Homeಮುಖಪುಟಅಜ್ಮಲ್ ಕಸಬ್ ಮೊಬೈಲ್‌ ಫೋನ್‌‌ ನಾಶಪಡಿಸಲಾಗಿದೆ: ನಿವೃತ್ತ ಎಸಿಪಿ ಆರೋಪ

ಅಜ್ಮಲ್ ಕಸಬ್ ಮೊಬೈಲ್‌ ಫೋನ್‌‌ ನಾಶಪಡಿಸಲಾಗಿದೆ: ನಿವೃತ್ತ ಎಸಿಪಿ ಆರೋಪ

26/11 ಮುಂಬೈ ದಾಳಿಗೆ 13 ವರ್ಷ ಆಗಿದ್ದು, ಸೆರೆಸಿಕ್ಕ ಅಜ್ಮಲ್‌ನನ್ನು ನವೆಂಬರ್ 2012 ರಲ್ಲಿ ಗಲ್ಲಿಗೇರಿಸಲಾಯಿತು

- Advertisement -
- Advertisement -

ಮುಂಬೈನ ಮಾಜಿ ಪೊಲೀಸ್ ಕಮಿಷನರ್ ಪರಮ್ ಬೀರ್ ಸಿಂಗ್ ಅವರು ಮೊಹಮ್ಮದ್ ಅಜ್ಮಲ್ ಕಸಬ್‌ನಿಂದ ವಶಪಡಿಸಿಕೊಂಡ ಮೊಬೈಲ್ ಫೋನ್ ಅನ್ನು ನಾಶಪಡಿಸಿದ್ದಾರೆ ಎಂದು ನಿವೃತ್ತ ಸಹಾಯಕ ಪೊಲೀಸ್ ಆಯುಕ್ತ ಸಂಶೇರ್ ಖಾನ್ ಪಠಾಣ್ ಆರೋಪಿಸಿದ್ದಾರೆ. ಅಜ್ಮಲ್‌ ಕಸಬ್‌ನನ್ನು 26/11 ಮುಂಬೈ ದಾಳಿಯ ದೋಷಿ ಎಂದು ಸುಪ್ರೀಂ ಕೋರ್ಟ್ ಘೋಷಿಸಿತ್ತು ಮತ್ತು ನವೆಂಬರ್ 2012 ರಲ್ಲಿ ಆತನನ್ನು ಗಲ್ಲಿಗೇರಿಸಲಾಯಿತು.

ಸಂಶೇರ್‌ ಖಾನ್‌‌ ಪಠಾಣ್ ಅವರು ಜುಲೈನಲ್ಲಿ ಮುಂಬೈ ಪೊಲೀಸ್ ಆಯುಕ್ತರಿಗೆ ಲಿಖಿತ ದೂರನ್ನು ಸಲ್ಲಿಸಿದ್ದರು. ಈ ದೂರಿನಲ್ಲಿ ಪರಮ್‌ ಬೀರ್‌ ಸಿಂಗ್ ವಿರುದ್ಧ ತನಿಖೆ ಮತ್ತು ನಂತರದ ಕ್ರಮಕ್ಕಾಗಿ ಒತ್ತಾಯಿಸಿದ್ದರು. ಈ ದೂರಿನ ಪ್ರತಿ ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಪ್ರಸಾರವಾಯಿತು.

ಪರಮ್‌ ಬೀರ್‌ ಸಿಂಗ್‌ ಅವರನ್ನು ಈ ವರ್ಷದ ಮಾರ್ಚ್‌ ತಿಂಗಳಲ್ಲಿ ಮುಂಬೈ ಪೊಲೀಸ್ ಮುಖ್ಯಸ್ಥ ಹುದ್ದೆಯಿಂದ ತೆಗೆದುಹಾಕಲಾಯಿತು.

ಇದನ್ನೂ ಓದಿ: 26/11 ಮುಂಬೈ ಭಯೋತ್ಪಾದಕ ದಾಳಿಗೆ 13 ವರ್ಷ: ಹುತಾತ್ಮರನ್ನು ಸ್ಮರಿಸಿದ ಗಣ್ಯರು

ಸಂಶೇರ್‌ ಖಾನ್‌‌ ಪಠಾಣ್ ತಮ್ಮ ದೂರಿನಲ್ಲಿ, “ಅಜ್ಮಲ್‌ ಕಸಬ್‌ನಿಂದ ಮೊಬೈಲ್ ಫೋನ್ ಅನ್ನು ವಶಪಡಿಸಿಕೊಂಡಿದ್ದೇವೆ ಎಂದು ಡಿಬಿ ಮಾರ್ಗ್ ಪೊಲೀಸ್ ಠಾಣೆಯ ಆಗಿನ ಹಿರಿಯ ಇನ್ಸ್‌ಪೆಕ್ಟರ್ ಎನ್‌ಆರ್ ಮಾಲಿ ಅವರು ತಿಳಿಸಿದ್ದರು” ಎಂದು ವಿವರಿಸಿದ್ದಾರೆ.

“ಅಲ್ಲಿಂದ ಈ ಮೊಬೈಲ್‌ ಅನ್ನು ಕಾಂಬ್ಳೆ ಎಂದು ಗುರುತಿಸಲಾದ ಕಾನ್‌ಸ್ಟೆಬಲ್‌ಗೆ ಹಸ್ತಾಂತರಿಸಲಾಯಿತು. ಆಗಿನ ಡಿಐಜಿ (ಭಯೋತ್ಪಾದನಾ ನಿಗ್ರಹ ದಳ) ಆಗಿದ್ದ ಪರಮ್‌ ಬೀರ್‌ ಸಿಂಗ್ ಕಾನ್‌ಸ್ಟೆಬಲ್‌ನಿಂದ ಮೊಬೈಲ್ ಫೋನ್ ತೆಗೆದುಕೊಂಡರು. ಪ್ರಕರಣದ ತನಿಖಾಧಿಕಾರಿ ರಮೇಶ್ ಮಹಾಲೆ ಅವರಿಗೆ ಫೋನ್ ಹಸ್ತಾಂತರಿಸಬೇಕಿತ್ತು. ಆದರೂ ಪರಮ್‌ ಬೀರ್‌ಸಿಂಗ್‌ ಅದನ್ನು ನಾಶಪಡಿಸಿದ್ದಾರೆ” ಎಂದು ಸಂಶೇರ್‌‌ ಖಾನ್‌ ಪಠಾಣ್ ಆರೋಪಿಸಿದ್ದಾರೆ.

ದೇಶದ ಆರ್ಥಿಕ ರಾಜಧಾನಿ ಮುಂಬೈ ಮೇಲೆ ನವೆಂಬರ್ 26, 2008 ರಂದು ಭಯೋತ್ಪಾದಕ ದಾಳಿ ನಡೆದಿತ್ತು. ಈ ದಾಳಿ ನಡೆದು ಶುಕ್ರವಾರಕ್ಕೆ(ನಿನ್ನೆ) 13 ವರ್ಷ ಆಗಿದೆ. ಲಷ್ಕರ್‌–ಎ–ತೊಯ್ಬಾದ ಸಂಘಟನೆ ಭಯೋತ್ಪಾದಕರು ಪಾಕಿಸ್ತಾನದಿಂದ ಸಮುದ್ರ ಮಾರ್ಗದ ಮೂಲಕ ಮುಂಬೈ ಪ್ರವೇಶಿಸಿ, ನಡೆಸಿದ ಸರಣಿ ದಾಳಿಗಳಲ್ಲಿ 18 ಭದ್ರತಾ ಸಿಬ್ಬಂದಿ ಸೇರಿದಂತೆ 166 ಜನರು ಈ ಘಟನೆಯಲ್ಲಿ ಮೃತಪಟ್ಟಿದ್ದರು. ಮುಂಬೈಯ ಜನನಿಬಿಡ ಪ್ರದೇಶಗಳಲ್ಲಿ ಗುಂಡಿನ ಮಳೆ ಸುರಿಸಿದ್ದರು. ನಂತರ ಮುಂಬೈನ ತಾಜ್​​​​​ ಹೋಟೆಲ್ ಪ್ರವೇಶಿಸಿ ದಾಳಿ ಪ್ರಾರಂಭಿಸಿದ್ದರು. ಭದ್ರತಾ ಪಡೆಗಳು 10 ಉಗ್ರರ ಪೈಕಿ ಒಂಬತ್ತು ಮಂದಿಯನ್ನು ಹೊಡೆದುರುಳಿಸಿತ್ತು. ಬದುಕುಳಿದ್ದ ಏಕೈಕ ಉಗ್ರ ಅಜ್ಮಲ್ ಕಸಬ್ ಅನ್ನು ನವೆಂಬರ್ 21, 2012 ರಂದು ಗಲ್ಲಿಗೇರಿಸಲಾಯಿತು.

ಇದನ್ನೂ ಓದಿ: ಮತ್ತೆ ರೈತ ಮಹಾಪಂಚಾಯತ್‌ಗಳ ಆರಂಭ: ಮುಂಬೈ, ಲಕ್ನೋಗಳಲ್ಲಿ ಅಬ್ಬರಿಸಲಿರುವ ರೈತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಚಾಯಿತಿಯಲ್ಲಿ ಅಸ್ಪೃಶ್ಯತೆ ಆಚರಣೆ-ಪ್ರತ್ಯೇಕ ಟೀ ಲೋಟ; ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕ ಮಹಿಳೆ

ಕೆಲಸದ ಸ್ಥಳದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ ಆಚರಣೆಯಿಂದ ಮನನೊಂದ 37 ವರ್ಷದ ದಲಿತ ನೈರ್ಮಲ್ಯ ಕಾರ್ಮಿಕರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಮೇಲೂರು ಸಮೀಪದ ಕಂಬೂರ್ ಪಂಚಾಯತ್‌ನಲ್ಲಿ ಬೆಳಕಿಗೆ ಬಂದಿದೆ. ...

ಗೌರಿ, ಗಾಂಧಿಯನ್ನು ಕೊಂದದ್ದು ಬರೀ ಬುಲೆಟ್‌ಗಳಲ್ಲ, ಕೋಮುವಾದಿ ಸಿದ್ಧಾಂತ: ವಿದ್ಯಾರ್ಥಿ ನಾಯಕಿ ದಾನಿಶ್ ಅಲಿ

"ಗಾಂಧಿ, ಗೌರಿಯನ್ನು ಕೊಂದಿದ್ದು ಬರೀ ಬುಲೆಟ್‌ಗಳಲ್ಲ, ಅದು ಸಿದ್ಧಾಂತ ಎಂಬುದನ್ನು ನಾವು ನೆನಪಿಡಬೇಕು. ಈ ಸಿದ್ಧಾಂತಗಳ ವಿರುದ್ಧವಾಗಿ ನಾವು ಇಂದು ಹೋರಾಡಬೇಕಿದೆ” ಎಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿ ನಾಯಕಿ...

ದಲಿತರು, ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಕುರಿತು ವಿಶ್ವಸಂಸ್ಥೆಯ ಕಠಿಣ ಪ್ರಶ್ನೆ: ಸಂಶೋಧನಾತ್ಮಕ ವರದಿಗಳನ್ನು ಆಧರಿಸಿ ಭಾರತಕ್ಕೆ CERD ಚಾಟಿ

ನವದೆಹಲಿ: ಭಾರತದಲ್ಲಿ ದಲಿತರು, ಆದಿವಾಸಿಗಳು, ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳು ಎದುರಿಸುತ್ತಿರುವ ತಾರತಮ್ಯ, ಹಿಂಸೆ ಮತ್ತು ಹಕ್ಕುಗಳ ಉಲ್ಲಂಘನೆ ಕುರಿತು ವಿಶ್ವಸಂಸ್ಥೆಯ ಜನಾಂಗೀಯ ತಾರತಮ್ಯ ನಿರ್ಮೂಲನೆ ಕುರಿತ ಸಮಿತಿ (CERD) ತೀವ್ರ...

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...