Homeಮುಖಪುಟಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

- Advertisement -
- Advertisement -

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು.

ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ಆಚಾರ್ಯ ದೇವವ್ರತ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್, ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ, ಎನ್‌ಸಿಪಿ ನಾಯಕರು ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

ಅಜಿತ್ ಪವಾರ್ ಅವರ ಅಕಾಲಿಕ ನಿಧನದ ಹಿನ್ನೆಲೆ ಶನಿವಾರ ಸಭೆ ಸೇರಿದ ಎನ್‌ಸಿಪಿ ಶಾಸಕರು, ತಮ್ಮ ಶಾಸಕಾಂಗ ಪಕ್ಷದ ಹೊಸ ನಾಯಕಿಯಾಗಿ ಸುನೇತ್ರಾ ಪವಾರ್ ಅವರನ್ನು ಅವಿರೋಧ ಆಯ್ಕೆ ಮಾಡಿದರು.

ದಕ್ಷಿಣ ಮುಂಬೈನ ವಿಧಾನ ಭವನ ಸಂಕೀರ್ಣದ ನೆಲ ಮಹಡಿಯಲ್ಲಿರುವ ದಿವಂಗತ ಅಜಿತ್ ಪವಾರ್ ಅವರ ಕಚೇರಿಯಲ್ಲಿ ನಡೆದ ಪಕ್ಷದ ಶಾಸಕಾಂಗ ವಿಭಾಗದ ಸಭೆಯಲ್ಲಿ ಎನ್‌ಸಿಪಿ ಹಿರಿಯ ನಾಯಕ ದಿಲೀಪ್ ವಾಲ್ಸೆ ಪಾಟೀಲ್ ಅವರು ಸುನೇತ್ರಾ ಅವರ ಹೆಸರನ್ನು ಸೂಚಿಸಿದರು. ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಛಗನ್ ಭುಜಬಲ್ ಅವರು ಅನುಮೋದಿಸಿದರು ಎಂದು ವರದಿಯಾಗಿದೆ.

ಸಭೆಯಲ್ಲಿ ಸುನೇತ್ರಾ ಪವಾರ್ ತಮ್ಮ ಪತಿಯ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಅವರ ಕಿರಿಯ ಮಗ ಜೈ ಕೂಡ ಹಾಜರಿದ್ದರು. ವಿಧಾನ ಭವನದ ಸಂಕೀರ್ಣಕ್ಕೆ ಆಗಮಿಸಿದಾಗ ಸಚಿವರು ಮತ್ತು ಶಾಸಕರು ತಮ್ಮ ಅಗಲಿದ ನಾಯಕ ಅಜಿತ್ ಪವಾರ್ ಅವರನ್ನು ನೆನೆದು ಭಾವುಕರಾದರು.

2024ರ ಲೋಕಸಭಾ ಚುನಾವಣೆಯವರೆಗೂ ಸುನೇತ್ರಾ ಪವಾರ್ ರಾಜಕೀಯದಿಂದ ದೂರ ಇದ್ದರು. ಮೊದಲ ಬಾರಿಗೆ ಲೋಕಸಭೆಯ ಚುನಾವಣೆಗೆ ಅವರು ಬಾರಾಮತಿಯಿಂದ ಎನ್‌ಸಿಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಆದರೆ, ಅವರ ಅತ್ತಿಗೆ ಎನ್‌ಸಿಪಿ (ಎಸ್‌ಪಿ) ಯ ಸುಪ್ರಿಯಾ ಸುಳೆ ವಿರುದ್ದ ಸೋಲನುಭವಿಸಿದ್ದರು. ಬಳಿಕ ಸುನೇತ್ರಾ ಅವರು ರಾಜ್ಯಸಭೆಗೆ ಆಯ್ಕೆಯಾದರು.

ಸುನೇತ್ರಾ ಪವಾರ್ ಅವರನ್ನು ಪಕ್ಷದ ಶಾಸಕಾಂಗ ನಾಯಕಿಯಾಗಿ ಆಯ್ಕೆ ಮಾಡಿರುವ ಪತ್ರವನ್ನು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರಿಗೆ ಸಲ್ಲಿಸಲಾಗಿದ್ದು, ಅವರು ಅದನ್ನು ರಾಜ್ಯಪಾಲ ಆಚಾರ್ಯ ದೇವವ್ರತ್ ಅವರಿಗೆ ರವಾನಿಸಿದ್ದಾರೆ ಎಂದು ಎನ್‌ಸಿಪಿ ಕಾರ್ಯಕಾರಿ ಅಧ್ಯಕ್ಷ ಪ್ರಫುಲ್ ಪಟೇಲ್ ತಿಳಿಸಿದ್ದಾರೆ.

ಶಾಸಕಾಂಗ ಪಕ್ಷದ ಸಭೆಯ ನಂತರ, ಎರಡು ಎನ್‌ಸಿಪಿ ಬಣಗಳ ಸಂಭಾವ್ಯ ವಿಲೀನದ ಬಗ್ಗೆ ಪ್ರತಿಕ್ರಿಯಿಸಲು ಪಟೇಲ್ ನಿರಾಕರಿಸಿದರು. ಪಕ್ಷದ ತಕ್ಷಣದ ಆದ್ಯತೆಯೆಂದರೆ ಶಾಸಕಾಂಗ ಪಕ್ಷದ ನಾಯಕಿಯ ಆಯ್ಕೆ ಮತ್ತು ಹೊಸ ಉಪಮುಖ್ಯಮಂತ್ರಿಯ ನೇಮಕ ಎಂದು ಪುನರುಚ್ಚರಿಸಿದರು.

ದೇವೇಂದ್ರ ಫಡ್ನವಿಸ್ ಸರ್ಕಾರದಲ್ಲಿ ಅಜಿತ್ ಪವಾರ್ ಉಪಮುಖ್ಯಮಂತ್ರಿ ಮಾತ್ರವಲ್ಲದೆ ಹಣಕಾಸು, ಯೋಜನೆ ಮತ್ತು ಅಬಕಾರಿ ಸೇರಿದಂತೆ ಪ್ರಮುಖ ಖಾತೆಗಳನ್ನು ಹೊಂದಿದ್ದರು. ಬೀಡ್ ಮತ್ತು ಪುಣೆ ಜಿಲ್ಲೆಗಳ ಉಸ್ತುವಾರಿ ಸಚಿವರಾಗಿದ್ದರು. ಕ್ರೀಡೆ ಮತ್ತು ಯುವಜನ ಕಲ್ಯಾಣ, ಅಲ್ಪಸಂಖ್ಯಾತರ ಅಭಿವೃದ್ಧಿ ಮತ್ತು ಔಕಾಫ್ (ವಕ್ಫ್) ಇಲಾಖೆಗಳ ಹೆಚ್ಚುವರಿ ಉಸ್ತುವಾರಿಯನ್ನು ಹೊಂದಿದ್ದರು. ಸುನೇತ್ರಾ ಪವಾರ್ ಅವರಿಗೆ ಹಂಚಿಕೆಯಾಗಬೇಕಾದ ಖಾತೆಗಳ ಬಗ್ಗೆ ಇನ್ನೂ ಸ್ಪಷ್ಟವಾಗಿಲ್ಲ.

ಎನ್‌ಸಿಪಿ (ಎಸ್‌ಪಿ) ಜೊತೆಗಿನ ವಿಲೀನದ ಬಗ್ಗೆ ಯಾವುದೇ ನಿರ್ಧಾರವನ್ನು ಸುನೇತ್ರಾ ಪವಾರ್ ತೆಗೆದುಕೊಳ್ಳುತ್ತಾರೆ ಎಂದು ಹಿರಿಯ ಎನ್‌ಸಿಪಿ ನಾಯಕ ಛಗನ್ ಭುಜಬಲ್ ಹೇಳಿದ್ದಾರೆ. “ಇಂದು ನಮ್ಮ ಕೆಲಸ ಹೊಸ ನಾಯಕಿಯನ್ನು ಆಯ್ಕೆ ಮಾಡುವುದಾಗಿತ್ತು. ಹಾಗಾಗಿ, ಆ ವಿಷಯದ ಬಗ್ಗೆ ಮಾತ್ರ ಶಾಸಕರು ಗಮನಹರಿಸಿದ್ದಾರೆ. ವಿಲೀನದ ಬಗ್ಗೆ ಪಕ್ಷದ ನಾಯಕತ್ವವೇ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಎನ್‌ಸಿಪಿ ಶಾಸಕ ಸಂಗ್ರಾಮ್ ಜಗತಾಪ್ ಹೇಳಿದ್ದಾರೆ.

ಈ ನಡುವೆ ಶಿವಸೇನೆ (ಯುಬಿಟಿ) ವಕ್ತಾರ ಆನಂದ್ ದುಬೆ ಅವರು ಉಪಮುಖ್ಯಮಂತ್ರಿ ಹುದ್ದೆಯನ್ನು ಭರ್ತಿ ಮಾಡುವ ತುರ್ತು ಅಗತ್ಯವನ್ನು ಪ್ರಶ್ನಿಸಿದ್ದು, ಈ ಆತುರವು ರಾಜ್ಯದಲ್ಲಿ ನೈತಿಕ ಮತ್ತು ರಾಜಕೀಯ ಕಳವಳಗಳನ್ನು ಹುಟ್ಟುಹಾಕಿದೆ ಎಂದು ಹೇಳಿದ್ದಾರೆ.

ಸುದ್ದಿ ಸಂಸ್ಥೆ ಎಎನ್‌ಐ ಜೊತೆ ಮಾತನಾಡಿರುವ ದುಬೆ, ಹಿರಿಯ ನಾಯಕ ಶರದ್ ಪವಾರ್ ಅವರಿಗೂ ಈ ನಿರ್ಧಾರದ ಬಗ್ಗೆ ತಿಳಿದಿಲ್ಲ. ಹಾಗಾದರೆ ಇಲ್ಲಿ ಏನು ನಡೆಯುತ್ತಿದೆ? ಈ ಆತುರಕ್ಕೆ ಕಾರಣವೇನು? ಮಹಾರಾಷ್ಟ್ರಕ್ಕೆ ಈ ವಿಷಯದಲ್ಲಿ ಖುಷಿಯಿಲ್ಲ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...