Homeಮುಖಪುಟಮೋದಿಗೆ ಕ್ಲಾಸ್; ಪತ್ರಕರ್ತನನ್ನು ವಜಾಗೊಳಿಸಿದ ಆಜ್‌ತಕ್!

ಮೋದಿಗೆ ಕ್ಲಾಸ್; ಪತ್ರಕರ್ತನನ್ನು ವಜಾಗೊಳಿಸಿದ ಆಜ್‌ತಕ್!

- Advertisement -
- Advertisement -

ಪ್ರಧಾನಿ ಮೋದಿಯನ್ನು ಟೀಕಿಸಿದ್ದಕ್ಕೆ ತನ್ನನ್ನು ಕೆಲಸದಿಂದ ವಜಾಗೊಳಿಸಲಾಗಿದೆ ಎಂದು ಆಜ್‌ತಕ್‌ ಪತ್ರಕರ್ತ ಶ್ಯಾಮ್ ಮೀರಾ ಸಿಂಗ್ ಸೋಮವಾರ ಆರೋಪಿಸಿದ್ದಾರೆ. ಅವರು ಜುಲೈ 17 ರಂದು ತಮ್ಮ ಟ್ವಿಟರ್‌‌ ಖಾತೆಯಲ್ಲಿ ಮೋದಿ ನಾಚಿಕೆಯಿಲ್ಲದ ಪ್ರಧಾನಿ ಎಂದು ಟ್ವೀಟ್‌ ಮಾಡಿದ್ದರು.

ಪ್ರಧಾನಿ ಮೋದಿಯವರ ವಿರುದ್ದ ಈ ಎರಡು ಟ್ವೀಟ್‌ಗಳನ್ನು ಬರೆದಿದ್ದಕ್ಕಾಗಿ ನನ್ನ ಚಾನೆಲ್ ಆಜ್‌ತಕ್‌ನಿಂದ ನನ್ನನ್ನು ವಜಾಗೊಳಿಸಲಾಗಿದೆ ಎಂದು ಶ್ಯಾಮ್‌ ಸಿಂಗ್‌‌ ಇಂದು ಟ್ವೀಟ್ ಮಾಡಿದ್ದಾರೆ. ಟ್ವೀಟ್‌ನಲ್ಲಿ ಅವರು ಕಂಪೆನಿಯ ಪತ್ರ ಮತ್ತು ತಾನು ಮೋದಿ ವಿರುದ್ದ ಬರೆದಿದ್ದ ಎರಡು ಟ್ವೀಟ್‌ಗಳ ಚಿತ್ರ ಸಹಿತ ಟ್ವಿಟರ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಇದನ್ನೂ ಓದಿ: ಪೆಗಾಸಸ್ ಪ್ರಾಜೆಕ್ಟ್: ಶೀಘ್ರದಲ್ಲೇ ನ್ಯಾಯಾಧೀಶರ ಹೆಸರು ಬಹಿರಂಗ!

ಶ್ಯಾಮ್‌ ಸಿಂಗ್ ಅವರು ಜುಲೈ 17 ರಂದು ಅಫ್ಘಾನ್‌ನಲ್ಲಿ ಹತರಾಗಿದ್ದ ಖ್ಯಾತ ಪತ್ರಕರ್ತ ದ್ಯಾನಿಶ್ ಸಿದ್ದೀಕಿ ಅವರಿಗೆ ಪ್ರಧಾನಿ ಮೋದಿ ಶ್ರದ್ದಾಂಜಲಿ ಕೋರದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದರು. ಇದಕ್ಕೆ ಕೆಲವರು ಆಕ್ಷೇಪ ವ್ಯಕ್ತಪಡಿಸಿ, ಅವರ ಸಂಸ್ಥೆಗೆ ಟ್ಯಾಗ್ ಮಾಡಿದ್ದರು.

ಇದಕ್ಕೆ ಪ್ರತಿಕ್ರಿಯಿಸಿದ್ದ ಅವರು, “ನಾನು ಟ್ವಿಟ್ಟರ್‌ನಲ್ಲಿ ಏನಾದರು ಬರೆದರೆ, ಕೆಲವರು ನನ್ನ ಕಂಪನಿಯನ್ನು ಟ್ಯಾಗ್ ಮಾಡುತ್ತಾರೆ. ಟ್ಯಾಗ್ ಮಾಡಿ ಇವರನ್ನು ಕೆಲಸದಿಂದ ತೆಗೆದುಹಾಕಿ ಎಂದು ಹೇಳುತ್ತಾರೆ. ಮುಂದಿನ ಟ್ವೀಟ್ ಅನ್ನು ನಾನು ಹೆಚ್ಚು ತೀವ್ರವಾಗಿ ಬರೆಯುತ್ತೇನೆ. ಆದರೆ ನಾನು ಅದನ್ನು ಬರೆಯುವುದರಿಂದ ಹಿಂದೆ ಸರಿಯುವುದಿಲ್ಲ, ಮೋದಿ ಒಬ್ಬ ನಾಚಿಕೆಯಿಲ್ಲದ ಪ್ರಧಾನಿ” ಎಂದು ಬರೆದಿದ್ದರು.

ಇದನ್ನೂ ಓದಿ: ಹೋರಾಟಗಾರನ ಫೇಸ್‌ಬುಕ್ ಪೋಸ್ಟ್‌ಗೆ NSA ಪ್ರಕರಣ: ಸಂಜೆಯೊಳಗೆ ಬಿಡುಗಡೆಗೊಳಿಸಿ ಎಂದ ಸುಪ್ರೀಂ

ಈ ಟ್ವಿಟ್‌ಗೂ ಕೆಲವರು ಆಕ್ಷೇಪ ವ್ಯಕ್ತಪಡಿಸಿ ಪ್ರಧಾನಿಗೆ ಗೌರವ ನೀಡುವಂತೆ ಸಲಹೆ ನೀಡಿದ್ದರು. ಅದಕ್ಕೆ ಮತ್ತೆ ಟ್ವೀಟ್‌ನಲ್ಲೆ ಉತ್ತರಿಸಿದ್ದ ಅವರು, “ಪ್ರಧಾನಮಂತ್ರಿಯನ್ನು ಗೌರವಿಸಿ ಎಂದು ಯಾರು ಹೇಳುತ್ತಾರೋ, ಅವರು ಮೊದಲು ಮೋದಿಯನ್ನು ಪ್ರಧಾನಿ ಹುದ್ದೆಗೆ ಗೌರವ ನೀಡುವಂತೆ ಕೇಳಿ” ಎಂದು ಹೇಳಿದ್ದರು.

ಇದೀಗ ತನ್ನ ಈ ಎರಡು ಟ್ವೀಟ್‌ಗಳನ್ನು ಉಲ್ಲೇಖಿಸಿ ಕೆಲಸದಿಂದ ವಜಾಮಾಡಲಾಗಿದೆ ಎಂದು ಅವರು ಆರೋಪಿಸಿದ್ದಾರೆ. ಆದರೆ, “ತಾನು ಮತ್ತೆ ಮತ್ತೆ ಪುನರುಚ್ಚರಿಸಲು ಬಯಸುತ್ತೇನೆ. ಹೌದು! ಮೋದಿ ನಾಚಿಕೆಯಿಲ್ಲದ ಪ್ರಧಾನಿ” ಎಂದು ಅವರು ತಮ್ಮ ಮಾತನ್ನು ಪುನರುಚ್ಚರಿಸಿದ್ದಾರೆ.

“ಜನರು ತಮ್ಮ ಪದವಿ, ಸಂಶೋಧನಾ ಪ್ರಬಂಧಗಳನ್ನು ತಮ್ಮ ಆದರ್ಶ ವ್ಯಕ್ತಿಗಳಿಗೆ ಅರ್ಪಿಸುತ್ತಾರೆ. ನನ್ನ ಕಂಪನಿ ಇಂಡಿಯಾ ಟುಡೇಯ ವಜಾ ಪತ್ರವನ್ನು ಹೊರತುಪಡಿಸಿ ನನಗೆ ತೋರಿಸಲು ಏನೂ ಇಲ್ಲ. ಹಾಗಾಗಿ ಅಫ್ಘಾನಿಸ್ತಾನದಲ್ಲಿ ಹುತಾತ್ಮರಾದ ನನ್ನ ಪ್ರೀತಿಯ ಸ್ನೇಹಿತ ದ್ಯಾನಿಶ್ ಸಿದ್ದಿಕಿ ಅವರಿಗೆ ನನ್ನ ವಜಾ ಪತ್ರವನ್ನು ಅರ್ಪಿಸಲು ಬಯಸುತ್ತೇನೆ” ಎಂದು ಅವರು ಹೇಳಿದ್ದಾರೆ.

ರಾಯ್ಟರ್ಸ್‌ನ ಮುಖ್ಯ ಫೋಟೋಗ್ರಾಫರ್‌ ಆಗಿದ್ದ ದಾನಿಶ್ ಸಿದ್ದೀಕಿ ಕಂದಹಾರ್‌ನ ಸ್ಪಿನ್ ಬೋಲ್ಡಾಕ್ ‌ ಜಿಲ್ಲೆಯಲ್ಲಿ ನಡೆದ ಘರ್ಷಣೆಯಲ್ಲಿ ಹತರಾಗಿದ್ದರು. ವಿಶ್ವ ಪ್ರಸಿದ್ದ ಫೋಟೊ ಜರ್ನಲಿಸ್ಟ್‌ ಆಗಿದ್ದ ಅವರು 2018 ರಲ್ಲಿ ರೋಹಿಂಗ್ಯಾ ನಿರಾಶ್ರಿತರ ಬಿಕ್ಕಟ್ಟನ್ನು ದಾಖಲಿಸಿದ್ದ ಫೀಚರ್‌ ಫೋಟೊಗ್ರಾಫ್‌ಗಾಗಿ ಪ್ರತಿಷ್ಠಿತ ಪುಲಿಟ್ಜೆರ್ ಪ್ರಶಸ್ತಿಯನ್ನು ಪಡೆದಿದ್ದರು.

ಇದನ್ನೂ ಓದಿ: ದಿಟ್ಟ ಪತ್ರಕರ್ತ ದಾನಿಶ್ ಸಿದ್ದೀಕಿ ಹತ್ಯೆಗೆ ಪಿಎಂ ಮೋದಿ ಸಂತಾಪ ಸೂಚಿಸಲಿಲ್ಲವೇಕೆ?

ದಾನಿಶ್ ಅವರು, ಅಫ್ಘಾನಿಸ್ತಾನ ಮತ್ತು ಇರಾಕ್ ಯುದ್ಧಗಳು, ರೋಹಿಂಗ್ಯಾ ನಿರಾಶ್ರಿತರ ಬಿಕ್ಕಟ್ಟು, ಹಾಂಗ್ ಕಾಂಗ್ ಪ್ರತಿಭಟನೆಗಳು, ನೇಪಾಳ ಭೂಕಂಪಗಳು, ಉತ್ತರ ಕೊರಿಯಾದಲ್ಲಿ ನಡೆದ ಕ್ರೀಡಾಕೂಟಗಳ ವರದಿಗಳ ಸಹಿತ ಏಷ್ಯಾ, ಮಧ್ಯಪ್ರಾಚ್ಯ ಮತ್ತು ಯುರೋಪಿನ ವರದಿಗಳನ್ನು ಮಾಡಿದ್ದರು.

ಖ್ಯಾತ ಫೋಟೋ ಜರ್ನಲಿಸ್ಟ್‌ ಆಗಿದ್ದ ದ್ಯಾನಿಶ್‌ ನಿಧನಕ್ಕೆ ವಿಶ್ವಸಂಸ್ಥೆ ಮತ್ತು ಅಮೆರಿಕಾದ ಜೊ ಬಿಡೆನ್‌ ಆಡಳಿತ ಸಹಿತ ವಿಶ್ವದಾದ್ಯಂತ ಹಲವಾರು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದರು. ಆದರೆ ಭಾರತ ಸರ್ಕಾರ ಮತ್ತು ಪ್ರಧಾನಿ ಮೋದಿ ಸಂತಾಪ ವ್ಯಕ್ತಪಡಿಸಿರಲಿಲ್ಲ.

ಕಳೆದ ವರ್ಷ ದೇಶದಲ್ಲಿ ಕೊರೊನಾ ಪತ್ತೆಯಾದಾಗ, ಯಾವುದೆ ಪೂರ್ವ ತಯಾರಿ ಇಲ್ಲದೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಜಾರಿಗೆ ತಂದಿದ್ದ ಅವೈಜ್ಞಾನಿಕ ಲಾಕ್‌ಡೌನ್‌ನಲ್ಲಿ ವಲಸೆ ಕಾರ್ಮಿಕರು ಪಟ್ಟ ಬವಣೆಗೆಗಳು, ಕೊರೊನಾ ಎರಡನೆ ಅಲೆಯ ಸಮಯದಲ್ಲಿ ದೇಶದ ಸ್ಮಶಾನದಲ್ಲಿನ ಚಿತ್ರಣಗಳನ್ನು ಅವರು ಸಮರ್ಪಕವಾಗಿ ಸೆರೆ ಹಿಡಿದು ಜನರ ಮುಂದೆ ಇಟ್ಟಿದ್ದರು. ಅಷ್ಟೇ ಅಲ್ಲದೆ CAA-NRC-NPR ವಿರೋಧಿ ಹೋರಾಟದ ಸಮಯದಲ್ಲಿ ನಡೆದ ಘಟನೆಗಳು ಹಾಗೂ ದೆಹಲಿ ಗಲಭೆಯ ಕ್ರೂರ ಚಿತ್ರಗಳನ್ನು ಅವರು ಸೆರೆ ಹಿಡಿದಿದ್ದರು.

ಇದನ್ನೂ ಓದಿ: ಅಫ್ಘಾನ್‌‌ನಲ್ಲಿ ಹತರಾದ ಖ್ಯಾತ ಫೋಟೊ ಜರ್ನಲಿಸ್ಟ್‌‌ ದಾನಿಶ್ ಕ್ಲಿಕ್ಕಿಸಿದ ಕೆಲವು ಫೋಟೊಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...