Homeಮುಖಪುಟಬಹುಜನ ಸಮಾಜ ಪಕ್ಷದ ರಾಷ್ಟ್ರೀಯ ಮುಖ್ಯ ಸಂಯೋಜಕರಾಗಿ ಆಕಾಶ್ ಆನಂದ್ ನೇಮಕ

ಬಹುಜನ ಸಮಾಜ ಪಕ್ಷದ ರಾಷ್ಟ್ರೀಯ ಮುಖ್ಯ ಸಂಯೋಜಕರಾಗಿ ಆಕಾಶ್ ಆನಂದ್ ನೇಮಕ

- Advertisement -
- Advertisement -

ದೆಹಲಿಯಲ್ಲಿ ಭಾನುವಾರ ನಡೆದ ಸಭೆಯ ವೇಳೆ ತಮ್ಮ ಸೋದರಳಿಯ ಆಕಾಶ್ ಆನಂದ್ ಅವರನ್ನು ಪಕ್ಷದ ಮುಖ್ಯ ರಾಷ್ಟ್ರೀಯ ಸಂಯೋಜಕರನ್ನಾಗಿ ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ನೇಮಿಸಿದ್ದಾರೆ. ಈ ಹಿಂದೆ ಪಕ್ಷದಿಂದ ಹೊರ ಹಾಕಲ್ಪಟ್ಟಿದ್ದ ಆನಂದ್ ಅವರನ್ನು ಮತ್ತೆ ಪಕ್ಷಕ್ಕೆ ಸ್ವಾಗತಿಸಿದ ಒಂದು ತಿಂಗಳ ನಂತರ ಮಾಯಾವತಿ ಅವರು ಈ ನಿರ್ಧಾರ ಕೈಗೊಂಡಿದ್ದಾರೆ.

ಬಿಎಸ್‌ಪಿ ಪಕ್ಷದಲ್ಲಿ ಈ ಹುದ್ದೆಯನ್ನು ಮೊದಲ ಬಾರಿಗೆ ಪರಿಚಯಿಸಲಾಗಿದ್ದು, ಅದಕ್ಕೆ ಆನಂದ್ ಅವರನ್ನು ನೇಮಿಸಲಾಗಿದೆ. ಆನಂದ್ ಅವರು ಮಾರ್ಚ್‌ ವೇಳೆ ಪಕ್ಷದಿಂದ ಹೊರಹಾಕಲ್ಪಡುವ ಮೊದಲು ಇದ್ದ ಹುದ್ದೆಗಿಂತಲೂ ಈ ಹುದ್ದೆ ಉನ್ನತ ಸ್ಥಾನದ್ದಾಗಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಈ ಹುದ್ದೆಗೆ ಆನಂದ್ ಅವರನ್ನು ನೇಮಿಸುವ ಮೂಲಕ ಪಕ್ಷದ ಎರಡನೇ ಅತ್ಯುನ್ನತ ಸ್ಥಾನದಲ್ಲಿ ಅವರನ್ನು ಇರಿಸಲಾಗಿದೆ ಎಂದು ವರದಿ ಹೇಳಿದೆ. ಈ ಹುದ್ದೆಯು ಪಕ್ಷದ ಮೂರು ರಾಷ್ಟ್ರೀಯ ಸಂಯೋಜಕರಿಗಿಂತ ಮೇಲಿರುತ್ತದೆ ಎಂದು ಪಕ್ಷದ ನಾಯಕರೊಬ್ಬರು ಹೇಳಿದ್ದಾರೆ ಎಂದು ಪತ್ರಿಕೆ ಉಲ್ಲೇಖಿಸಿದೆ.

ಈ ಹುದ್ದೆಗೆ ಆನಂದ್ ನೇಮಕವಾದ್ದರಿಂದ ಅವರು ಈಗ ದೇಶಾದ್ಯಂತ ಎಲ್ಲಾ ರಾಜ್ಯ ಘಟಕಗಳಲ್ಲಿ ಪಕ್ಷದ ಕಾರ್ಯತಂತ್ರಗಳನ್ನು ನೋಡಿಕೊಳ್ಳುತ್ತಾರೆ ಮತ್ತು ಮುಂಬರುವ ಬಿಹಾರ ವಿಧಾನಸಭಾ ಚುನಾವಣೆಗಳಲ್ಲಿ ಪ್ರಮುಖ ಪಾತ್ರ ವಹಿಸುವ ಸಾಧ್ಯತೆಯಿದೆ ಎಂದು ದಿ ಹಿಂದೂ ವರದಿ ಮಾಡಿದೆ.

ಬಿಹಾರ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸುವ ಉದ್ದೇಶವನ್ನು ಪಕ್ಷವು ಭಾನುವಾರ ಘೋಷಿಸಿದೆ. “ಬಿಹಾರ ಚುನಾವಣೆಯ ಬಗ್ಗೆ ಪ್ರತ್ಯೇಕ ಚರ್ಚೆ ನಡೆದಿದ್ದು, ಮತ್ತು ಪಕ್ಷವು ತನ್ನ ಎಲ್ಲಾ ಶಕ್ತಿಯನ್ನು ಬಳಸಿ ಚುನಾವಣೆಯಲ್ಲಿ ಏಕಾಂಗಿಯಾಗಿ ಎದುರಿಸಲು ನಿರ್ಧರಿಸಿತು” ಎಂದು ಪಕ್ಷ ಹೇಳಿದೆ.

ಪಕ್ಷದ ಹೊಸ ಜವಾಬ್ದಾರಿಯನ್ನು ವಹಿಸಿದ್ದಕ್ಕಾಗಿ ಸಾಮಾಜಿಕ ಮಾಧ್ಯಮದಲ್ಲಿ ಆನಂದ್ ಅವರು ಮಾಯಾವತಿಗೆ ಧನ್ಯವಾದ ಅರ್ಪಿಸಿದ್ದಾರೆ. “ಅವರು ನನ್ನ ತಪ್ಪುಗಳನ್ನು ಕ್ಷಮಿಸಿದ್ದಾರೆ ಮತ್ತು ಬಹುಜನ ಮಿಷನ್ ಮತ್ತು ಚಳುವಳಿಯನ್ನು ಬಲಪಡಿಸುವಲ್ಲಿ ಕೊಡುಗೆ ನೀಡಲು ನನಗೆ ಅವಕಾಶ ನೀಡಿದ್ದಾರೆ” ಎಂದು ಅವರು ಎಕ್ಸ್‌ನಲ್ಲಿ ಹೇಳಿದ್ದಾರೆ.

“ಪಕ್ಷ ಮತ್ತು ಚಳುವಳಿಯ ಹಿತಾಸಕ್ತಿಗಾಗಿ ನಾನು ಸಂಪೂರ್ಣ ಭಕ್ತಿಯಿಂದ ಕೆಲಸ ಮಾಡುತ್ತೇನೆ ಮತ್ತು ನಿಮ್ಮನ್ನು ಎಂದಿಗೂ ನಿರಾಶೆಗೊಳಿಸುವುದಿಲ್ಲ ಎಂದು ನಾನು ಬೆಹೆನ್‌ಜಿಗೆ ಭರವಸೆ ನೀಡುತ್ತೇನೆ.” ಎಂದು ಅವರು ತಿಳಿಸಿದ್ದಾರೆ.

2019 ರ ಲೋಕಸಭಾ ಚುನಾವಣೆಯ ನಂತರ ಆನಂದ್ ಅವರನ್ನು ಆರಂಭದಲ್ಲಿ ಪಕ್ಷದ ರಾಷ್ಟ್ರೀಯ ಸಂಯೋಜಕರಾಗಿ ನೇಮಿಸಲಾಯಿತು. ಆದಾಗ್ಯೂ, ಪ್ರಚಾರ ಭಾಷಣದ ಸಮಯದಲ್ಲಿ “ದ್ವೇಷವನ್ನು ಉತ್ತೇಜಿಸುವ” ಆರೋಪದ ಮೇಲೆ ಮೇ 2024 ರಲ್ಲಿ ಅವರ ವಿರುದ್ಧ ಪ್ರಕರಣ ದಾಖಲಾದ ನಂತರ ಅವರನ್ನು ಆ ಹುದ್ದೆಯಿಂದ ಮತ್ತು ಮಾಯಾವತಿ ಅವರ ನಿಯೋಜಿತ ಉತ್ತರಾಧಿಕಾರಿ ಸ್ಥಾನದಿಂದ ತೆಗೆದುಹಾಕಲಾಯಿತು.

ಅದಾಗ್ಯೂ, ಜೂನ್ 2024 ರಲ್ಲಿ ಅವರನ್ನು ಎರಡೂ ಪಾತ್ರಗಳಲ್ಲಿ ಮರುಸ್ಥಾಪಿಸಲಾಗಿತ್ತು. ಆದರೆ ಈ ವರ್ಷದ ಮಾರ್ಚ್‌ನಲ್ಲಿ, ಅವರ ಮಾವ ಅಶೋಕ್ ಸಿದ್ಧಾರ್ಥ್ ಅವರೊಂದಿಗಿನ ಸಂಪರ್ಕದಿಂದಾಗಿ ಅವರನ್ನು ಪಕ್ಷದಿಂದ ಹೊರಹಾಕಲಾಯಿತು ಮತ್ತು ಮತ್ತೊಮ್ಮೆ ರಾಷ್ಟ್ರೀಯ ಸಂಯೋಜಕರ ಸ್ಥಾನದಿಂದ ತೆಗೆದುಹಾಕಲಾಯಿತು.

ಬಹುಜನ ಸಮಾಜ ಪಕ್ಷದ ಕೇಂದ್ರ-ರಾಜ್ಯ ಸಂಯೋಜಕ ನಿತಿನ್ ಸಿಂಗ್ ಅವರೊಂದಿಗೆ ಮಾಜಿ ರಾಜ್ಯಸಭಾ ಸಂಸದ ಸಿದ್ಧಾರ್ಥ್ ಅವರನ್ನು ಫೆಬ್ರವರಿ 12 ರಂದು ಗುಂಪುಗಾರಿಕೆ ಮತ್ತು “ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ” ತೊಡಗಿಸಿಕೊಂಡ ಆರೋಪದ ಮೇಲೆ ಹೊರಹಾಕಲಾಯಿತು.

ಅದಾಗ್ಯೂ, ಏಪ್ರಿಲ್‌ನಲ್ಲಿ ಮಾಯಾವತಿ ಅವರು ಆನಂದ್ ಅವರಿಗೆ “ಮತ್ತೊಂದು ಅವಕಾಶ” ನೀಡಲು ಒಪ್ಪಿಕೊಂಡರು ಮತ್ತು ಅವರನ್ನು ಪಕ್ಷಕ್ಕೆ ಮತ್ತೆ ಸೇರಿಸಿಕೊಂಡಿದ್ದರು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಬಲವಂತದ ಅಥವಾ ವಂಚನೆಯ ಧಾರ್ಮಿಕ ಮತಾಂತರವನ್ನು ಸಂವಿಧಾನ ಬೆಂಬಲಿಸುವುದಿಲ್ಲ: ಅಲಹಾಬಾದ್ ಹೈಕೋರ್ಟ್

ಬಲವಂತದ ಅಥವಾ ವಂಚನೆಯ ಧಾರ್ಮಿಕ ಮತಾಂತರವನ್ನು ಸಂವಿಧಾನ ಬೆಂಬಲಿಸುವುದಿಲ್ಲ: ಅಲಹಾಬಾದ್ ಹೈಕೋರ್ಟ್

ಇಲ್ಲಿ ಕ್ಲಿಕ್ ಮಾಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹರಿಯಾಣದ ಮೋಸ್ಟ್ ವಾಂಟೆಡ್ ‘ಗ್ಯಾಂಗ್‌ಸ್ಟರ್’ ಸಾಹಿಲ್ ಚೌಹಾಣ್ ಥೈಲ್ಯಾಂಡ್ ನಿಂದ ಗಡೀಪಾರು; ದೆಹಲಿಯಲ್ಲಿ ವಶಕ್ಕೆ ಪಡೆಯಲಿರುವ ಎಸ್‌ಟಿಎಫ್

ಭಾರತೀಯ ಭದ್ರತಾ ಸಂಸ್ಥೆಗಳಿಗೆ ಒಂದು ಪ್ರಮುಖ ಪ್ರಗತಿಯಲ್ಲಿ, ಮೋಸ್ಟ್ ವಾಂಟೆಡ್ ಗ್ಯಾಂಗ್‌ಸ್ಟರ್ ಸಾಹಿಲ್ ಚೌಹಾಣ್‌ನನ್ನು ಥೈಲ್ಯಾಂಡ್‌ನಿಂದ ಗಡೀಪಾರು ಮಾಡಿದ ನಂತರ ಭಾರತಕ್ಕೆ ಕರೆತರಲಾಗುತ್ತಿದೆ. ಅಧಿಕಾರಿಗಳ ಪ್ರಕಾರ, ಚೌಹಾಣ್ ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ...

ಛತ್ತೀಸ್‌ಗಢ: 5 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಜೀವಂತ ಇರುವಾಗಲೇ ಗೋಣಿಚೀಲದಲ್ಲಿ ತುಂಬಿ ಬಾವಿ ಬಳಿ ಎಸೆದಿದ್ದ ಆರೋಪಿ ಬಂಧನ

ಛತ್ತೀಸ್‌ಗಢದ ದುರ್ಗ ಜಿಲ್ಲೆಯಲ್ಲಿ ಐದು ವರ್ಷದ ಬಾಲಕಿಯನ್ನು ಅಪಹರಿಸಿ ವ್ಯಕ್ತಿಯೊಬ್ಬ ಅತ್ಯಾಚಾರ ಮಾಡಿ, ನಂತರ ಮಗು ಜೀವಂತ ಇರುವಾಗಲೇ ಗೋಣಿಚೀಲದಲ್ಲಿ ಹಾಕಿ ಬಾವಿಯ ಬಳಿ ಎಸೆದಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ. ಉತೈ...

ಉತ್ತರಪ್ರದೇಶ: ಪ್ರೇಮ ಪ್ರಸ್ತಾಪ ತಿರಸ್ಕರಿಸಿದ್ದಕ್ಕೆ ಪ್ರತೀಕಾರ: ಮನೆಗೆ ನುಗ್ಗಿ 23ವರ್ಷದ ಯುವತಿ ಮತ್ತು ತಾಯಿಯ ಮೇಲೆ ಆಸಿಡ್ ದಾಳಿ; ಯುವತಿ ಸಾವು

ಉತ್ತರ ಪ್ರದೇಶದ ಕುಶಿನಗರ ಜಿಲ್ಲೆಯಲ್ಲಿ 23 ವರ್ಷದ ಯುವತಿಯೊಬ್ಬಳು ಪ್ರಾಣ ಕಳೆದುಕೊಂಡು ಆಕೆಯ ತಾಯಿ ಗಂಭೀರವಾಗಿ ಗಾಯಗೊಂಡ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುರುವಾರ ರಾತ್ರಿ...

ಬೆಂಗಳೂರಿನ ಪ್ರವಾಹ ಕಾಮಗಾರಿ ಮೇ 30ರೊಳಗೆ ಪೂರ್ಣಗೊಳಿಸಿ, ಇಲ್ಲದಿದ್ದರೆ ಅಮಾನತು ಎದುರಿಸಿ; ಅಧಿಕಾರಿಗಳಿಗೆ ಎಸಿಎಸ್ ತುಷಾರ್ ಗಿರಿನಾಥ್ ಎಚ್ಚರಿಕೆ

ಬೆಂಗಳೂರು: ಮೇ 30 ರೊಳಗೆ ಬಾಕಿ ಇರುವ ಎಲ್ಲಾ ಕೆಲಸಗಳನ್ನು ಪೂರ್ಣಗೊಳಿಸಿ, ಇಲ್ಲದಿದ್ದರೆ ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಯಲಹಂಕದ ಕೇಂದ್ರೀಯ ವಿಹಾರ, ಟಾಟಾ...

ಮರ್ಯಾದೆಗೇಡು ಹತ್ಯೆ ತಡೆಯುವ ʼಇವ ನಮ್ಮವ ಇವ ನಮ್ಮವʼ ವಿಧೇಯಕಕ್ಕೆ ರಾಜ್ಯಪಾಲರಿಂದ ಸಹಿ

ರಾಜ್ಯ ವಿಧಾನಮಂಡಲ ಅಂಗೀಕರಿಸಿದ ವಿಧೇಯಕಗಳ ಪೈಕಿ, ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ವಿದ್ಯುನ್ಮಾನ ಮತಯಂತ್ರ ಬದಲಿಗೆ ಮತಪತ್ರ ಬಳಕೆ ಕಡ್ಡಾಯಗೊಳಿಸುವ ‘2026ರ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ವಿಧೇಯಕ’ ಹೊರತುಪಡಿಸಿ ಉಳಿದವುಗಳಿಗೆ...

ಶಾತವಾಹನ ವಿವಿ ವಿವಾದ: ಬಲಪಂಥೀಯರಿಂದ ದಲಿತ ಪ್ರಾಧ್ಯಾಪಕಿ ಮತ್ತು ವಿದ್ಯಾರ್ಥಿಗೆ ‘ನಗರ ನಕ್ಸಲರು’ ಎಂಬ ಹಣೆಪಟ್ಟಿಯಲ್ಲಿ ನಿರಂತರ ಕಿರುಕುಳ

ತೆಲಂಗಾಣದ ಶಾತವಾಹನ ವಿಶ್ವವಿದ್ಯಾಲಯದಲ್ಲಿ ದಲಿತ ಮಹಿಳಾ ಪ್ರಾಧ್ಯಾಪಕಿ ಮತ್ತು ದಲಿತ ವಿದ್ಯಾರ್ಥಿನಿಯನ್ನು "ನಗರ ನಕ್ಸಲರು" ಎಂದು ಹಣೆಪಟ್ಟಿ ಕಟ್ಟಿ ನಿರಂತರ ಕಿರುಕುಳ ನೀಡಿದ ನಂತರ ವಿವಾದ ಭುಗಿಲೆದ್ದಿದ್ದು, ಇದಕ್ಕೆ ಶಿಕ್ಷಣ ತಜ್ಞರು ಮತ್ತು...

ಕೇಂದ್ರದ ಹೊಸ ಕಾಯ್ದೆಯಿಂದ ಸಂಕಷ್ಟ : ಇಬ್ಬರು ಟ್ರಾನ್ಸ್‌ಜೆಂಡರ್ ವ್ಯಕ್ತಿಗಳಿಗೆ ಹಾರ್ಮೋನ್ ಚಿಕಿತ್ಸೆ ಮುಂದುವರಿಸಲು ಕೇರಳ ಹೈಕೋರ್ಟ್ ಅನುಮತಿ

ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026 ಅಂಗೀಕಾರಗೊಂಡ ನಂತರ ಆಸ್ಪತ್ರೆಗಳು ತಮ್ಮ ಚಿಕಿತ್ಸೆಯನ್ನು ಸ್ಥಗಿತಗೊಳಿಸಿವೆ ಎಂದು ಆರೋಪಿಸಿದ್ದ ಇಬ್ಬರು ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ ಹಾರ್ಮೋನ್ ಬದಲಿ ಚಿಕಿತ್ಸೆಯನ್ನು ಮುಂದುವರಿಸಲು ಕೇರಳ ಹೈಕೋರ್ಟ್...

ಮಾದಕವಸ್ತು ತನಿಖೆಗೆ ಸಹಾಯಕವಾಗಿ AI ಆಧಾರಿತ ಅಪ್ಲಿಕೇಶನ್ ಆರಂಭಿಸಿದ ಗುಜರಾತ್ ಪೊಲೀಸರು

ಅಹಮದಾಬಾದ್: ಮಾದಕವಸ್ತು ಪ್ರಕರಣಗಳ ತನಿಖೆಯನ್ನು ಸುಲಭವಾಗಿಸಲು ಮತ್ತು ವಿಚಾರಣೆಯ ಸಮಯದಲ್ಲಿ ಅವುಗಳನ್ನು ಬಲಪಡಿಸಲು, ಇದರಿಂದಾಗಿ ಶಿಕ್ಷೆಯ ಪ್ರಮಾಣ ಸುಧಾರಿಸಲು ಗುಜರಾತ್ ಪೊಲೀಸರು ಶುಕ್ರವಾರ ಕೃತಕ ಬುದ್ಧಿಮತ್ತೆ (AI) ಆಧಾರಿತ ಅಪ್ಲಿಕೇಶನ್ "NARIT AI"...

ಇಸ್ಲಾಮಾಬಾದ್‌ ಶಾಂತಿ ಮಾತುಕತೆ | ಅಮೆರಿಕ–ಇಸ್ರೇಲ್ ಹತ್ಯೆಗೈದ ಮಕ್ಕಳ ರಕ್ತಸಿಕ್ತ ಬ್ಯಾಗ್‌, ಶೂ ಹೊತ್ತು ತಂದ ಇರಾನ್

ಶಾಂತಿ ಮಾತುಕತೆಯಲ್ಲಿ ಭಾಗವಹಿಸಲು ಪಾಕಿಸ್ತಾನದ ಇಸ್ಲಾಮಾಬಾದ್‌ಗೆ ಆಗಮಿಸುವಾಗ, ಅಮೆರಿಕ-ಇಸ್ರೇಲ್‌ನ ಬಾಂಬ್‌ ದಾಳಿ ನಡೆಸಿ ಹತ್ಯೆಗೈದ ಮಕ್ಕಳ ಫೋಟೋ, ರಕ್ತಸಿಕ್ತ ಬ್ಯಾಗ್ ಮತ್ತು ಶೂಗಳನ್ನು ವಿಮಾನದಲ್ಲಿ ಹೊತ್ತು ತರುವ ಮೂಲಕ ಇರಾನ್‌ ಜಗತ್ತಿನ ಗಮನಸೆಳೆದಿದೆ. ಸಾಮಾಜಿಕ ಜಾಲತಾಣ...

ಮಣಿಪುರ: ಶಸ್ತ್ರಾಸ್ತ್ರಗಳು ಮತ್ತು ಗಸಗಸೆ ಬೀಜಗಳ ಚೀಲಗಳೊಂದಿಗೆ ಇಬ್ಬರನ್ನು ಬಂಧಿಸಿದ ಭದ್ರತಾ ಪಡೆ

ಇಂಫಾಲ: ಮಣಿಪುರದ ಚುರಚಂದಪುರ ಜಿಲ್ಲೆಯಲ್ಲಿ ಇಬ್ಬರು ವ್ಯಕ್ತಿಗಳಿಂದ ಶಸ್ತ್ರಾಸ್ತ್ರಗಳು ಮತ್ತು ಗಸಗಸೆ ಬೀಜಗಳ ಚೀಲಗಳನ್ನು(ಪಾಪಿ ಸೀಡ್ಸ್) ವಶಪಡಿಸಿಕೊಂಡ ನಂತರ ಭದ್ರತಾ ಪಡೆಗಳು ಅವರನ್ನು ಬಂಧಿಸಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಶುಕ್ರವಾರ ಚುರಾಚಂದ್‌ಪುರ ಪೊಲೀಸ್ ಠಾಣೆ...