Homeಕರ್ನಾಟಕಅಂದಿಗೂ, ಇಂದಿಗೂ, ಎಂದೆಂದಿಗೂ NCPಯಲ್ಲಿಯೇ ಇದ್ದೇನೆ: ಅಜಿತ್‌ ಪವಾರ್‌ ಉವಾಚ...

ಅಂದಿಗೂ, ಇಂದಿಗೂ, ಎಂದೆಂದಿಗೂ NCPಯಲ್ಲಿಯೇ ಇದ್ದೇನೆ: ಅಜಿತ್‌ ಪವಾರ್‌ ಉವಾಚ…

ಅಜಿತ್ ಪವಾರ್‌ಗೆ ಹೊಸ ಸರ್ಕಾರದಲ್ಲಿ ಸಚಿವ ಸ್ಥಾನ ನೀಡುವುದರ ಕುರಿತು ಚರ್ಚೆಗಳು ನಡೆಯುತ್ತಿವೆ..

- Advertisement -
- Advertisement -

ದಿಢೀರ್ ಬಿಜೆಪಿ ಜೊತೆ ಗುರುತಿಸಿಕೊಂಡು ಉಪಮುಖ್ಯಮಂತ್ರಿಯಾಗಿ ರಾಜಿನಾಮೆ ನೀಡಿದ್ದ ಅಜಿತ್ ಪವಾರ್ ಬುಧವಾರ ಎನ್.ಸಿ.ಪಿ ಶಾಸಕರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಒಂದು ವಾರದಿಂದ ಎನ್.ಸಿ.ಪಿಯಿಂದ ದೂರ ಉಳಿದಿದ್ದ ಅಜಿತ್ ಪವಾರ್ ಇಂದು ಪಕ್ಷದ ತೆಕ್ಕೆಗೆ ಬಂದಿರುವುದು ಕುತೂಹಲ ಮೂಡಿಸಿದೆ.

ಅಲ್ಲದೆ ಅಜಿತ್‌ ಪವಾರ್‌ ಬಂದ ಕೂಡಲೇ ಎನ್‌ಸಿಪಿಯ ಸುಪ್ರಿಯ ಸುಳೆ ಅವರನ್ನು ಅಪ್ಪಿಕೊಂಡು ಸ್ವಾಗತಿಸಿದ್ದಾರೆ.

ಮಹಾರಾಷ್ಟ್ರ ರಾಜಧಾನಿ ಮುಂಬೈನ ವೈ.ಬಿ.ಚವಾಣ್ ಕೇಂದ್ರದಲ್ಲಿ ಉದ್ದವ್ ಠಾಕ್ರೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಕಾರ್ಯಕ್ರಮದ ಕುರಿತು ಚರ್ಚಿಸಲು ಕರೆದಿದ್ದ ಸಭೆಗೆ ಆಗಮಿಸಿದ ಅಜಿತ್ ಪವಾರ್ ಹಿರಿಯ ಶಾಸಕರನ್ನು ಭೇಟಿ ಮಾಡಿದರು.

ಮಹಾರಾಷ್ಟ್ರ ಎನ್.ಸಿ.ಪಿ ಅಧ್ಯಕ್ಷ ಜಯಂತ್ ಪಾಟೀಲ್, ಪಕ್ಷದ ಹಿರಿಯ ನಾಯಕ ಛಗನ್ ಬುಜ್ಬಲ್, ದಿಲೀಪ್ ವಾಲ್ಸೆ ಪಾಟೀಲ್ ಅವರು ಅಜಿತ್ ಪವಾರ್ ಜೊತೆ ಕೆಲ ಕಾಲ ಚರ್ಚೆ ನಡೆಸಿದರು.

ಅಜಿತ್ ಪವಾರ್ ಬಿಜೆಪಿ ಜೊತೆ ಕೈಜೋಡಿಸಿ ಸರ್ಕಾರದಲ್ಲಿ ಭಾಗಿಯಾಗಿದ್ದ ಹಿನ್ನೆಲೆಯಲ್ಲಿ ಪಕ್ಷದ ಶಾಸಕಾಂಗ ನಾಯಕತ್ವದಿಂದ ಅವರನ್ನು ತೆಗೆದುಹಾಕಿದ್ದರೂ ಸಹ ಪಕ್ಷದಿಂದ ಉಚ್ಚಾಟಿಸಲಿರಲಿಲ್ಲ. ಬಹುಮತ ಸಿಗುವುದು ಸಾಧ್ಯವಿಲ್ಲವೆಂಬುದನ್ನು ಅರಿತ ಅಜಿತ್ ವೈಯಕ್ತಿಕ ಕಾರಣ ನೀಡಿ ಉಪಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು.

ಈ ನಡುವೆಯೂ ಅಜಿತ್ ಅವರನ್ನು ಪಕ್ಷದ ತೆಕ್ಕೆಗೆ ತರುವ ಪ್ರಯತ್ನಗಳು ನಡೆಯುತ್ತಲೇ ಇದ್ದವು. ಅಂದಿಗೂ, ಇಂದಿಗೂ, ಎಂದೆಂದಿಗೂ NCPಯಲ್ಲಿಯೇ ಇದ್ದೇನೆ ಎಂದು ಅಜಿತ್ ಕೂಡ ಹೇಳುತ್ತಿದ್ದರು.  ಹೀಗಾಗಿ ಇಂದು ವೈ.ಬಿ.ಚವಾಣ್ ಕೇಂದ್ರಕ್ಕೆ ಭೇಟಿ ನೀಡಿದ ಅಜಿತ್ ಶಾಸಕರನ್ನು ಭೇಟಿಯಾಗಿ ಮಾತನಾಡಿದರು. ಅಜಿತ್ ಪವಾರ್‌ಗೆ ಹೊಸ ಸರ್ಕಾರದಲ್ಲಿ ಸಚಿವ ಸ್ಥಾನ ನೀಡುವುದರ ಕುರಿತು ಚರ್ಚೆಗಳು ನಡೆಯುತ್ತಿವೆ ಎಂದು ಮೂಲಗಳು ತಿಳಿಸಿವೆ. ಆದರೆ ಅದನ್ನು ಶರದ್‌ ಪವಾರ್‌ ಮತ್ತು ಉದ್ಧವ್‌ ಠಾಕ್ರೆ ನಿರ್ಧರಿಸಲಿದ್ದಾರೆ ಎನ್ನಲಾಗುತ್ತಿದೆ.

ಇನ್ನೊಂದು ಕಡೆ ಕಾಂಗ್ರೆಸ್ ನಾಯಕರಾದ ಅಹಮದ್ ಪಟೇಲ್, ಕೆ.ಸಿ.ವೇಣುಗೋಪಾಲ್ ಅವರು ಎನ್.ಸಿ.ಪಿ ಮುಖ್ಯಸ್ಥ ಶರದ್ ಪವಾರ್ ನೀವಾಸಕ್ಕೆ ಭೇಟಿ ನೀಡಿದ್ದು ನಾಳೆಯೇ ಪ್ರಮಾಣ ವಚನ ಸ್ವೀಕಾರ ಮತ್ತು ಖಾತೆ ಹಂಚಿಕೆಯ ಬಗ್ಗೆ ಸುದೀರ್ಘ ಚರ್ಚೆ ನಡೆಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...