Homeಮುಖಪುಟಅಜಿತ್‌ ಬಣವನ್ನು ಟೀಕಿಸಿದ ಆರೆಸ್ಸೆಸ್‌ ಮುಖವಾಣಿ: ಮತ್ತಷ್ಟು ಹಳಸಿದ ಅಜಿತ್-ಎನ್‌ಡಿಎ ಸಂಬಂಧ

ಅಜಿತ್‌ ಬಣವನ್ನು ಟೀಕಿಸಿದ ಆರೆಸ್ಸೆಸ್‌ ಮುಖವಾಣಿ: ಮತ್ತಷ್ಟು ಹಳಸಿದ ಅಜಿತ್-ಎನ್‌ಡಿಎ ಸಂಬಂಧ

- Advertisement -
- Advertisement -

ಅಜಿತ್ ಪವಾರ್ ನೇತೃತ್ವದ ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ(ಎನ್‌ಸಿಪಿ) ಬಿಜೆಪಿ-ಶಿವಸೇನೆ(ಶಿಂಧೆ) ಸರ್ಕಾರಕ್ಕೆ ಸೇರಿಸಿಕೊಂಡಿರುವುದು ಅಪ್ರಜ್ಞಾಪೂರ್ವಕ ಮತ್ತು ಅವಿವೇಕದ ಕ್ರಮ ಎಂದು ಆರೆಸ್ಸೆಸ್‌ ಮುಖವಾಣಿ ಆರ್ಗನೈಸರ್‌ನ ಇತ್ತೀಚಿನ ಆವೃತ್ತಿಯಲ್ಲಿ ಹೇಳಲಾಗಿದೆ. ಇದರಿಂದ ಕ್ಯಾಬಿನೆಟ್‌ ದರ್ಜೆಯ ಸಚಿವ ಸ್ಥಾನ ಸಿಗದೆ ಮುಣಿಸಿನಲ್ಲಿರುವ ಅಜಿತ್‌ ಬಣ ಮತ್ತು ಎನ್‌ಡಿಎ ನಡುವಿನ ಸಂಬಂಧ ಮತ್ತಷ್ಟು ಹಳಸಲು ಕಾರಣವಾಗಿದೆ.

ಲೋಕಸಭೆ ಚುನಾವಣಾ ಪ್ರಚಾರದಲ್ಲಿ ರಾಜಕೀಯ ಸೌಜನ್ಯದ ಕೊರತೆಯ ಬಗ್ಗೆ ಆರೆಸ್ಸೆಸ್‌ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆ ನೀಡಿದ ಬೆನ್ನಲ್ಲಿ ಈ ಬೆಳವಣಿಗೆ ನಡೆದಿದೆ.

ಸ್ಥಳೀಯ ನಾಯಕತ್ವವನ್ನು ಕಡೆಗಣಿಸಿ ತ್ಯಾಗಿಗಳಂತೆ ಸೋಗು ಹಾಕಿದವರಿಗೆ ಹಲವು ಕ್ಷೇತ್ರಗಳಲ್ಲಿ ಟಿಕೆಟ್ ನೀಡಲಾಗಿದೆ ಎಂದು ಅಂಕಣಕಾರ ಮತ್ತು ಆರೆಸ್ಸೆಸ್ ಸದಸ್ಯ ರತನ್ ಶರ್ದಾ ಅವರ ಲೇಖನದಲ್ಲಿ ಪ್ರತಿಪಾದಿಸಿದ್ದು, ತಡವಾಗಿ ಬಂದವರಿಗೆ ಅವಕಾಶ ಕಲ್ಪಿಸಲು ಉತ್ತಮವಾಗಿ ಕಾರ್ಯನಿರ್ವಹಿಸುವ ಸಂಸದರನ್ನು ನಿರ್ಲಕ್ಷಿಸಲಾಗಿದೆ ಎಂದು ಹೇಳಲಾಗಿದೆ.

ಮಹಾರಾಷ್ಟ್ರವು ಅನವಶ್ಯಕ ರಾಜಕೀಯ ಮತ್ತು ತಪ್ಪಿಸಬಹುದಾದ ಕುತಂತ್ರಗಳಿಗೆ ಒಂದು ಪ್ರಮುಖ ಉದಾಹರಣೆಯಾಗಿದೆ. ಅನಗತ್ಯ ರಾಜಕಿಯ ಮತ್ತು ತಪ್ಪಿಸಬಹುದಾಗಿದ್ದ ಪರಿವರ್ತನೆಗೆ ಮಹಾರಾಷ್ಟ್ರ ಉತ್ತಮ ಉದಾಹರಣೆ. ಬಿಜೆಪಿ ಹಾಗೂ ಶಿವಸೇನೆ ಬಣ ಬಹುಮತ ಹೊಂದಿದ್ದರೂ, ಅಜಿತ್ ಪವಾರ್ ಬಣವನ್ನು ಸೇರಿಸಿಕೊಳ್ಳಲಾಗಿದೆ. ಎನ್ಸಿಪಿ ಆಂತರಿಕ ಕಚ್ಚಾಟದಿಂದ ಶಕ್ತಿಗುಂದುತ್ತಿತ್ತು. ಈ ಅವಿವೇಕದ ಹೆಜ್ಜೆಯನ್ನು ಯಾಕೆ ಇಡಲಾಗಿದೆ? ಕಾಂಗ್ರೆಸ್ ಸಿದ್ಧಾಂತದ ವಿರುದ್ಧ ಹಲವು ವರ್ಷ ಹೋರಾಡಿದ ಬಿಜೆಪಿ ಕಾರ್ಯಕರ್ತರನ್ನು ಕಡೆಗಣಿಸಲಾಯಿತು. ಒಂದೇ ಹೊಡೆತದಲ್ಲಿ ಬಿಜೆಪಿ ತನ್ನ ಬ್ರಾಂಡ್ ಮೌಲ್ಯ ಕಳೆದುಕೊಂಡಿದೆ ಎಂದು ಲೇಖನದಲ್ಲಿ ಹೇಳಲಾಗಿದೆ.

ಅಜಿತ್ ನೇತೃತ್ವದ ಎನ್‌ಸಿಪಿ ಈ ಲೇಖನಕ್ಕೆ ಕಟುವಾಗಿ ಪ್ರತಿಕ್ರಿಯಿಸಿದೆ. ‘ಆರ್ಗನೈಸರ್‌’ ಆರೆಸ್ಸೆಸ್‌ನ ಅಧಿಕೃತ ಮುಖವಾಣಿಯಲ್ಲ, ಅದು ಆರೆಸ್ಸೆಸ್‌ ಸಿದ್ಧಾಂತವನ್ನು ಪ್ರತಿಬಿಂಬಿಸುವುದಿಲ್ಲ. ಬಿಜೆಪಿಯ ಉನ್ನತ ಪದಾಧಿಕಾರಿಗಳು ಯಾರು ಲೇಖನವನ್ನು ಬರೆದರೂ ಅದನ್ನು ಒಪ್ಪುವುದಿಲ್ಲ ಎಂದು ನಾನು ಭಾವಿಸುತ್ತೇನೆ. ಒಬ್ಬರು ವೈಫಲ್ಯಕ್ಕೆ ವಿವಿಧ ಕಾರಣಗಳನ್ನು ಹುಡುಕುತ್ತಲೇ ಇರುತ್ತಾರೆ. ಪಕ್ಷಗಳು ಪರಸ್ಪರ ವಿರುದ್ಧವಾಗಿದ್ದಾಗ ಅವರು ತಪ್ಪುಗಳನ್ನು ಕಂಡುಕೊಳ್ಳುತ್ತಾರೆ ಮತ್ತು ರಾಜಕೀಯದಲ್ಲಿ ಆರೋಪಗಳನ್ನು ಮಾಡುವುದು ಸಹಜ, ಎಲ್ಲವು ಅಂತಿಮ ಫಲಿತಾಂಶಗಳ ಮೇಲೆ ಅವಲಂಬಿತವಾಗಿದೆ ಎಂದು ಉನ್ಮೇಶ್ ಪಾಟೀಲ್ ಹೇಳಿದ್ದಾರೆ.

ಇದನ್ನು ಓದಿ: ಜೈಪುರ: ಹಿಂದೂಯೇತರರಿಗೆ ಮನೆಗಳನ್ನು ಮಾರಾಟ ಮಾಡದಂತೆ ಪೋಸ್ಟರ್ ಹಾಕಿದ ಜನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...