Homeಮುಖಪುಟಅಜ್ಮಲ್ ಕಸಬ್ ಮೊಬೈಲ್‌ ಫೋನ್‌‌ ನಾಶಪಡಿಸಲಾಗಿದೆ: ನಿವೃತ್ತ ಎಸಿಪಿ ಆರೋಪ

ಅಜ್ಮಲ್ ಕಸಬ್ ಮೊಬೈಲ್‌ ಫೋನ್‌‌ ನಾಶಪಡಿಸಲಾಗಿದೆ: ನಿವೃತ್ತ ಎಸಿಪಿ ಆರೋಪ

26/11 ಮುಂಬೈ ದಾಳಿಗೆ 13 ವರ್ಷ ಆಗಿದ್ದು, ಸೆರೆಸಿಕ್ಕ ಅಜ್ಮಲ್‌ನನ್ನು ನವೆಂಬರ್ 2012 ರಲ್ಲಿ ಗಲ್ಲಿಗೇರಿಸಲಾಯಿತು

- Advertisement -
- Advertisement -

ಮುಂಬೈನ ಮಾಜಿ ಪೊಲೀಸ್ ಕಮಿಷನರ್ ಪರಮ್ ಬೀರ್ ಸಿಂಗ್ ಅವರು ಮೊಹಮ್ಮದ್ ಅಜ್ಮಲ್ ಕಸಬ್‌ನಿಂದ ವಶಪಡಿಸಿಕೊಂಡ ಮೊಬೈಲ್ ಫೋನ್ ಅನ್ನು ನಾಶಪಡಿಸಿದ್ದಾರೆ ಎಂದು ನಿವೃತ್ತ ಸಹಾಯಕ ಪೊಲೀಸ್ ಆಯುಕ್ತ ಸಂಶೇರ್ ಖಾನ್ ಪಠಾಣ್ ಆರೋಪಿಸಿದ್ದಾರೆ. ಅಜ್ಮಲ್‌ ಕಸಬ್‌ನನ್ನು 26/11 ಮುಂಬೈ ದಾಳಿಯ ದೋಷಿ ಎಂದು ಸುಪ್ರೀಂ ಕೋರ್ಟ್ ಘೋಷಿಸಿತ್ತು ಮತ್ತು ನವೆಂಬರ್ 2012 ರಲ್ಲಿ ಆತನನ್ನು ಗಲ್ಲಿಗೇರಿಸಲಾಯಿತು.

ಸಂಶೇರ್‌ ಖಾನ್‌‌ ಪಠಾಣ್ ಅವರು ಜುಲೈನಲ್ಲಿ ಮುಂಬೈ ಪೊಲೀಸ್ ಆಯುಕ್ತರಿಗೆ ಲಿಖಿತ ದೂರನ್ನು ಸಲ್ಲಿಸಿದ್ದರು. ಈ ದೂರಿನಲ್ಲಿ ಪರಮ್‌ ಬೀರ್‌ ಸಿಂಗ್ ವಿರುದ್ಧ ತನಿಖೆ ಮತ್ತು ನಂತರದ ಕ್ರಮಕ್ಕಾಗಿ ಒತ್ತಾಯಿಸಿದ್ದರು. ಈ ದೂರಿನ ಪ್ರತಿ ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಪ್ರಸಾರವಾಯಿತು.

ಪರಮ್‌ ಬೀರ್‌ ಸಿಂಗ್‌ ಅವರನ್ನು ಈ ವರ್ಷದ ಮಾರ್ಚ್‌ ತಿಂಗಳಲ್ಲಿ ಮುಂಬೈ ಪೊಲೀಸ್ ಮುಖ್ಯಸ್ಥ ಹುದ್ದೆಯಿಂದ ತೆಗೆದುಹಾಕಲಾಯಿತು.

ಇದನ್ನೂ ಓದಿ: 26/11 ಮುಂಬೈ ಭಯೋತ್ಪಾದಕ ದಾಳಿಗೆ 13 ವರ್ಷ: ಹುತಾತ್ಮರನ್ನು ಸ್ಮರಿಸಿದ ಗಣ್ಯರು

ಸಂಶೇರ್‌ ಖಾನ್‌‌ ಪಠಾಣ್ ತಮ್ಮ ದೂರಿನಲ್ಲಿ, “ಅಜ್ಮಲ್‌ ಕಸಬ್‌ನಿಂದ ಮೊಬೈಲ್ ಫೋನ್ ಅನ್ನು ವಶಪಡಿಸಿಕೊಂಡಿದ್ದೇವೆ ಎಂದು ಡಿಬಿ ಮಾರ್ಗ್ ಪೊಲೀಸ್ ಠಾಣೆಯ ಆಗಿನ ಹಿರಿಯ ಇನ್ಸ್‌ಪೆಕ್ಟರ್ ಎನ್‌ಆರ್ ಮಾಲಿ ಅವರು ತಿಳಿಸಿದ್ದರು” ಎಂದು ವಿವರಿಸಿದ್ದಾರೆ.

“ಅಲ್ಲಿಂದ ಈ ಮೊಬೈಲ್‌ ಅನ್ನು ಕಾಂಬ್ಳೆ ಎಂದು ಗುರುತಿಸಲಾದ ಕಾನ್‌ಸ್ಟೆಬಲ್‌ಗೆ ಹಸ್ತಾಂತರಿಸಲಾಯಿತು. ಆಗಿನ ಡಿಐಜಿ (ಭಯೋತ್ಪಾದನಾ ನಿಗ್ರಹ ದಳ) ಆಗಿದ್ದ ಪರಮ್‌ ಬೀರ್‌ ಸಿಂಗ್ ಕಾನ್‌ಸ್ಟೆಬಲ್‌ನಿಂದ ಮೊಬೈಲ್ ಫೋನ್ ತೆಗೆದುಕೊಂಡರು. ಪ್ರಕರಣದ ತನಿಖಾಧಿಕಾರಿ ರಮೇಶ್ ಮಹಾಲೆ ಅವರಿಗೆ ಫೋನ್ ಹಸ್ತಾಂತರಿಸಬೇಕಿತ್ತು. ಆದರೂ ಪರಮ್‌ ಬೀರ್‌ಸಿಂಗ್‌ ಅದನ್ನು ನಾಶಪಡಿಸಿದ್ದಾರೆ” ಎಂದು ಸಂಶೇರ್‌‌ ಖಾನ್‌ ಪಠಾಣ್ ಆರೋಪಿಸಿದ್ದಾರೆ.

ದೇಶದ ಆರ್ಥಿಕ ರಾಜಧಾನಿ ಮುಂಬೈ ಮೇಲೆ ನವೆಂಬರ್ 26, 2008 ರಂದು ಭಯೋತ್ಪಾದಕ ದಾಳಿ ನಡೆದಿತ್ತು. ಈ ದಾಳಿ ನಡೆದು ಶುಕ್ರವಾರಕ್ಕೆ(ನಿನ್ನೆ) 13 ವರ್ಷ ಆಗಿದೆ. ಲಷ್ಕರ್‌–ಎ–ತೊಯ್ಬಾದ ಸಂಘಟನೆ ಭಯೋತ್ಪಾದಕರು ಪಾಕಿಸ್ತಾನದಿಂದ ಸಮುದ್ರ ಮಾರ್ಗದ ಮೂಲಕ ಮುಂಬೈ ಪ್ರವೇಶಿಸಿ, ನಡೆಸಿದ ಸರಣಿ ದಾಳಿಗಳಲ್ಲಿ 18 ಭದ್ರತಾ ಸಿಬ್ಬಂದಿ ಸೇರಿದಂತೆ 166 ಜನರು ಈ ಘಟನೆಯಲ್ಲಿ ಮೃತಪಟ್ಟಿದ್ದರು. ಮುಂಬೈಯ ಜನನಿಬಿಡ ಪ್ರದೇಶಗಳಲ್ಲಿ ಗುಂಡಿನ ಮಳೆ ಸುರಿಸಿದ್ದರು. ನಂತರ ಮುಂಬೈನ ತಾಜ್​​​​​ ಹೋಟೆಲ್ ಪ್ರವೇಶಿಸಿ ದಾಳಿ ಪ್ರಾರಂಭಿಸಿದ್ದರು. ಭದ್ರತಾ ಪಡೆಗಳು 10 ಉಗ್ರರ ಪೈಕಿ ಒಂಬತ್ತು ಮಂದಿಯನ್ನು ಹೊಡೆದುರುಳಿಸಿತ್ತು. ಬದುಕುಳಿದ್ದ ಏಕೈಕ ಉಗ್ರ ಅಜ್ಮಲ್ ಕಸಬ್ ಅನ್ನು ನವೆಂಬರ್ 21, 2012 ರಂದು ಗಲ್ಲಿಗೇರಿಸಲಾಯಿತು.

ಇದನ್ನೂ ಓದಿ: ಮತ್ತೆ ರೈತ ಮಹಾಪಂಚಾಯತ್‌ಗಳ ಆರಂಭ: ಮುಂಬೈ, ಲಕ್ನೋಗಳಲ್ಲಿ ಅಬ್ಬರಿಸಲಿರುವ ರೈತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...

SIR | ಮತದಾರರ ಪಟ್ಟಿಯಲ್ಲಿ ಹೆಸರಿದ್ದರೆ ಮಾತ್ರ ಸರ್ಕಾರಿ ಸೌಲಭ್ಯ: ಸಿಎಂ

ರಾಜ್ಯ ಸರ್ಕಾರದ ಐದು ಪ್ರಮುಖ ಗ್ಯಾರಂಟಿ ಯೋಜನೆಗಳು ಹಾಗೂ ಇತರ ಸರ್ಕಾರಿ ಸವಲತ್ತುಗಳನ್ನು ಪಡೆಯುತ್ತಿರುವ ಫಲಾನುಭವಿಗಳಿಗೆ ಮುಖ್ಯಮಂತ್ರಿಗಳು ಗಂಭೀರ ಎಚ್ಚರಿಕೆಯೊಂದನ್ನು ನೀಡಿದ್ದಾರೆ. ಪ್ರತಿಯೊಬ್ಬ ಫಲಾನುಭವಿಯೂ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಕಡ್ಡಾಯವಾಗಿ...

SIR, ಚುನಾವಣಾ ಆಯೋಗದ ಕಾರ್ಯನಿರ್ವಹಣೆ ಕುರಿತು 23 ವಿಪಕ್ಷಗಳಿಂದ ಸಿಜೆಐಗೆ ಜಂಟಿ ಪತ್ರ

ಭಾರತೀಯ ಚುನಾವಣಾ ಆಯೋಗವು (ಇಸಿಐ) ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಹಾಗೂ ಇತರ ಚುನಾವಣೆ ಸಂಬಂಧಿತ ವಿಷಯಗಳ ವಿರುದ್ಧ ಇಂಡಿಯಾ ಮೈತ್ರಿಕೂಟದ ಹೊರಗಿರುವ ದ್ರಾವಿಡ ಮುನ್ನೇತ್ರ ಕಳಗಂ...

SIR: ಮತದಾರರ ಅನುಕೂಲಕ್ಕಾಗಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರದ ಆದೇಶ

ರಾಜ್ಯಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 (SIR) ಕಾರ್ಯವು ಜೂನ್ 30ರಿಂದ (ಇಂದಿನಿಂದ) ಅಧಿಕೃತವಾಗಿ ಆರಂಭವಾಗಿದೆ. ಜುಲೈ 29ರವರೆಗೆ ಒಂದು ತಿಂಗಳ ಕಾಲ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ...

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...