Homeಮುಖಪುಟಬಹುಜನ ಸಮಾಜ ಪಕ್ಷದ ರಾಷ್ಟ್ರೀಯ ಮುಖ್ಯ ಸಂಯೋಜಕರಾಗಿ ಆಕಾಶ್ ಆನಂದ್ ನೇಮಕ

ಬಹುಜನ ಸಮಾಜ ಪಕ್ಷದ ರಾಷ್ಟ್ರೀಯ ಮುಖ್ಯ ಸಂಯೋಜಕರಾಗಿ ಆಕಾಶ್ ಆನಂದ್ ನೇಮಕ

- Advertisement -
- Advertisement -

ದೆಹಲಿಯಲ್ಲಿ ಭಾನುವಾರ ನಡೆದ ಸಭೆಯ ವೇಳೆ ತಮ್ಮ ಸೋದರಳಿಯ ಆಕಾಶ್ ಆನಂದ್ ಅವರನ್ನು ಪಕ್ಷದ ಮುಖ್ಯ ರಾಷ್ಟ್ರೀಯ ಸಂಯೋಜಕರನ್ನಾಗಿ ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ನೇಮಿಸಿದ್ದಾರೆ. ಈ ಹಿಂದೆ ಪಕ್ಷದಿಂದ ಹೊರ ಹಾಕಲ್ಪಟ್ಟಿದ್ದ ಆನಂದ್ ಅವರನ್ನು ಮತ್ತೆ ಪಕ್ಷಕ್ಕೆ ಸ್ವಾಗತಿಸಿದ ಒಂದು ತಿಂಗಳ ನಂತರ ಮಾಯಾವತಿ ಅವರು ಈ ನಿರ್ಧಾರ ಕೈಗೊಂಡಿದ್ದಾರೆ.

ಬಿಎಸ್‌ಪಿ ಪಕ್ಷದಲ್ಲಿ ಈ ಹುದ್ದೆಯನ್ನು ಮೊದಲ ಬಾರಿಗೆ ಪರಿಚಯಿಸಲಾಗಿದ್ದು, ಅದಕ್ಕೆ ಆನಂದ್ ಅವರನ್ನು ನೇಮಿಸಲಾಗಿದೆ. ಆನಂದ್ ಅವರು ಮಾರ್ಚ್‌ ವೇಳೆ ಪಕ್ಷದಿಂದ ಹೊರಹಾಕಲ್ಪಡುವ ಮೊದಲು ಇದ್ದ ಹುದ್ದೆಗಿಂತಲೂ ಈ ಹುದ್ದೆ ಉನ್ನತ ಸ್ಥಾನದ್ದಾಗಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಈ ಹುದ್ದೆಗೆ ಆನಂದ್ ಅವರನ್ನು ನೇಮಿಸುವ ಮೂಲಕ ಪಕ್ಷದ ಎರಡನೇ ಅತ್ಯುನ್ನತ ಸ್ಥಾನದಲ್ಲಿ ಅವರನ್ನು ಇರಿಸಲಾಗಿದೆ ಎಂದು ವರದಿ ಹೇಳಿದೆ. ಈ ಹುದ್ದೆಯು ಪಕ್ಷದ ಮೂರು ರಾಷ್ಟ್ರೀಯ ಸಂಯೋಜಕರಿಗಿಂತ ಮೇಲಿರುತ್ತದೆ ಎಂದು ಪಕ್ಷದ ನಾಯಕರೊಬ್ಬರು ಹೇಳಿದ್ದಾರೆ ಎಂದು ಪತ್ರಿಕೆ ಉಲ್ಲೇಖಿಸಿದೆ.

ಈ ಹುದ್ದೆಗೆ ಆನಂದ್ ನೇಮಕವಾದ್ದರಿಂದ ಅವರು ಈಗ ದೇಶಾದ್ಯಂತ ಎಲ್ಲಾ ರಾಜ್ಯ ಘಟಕಗಳಲ್ಲಿ ಪಕ್ಷದ ಕಾರ್ಯತಂತ್ರಗಳನ್ನು ನೋಡಿಕೊಳ್ಳುತ್ತಾರೆ ಮತ್ತು ಮುಂಬರುವ ಬಿಹಾರ ವಿಧಾನಸಭಾ ಚುನಾವಣೆಗಳಲ್ಲಿ ಪ್ರಮುಖ ಪಾತ್ರ ವಹಿಸುವ ಸಾಧ್ಯತೆಯಿದೆ ಎಂದು ದಿ ಹಿಂದೂ ವರದಿ ಮಾಡಿದೆ.

ಬಿಹಾರ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸುವ ಉದ್ದೇಶವನ್ನು ಪಕ್ಷವು ಭಾನುವಾರ ಘೋಷಿಸಿದೆ. “ಬಿಹಾರ ಚುನಾವಣೆಯ ಬಗ್ಗೆ ಪ್ರತ್ಯೇಕ ಚರ್ಚೆ ನಡೆದಿದ್ದು, ಮತ್ತು ಪಕ್ಷವು ತನ್ನ ಎಲ್ಲಾ ಶಕ್ತಿಯನ್ನು ಬಳಸಿ ಚುನಾವಣೆಯಲ್ಲಿ ಏಕಾಂಗಿಯಾಗಿ ಎದುರಿಸಲು ನಿರ್ಧರಿಸಿತು” ಎಂದು ಪಕ್ಷ ಹೇಳಿದೆ.

ಪಕ್ಷದ ಹೊಸ ಜವಾಬ್ದಾರಿಯನ್ನು ವಹಿಸಿದ್ದಕ್ಕಾಗಿ ಸಾಮಾಜಿಕ ಮಾಧ್ಯಮದಲ್ಲಿ ಆನಂದ್ ಅವರು ಮಾಯಾವತಿಗೆ ಧನ್ಯವಾದ ಅರ್ಪಿಸಿದ್ದಾರೆ. “ಅವರು ನನ್ನ ತಪ್ಪುಗಳನ್ನು ಕ್ಷಮಿಸಿದ್ದಾರೆ ಮತ್ತು ಬಹುಜನ ಮಿಷನ್ ಮತ್ತು ಚಳುವಳಿಯನ್ನು ಬಲಪಡಿಸುವಲ್ಲಿ ಕೊಡುಗೆ ನೀಡಲು ನನಗೆ ಅವಕಾಶ ನೀಡಿದ್ದಾರೆ” ಎಂದು ಅವರು ಎಕ್ಸ್‌ನಲ್ಲಿ ಹೇಳಿದ್ದಾರೆ.

“ಪಕ್ಷ ಮತ್ತು ಚಳುವಳಿಯ ಹಿತಾಸಕ್ತಿಗಾಗಿ ನಾನು ಸಂಪೂರ್ಣ ಭಕ್ತಿಯಿಂದ ಕೆಲಸ ಮಾಡುತ್ತೇನೆ ಮತ್ತು ನಿಮ್ಮನ್ನು ಎಂದಿಗೂ ನಿರಾಶೆಗೊಳಿಸುವುದಿಲ್ಲ ಎಂದು ನಾನು ಬೆಹೆನ್‌ಜಿಗೆ ಭರವಸೆ ನೀಡುತ್ತೇನೆ.” ಎಂದು ಅವರು ತಿಳಿಸಿದ್ದಾರೆ.

2019 ರ ಲೋಕಸಭಾ ಚುನಾವಣೆಯ ನಂತರ ಆನಂದ್ ಅವರನ್ನು ಆರಂಭದಲ್ಲಿ ಪಕ್ಷದ ರಾಷ್ಟ್ರೀಯ ಸಂಯೋಜಕರಾಗಿ ನೇಮಿಸಲಾಯಿತು. ಆದಾಗ್ಯೂ, ಪ್ರಚಾರ ಭಾಷಣದ ಸಮಯದಲ್ಲಿ “ದ್ವೇಷವನ್ನು ಉತ್ತೇಜಿಸುವ” ಆರೋಪದ ಮೇಲೆ ಮೇ 2024 ರಲ್ಲಿ ಅವರ ವಿರುದ್ಧ ಪ್ರಕರಣ ದಾಖಲಾದ ನಂತರ ಅವರನ್ನು ಆ ಹುದ್ದೆಯಿಂದ ಮತ್ತು ಮಾಯಾವತಿ ಅವರ ನಿಯೋಜಿತ ಉತ್ತರಾಧಿಕಾರಿ ಸ್ಥಾನದಿಂದ ತೆಗೆದುಹಾಕಲಾಯಿತು.

ಅದಾಗ್ಯೂ, ಜೂನ್ 2024 ರಲ್ಲಿ ಅವರನ್ನು ಎರಡೂ ಪಾತ್ರಗಳಲ್ಲಿ ಮರುಸ್ಥಾಪಿಸಲಾಗಿತ್ತು. ಆದರೆ ಈ ವರ್ಷದ ಮಾರ್ಚ್‌ನಲ್ಲಿ, ಅವರ ಮಾವ ಅಶೋಕ್ ಸಿದ್ಧಾರ್ಥ್ ಅವರೊಂದಿಗಿನ ಸಂಪರ್ಕದಿಂದಾಗಿ ಅವರನ್ನು ಪಕ್ಷದಿಂದ ಹೊರಹಾಕಲಾಯಿತು ಮತ್ತು ಮತ್ತೊಮ್ಮೆ ರಾಷ್ಟ್ರೀಯ ಸಂಯೋಜಕರ ಸ್ಥಾನದಿಂದ ತೆಗೆದುಹಾಕಲಾಯಿತು.

ಬಹುಜನ ಸಮಾಜ ಪಕ್ಷದ ಕೇಂದ್ರ-ರಾಜ್ಯ ಸಂಯೋಜಕ ನಿತಿನ್ ಸಿಂಗ್ ಅವರೊಂದಿಗೆ ಮಾಜಿ ರಾಜ್ಯಸಭಾ ಸಂಸದ ಸಿದ್ಧಾರ್ಥ್ ಅವರನ್ನು ಫೆಬ್ರವರಿ 12 ರಂದು ಗುಂಪುಗಾರಿಕೆ ಮತ್ತು “ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ” ತೊಡಗಿಸಿಕೊಂಡ ಆರೋಪದ ಮೇಲೆ ಹೊರಹಾಕಲಾಯಿತು.

ಅದಾಗ್ಯೂ, ಏಪ್ರಿಲ್‌ನಲ್ಲಿ ಮಾಯಾವತಿ ಅವರು ಆನಂದ್ ಅವರಿಗೆ “ಮತ್ತೊಂದು ಅವಕಾಶ” ನೀಡಲು ಒಪ್ಪಿಕೊಂಡರು ಮತ್ತು ಅವರನ್ನು ಪಕ್ಷಕ್ಕೆ ಮತ್ತೆ ಸೇರಿಸಿಕೊಂಡಿದ್ದರು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಬಲವಂತದ ಅಥವಾ ವಂಚನೆಯ ಧಾರ್ಮಿಕ ಮತಾಂತರವನ್ನು ಸಂವಿಧಾನ ಬೆಂಬಲಿಸುವುದಿಲ್ಲ: ಅಲಹಾಬಾದ್ ಹೈಕೋರ್ಟ್

ಬಲವಂತದ ಅಥವಾ ವಂಚನೆಯ ಧಾರ್ಮಿಕ ಮತಾಂತರವನ್ನು ಸಂವಿಧಾನ ಬೆಂಬಲಿಸುವುದಿಲ್ಲ: ಅಲಹಾಬಾದ್ ಹೈಕೋರ್ಟ್

ಇಲ್ಲಿ ಕ್ಲಿಕ್ ಮಾಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...