Homeಮುಖಪುಟಮೋದಿಗೆ ಕ್ಲಾಸ್; ಪತ್ರಕರ್ತನನ್ನು ವಜಾಗೊಳಿಸಿದ ಆಜ್‌ತಕ್!

ಮೋದಿಗೆ ಕ್ಲಾಸ್; ಪತ್ರಕರ್ತನನ್ನು ವಜಾಗೊಳಿಸಿದ ಆಜ್‌ತಕ್!

- Advertisement -
- Advertisement -

ಪ್ರಧಾನಿ ಮೋದಿಯನ್ನು ಟೀಕಿಸಿದ್ದಕ್ಕೆ ತನ್ನನ್ನು ಕೆಲಸದಿಂದ ವಜಾಗೊಳಿಸಲಾಗಿದೆ ಎಂದು ಆಜ್‌ತಕ್‌ ಪತ್ರಕರ್ತ ಶ್ಯಾಮ್ ಮೀರಾ ಸಿಂಗ್ ಸೋಮವಾರ ಆರೋಪಿಸಿದ್ದಾರೆ. ಅವರು ಜುಲೈ 17 ರಂದು ತಮ್ಮ ಟ್ವಿಟರ್‌‌ ಖಾತೆಯಲ್ಲಿ ಮೋದಿ ನಾಚಿಕೆಯಿಲ್ಲದ ಪ್ರಧಾನಿ ಎಂದು ಟ್ವೀಟ್‌ ಮಾಡಿದ್ದರು.

ಪ್ರಧಾನಿ ಮೋದಿಯವರ ವಿರುದ್ದ ಈ ಎರಡು ಟ್ವೀಟ್‌ಗಳನ್ನು ಬರೆದಿದ್ದಕ್ಕಾಗಿ ನನ್ನ ಚಾನೆಲ್ ಆಜ್‌ತಕ್‌ನಿಂದ ನನ್ನನ್ನು ವಜಾಗೊಳಿಸಲಾಗಿದೆ ಎಂದು ಶ್ಯಾಮ್‌ ಸಿಂಗ್‌‌ ಇಂದು ಟ್ವೀಟ್ ಮಾಡಿದ್ದಾರೆ. ಟ್ವೀಟ್‌ನಲ್ಲಿ ಅವರು ಕಂಪೆನಿಯ ಪತ್ರ ಮತ್ತು ತಾನು ಮೋದಿ ವಿರುದ್ದ ಬರೆದಿದ್ದ ಎರಡು ಟ್ವೀಟ್‌ಗಳ ಚಿತ್ರ ಸಹಿತ ಟ್ವಿಟರ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಇದನ್ನೂ ಓದಿ: ಪೆಗಾಸಸ್ ಪ್ರಾಜೆಕ್ಟ್: ಶೀಘ್ರದಲ್ಲೇ ನ್ಯಾಯಾಧೀಶರ ಹೆಸರು ಬಹಿರಂಗ!

ಶ್ಯಾಮ್‌ ಸಿಂಗ್ ಅವರು ಜುಲೈ 17 ರಂದು ಅಫ್ಘಾನ್‌ನಲ್ಲಿ ಹತರಾಗಿದ್ದ ಖ್ಯಾತ ಪತ್ರಕರ್ತ ದ್ಯಾನಿಶ್ ಸಿದ್ದೀಕಿ ಅವರಿಗೆ ಪ್ರಧಾನಿ ಮೋದಿ ಶ್ರದ್ದಾಂಜಲಿ ಕೋರದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದರು. ಇದಕ್ಕೆ ಕೆಲವರು ಆಕ್ಷೇಪ ವ್ಯಕ್ತಪಡಿಸಿ, ಅವರ ಸಂಸ್ಥೆಗೆ ಟ್ಯಾಗ್ ಮಾಡಿದ್ದರು.

ಇದಕ್ಕೆ ಪ್ರತಿಕ್ರಿಯಿಸಿದ್ದ ಅವರು, “ನಾನು ಟ್ವಿಟ್ಟರ್‌ನಲ್ಲಿ ಏನಾದರು ಬರೆದರೆ, ಕೆಲವರು ನನ್ನ ಕಂಪನಿಯನ್ನು ಟ್ಯಾಗ್ ಮಾಡುತ್ತಾರೆ. ಟ್ಯಾಗ್ ಮಾಡಿ ಇವರನ್ನು ಕೆಲಸದಿಂದ ತೆಗೆದುಹಾಕಿ ಎಂದು ಹೇಳುತ್ತಾರೆ. ಮುಂದಿನ ಟ್ವೀಟ್ ಅನ್ನು ನಾನು ಹೆಚ್ಚು ತೀವ್ರವಾಗಿ ಬರೆಯುತ್ತೇನೆ. ಆದರೆ ನಾನು ಅದನ್ನು ಬರೆಯುವುದರಿಂದ ಹಿಂದೆ ಸರಿಯುವುದಿಲ್ಲ, ಮೋದಿ ಒಬ್ಬ ನಾಚಿಕೆಯಿಲ್ಲದ ಪ್ರಧಾನಿ” ಎಂದು ಬರೆದಿದ್ದರು.

ಇದನ್ನೂ ಓದಿ: ಹೋರಾಟಗಾರನ ಫೇಸ್‌ಬುಕ್ ಪೋಸ್ಟ್‌ಗೆ NSA ಪ್ರಕರಣ: ಸಂಜೆಯೊಳಗೆ ಬಿಡುಗಡೆಗೊಳಿಸಿ ಎಂದ ಸುಪ್ರೀಂ

ಈ ಟ್ವಿಟ್‌ಗೂ ಕೆಲವರು ಆಕ್ಷೇಪ ವ್ಯಕ್ತಪಡಿಸಿ ಪ್ರಧಾನಿಗೆ ಗೌರವ ನೀಡುವಂತೆ ಸಲಹೆ ನೀಡಿದ್ದರು. ಅದಕ್ಕೆ ಮತ್ತೆ ಟ್ವೀಟ್‌ನಲ್ಲೆ ಉತ್ತರಿಸಿದ್ದ ಅವರು, “ಪ್ರಧಾನಮಂತ್ರಿಯನ್ನು ಗೌರವಿಸಿ ಎಂದು ಯಾರು ಹೇಳುತ್ತಾರೋ, ಅವರು ಮೊದಲು ಮೋದಿಯನ್ನು ಪ್ರಧಾನಿ ಹುದ್ದೆಗೆ ಗೌರವ ನೀಡುವಂತೆ ಕೇಳಿ” ಎಂದು ಹೇಳಿದ್ದರು.

ಇದೀಗ ತನ್ನ ಈ ಎರಡು ಟ್ವೀಟ್‌ಗಳನ್ನು ಉಲ್ಲೇಖಿಸಿ ಕೆಲಸದಿಂದ ವಜಾಮಾಡಲಾಗಿದೆ ಎಂದು ಅವರು ಆರೋಪಿಸಿದ್ದಾರೆ. ಆದರೆ, “ತಾನು ಮತ್ತೆ ಮತ್ತೆ ಪುನರುಚ್ಚರಿಸಲು ಬಯಸುತ್ತೇನೆ. ಹೌದು! ಮೋದಿ ನಾಚಿಕೆಯಿಲ್ಲದ ಪ್ರಧಾನಿ” ಎಂದು ಅವರು ತಮ್ಮ ಮಾತನ್ನು ಪುನರುಚ್ಚರಿಸಿದ್ದಾರೆ.

“ಜನರು ತಮ್ಮ ಪದವಿ, ಸಂಶೋಧನಾ ಪ್ರಬಂಧಗಳನ್ನು ತಮ್ಮ ಆದರ್ಶ ವ್ಯಕ್ತಿಗಳಿಗೆ ಅರ್ಪಿಸುತ್ತಾರೆ. ನನ್ನ ಕಂಪನಿ ಇಂಡಿಯಾ ಟುಡೇಯ ವಜಾ ಪತ್ರವನ್ನು ಹೊರತುಪಡಿಸಿ ನನಗೆ ತೋರಿಸಲು ಏನೂ ಇಲ್ಲ. ಹಾಗಾಗಿ ಅಫ್ಘಾನಿಸ್ತಾನದಲ್ಲಿ ಹುತಾತ್ಮರಾದ ನನ್ನ ಪ್ರೀತಿಯ ಸ್ನೇಹಿತ ದ್ಯಾನಿಶ್ ಸಿದ್ದಿಕಿ ಅವರಿಗೆ ನನ್ನ ವಜಾ ಪತ್ರವನ್ನು ಅರ್ಪಿಸಲು ಬಯಸುತ್ತೇನೆ” ಎಂದು ಅವರು ಹೇಳಿದ್ದಾರೆ.

ರಾಯ್ಟರ್ಸ್‌ನ ಮುಖ್ಯ ಫೋಟೋಗ್ರಾಫರ್‌ ಆಗಿದ್ದ ದಾನಿಶ್ ಸಿದ್ದೀಕಿ ಕಂದಹಾರ್‌ನ ಸ್ಪಿನ್ ಬೋಲ್ಡಾಕ್ ‌ ಜಿಲ್ಲೆಯಲ್ಲಿ ನಡೆದ ಘರ್ಷಣೆಯಲ್ಲಿ ಹತರಾಗಿದ್ದರು. ವಿಶ್ವ ಪ್ರಸಿದ್ದ ಫೋಟೊ ಜರ್ನಲಿಸ್ಟ್‌ ಆಗಿದ್ದ ಅವರು 2018 ರಲ್ಲಿ ರೋಹಿಂಗ್ಯಾ ನಿರಾಶ್ರಿತರ ಬಿಕ್ಕಟ್ಟನ್ನು ದಾಖಲಿಸಿದ್ದ ಫೀಚರ್‌ ಫೋಟೊಗ್ರಾಫ್‌ಗಾಗಿ ಪ್ರತಿಷ್ಠಿತ ಪುಲಿಟ್ಜೆರ್ ಪ್ರಶಸ್ತಿಯನ್ನು ಪಡೆದಿದ್ದರು.

ಇದನ್ನೂ ಓದಿ: ದಿಟ್ಟ ಪತ್ರಕರ್ತ ದಾನಿಶ್ ಸಿದ್ದೀಕಿ ಹತ್ಯೆಗೆ ಪಿಎಂ ಮೋದಿ ಸಂತಾಪ ಸೂಚಿಸಲಿಲ್ಲವೇಕೆ?

ದಾನಿಶ್ ಅವರು, ಅಫ್ಘಾನಿಸ್ತಾನ ಮತ್ತು ಇರಾಕ್ ಯುದ್ಧಗಳು, ರೋಹಿಂಗ್ಯಾ ನಿರಾಶ್ರಿತರ ಬಿಕ್ಕಟ್ಟು, ಹಾಂಗ್ ಕಾಂಗ್ ಪ್ರತಿಭಟನೆಗಳು, ನೇಪಾಳ ಭೂಕಂಪಗಳು, ಉತ್ತರ ಕೊರಿಯಾದಲ್ಲಿ ನಡೆದ ಕ್ರೀಡಾಕೂಟಗಳ ವರದಿಗಳ ಸಹಿತ ಏಷ್ಯಾ, ಮಧ್ಯಪ್ರಾಚ್ಯ ಮತ್ತು ಯುರೋಪಿನ ವರದಿಗಳನ್ನು ಮಾಡಿದ್ದರು.

ಖ್ಯಾತ ಫೋಟೋ ಜರ್ನಲಿಸ್ಟ್‌ ಆಗಿದ್ದ ದ್ಯಾನಿಶ್‌ ನಿಧನಕ್ಕೆ ವಿಶ್ವಸಂಸ್ಥೆ ಮತ್ತು ಅಮೆರಿಕಾದ ಜೊ ಬಿಡೆನ್‌ ಆಡಳಿತ ಸಹಿತ ವಿಶ್ವದಾದ್ಯಂತ ಹಲವಾರು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದರು. ಆದರೆ ಭಾರತ ಸರ್ಕಾರ ಮತ್ತು ಪ್ರಧಾನಿ ಮೋದಿ ಸಂತಾಪ ವ್ಯಕ್ತಪಡಿಸಿರಲಿಲ್ಲ.

ಕಳೆದ ವರ್ಷ ದೇಶದಲ್ಲಿ ಕೊರೊನಾ ಪತ್ತೆಯಾದಾಗ, ಯಾವುದೆ ಪೂರ್ವ ತಯಾರಿ ಇಲ್ಲದೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಜಾರಿಗೆ ತಂದಿದ್ದ ಅವೈಜ್ಞಾನಿಕ ಲಾಕ್‌ಡೌನ್‌ನಲ್ಲಿ ವಲಸೆ ಕಾರ್ಮಿಕರು ಪಟ್ಟ ಬವಣೆಗೆಗಳು, ಕೊರೊನಾ ಎರಡನೆ ಅಲೆಯ ಸಮಯದಲ್ಲಿ ದೇಶದ ಸ್ಮಶಾನದಲ್ಲಿನ ಚಿತ್ರಣಗಳನ್ನು ಅವರು ಸಮರ್ಪಕವಾಗಿ ಸೆರೆ ಹಿಡಿದು ಜನರ ಮುಂದೆ ಇಟ್ಟಿದ್ದರು. ಅಷ್ಟೇ ಅಲ್ಲದೆ CAA-NRC-NPR ವಿರೋಧಿ ಹೋರಾಟದ ಸಮಯದಲ್ಲಿ ನಡೆದ ಘಟನೆಗಳು ಹಾಗೂ ದೆಹಲಿ ಗಲಭೆಯ ಕ್ರೂರ ಚಿತ್ರಗಳನ್ನು ಅವರು ಸೆರೆ ಹಿಡಿದಿದ್ದರು.

ಇದನ್ನೂ ಓದಿ: ಅಫ್ಘಾನ್‌‌ನಲ್ಲಿ ಹತರಾದ ಖ್ಯಾತ ಫೋಟೊ ಜರ್ನಲಿಸ್ಟ್‌‌ ದಾನಿಶ್ ಕ್ಲಿಕ್ಕಿಸಿದ ಕೆಲವು ಫೋಟೊಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...

ಅಯೋಧ್ಯೆ ದೇಣಿಗೆ ಹಗರಣ: ಕೇವಲ 45 ದಿನಗಳಲ್ಲಿ 70 ಬಾರಿ ಕಳ್ಳತನ, SIT ವರದಿ

ಅಯೋಧ್ಯೆಯ ರಾಮಮಂದಿರಕ್ಕೆ ಬಂದ ಸಾರ್ವಜನಿಕರ ದೇಣಿಗೆ ದುರುಪಯೋಗದ ಆರೋಪದ ಕುರಿತು ವಿಶೇಷ ತನಿಖಾ ತಂಡ (SIT) ನಡೆಸಿದ ಪ್ರಾಥಮಿಕ ತನಿಖೆಯಲ್ಲಿ, ಕೇವಲ 45 ದಿನಗಳಲ್ಲಿ ಸುಮಾರು 70 ಸಂಶಯಾಸ್ಪದ ಕಳ್ಳತನಗಳು ನಡೆದಿರುವುದಕ್ಕೆ ಪ್ರಾಥಮಿಕ...

ಬರುಯಿಪುರ ಅತ್ಯಾಚಾರ-ಕೊಲೆ ಪ್ರಕರಣ: ಪ್ರಮುಖ ಆರೋಪಿಯ ಎನ್‌ಕೌಂಟರ್; ‘ನನ್ನ ಮಗನ ಶವ ನನಗೆ ಬೇಡ’ ಎಂದ ಹೆತ್ತ ತಾಯಿ!

ಬರುಯಿಪುರ/ಕೋಲ್ಕತ್ತಾ: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬರುಯಿಪುರದಲ್ಲಿ 12 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕ್ರೂರ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪ್ರಭಾಸ್ ಮೊಂಡೋಲ್ ಬುಧವಾರ...

ವಯನಾಡ್ ಭೂಕುಸಿತ: ಕಾಣೆಯಾದ ಐವರಿಗಾಗಿ ಮುಂದುವರೆದ ಹುಡುಕಾಟ

ಬೆಟ್ಟದ ಜಿಲ್ಲೆಯ ವಯನಾಡ್‌ನಲ್ಲಿ ನಡೆಯುತ್ತಿರುವ ಸುರಂಗ ರಸ್ತೆ ನಿರ್ಮಾಣ ಸ್ಥಳದಲ್ಲಿ ಭೂಕುಸಿತ ಸಂಭವಿಸಿ ಮೂರು ಜೀವಗಳು ಬಲಿಯಾದ ಒಂದು ದಿನದ ನಂತರ, ಕಾಣೆಯಾಗಿರುವ ಐವರಿಗಾಗಿ ಹುಡುಕಾಟ ಮುಂದುವರೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ವಯನಾಡ್...

ನನ್ನನ್ನು ಕೊಂಡುಕೊಳ್ಳಲು ಯಾರ ಕೈಲೂ ಸಾಧ್ಯವಿಲ್ಲ: ಮಹುವಾ ಮೋಯಿತ್ರಾ ವಿಶೇಷ ಸಂದರ್ಶನ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಜಯಭೇರಿ ಬಾರಿಸಿದ ಬೆನ್ನಲ್ಲೇ, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರ ಭದ್ರಕೋಟೆ ಧೂಳೀಪಟವಾಗಿದೆ. ಚುನಾವಣಾ ಸೋಲಿನ ನಂತರ ಸಾಲು...