Homeಮುಖಪುಟಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

- Advertisement -
- Advertisement -

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ.

ಸುನೇತ್ರಾ ಪವಾರ್ ಅವರನ್ನು ಶಾಸಕಾಂಗ ಪಕ್ಷದ ನಾಯಕಿಯನ್ನಾಗಿ ಆಯ್ಕೆ ಮಾಡಲು ಎನ್‌ಸಿಪಿ ಶಾಸಕರು ಶನಿವಾರ (ಜ.31) ಮಧ್ಯಾಹ್ನ ಮುಂಬೈನಲ್ಲಿ ಸಭೆ ಸೇರಲಿದ್ದಾರೆ. ಬಳಿಕ ಸಂಜೆ 5 ಗಂಟೆ ಮಹಾರಾಷ್ಟ್ರ ಲೋಕಭವನದಲ್ಲಿ ಸುನೇತ್ರಾ ಅವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ವರದಿ ಹೇಳಿದೆ.

ಶುಕ್ರವಾರ (ಜ.30) ಎನ್‌ಸಿಪಿ ಕಾರ್ಯಾಧ್ಯಕ್ಷ ಪ್ರಫುಲ್ ಪಟೇಲ್, ರಾಜ್ಯಾಧ್ಯಕ್ಷ ಸುನಿಲ್ ತತ್ಕರೆ, ಸಚಿವ ಛಗನ್ ಭುಜ್‌ಬಲ್ ಮತ್ತು ಮಾಜಿ ಸಚಿವ ಧನಂಜಯ್ ಮುಂಡೆ ಅವರು ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರನ್ನು ಭೇಟಿ ಮಾಡಿ ಸುನೇತ್ರಾ ಪವಾರ್ ಅವರನ್ನು ತಮ್ಮ ನಾಯಕಿಯಾಗಿ ಆಯ್ಕೆ ಮಾಡಲಾಗುವುದು ಮತ್ತು ಹಣಕಾಸು, ಅಬಕಾರಿ ಹಾಗೂ ಕ್ರೀಡೆ ಸೇರಿದಂತೆ ಅಜಿತ್ ಪವಾರ್ ಹೊಂದಿದ್ದ ಎಲ್ಲಾ ಪ್ರಮುಖ ಖಾತೆಗಳನ್ನು ಉಳಿಸಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಸುನೇತ್ರಾ ಅವರನ್ನು ಶಾಸಕಾಂಗ ಪಕ್ಷದ ನಾಯಕಿಯಾಗಿ ಆಯ್ಕೆ ಮಾಡಿದ ನಂತರ, ಅವರು ಡಿಸಿಎಂ ಹುದ್ದೆಗೆ ಹಕ್ಕು ಮಂಡಿಸುವ ನಿರೀಕ್ಷೆಯಿದ್ದು, ಬಳಿಕ ಸಂಜೆ ಲೋಕಭವನದಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಮೈತ್ರಿಕೂಟ ಸುಗಮ ಪರಿವರ್ತನೆಗೆ ಬೆಂಬಲ ನೀಡುತ್ತದೆ ಎಂದು ಬಿಜೆಪಿಯ ಹಿರಿಯ ನಾಯಕರು ಹೇಳಿದ್ದಾರೆ. ಶುಕ್ರವಾರ ಪಕ್ಷದ ನಾಯಕರು ಎನ್‌ಸಿಪಿ ಶಾಸಕರಿಗೆ ಫೋನ್ ಮಾಡಿ ಅಜಿತ್ ಪವಾರ್ ಅವರ ಉತ್ತರಾಧಿಕಾರಿಯ ಬಗ್ಗೆ ಅವರ ಅಭಿಪ್ರಾಯಗಳನ್ನು ಕೋರಿದ್ದಾರೆ ಎಂದು ಮೂಲವೊಂದು ತಿಳಿಸಿರುವುದಾಗಿ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಶುಕ್ರವಾರ ಸಿಎಂ ಜೊತೆಗಿನ ಸಭೆಯ ಬಳಿಕ ಪ್ರತಿಕ್ರಿಯಿಸಿದ ಎನ್‌ಸಿಪಿ ರಾಜ್ಯಾಧ್ಯಕ್ಷ ಸುನಿಲ್ ತತ್ಕರೆ, “ಪಕ್ಷವು ತೀವ್ರ ದುಃಖದಲ್ಲಿದೆ. ಮುಂದಿನ ನಿರ್ಧಾರಗಳನ್ನು ತೆಗೆದುಕೊಳ್ಳುವ ಮೊದಲು ಪವಾರ್ ಕುಟುಂಬದೊಂದಿಗೆ ಸಮಾಲೋಚನೆ ನಡೆಸಲಾಗುವುದು. ಪಕ್ಷದ ನಾಯಕರು ಶಾಸಕರ ಅಭಿಪ್ರಾಯಗಳನ್ನು ಪಡೆಯಲು ಅವರನ್ನು ಸಂಪರ್ಕಿಸಲಾಗಿದೆ ಎಂದಿದ್ದಾರೆ ಎಂದಿದ್ದಾರೆ.

ಸುನೇತ್ರಾ ಪವಾರ್ ಮತ್ತು ಅವರ ಪುತ್ರರಾದ ಪಾರ್ಥ್ ಮತ್ತು ಜೇ ಪವಾರ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಭಾಗವಹಿಸಬಹುದು ಎಂದು ಮೂಲಗಳು ಸೂಚಿಸಿವೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಹೇಳಿದೆ.

ಶನಿವಾರ ಮಧ್ಯಾಹ್ನ 2 ಗಂಟೆಗೆ ಸಭೆ ನಡೆಸಲು ವಿಧಾನ ಭವನದಲ್ಲಿ 50 ಜನರಿಗೆ ಆಸನ ವ್ಯವಸ್ಥೆ ಇರುವ ಹಾಲ್ ಸಂಖ್ಯೆ 26 ಅನ್ನು ಕಾಯ್ದಿರಿಸುವಂತೆ ಎನ್‌ಸಿಪಿ ಎಂಎಲ್‌ಸಿ ಸಂಜಯ್ ಖೋಡಕೆ ವಿಧಾನಸಭೆಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.

ಈ ನಡುವೆ, ಶರದ್ ಪವಾರ್ ನೇತೃತ್ವದ ಎನ್‌ಸಿಪಿ ಬಣ ಮತ್ತು ಅಜಿತ್ ಪವಾರ್ ಬಣದ ನಡುವಿನ ಸಂಭಾವ್ಯ ವಿಲೀನದ ಬಗ್ಗೆ ಅನಿಶ್ಚಿತತೆ ಮುಂದುವರೆದಿದೆ. ಶರದ್ ಪವಾರ್ ಪಾಳಯದ ನಾಯಕರು ಒಗ್ಗಟ್ಟು ಅಜಿತ್ ಪವಾರ್‌ಗೆ ನಿಜವಾದ ಗೌರವ ಎಂದು ಹೇಳಿದ್ದಾರೆ.

ಸ್ಥಳೀಯ ಸಂಸ್ಥೆಗಳ ಚುನಾವಣೆಯ ನಂತರ ವಿಲೀನ ಮಾತುಕತೆಗಳನ್ನು ನಿರೀಕ್ಷಿಸಲಾಗಿತ್ತು. ಅಜಿತ್ ಪವಾರ್ ಈ ಚರ್ಚೆಗಳನ್ನು ವೈಯಕ್ತಿಕವಾಗಿ ಮುನ್ನಡೆಸಿದ್ದರು ಎಂದು ಎನ್‌ಸಿಪಿ ಶರದ್ ಪವಾರ್ ಬಣದ ರಾಜ್ಯಾಧ್ಯಕ್ಷ ಶಶಿಕಾಂತ್ ಶಿಂಧೆ ತಿಳಿಸಿದ್ದಾರೆ.

ಮಾಹಿತಿಯಿಲ್ಲ ಎಂದ ಶರದ್ ಪವಾರ್

ಸುನೇತ್ರಾ ಪವಾರ್ ಅವರು ಡಿಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸುವ ಕುರಿತು ನನಗೆ ಮಾಹಿತಿಯಿಲ್ಲ ಎಂದು ಎನ್‌ಸಿಪಿ (ಎಸ್ಪಿ) ನಾಯಕ ಹಾಗೂ ಅಜಿತ್ ಪವಾರ್ ಅವರ ಚಿಕ್ಕಪ್ಪ ಶರದ್ ಪವಾರ್ ಹೇಳಿದ್ದಾರೆ.

ಬಾರಾಮತಿಯಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಸುನೇತ್ರಾ ಅವರು ಡಿಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸುವ ಬಗ್ಗೆ ನಮಗೆ ಮಾಹಿತಿ ನೀಡಿಲ್ಲ. ಮಾಧ್ಯಮಗಳಿಂದ ನಾನು ವಿಷಯ ತಿಳಿದುಕೊಂಡೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...