Homeಮುಖಪುಟಅಜ್ಮಲ್ ಕಸಬ್ ಮೊಬೈಲ್‌ ಫೋನ್‌‌ ನಾಶಪಡಿಸಲಾಗಿದೆ: ನಿವೃತ್ತ ಎಸಿಪಿ ಆರೋಪ

ಅಜ್ಮಲ್ ಕಸಬ್ ಮೊಬೈಲ್‌ ಫೋನ್‌‌ ನಾಶಪಡಿಸಲಾಗಿದೆ: ನಿವೃತ್ತ ಎಸಿಪಿ ಆರೋಪ

26/11 ಮುಂಬೈ ದಾಳಿಗೆ 13 ವರ್ಷ ಆಗಿದ್ದು, ಸೆರೆಸಿಕ್ಕ ಅಜ್ಮಲ್‌ನನ್ನು ನವೆಂಬರ್ 2012 ರಲ್ಲಿ ಗಲ್ಲಿಗೇರಿಸಲಾಯಿತು

- Advertisement -
- Advertisement -

ಮುಂಬೈನ ಮಾಜಿ ಪೊಲೀಸ್ ಕಮಿಷನರ್ ಪರಮ್ ಬೀರ್ ಸಿಂಗ್ ಅವರು ಮೊಹಮ್ಮದ್ ಅಜ್ಮಲ್ ಕಸಬ್‌ನಿಂದ ವಶಪಡಿಸಿಕೊಂಡ ಮೊಬೈಲ್ ಫೋನ್ ಅನ್ನು ನಾಶಪಡಿಸಿದ್ದಾರೆ ಎಂದು ನಿವೃತ್ತ ಸಹಾಯಕ ಪೊಲೀಸ್ ಆಯುಕ್ತ ಸಂಶೇರ್ ಖಾನ್ ಪಠಾಣ್ ಆರೋಪಿಸಿದ್ದಾರೆ. ಅಜ್ಮಲ್‌ ಕಸಬ್‌ನನ್ನು 26/11 ಮುಂಬೈ ದಾಳಿಯ ದೋಷಿ ಎಂದು ಸುಪ್ರೀಂ ಕೋರ್ಟ್ ಘೋಷಿಸಿತ್ತು ಮತ್ತು ನವೆಂಬರ್ 2012 ರಲ್ಲಿ ಆತನನ್ನು ಗಲ್ಲಿಗೇರಿಸಲಾಯಿತು.

ಸಂಶೇರ್‌ ಖಾನ್‌‌ ಪಠಾಣ್ ಅವರು ಜುಲೈನಲ್ಲಿ ಮುಂಬೈ ಪೊಲೀಸ್ ಆಯುಕ್ತರಿಗೆ ಲಿಖಿತ ದೂರನ್ನು ಸಲ್ಲಿಸಿದ್ದರು. ಈ ದೂರಿನಲ್ಲಿ ಪರಮ್‌ ಬೀರ್‌ ಸಿಂಗ್ ವಿರುದ್ಧ ತನಿಖೆ ಮತ್ತು ನಂತರದ ಕ್ರಮಕ್ಕಾಗಿ ಒತ್ತಾಯಿಸಿದ್ದರು. ಈ ದೂರಿನ ಪ್ರತಿ ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಪ್ರಸಾರವಾಯಿತು.

ಪರಮ್‌ ಬೀರ್‌ ಸಿಂಗ್‌ ಅವರನ್ನು ಈ ವರ್ಷದ ಮಾರ್ಚ್‌ ತಿಂಗಳಲ್ಲಿ ಮುಂಬೈ ಪೊಲೀಸ್ ಮುಖ್ಯಸ್ಥ ಹುದ್ದೆಯಿಂದ ತೆಗೆದುಹಾಕಲಾಯಿತು.

ಇದನ್ನೂ ಓದಿ: 26/11 ಮುಂಬೈ ಭಯೋತ್ಪಾದಕ ದಾಳಿಗೆ 13 ವರ್ಷ: ಹುತಾತ್ಮರನ್ನು ಸ್ಮರಿಸಿದ ಗಣ್ಯರು

ಸಂಶೇರ್‌ ಖಾನ್‌‌ ಪಠಾಣ್ ತಮ್ಮ ದೂರಿನಲ್ಲಿ, “ಅಜ್ಮಲ್‌ ಕಸಬ್‌ನಿಂದ ಮೊಬೈಲ್ ಫೋನ್ ಅನ್ನು ವಶಪಡಿಸಿಕೊಂಡಿದ್ದೇವೆ ಎಂದು ಡಿಬಿ ಮಾರ್ಗ್ ಪೊಲೀಸ್ ಠಾಣೆಯ ಆಗಿನ ಹಿರಿಯ ಇನ್ಸ್‌ಪೆಕ್ಟರ್ ಎನ್‌ಆರ್ ಮಾಲಿ ಅವರು ತಿಳಿಸಿದ್ದರು” ಎಂದು ವಿವರಿಸಿದ್ದಾರೆ.

“ಅಲ್ಲಿಂದ ಈ ಮೊಬೈಲ್‌ ಅನ್ನು ಕಾಂಬ್ಳೆ ಎಂದು ಗುರುತಿಸಲಾದ ಕಾನ್‌ಸ್ಟೆಬಲ್‌ಗೆ ಹಸ್ತಾಂತರಿಸಲಾಯಿತು. ಆಗಿನ ಡಿಐಜಿ (ಭಯೋತ್ಪಾದನಾ ನಿಗ್ರಹ ದಳ) ಆಗಿದ್ದ ಪರಮ್‌ ಬೀರ್‌ ಸಿಂಗ್ ಕಾನ್‌ಸ್ಟೆಬಲ್‌ನಿಂದ ಮೊಬೈಲ್ ಫೋನ್ ತೆಗೆದುಕೊಂಡರು. ಪ್ರಕರಣದ ತನಿಖಾಧಿಕಾರಿ ರಮೇಶ್ ಮಹಾಲೆ ಅವರಿಗೆ ಫೋನ್ ಹಸ್ತಾಂತರಿಸಬೇಕಿತ್ತು. ಆದರೂ ಪರಮ್‌ ಬೀರ್‌ಸಿಂಗ್‌ ಅದನ್ನು ನಾಶಪಡಿಸಿದ್ದಾರೆ” ಎಂದು ಸಂಶೇರ್‌‌ ಖಾನ್‌ ಪಠಾಣ್ ಆರೋಪಿಸಿದ್ದಾರೆ.

ದೇಶದ ಆರ್ಥಿಕ ರಾಜಧಾನಿ ಮುಂಬೈ ಮೇಲೆ ನವೆಂಬರ್ 26, 2008 ರಂದು ಭಯೋತ್ಪಾದಕ ದಾಳಿ ನಡೆದಿತ್ತು. ಈ ದಾಳಿ ನಡೆದು ಶುಕ್ರವಾರಕ್ಕೆ(ನಿನ್ನೆ) 13 ವರ್ಷ ಆಗಿದೆ. ಲಷ್ಕರ್‌–ಎ–ತೊಯ್ಬಾದ ಸಂಘಟನೆ ಭಯೋತ್ಪಾದಕರು ಪಾಕಿಸ್ತಾನದಿಂದ ಸಮುದ್ರ ಮಾರ್ಗದ ಮೂಲಕ ಮುಂಬೈ ಪ್ರವೇಶಿಸಿ, ನಡೆಸಿದ ಸರಣಿ ದಾಳಿಗಳಲ್ಲಿ 18 ಭದ್ರತಾ ಸಿಬ್ಬಂದಿ ಸೇರಿದಂತೆ 166 ಜನರು ಈ ಘಟನೆಯಲ್ಲಿ ಮೃತಪಟ್ಟಿದ್ದರು. ಮುಂಬೈಯ ಜನನಿಬಿಡ ಪ್ರದೇಶಗಳಲ್ಲಿ ಗುಂಡಿನ ಮಳೆ ಸುರಿಸಿದ್ದರು. ನಂತರ ಮುಂಬೈನ ತಾಜ್​​​​​ ಹೋಟೆಲ್ ಪ್ರವೇಶಿಸಿ ದಾಳಿ ಪ್ರಾರಂಭಿಸಿದ್ದರು. ಭದ್ರತಾ ಪಡೆಗಳು 10 ಉಗ್ರರ ಪೈಕಿ ಒಂಬತ್ತು ಮಂದಿಯನ್ನು ಹೊಡೆದುರುಳಿಸಿತ್ತು. ಬದುಕುಳಿದ್ದ ಏಕೈಕ ಉಗ್ರ ಅಜ್ಮಲ್ ಕಸಬ್ ಅನ್ನು ನವೆಂಬರ್ 21, 2012 ರಂದು ಗಲ್ಲಿಗೇರಿಸಲಾಯಿತು.

ಇದನ್ನೂ ಓದಿ: ಮತ್ತೆ ರೈತ ಮಹಾಪಂಚಾಯತ್‌ಗಳ ಆರಂಭ: ಮುಂಬೈ, ಲಕ್ನೋಗಳಲ್ಲಿ ಅಬ್ಬರಿಸಲಿರುವ ರೈತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...