ಬಯಕೆ ವ್ಯಕ್ತಪಡಿಸಿದ್ದಾರೆ. ಆದರೆ ಸದ್ಯಕ್ಕೆ ಸಿಎಂ ಬದಲಾವಣೆ ಮಾಡುವುದಿಲ್ಲ ಎಂದು ಬಿಜೆಪಿ ಸ್ಪಷ್ಟಪಡಿಸಿದೆ.

ಸಿಎಂ ಆಗಲು ಬಯಸುತ್ತೀರಾ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅಜಿತ್ ಪವಾರ್, “ಮುಂದೊಂದು ದಿನ ಮುಖ್ಯಮಂತ್ರಿಯಾಗಲು ಬಯಸುತ್ತೇನೆ” ಎಂದಿದ್ದಾರೆ. ಅಲ್ಲದೇ ಶರದ್‌ ಪವಾರ್‌ರವರಿಗೆ 83 ವರ್ಷ ವಯಸ್ಸಾಗಿದೆ. ಇನ್ನು ಎಷ್ಟು ದಿನ ನೀವೇ ಪಕ್ಷವನ್ನು ಮುನ್ನಡೆಸುತ್ತೀರಿ? ನಾನು ಮುಖ್ಯಮಂತ್ರಿಯಾಗಬೇಕು ಎಂದು ಹೇಳಿದ್ದರು.

ಇದು ಸಿಎಂ ಏಕನಾಥ್ ಶಿಂಧೆ ಬಣದಲ್ಲಿ ತಲ್ಲಣ ಉಂಟು ಮಾಡಿದೆ. ಶಿಂಧೆ ಸೇರಿದಂತೆ 16 ಶಾಸಕರ ಅನರ್ಹತೆ ಅರ್ಜಿ ವಿಚಾರಣೆ ನಡೆಯುತ್ತಿದ್ದು ಕೆಲವೇ ದಿನಗಳಲ್ಲಿ ತೀರ್ಪು ಬರಲಿದೆ. ಅಲ್ಲದೇ ಸ್ಪೀಕರ್ ಈ ಬಗ್ಗೆ ಕ್ರಮ ತೆಗೆದುಕೊಳ್ಳಬಹುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಹಾಗಾಗಿ ಆದಷ್ಟು ಬೇಗ ಮಂತ್ರಿಗಳಾಗಲು, ಕೇಂದ್ರ ಸರ್ಕಾರದ ಮಂತ್ರಿಗಳಾಗಲು ಕಾದು ಕುಳಿತಿದ್ದ ಶಿಂಧೆ ಬಣದ ಶಾಸಕರು ಮತ್ತು ಸಂಸದರಿಗೆ ಅಜಿತ್ ಪವಾರ್ ಹೇಳಿಕೆ ನಡುಕ ಹುಟ್ಟಿಸಿದೆ.

ಮಹಾರಾಷ್ಟ್ರದಲ್ಲಿ 43 ಸಚಿವ ಸ್ಥಾನಗಳಿವೆ. ಅದರಲ್ಲಿ ಇದುವರೆಗೂ ಬಿಜೆಪಿಯ 10 ಸಚಿವರು ಮತ್ತು ಶಿಂಧೆ ಬಣದ 10 ಸಚಿವರುಗಳು ಇದ್ದರು. ಇನ್ನು 23 ಸ್ಥಾನಗಳು ಖಾಲಿ ಇದ್ದವು. ಅವುಗಳಲ್ಲಿ ಕನಿಷ್ಟ 11 ಸಚಿವ ಸ್ಥಾನಗಳು ಶಿಂಧೆಯ ಶಿವಸೇನೆ ಶಾಸಕರಿಗೆ ಸಿಗುತ್ತವೆ ಎಂಬ ವಿಶ್ವಾಸದಲ್ಲಿದ್ದರು. ಆದರೆ ಆ 23ರಲ್ಲಿ ಸದ್ಯ ಏಕಾಏಕಿ 9 ಸಚಿವ ಸ್ಥಾನಗಳು ಅಜಿತ್ ಪವಾರ್ ಬಣಕ್ಕೆ ದಕ್ಕಿವೆ. ಹಾಗಾಗಿ ಕೇವಲ 14 ಸ್ಥಾನಗಳು ಮಾತ್ರ ಖಾಲಿ ಇದ್ದು ಶಿಂಧೆ ಬಣಕ್ಕೆ 5 ಸಚಿವ ಸ್ಥಾನ ಸಿಗುವುದೇ ದೊಡ್ಡದು ಎನ್ನಲಾಗಿದೆ.

ಆದರೆ ಸದ್ಯ ಸಿಎಂ ಬದಲಾವಣೆ ಇಲ್ಲ ಎಂದು ಬಿಜೆಪಿಯ ಹಿರಿಯ ನಾಯಕರು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ನಾವು ಏಕನಾಥ್‌ ಶಿಂಧೆಯವರನ್ನು ಬದಿಗೆ ಸರಿಸುವುದು ಒಳ್ಳೆಯ ಸಂದೇಶ ನೀಡುವುದಿಲ್ಲ. ನಮ್ಮ ಗುರಿ ಏನಿದ್ದರೂ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳನ್ನು ಒಟ್ಟಾಗಿ ಎದುರಿಸುವುದಾಗಿದೆ. ಮೂರು ಪಕ್ಷಗಳು ಸೇರಿ ಉತ್ತಮ ಸ್ಪರ್ಧೆ ನಿಡುತ್ತೇವೆ ಮತ್ತು ಮಹಾ ವಿಕಾಸ್ ಅಘಾಡಿಯ ಶಕ್ತಿ ಕುಂದಿಸುತ್ತೇವೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಏಕರೂಪ ನಾಗರಿಕ ಸಂಹಿತೆಗೆ ಬಿಜೆಪಿ ಮಿತ್ರಪಕ್ಷ AIADMK ಯಿಂದ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...