Homeಮುಖಪುಟಅಜ್ಮಲ್ ಕಸಬ್ ಮೊಬೈಲ್‌ ಫೋನ್‌‌ ನಾಶಪಡಿಸಲಾಗಿದೆ: ನಿವೃತ್ತ ಎಸಿಪಿ ಆರೋಪ

ಅಜ್ಮಲ್ ಕಸಬ್ ಮೊಬೈಲ್‌ ಫೋನ್‌‌ ನಾಶಪಡಿಸಲಾಗಿದೆ: ನಿವೃತ್ತ ಎಸಿಪಿ ಆರೋಪ

26/11 ಮುಂಬೈ ದಾಳಿಗೆ 13 ವರ್ಷ ಆಗಿದ್ದು, ಸೆರೆಸಿಕ್ಕ ಅಜ್ಮಲ್‌ನನ್ನು ನವೆಂಬರ್ 2012 ರಲ್ಲಿ ಗಲ್ಲಿಗೇರಿಸಲಾಯಿತು

- Advertisement -
- Advertisement -

ಮುಂಬೈನ ಮಾಜಿ ಪೊಲೀಸ್ ಕಮಿಷನರ್ ಪರಮ್ ಬೀರ್ ಸಿಂಗ್ ಅವರು ಮೊಹಮ್ಮದ್ ಅಜ್ಮಲ್ ಕಸಬ್‌ನಿಂದ ವಶಪಡಿಸಿಕೊಂಡ ಮೊಬೈಲ್ ಫೋನ್ ಅನ್ನು ನಾಶಪಡಿಸಿದ್ದಾರೆ ಎಂದು ನಿವೃತ್ತ ಸಹಾಯಕ ಪೊಲೀಸ್ ಆಯುಕ್ತ ಸಂಶೇರ್ ಖಾನ್ ಪಠಾಣ್ ಆರೋಪಿಸಿದ್ದಾರೆ. ಅಜ್ಮಲ್‌ ಕಸಬ್‌ನನ್ನು 26/11 ಮುಂಬೈ ದಾಳಿಯ ದೋಷಿ ಎಂದು ಸುಪ್ರೀಂ ಕೋರ್ಟ್ ಘೋಷಿಸಿತ್ತು ಮತ್ತು ನವೆಂಬರ್ 2012 ರಲ್ಲಿ ಆತನನ್ನು ಗಲ್ಲಿಗೇರಿಸಲಾಯಿತು.

ಸಂಶೇರ್‌ ಖಾನ್‌‌ ಪಠಾಣ್ ಅವರು ಜುಲೈನಲ್ಲಿ ಮುಂಬೈ ಪೊಲೀಸ್ ಆಯುಕ್ತರಿಗೆ ಲಿಖಿತ ದೂರನ್ನು ಸಲ್ಲಿಸಿದ್ದರು. ಈ ದೂರಿನಲ್ಲಿ ಪರಮ್‌ ಬೀರ್‌ ಸಿಂಗ್ ವಿರುದ್ಧ ತನಿಖೆ ಮತ್ತು ನಂತರದ ಕ್ರಮಕ್ಕಾಗಿ ಒತ್ತಾಯಿಸಿದ್ದರು. ಈ ದೂರಿನ ಪ್ರತಿ ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಪ್ರಸಾರವಾಯಿತು.

ಪರಮ್‌ ಬೀರ್‌ ಸಿಂಗ್‌ ಅವರನ್ನು ಈ ವರ್ಷದ ಮಾರ್ಚ್‌ ತಿಂಗಳಲ್ಲಿ ಮುಂಬೈ ಪೊಲೀಸ್ ಮುಖ್ಯಸ್ಥ ಹುದ್ದೆಯಿಂದ ತೆಗೆದುಹಾಕಲಾಯಿತು.

ಇದನ್ನೂ ಓದಿ: 26/11 ಮುಂಬೈ ಭಯೋತ್ಪಾದಕ ದಾಳಿಗೆ 13 ವರ್ಷ: ಹುತಾತ್ಮರನ್ನು ಸ್ಮರಿಸಿದ ಗಣ್ಯರು

ಸಂಶೇರ್‌ ಖಾನ್‌‌ ಪಠಾಣ್ ತಮ್ಮ ದೂರಿನಲ್ಲಿ, “ಅಜ್ಮಲ್‌ ಕಸಬ್‌ನಿಂದ ಮೊಬೈಲ್ ಫೋನ್ ಅನ್ನು ವಶಪಡಿಸಿಕೊಂಡಿದ್ದೇವೆ ಎಂದು ಡಿಬಿ ಮಾರ್ಗ್ ಪೊಲೀಸ್ ಠಾಣೆಯ ಆಗಿನ ಹಿರಿಯ ಇನ್ಸ್‌ಪೆಕ್ಟರ್ ಎನ್‌ಆರ್ ಮಾಲಿ ಅವರು ತಿಳಿಸಿದ್ದರು” ಎಂದು ವಿವರಿಸಿದ್ದಾರೆ.

“ಅಲ್ಲಿಂದ ಈ ಮೊಬೈಲ್‌ ಅನ್ನು ಕಾಂಬ್ಳೆ ಎಂದು ಗುರುತಿಸಲಾದ ಕಾನ್‌ಸ್ಟೆಬಲ್‌ಗೆ ಹಸ್ತಾಂತರಿಸಲಾಯಿತು. ಆಗಿನ ಡಿಐಜಿ (ಭಯೋತ್ಪಾದನಾ ನಿಗ್ರಹ ದಳ) ಆಗಿದ್ದ ಪರಮ್‌ ಬೀರ್‌ ಸಿಂಗ್ ಕಾನ್‌ಸ್ಟೆಬಲ್‌ನಿಂದ ಮೊಬೈಲ್ ಫೋನ್ ತೆಗೆದುಕೊಂಡರು. ಪ್ರಕರಣದ ತನಿಖಾಧಿಕಾರಿ ರಮೇಶ್ ಮಹಾಲೆ ಅವರಿಗೆ ಫೋನ್ ಹಸ್ತಾಂತರಿಸಬೇಕಿತ್ತು. ಆದರೂ ಪರಮ್‌ ಬೀರ್‌ಸಿಂಗ್‌ ಅದನ್ನು ನಾಶಪಡಿಸಿದ್ದಾರೆ” ಎಂದು ಸಂಶೇರ್‌‌ ಖಾನ್‌ ಪಠಾಣ್ ಆರೋಪಿಸಿದ್ದಾರೆ.

ದೇಶದ ಆರ್ಥಿಕ ರಾಜಧಾನಿ ಮುಂಬೈ ಮೇಲೆ ನವೆಂಬರ್ 26, 2008 ರಂದು ಭಯೋತ್ಪಾದಕ ದಾಳಿ ನಡೆದಿತ್ತು. ಈ ದಾಳಿ ನಡೆದು ಶುಕ್ರವಾರಕ್ಕೆ(ನಿನ್ನೆ) 13 ವರ್ಷ ಆಗಿದೆ. ಲಷ್ಕರ್‌–ಎ–ತೊಯ್ಬಾದ ಸಂಘಟನೆ ಭಯೋತ್ಪಾದಕರು ಪಾಕಿಸ್ತಾನದಿಂದ ಸಮುದ್ರ ಮಾರ್ಗದ ಮೂಲಕ ಮುಂಬೈ ಪ್ರವೇಶಿಸಿ, ನಡೆಸಿದ ಸರಣಿ ದಾಳಿಗಳಲ್ಲಿ 18 ಭದ್ರತಾ ಸಿಬ್ಬಂದಿ ಸೇರಿದಂತೆ 166 ಜನರು ಈ ಘಟನೆಯಲ್ಲಿ ಮೃತಪಟ್ಟಿದ್ದರು. ಮುಂಬೈಯ ಜನನಿಬಿಡ ಪ್ರದೇಶಗಳಲ್ಲಿ ಗುಂಡಿನ ಮಳೆ ಸುರಿಸಿದ್ದರು. ನಂತರ ಮುಂಬೈನ ತಾಜ್​​​​​ ಹೋಟೆಲ್ ಪ್ರವೇಶಿಸಿ ದಾಳಿ ಪ್ರಾರಂಭಿಸಿದ್ದರು. ಭದ್ರತಾ ಪಡೆಗಳು 10 ಉಗ್ರರ ಪೈಕಿ ಒಂಬತ್ತು ಮಂದಿಯನ್ನು ಹೊಡೆದುರುಳಿಸಿತ್ತು. ಬದುಕುಳಿದ್ದ ಏಕೈಕ ಉಗ್ರ ಅಜ್ಮಲ್ ಕಸಬ್ ಅನ್ನು ನವೆಂಬರ್ 21, 2012 ರಂದು ಗಲ್ಲಿಗೇರಿಸಲಾಯಿತು.

ಇದನ್ನೂ ಓದಿ: ಮತ್ತೆ ರೈತ ಮಹಾಪಂಚಾಯತ್‌ಗಳ ಆರಂಭ: ಮುಂಬೈ, ಲಕ್ನೋಗಳಲ್ಲಿ ಅಬ್ಬರಿಸಲಿರುವ ರೈತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...