Homeಮುಖಪುಟಬಹುಜನ ಸಮಾಜ ಪಕ್ಷದ ರಾಷ್ಟ್ರೀಯ ಮುಖ್ಯ ಸಂಯೋಜಕರಾಗಿ ಆಕಾಶ್ ಆನಂದ್ ನೇಮಕ

ಬಹುಜನ ಸಮಾಜ ಪಕ್ಷದ ರಾಷ್ಟ್ರೀಯ ಮುಖ್ಯ ಸಂಯೋಜಕರಾಗಿ ಆಕಾಶ್ ಆನಂದ್ ನೇಮಕ

- Advertisement -
- Advertisement -

ದೆಹಲಿಯಲ್ಲಿ ಭಾನುವಾರ ನಡೆದ ಸಭೆಯ ವೇಳೆ ತಮ್ಮ ಸೋದರಳಿಯ ಆಕಾಶ್ ಆನಂದ್ ಅವರನ್ನು ಪಕ್ಷದ ಮುಖ್ಯ ರಾಷ್ಟ್ರೀಯ ಸಂಯೋಜಕರನ್ನಾಗಿ ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ನೇಮಿಸಿದ್ದಾರೆ. ಈ ಹಿಂದೆ ಪಕ್ಷದಿಂದ ಹೊರ ಹಾಕಲ್ಪಟ್ಟಿದ್ದ ಆನಂದ್ ಅವರನ್ನು ಮತ್ತೆ ಪಕ್ಷಕ್ಕೆ ಸ್ವಾಗತಿಸಿದ ಒಂದು ತಿಂಗಳ ನಂತರ ಮಾಯಾವತಿ ಅವರು ಈ ನಿರ್ಧಾರ ಕೈಗೊಂಡಿದ್ದಾರೆ.

ಬಿಎಸ್‌ಪಿ ಪಕ್ಷದಲ್ಲಿ ಈ ಹುದ್ದೆಯನ್ನು ಮೊದಲ ಬಾರಿಗೆ ಪರಿಚಯಿಸಲಾಗಿದ್ದು, ಅದಕ್ಕೆ ಆನಂದ್ ಅವರನ್ನು ನೇಮಿಸಲಾಗಿದೆ. ಆನಂದ್ ಅವರು ಮಾರ್ಚ್‌ ವೇಳೆ ಪಕ್ಷದಿಂದ ಹೊರಹಾಕಲ್ಪಡುವ ಮೊದಲು ಇದ್ದ ಹುದ್ದೆಗಿಂತಲೂ ಈ ಹುದ್ದೆ ಉನ್ನತ ಸ್ಥಾನದ್ದಾಗಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಈ ಹುದ್ದೆಗೆ ಆನಂದ್ ಅವರನ್ನು ನೇಮಿಸುವ ಮೂಲಕ ಪಕ್ಷದ ಎರಡನೇ ಅತ್ಯುನ್ನತ ಸ್ಥಾನದಲ್ಲಿ ಅವರನ್ನು ಇರಿಸಲಾಗಿದೆ ಎಂದು ವರದಿ ಹೇಳಿದೆ. ಈ ಹುದ್ದೆಯು ಪಕ್ಷದ ಮೂರು ರಾಷ್ಟ್ರೀಯ ಸಂಯೋಜಕರಿಗಿಂತ ಮೇಲಿರುತ್ತದೆ ಎಂದು ಪಕ್ಷದ ನಾಯಕರೊಬ್ಬರು ಹೇಳಿದ್ದಾರೆ ಎಂದು ಪತ್ರಿಕೆ ಉಲ್ಲೇಖಿಸಿದೆ.

ಈ ಹುದ್ದೆಗೆ ಆನಂದ್ ನೇಮಕವಾದ್ದರಿಂದ ಅವರು ಈಗ ದೇಶಾದ್ಯಂತ ಎಲ್ಲಾ ರಾಜ್ಯ ಘಟಕಗಳಲ್ಲಿ ಪಕ್ಷದ ಕಾರ್ಯತಂತ್ರಗಳನ್ನು ನೋಡಿಕೊಳ್ಳುತ್ತಾರೆ ಮತ್ತು ಮುಂಬರುವ ಬಿಹಾರ ವಿಧಾನಸಭಾ ಚುನಾವಣೆಗಳಲ್ಲಿ ಪ್ರಮುಖ ಪಾತ್ರ ವಹಿಸುವ ಸಾಧ್ಯತೆಯಿದೆ ಎಂದು ದಿ ಹಿಂದೂ ವರದಿ ಮಾಡಿದೆ.

ಬಿಹಾರ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸುವ ಉದ್ದೇಶವನ್ನು ಪಕ್ಷವು ಭಾನುವಾರ ಘೋಷಿಸಿದೆ. “ಬಿಹಾರ ಚುನಾವಣೆಯ ಬಗ್ಗೆ ಪ್ರತ್ಯೇಕ ಚರ್ಚೆ ನಡೆದಿದ್ದು, ಮತ್ತು ಪಕ್ಷವು ತನ್ನ ಎಲ್ಲಾ ಶಕ್ತಿಯನ್ನು ಬಳಸಿ ಚುನಾವಣೆಯಲ್ಲಿ ಏಕಾಂಗಿಯಾಗಿ ಎದುರಿಸಲು ನಿರ್ಧರಿಸಿತು” ಎಂದು ಪಕ್ಷ ಹೇಳಿದೆ.

ಪಕ್ಷದ ಹೊಸ ಜವಾಬ್ದಾರಿಯನ್ನು ವಹಿಸಿದ್ದಕ್ಕಾಗಿ ಸಾಮಾಜಿಕ ಮಾಧ್ಯಮದಲ್ಲಿ ಆನಂದ್ ಅವರು ಮಾಯಾವತಿಗೆ ಧನ್ಯವಾದ ಅರ್ಪಿಸಿದ್ದಾರೆ. “ಅವರು ನನ್ನ ತಪ್ಪುಗಳನ್ನು ಕ್ಷಮಿಸಿದ್ದಾರೆ ಮತ್ತು ಬಹುಜನ ಮಿಷನ್ ಮತ್ತು ಚಳುವಳಿಯನ್ನು ಬಲಪಡಿಸುವಲ್ಲಿ ಕೊಡುಗೆ ನೀಡಲು ನನಗೆ ಅವಕಾಶ ನೀಡಿದ್ದಾರೆ” ಎಂದು ಅವರು ಎಕ್ಸ್‌ನಲ್ಲಿ ಹೇಳಿದ್ದಾರೆ.

“ಪಕ್ಷ ಮತ್ತು ಚಳುವಳಿಯ ಹಿತಾಸಕ್ತಿಗಾಗಿ ನಾನು ಸಂಪೂರ್ಣ ಭಕ್ತಿಯಿಂದ ಕೆಲಸ ಮಾಡುತ್ತೇನೆ ಮತ್ತು ನಿಮ್ಮನ್ನು ಎಂದಿಗೂ ನಿರಾಶೆಗೊಳಿಸುವುದಿಲ್ಲ ಎಂದು ನಾನು ಬೆಹೆನ್‌ಜಿಗೆ ಭರವಸೆ ನೀಡುತ್ತೇನೆ.” ಎಂದು ಅವರು ತಿಳಿಸಿದ್ದಾರೆ.

2019 ರ ಲೋಕಸಭಾ ಚುನಾವಣೆಯ ನಂತರ ಆನಂದ್ ಅವರನ್ನು ಆರಂಭದಲ್ಲಿ ಪಕ್ಷದ ರಾಷ್ಟ್ರೀಯ ಸಂಯೋಜಕರಾಗಿ ನೇಮಿಸಲಾಯಿತು. ಆದಾಗ್ಯೂ, ಪ್ರಚಾರ ಭಾಷಣದ ಸಮಯದಲ್ಲಿ “ದ್ವೇಷವನ್ನು ಉತ್ತೇಜಿಸುವ” ಆರೋಪದ ಮೇಲೆ ಮೇ 2024 ರಲ್ಲಿ ಅವರ ವಿರುದ್ಧ ಪ್ರಕರಣ ದಾಖಲಾದ ನಂತರ ಅವರನ್ನು ಆ ಹುದ್ದೆಯಿಂದ ಮತ್ತು ಮಾಯಾವತಿ ಅವರ ನಿಯೋಜಿತ ಉತ್ತರಾಧಿಕಾರಿ ಸ್ಥಾನದಿಂದ ತೆಗೆದುಹಾಕಲಾಯಿತು.

ಅದಾಗ್ಯೂ, ಜೂನ್ 2024 ರಲ್ಲಿ ಅವರನ್ನು ಎರಡೂ ಪಾತ್ರಗಳಲ್ಲಿ ಮರುಸ್ಥಾಪಿಸಲಾಗಿತ್ತು. ಆದರೆ ಈ ವರ್ಷದ ಮಾರ್ಚ್‌ನಲ್ಲಿ, ಅವರ ಮಾವ ಅಶೋಕ್ ಸಿದ್ಧಾರ್ಥ್ ಅವರೊಂದಿಗಿನ ಸಂಪರ್ಕದಿಂದಾಗಿ ಅವರನ್ನು ಪಕ್ಷದಿಂದ ಹೊರಹಾಕಲಾಯಿತು ಮತ್ತು ಮತ್ತೊಮ್ಮೆ ರಾಷ್ಟ್ರೀಯ ಸಂಯೋಜಕರ ಸ್ಥಾನದಿಂದ ತೆಗೆದುಹಾಕಲಾಯಿತು.

ಬಹುಜನ ಸಮಾಜ ಪಕ್ಷದ ಕೇಂದ್ರ-ರಾಜ್ಯ ಸಂಯೋಜಕ ನಿತಿನ್ ಸಿಂಗ್ ಅವರೊಂದಿಗೆ ಮಾಜಿ ರಾಜ್ಯಸಭಾ ಸಂಸದ ಸಿದ್ಧಾರ್ಥ್ ಅವರನ್ನು ಫೆಬ್ರವರಿ 12 ರಂದು ಗುಂಪುಗಾರಿಕೆ ಮತ್ತು “ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ” ತೊಡಗಿಸಿಕೊಂಡ ಆರೋಪದ ಮೇಲೆ ಹೊರಹಾಕಲಾಯಿತು.

ಅದಾಗ್ಯೂ, ಏಪ್ರಿಲ್‌ನಲ್ಲಿ ಮಾಯಾವತಿ ಅವರು ಆನಂದ್ ಅವರಿಗೆ “ಮತ್ತೊಂದು ಅವಕಾಶ” ನೀಡಲು ಒಪ್ಪಿಕೊಂಡರು ಮತ್ತು ಅವರನ್ನು ಪಕ್ಷಕ್ಕೆ ಮತ್ತೆ ಸೇರಿಸಿಕೊಂಡಿದ್ದರು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಬಲವಂತದ ಅಥವಾ ವಂಚನೆಯ ಧಾರ್ಮಿಕ ಮತಾಂತರವನ್ನು ಸಂವಿಧಾನ ಬೆಂಬಲಿಸುವುದಿಲ್ಲ: ಅಲಹಾಬಾದ್ ಹೈಕೋರ್ಟ್

ಬಲವಂತದ ಅಥವಾ ವಂಚನೆಯ ಧಾರ್ಮಿಕ ಮತಾಂತರವನ್ನು ಸಂವಿಧಾನ ಬೆಂಬಲಿಸುವುದಿಲ್ಲ: ಅಲಹಾಬಾದ್ ಹೈಕೋರ್ಟ್

ಇಲ್ಲಿ ಕ್ಲಿಕ್ ಮಾಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....