Homeಮುಖಪುಟಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

- Advertisement -
- Advertisement -

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ.

ಸುನೇತ್ರಾ ಪವಾರ್ ಅವರನ್ನು ಶಾಸಕಾಂಗ ಪಕ್ಷದ ನಾಯಕಿಯನ್ನಾಗಿ ಆಯ್ಕೆ ಮಾಡಲು ಎನ್‌ಸಿಪಿ ಶಾಸಕರು ಶನಿವಾರ (ಜ.31) ಮಧ್ಯಾಹ್ನ ಮುಂಬೈನಲ್ಲಿ ಸಭೆ ಸೇರಲಿದ್ದಾರೆ. ಬಳಿಕ ಸಂಜೆ 5 ಗಂಟೆ ಮಹಾರಾಷ್ಟ್ರ ಲೋಕಭವನದಲ್ಲಿ ಸುನೇತ್ರಾ ಅವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ವರದಿ ಹೇಳಿದೆ.

ಶುಕ್ರವಾರ (ಜ.30) ಎನ್‌ಸಿಪಿ ಕಾರ್ಯಾಧ್ಯಕ್ಷ ಪ್ರಫುಲ್ ಪಟೇಲ್, ರಾಜ್ಯಾಧ್ಯಕ್ಷ ಸುನಿಲ್ ತತ್ಕರೆ, ಸಚಿವ ಛಗನ್ ಭುಜ್‌ಬಲ್ ಮತ್ತು ಮಾಜಿ ಸಚಿವ ಧನಂಜಯ್ ಮುಂಡೆ ಅವರು ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರನ್ನು ಭೇಟಿ ಮಾಡಿ ಸುನೇತ್ರಾ ಪವಾರ್ ಅವರನ್ನು ತಮ್ಮ ನಾಯಕಿಯಾಗಿ ಆಯ್ಕೆ ಮಾಡಲಾಗುವುದು ಮತ್ತು ಹಣಕಾಸು, ಅಬಕಾರಿ ಹಾಗೂ ಕ್ರೀಡೆ ಸೇರಿದಂತೆ ಅಜಿತ್ ಪವಾರ್ ಹೊಂದಿದ್ದ ಎಲ್ಲಾ ಪ್ರಮುಖ ಖಾತೆಗಳನ್ನು ಉಳಿಸಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಸುನೇತ್ರಾ ಅವರನ್ನು ಶಾಸಕಾಂಗ ಪಕ್ಷದ ನಾಯಕಿಯಾಗಿ ಆಯ್ಕೆ ಮಾಡಿದ ನಂತರ, ಅವರು ಡಿಸಿಎಂ ಹುದ್ದೆಗೆ ಹಕ್ಕು ಮಂಡಿಸುವ ನಿರೀಕ್ಷೆಯಿದ್ದು, ಬಳಿಕ ಸಂಜೆ ಲೋಕಭವನದಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಮೈತ್ರಿಕೂಟ ಸುಗಮ ಪರಿವರ್ತನೆಗೆ ಬೆಂಬಲ ನೀಡುತ್ತದೆ ಎಂದು ಬಿಜೆಪಿಯ ಹಿರಿಯ ನಾಯಕರು ಹೇಳಿದ್ದಾರೆ. ಶುಕ್ರವಾರ ಪಕ್ಷದ ನಾಯಕರು ಎನ್‌ಸಿಪಿ ಶಾಸಕರಿಗೆ ಫೋನ್ ಮಾಡಿ ಅಜಿತ್ ಪವಾರ್ ಅವರ ಉತ್ತರಾಧಿಕಾರಿಯ ಬಗ್ಗೆ ಅವರ ಅಭಿಪ್ರಾಯಗಳನ್ನು ಕೋರಿದ್ದಾರೆ ಎಂದು ಮೂಲವೊಂದು ತಿಳಿಸಿರುವುದಾಗಿ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಶುಕ್ರವಾರ ಸಿಎಂ ಜೊತೆಗಿನ ಸಭೆಯ ಬಳಿಕ ಪ್ರತಿಕ್ರಿಯಿಸಿದ ಎನ್‌ಸಿಪಿ ರಾಜ್ಯಾಧ್ಯಕ್ಷ ಸುನಿಲ್ ತತ್ಕರೆ, “ಪಕ್ಷವು ತೀವ್ರ ದುಃಖದಲ್ಲಿದೆ. ಮುಂದಿನ ನಿರ್ಧಾರಗಳನ್ನು ತೆಗೆದುಕೊಳ್ಳುವ ಮೊದಲು ಪವಾರ್ ಕುಟುಂಬದೊಂದಿಗೆ ಸಮಾಲೋಚನೆ ನಡೆಸಲಾಗುವುದು. ಪಕ್ಷದ ನಾಯಕರು ಶಾಸಕರ ಅಭಿಪ್ರಾಯಗಳನ್ನು ಪಡೆಯಲು ಅವರನ್ನು ಸಂಪರ್ಕಿಸಲಾಗಿದೆ ಎಂದಿದ್ದಾರೆ ಎಂದಿದ್ದಾರೆ.

ಸುನೇತ್ರಾ ಪವಾರ್ ಮತ್ತು ಅವರ ಪುತ್ರರಾದ ಪಾರ್ಥ್ ಮತ್ತು ಜೇ ಪವಾರ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಭಾಗವಹಿಸಬಹುದು ಎಂದು ಮೂಲಗಳು ಸೂಚಿಸಿವೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಹೇಳಿದೆ.

ಶನಿವಾರ ಮಧ್ಯಾಹ್ನ 2 ಗಂಟೆಗೆ ಸಭೆ ನಡೆಸಲು ವಿಧಾನ ಭವನದಲ್ಲಿ 50 ಜನರಿಗೆ ಆಸನ ವ್ಯವಸ್ಥೆ ಇರುವ ಹಾಲ್ ಸಂಖ್ಯೆ 26 ಅನ್ನು ಕಾಯ್ದಿರಿಸುವಂತೆ ಎನ್‌ಸಿಪಿ ಎಂಎಲ್‌ಸಿ ಸಂಜಯ್ ಖೋಡಕೆ ವಿಧಾನಸಭೆಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.

ಈ ನಡುವೆ, ಶರದ್ ಪವಾರ್ ನೇತೃತ್ವದ ಎನ್‌ಸಿಪಿ ಬಣ ಮತ್ತು ಅಜಿತ್ ಪವಾರ್ ಬಣದ ನಡುವಿನ ಸಂಭಾವ್ಯ ವಿಲೀನದ ಬಗ್ಗೆ ಅನಿಶ್ಚಿತತೆ ಮುಂದುವರೆದಿದೆ. ಶರದ್ ಪವಾರ್ ಪಾಳಯದ ನಾಯಕರು ಒಗ್ಗಟ್ಟು ಅಜಿತ್ ಪವಾರ್‌ಗೆ ನಿಜವಾದ ಗೌರವ ಎಂದು ಹೇಳಿದ್ದಾರೆ.

ಸ್ಥಳೀಯ ಸಂಸ್ಥೆಗಳ ಚುನಾವಣೆಯ ನಂತರ ವಿಲೀನ ಮಾತುಕತೆಗಳನ್ನು ನಿರೀಕ್ಷಿಸಲಾಗಿತ್ತು. ಅಜಿತ್ ಪವಾರ್ ಈ ಚರ್ಚೆಗಳನ್ನು ವೈಯಕ್ತಿಕವಾಗಿ ಮುನ್ನಡೆಸಿದ್ದರು ಎಂದು ಎನ್‌ಸಿಪಿ ಶರದ್ ಪವಾರ್ ಬಣದ ರಾಜ್ಯಾಧ್ಯಕ್ಷ ಶಶಿಕಾಂತ್ ಶಿಂಧೆ ತಿಳಿಸಿದ್ದಾರೆ.

ಮಾಹಿತಿಯಿಲ್ಲ ಎಂದ ಶರದ್ ಪವಾರ್

ಸುನೇತ್ರಾ ಪವಾರ್ ಅವರು ಡಿಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸುವ ಕುರಿತು ನನಗೆ ಮಾಹಿತಿಯಿಲ್ಲ ಎಂದು ಎನ್‌ಸಿಪಿ (ಎಸ್ಪಿ) ನಾಯಕ ಹಾಗೂ ಅಜಿತ್ ಪವಾರ್ ಅವರ ಚಿಕ್ಕಪ್ಪ ಶರದ್ ಪವಾರ್ ಹೇಳಿದ್ದಾರೆ.

ಬಾರಾಮತಿಯಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಸುನೇತ್ರಾ ಅವರು ಡಿಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸುವ ಬಗ್ಗೆ ನಮಗೆ ಮಾಹಿತಿ ನೀಡಿಲ್ಲ. ಮಾಧ್ಯಮಗಳಿಂದ ನಾನು ವಿಷಯ ತಿಳಿದುಕೊಂಡೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...