Homeಮುಖಪುಟಅಜಿತ್‌ ಬಣವನ್ನು ಟೀಕಿಸಿದ ಆರೆಸ್ಸೆಸ್‌ ಮುಖವಾಣಿ: ಮತ್ತಷ್ಟು ಹಳಸಿದ ಅಜಿತ್-ಎನ್‌ಡಿಎ ಸಂಬಂಧ

ಅಜಿತ್‌ ಬಣವನ್ನು ಟೀಕಿಸಿದ ಆರೆಸ್ಸೆಸ್‌ ಮುಖವಾಣಿ: ಮತ್ತಷ್ಟು ಹಳಸಿದ ಅಜಿತ್-ಎನ್‌ಡಿಎ ಸಂಬಂಧ

- Advertisement -
- Advertisement -

ಅಜಿತ್ ಪವಾರ್ ನೇತೃತ್ವದ ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ(ಎನ್‌ಸಿಪಿ) ಬಿಜೆಪಿ-ಶಿವಸೇನೆ(ಶಿಂಧೆ) ಸರ್ಕಾರಕ್ಕೆ ಸೇರಿಸಿಕೊಂಡಿರುವುದು ಅಪ್ರಜ್ಞಾಪೂರ್ವಕ ಮತ್ತು ಅವಿವೇಕದ ಕ್ರಮ ಎಂದು ಆರೆಸ್ಸೆಸ್‌ ಮುಖವಾಣಿ ಆರ್ಗನೈಸರ್‌ನ ಇತ್ತೀಚಿನ ಆವೃತ್ತಿಯಲ್ಲಿ ಹೇಳಲಾಗಿದೆ. ಇದರಿಂದ ಕ್ಯಾಬಿನೆಟ್‌ ದರ್ಜೆಯ ಸಚಿವ ಸ್ಥಾನ ಸಿಗದೆ ಮುಣಿಸಿನಲ್ಲಿರುವ ಅಜಿತ್‌ ಬಣ ಮತ್ತು ಎನ್‌ಡಿಎ ನಡುವಿನ ಸಂಬಂಧ ಮತ್ತಷ್ಟು ಹಳಸಲು ಕಾರಣವಾಗಿದೆ.

ಲೋಕಸಭೆ ಚುನಾವಣಾ ಪ್ರಚಾರದಲ್ಲಿ ರಾಜಕೀಯ ಸೌಜನ್ಯದ ಕೊರತೆಯ ಬಗ್ಗೆ ಆರೆಸ್ಸೆಸ್‌ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆ ನೀಡಿದ ಬೆನ್ನಲ್ಲಿ ಈ ಬೆಳವಣಿಗೆ ನಡೆದಿದೆ.

ಸ್ಥಳೀಯ ನಾಯಕತ್ವವನ್ನು ಕಡೆಗಣಿಸಿ ತ್ಯಾಗಿಗಳಂತೆ ಸೋಗು ಹಾಕಿದವರಿಗೆ ಹಲವು ಕ್ಷೇತ್ರಗಳಲ್ಲಿ ಟಿಕೆಟ್ ನೀಡಲಾಗಿದೆ ಎಂದು ಅಂಕಣಕಾರ ಮತ್ತು ಆರೆಸ್ಸೆಸ್ ಸದಸ್ಯ ರತನ್ ಶರ್ದಾ ಅವರ ಲೇಖನದಲ್ಲಿ ಪ್ರತಿಪಾದಿಸಿದ್ದು, ತಡವಾಗಿ ಬಂದವರಿಗೆ ಅವಕಾಶ ಕಲ್ಪಿಸಲು ಉತ್ತಮವಾಗಿ ಕಾರ್ಯನಿರ್ವಹಿಸುವ ಸಂಸದರನ್ನು ನಿರ್ಲಕ್ಷಿಸಲಾಗಿದೆ ಎಂದು ಹೇಳಲಾಗಿದೆ.

ಮಹಾರಾಷ್ಟ್ರವು ಅನವಶ್ಯಕ ರಾಜಕೀಯ ಮತ್ತು ತಪ್ಪಿಸಬಹುದಾದ ಕುತಂತ್ರಗಳಿಗೆ ಒಂದು ಪ್ರಮುಖ ಉದಾಹರಣೆಯಾಗಿದೆ. ಅನಗತ್ಯ ರಾಜಕಿಯ ಮತ್ತು ತಪ್ಪಿಸಬಹುದಾಗಿದ್ದ ಪರಿವರ್ತನೆಗೆ ಮಹಾರಾಷ್ಟ್ರ ಉತ್ತಮ ಉದಾಹರಣೆ. ಬಿಜೆಪಿ ಹಾಗೂ ಶಿವಸೇನೆ ಬಣ ಬಹುಮತ ಹೊಂದಿದ್ದರೂ, ಅಜಿತ್ ಪವಾರ್ ಬಣವನ್ನು ಸೇರಿಸಿಕೊಳ್ಳಲಾಗಿದೆ. ಎನ್ಸಿಪಿ ಆಂತರಿಕ ಕಚ್ಚಾಟದಿಂದ ಶಕ್ತಿಗುಂದುತ್ತಿತ್ತು. ಈ ಅವಿವೇಕದ ಹೆಜ್ಜೆಯನ್ನು ಯಾಕೆ ಇಡಲಾಗಿದೆ? ಕಾಂಗ್ರೆಸ್ ಸಿದ್ಧಾಂತದ ವಿರುದ್ಧ ಹಲವು ವರ್ಷ ಹೋರಾಡಿದ ಬಿಜೆಪಿ ಕಾರ್ಯಕರ್ತರನ್ನು ಕಡೆಗಣಿಸಲಾಯಿತು. ಒಂದೇ ಹೊಡೆತದಲ್ಲಿ ಬಿಜೆಪಿ ತನ್ನ ಬ್ರಾಂಡ್ ಮೌಲ್ಯ ಕಳೆದುಕೊಂಡಿದೆ ಎಂದು ಲೇಖನದಲ್ಲಿ ಹೇಳಲಾಗಿದೆ.

ಅಜಿತ್ ನೇತೃತ್ವದ ಎನ್‌ಸಿಪಿ ಈ ಲೇಖನಕ್ಕೆ ಕಟುವಾಗಿ ಪ್ರತಿಕ್ರಿಯಿಸಿದೆ. ‘ಆರ್ಗನೈಸರ್‌’ ಆರೆಸ್ಸೆಸ್‌ನ ಅಧಿಕೃತ ಮುಖವಾಣಿಯಲ್ಲ, ಅದು ಆರೆಸ್ಸೆಸ್‌ ಸಿದ್ಧಾಂತವನ್ನು ಪ್ರತಿಬಿಂಬಿಸುವುದಿಲ್ಲ. ಬಿಜೆಪಿಯ ಉನ್ನತ ಪದಾಧಿಕಾರಿಗಳು ಯಾರು ಲೇಖನವನ್ನು ಬರೆದರೂ ಅದನ್ನು ಒಪ್ಪುವುದಿಲ್ಲ ಎಂದು ನಾನು ಭಾವಿಸುತ್ತೇನೆ. ಒಬ್ಬರು ವೈಫಲ್ಯಕ್ಕೆ ವಿವಿಧ ಕಾರಣಗಳನ್ನು ಹುಡುಕುತ್ತಲೇ ಇರುತ್ತಾರೆ. ಪಕ್ಷಗಳು ಪರಸ್ಪರ ವಿರುದ್ಧವಾಗಿದ್ದಾಗ ಅವರು ತಪ್ಪುಗಳನ್ನು ಕಂಡುಕೊಳ್ಳುತ್ತಾರೆ ಮತ್ತು ರಾಜಕೀಯದಲ್ಲಿ ಆರೋಪಗಳನ್ನು ಮಾಡುವುದು ಸಹಜ, ಎಲ್ಲವು ಅಂತಿಮ ಫಲಿತಾಂಶಗಳ ಮೇಲೆ ಅವಲಂಬಿತವಾಗಿದೆ ಎಂದು ಉನ್ಮೇಶ್ ಪಾಟೀಲ್ ಹೇಳಿದ್ದಾರೆ.

ಇದನ್ನು ಓದಿ: ಜೈಪುರ: ಹಿಂದೂಯೇತರರಿಗೆ ಮನೆಗಳನ್ನು ಮಾರಾಟ ಮಾಡದಂತೆ ಪೋಸ್ಟರ್ ಹಾಕಿದ ಜನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...