Homeಮುಖಪುಟಮುಖ್ಯಮಂತ್ರಿಯಾಗುವ ಬಯಕೆ ವ್ಯಕ್ತಪಡಿಸಿದ ಅಜಿತ್ ಪವಾರ್: ಸಿಎಂ ಬದಲಾವಣೆಯಿಲ್ಲವೆಂದ ಬಿಜೆಪಿ

ಮುಖ್ಯಮಂತ್ರಿಯಾಗುವ ಬಯಕೆ ವ್ಯಕ್ತಪಡಿಸಿದ ಅಜಿತ್ ಪವಾರ್: ಸಿಎಂ ಬದಲಾವಣೆಯಿಲ್ಲವೆಂದ ಬಿಜೆಪಿ

- Advertisement -
- Advertisement -

ಮಹಾರಾಷ್ಟ್ರದಲ್ಲಿನ ರಾಜಕೀಯ ಬೆಳವಣಿಗೆಗಳು ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿವೆ. ಎನ್‌ಸಿಪಿಯಿಂದ ಸಿಡಿದು ಬಂದು ಮಹಾರಾಷ್ಟ್ರದ ಡಿಸಿಎಂ ಆಗಿರುವ ಅಜಿತ್ ಪವಾರ್ ತಾನೂ ಮುಖ್ಯಮಂತ್ರಿಯಾಗಬೇಕೆಂಬ ಬಯಕೆ ವ್ಯಕ್ತಪಡಿಸಿದ್ದಾರೆ. ಆದರೆ ಸದ್ಯಕ್ಕೆ ಸಿಎಂ ಬದಲಾವಣೆ ಮಾಡುವುದಿಲ್ಲ ಎಂದು ಬಿಜೆಪಿ ಸ್ಪಷ್ಟಪಡಿಸಿದೆ.

ಸಿಎಂ ಆಗಲು ಬಯಸುತ್ತೀರಾ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅಜಿತ್ ಪವಾರ್, “ಮುಂದೊಂದು ದಿನ ಮುಖ್ಯಮಂತ್ರಿಯಾಗಲು ಬಯಸುತ್ತೇನೆ” ಎಂದಿದ್ದಾರೆ. ಅಲ್ಲದೇ ಶರದ್‌ ಪವಾರ್‌ರವರಿಗೆ 83 ವರ್ಷ ವಯಸ್ಸಾಗಿದೆ. ಇನ್ನು ಎಷ್ಟು ದಿನ ನೀವೇ ಪಕ್ಷವನ್ನು ಮುನ್ನಡೆಸುತ್ತೀರಿ? ನಾನು ಮುಖ್ಯಮಂತ್ರಿಯಾಗಬೇಕು ಎಂದು ಹೇಳಿದ್ದರು.

ಇದು ಸಿಎಂ ಏಕನಾಥ್ ಶಿಂಧೆ ಬಣದಲ್ಲಿ ತಲ್ಲಣ ಉಂಟು ಮಾಡಿದೆ. ಶಿಂಧೆ ಸೇರಿದಂತೆ 16 ಶಾಸಕರ ಅನರ್ಹತೆ ಅರ್ಜಿ ವಿಚಾರಣೆ ನಡೆಯುತ್ತಿದ್ದು ಕೆಲವೇ ದಿನಗಳಲ್ಲಿ ತೀರ್ಪು ಬರಲಿದೆ. ಅಲ್ಲದೇ ಸ್ಪೀಕರ್ ಈ ಬಗ್ಗೆ ಕ್ರಮ ತೆಗೆದುಕೊಳ್ಳಬಹುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಹಾಗಾಗಿ ಆದಷ್ಟು ಬೇಗ ಮಂತ್ರಿಗಳಾಗಲು, ಕೇಂದ್ರ ಸರ್ಕಾರದ ಮಂತ್ರಿಗಳಾಗಲು ಕಾದು ಕುಳಿತಿದ್ದ ಶಿಂಧೆ ಬಣದ ಶಾಸಕರು ಮತ್ತು ಸಂಸದರಿಗೆ ಅಜಿತ್ ಪವಾರ್ ಹೇಳಿಕೆ ನಡುಕ ಹುಟ್ಟಿಸಿದೆ.

ಮಹಾರಾಷ್ಟ್ರದಲ್ಲಿ 43 ಸಚಿವ ಸ್ಥಾನಗಳಿವೆ. ಅದರಲ್ಲಿ ಇದುವರೆಗೂ ಬಿಜೆಪಿಯ 10 ಸಚಿವರು ಮತ್ತು ಶಿಂಧೆ ಬಣದ 10 ಸಚಿವರುಗಳು ಇದ್ದರು. ಇನ್ನು 23 ಸ್ಥಾನಗಳು ಖಾಲಿ ಇದ್ದವು. ಅವುಗಳಲ್ಲಿ ಕನಿಷ್ಟ 11 ಸಚಿವ ಸ್ಥಾನಗಳು ಶಿಂಧೆಯ ಶಿವಸೇನೆ ಶಾಸಕರಿಗೆ ಸಿಗುತ್ತವೆ ಎಂಬ ವಿಶ್ವಾಸದಲ್ಲಿದ್ದರು. ಆದರೆ ಆ 23ರಲ್ಲಿ ಸದ್ಯ ಏಕಾಏಕಿ 9 ಸಚಿವ ಸ್ಥಾನಗಳು ಅಜಿತ್ ಪವಾರ್ ಬಣಕ್ಕೆ ದಕ್ಕಿವೆ. ಹಾಗಾಗಿ ಕೇವಲ 14 ಸ್ಥಾನಗಳು ಮಾತ್ರ ಖಾಲಿ ಇದ್ದು ಶಿಂಧೆ ಬಣಕ್ಕೆ 5 ಸಚಿವ ಸ್ಥಾನ ಸಿಗುವುದೇ ದೊಡ್ಡದು ಎನ್ನಲಾಗಿದೆ.

ಆದರೆ ಸದ್ಯ ಸಿಎಂ ಬದಲಾವಣೆ ಇಲ್ಲ ಎಂದು ಬಿಜೆಪಿಯ ಹಿರಿಯ ನಾಯಕರು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ನಾವು ಏಕನಾಥ್‌ ಶಿಂಧೆಯವರನ್ನು ಬದಿಗೆ ಸರಿಸುವುದು ಒಳ್ಳೆಯ ಸಂದೇಶ ನೀಡುವುದಿಲ್ಲ. ನಮ್ಮ ಗುರಿ ಏನಿದ್ದರೂ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳನ್ನು ಒಟ್ಟಾಗಿ ಎದುರಿಸುವುದಾಗಿದೆ. ಮೂರು ಪಕ್ಷಗಳು ಸೇರಿ ಉತ್ತಮ ಸ್ಪರ್ಧೆ ನಿಡುತ್ತೇವೆ ಮತ್ತು ಮಹಾ ವಿಕಾಸ್ ಅಘಾಡಿಯ ಶಕ್ತಿ ಕುಂದಿಸುತ್ತೇವೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಏಕರೂಪ ನಾಗರಿಕ ಸಂಹಿತೆಗೆ ಬಿಜೆಪಿ ಮಿತ್ರಪಕ್ಷ AIADMK ಯಿಂದ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...