Homeಮುಖಪುಟತೆಲಂಗಾಣ: ಅಕ್ಬರುದ್ದೀನ್ ಓವೈಸಿ ಹಂಗಾಮಿ ಸ್ಪೀಕರ್; ಪ್ರಮಾಣ ವಚನ ಬಹಿಷ್ಕರಿಸಿದ ಬಿಜೆಪಿ ಶಾಸಕರು

ತೆಲಂಗಾಣ: ಅಕ್ಬರುದ್ದೀನ್ ಓವೈಸಿ ಹಂಗಾಮಿ ಸ್ಪೀಕರ್; ಪ್ರಮಾಣ ವಚನ ಬಹಿಷ್ಕರಿಸಿದ ಬಿಜೆಪಿ ಶಾಸಕರು

- Advertisement -
- Advertisement -

ಎಐಎಂಐಎಂ ಪಕ್ಷದ ಶಾಸಕ ಅಕ್ಬರುದ್ದೀನ್ ಓವೈಸಿ ಅವರನ್ನು ರಾಜ್ಯ ವಿಧಾನಸಭೆಯ ಹಂಗಾಮಿ ಸ್ಪೀಕರ್ ಆಗಿ ನೇಮಿಸಿರುವುದನ್ನು ವಿರೋಧಿಸಿ ತೆಲಂಗಾಣ ಬಿಜೆಪಿಯ ನೂತನ ಶಾಸಕರು ಪ್ರಮಾಣ ವಚನ ಕಾರ್ಯಕ್ರಮ ಬಹಿಷ್ಕರಿಸಿದ್ದಾರೆ.

ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಆಯ್ಕೆಯಾದ ನೂತನ ಶಾಸಕರಿಗೆ ಪ್ರಮಾಣ ವಚನ ಬೋಧಿಸುವ ಕಾರ್ಯಕ್ರಮ ಇಂದು(ಡಿ.9) ಏರ್ಪಡಿಸಲಾಗಿತ್ತು. ಶಾಸಕ ಅಕ್ಬರುದ್ದೀನ್ ಓವೈಸಿ ಅವರನ್ನು ಹಂಗಾಮಿ ಸ್ಪೀಕರ್‌ ಆಗಿ ನೇಮಿಸಿದ ರಾಜ್ಯಪಾಲರು ಅವರಿಗೆ ಪ್ರಮಾಣ ವಚನ ಬೋಧಿಸುವ ಜವಬ್ದಾರಿ ನೀಡಿದ್ದರು.

ಕಾಂಗ್ರೆಸ್ ಮತ್ತು ಬಿಆರ್‌ಎಸ್‌ ಪಕ್ಷದ ಶಾಸಕರು ಇಂದು ವಿಧಾನಸಭೆಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಆದರೆ, ಹೈದರಾಬಾದ್‌ನ ಗೋಶಮಹಲ್ ಕ್ಷೇತ್ರದ ಶಾಸಕ ಟಿ. ರಾಜಾಸಿಂಗ್, “ನನ್ನ ಉಸಿರು ಇರುವವರೆಗೆ ಎಂಐಎಂ ನಾಯಕನ ಮುಂದೆ ಪ್ರಮಾಣ ವಚನ ಸ್ವೀಕರಿಸುವುದಿಲ್ಲ. ಪೂರ್ಣಾವಧಿ ಸ್ಪೀಕರ್ ನೇಮಕವಾದ ಬಳಿಕವಷ್ಟೇ ಪ್ರಮಾಣ ವಚನ ಸ್ವೀಕರಿಸುವುದಾಗಿ” ವಿಡಿಯೋ ಮೂಲಕ ಹೇಳಿದ್ದಾರೆ.

“ಹಿಂದೂ ವಿರೋಧಿ ಹೇಳಿಕೆ ನೀಡಿರುವ ವ್ಯಕ್ತಿ(ಅಕ್ಬರುದ್ದೀನ್ ಓವೈಸಿ) ಮುಂದೆ ನಾನು ಪ್ರಮಾಣ ವಚನ ಸ್ವೀಕರಿಸಬಹುದೇ?” ಎಂದು ಟಿ. ರಾಜಾಸಿಂಗ್ ಪ್ರಶ್ನಿಸಿದ್ದಾರೆ.

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಜಿ. ಕಿಶನ್ ರೆಡ್ಡಿ ಮಾತನಾಡಿ, “ಹಿರಿಯ ಶಾಸಕರನ್ನು ಹಂಗಾಮಿ ಸ್ಪೀಕರ್ ಆಗಿ ನೇಮಿಸುವ ಸಂಪ್ರದಾಯಕ್ಕೆ ವಿರುದ್ಧವಾದ ಓವೈಸಿ ನೇಮಕವನ್ನು ಬಿಜೆಪಿ ವಿರೋಧಿಸುತ್ತದೆ” ಎಂದು ಹೇಳಿದ್ದಾರೆ.

“ಹಂಗಾಮಿ ಸ್ಪೀಕರ್ ಮುಂದೆ ಬಿಜೆಪಿ ಶಾಸಕರು ಪ್ರಮಾಣ ಸ್ಚೀಕರಿಸುವುದಿಲ್ಲ. ಪೂರ್ಣಾವಧಿ ಸ್ಪೀಕರ್ ನೇಮಕವಾದ ನಂತರವಷ್ಟೇ ನಮ್ಮ ಶಾಸಕರು ಪ್ರಮಾಣ ವಚನ ಸ್ವೀಕರಿಸುತ್ತಾರೆ. ಎಐಎಂಐಎಂ ಪಕ್ಷದೊಂದಿಗೆ ನಾವು ಎಂದಿಗೂ ಮೈತ್ರಿ ಮಾಡಿಕೊಳ್ಳುವುದಿಲ್ಲ. ಈ ಬಗ್ಗೆ ನಾವು ರಾಜ್ಯಪಾಲರ ಬಳಿ ಹೋಗುತ್ತೇವೆ” ಎಂದು ಕಿಶನ್ ರೆಡ್ಡಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

ರಾಜಾ ಸಿಂಗ್ 2018 ರಲ್ಲೂ ಎಂಐಎಂ ಶಾಸಕರನ್ನು ಹಂಗಾಮಿ ಸ್ಪೀಕರ್ ಆಗಿ ನೇಮಕ ಮಾಡಿದ್ದಕ್ಕೆ ಪ್ರಮಾಣ ವಚನ ಸ್ವೀಕರಿಸಲು ನಿರಾಕರಿಸಿದ್ದರು.

“ತೆಲಂಗಾಣದ ಹೊಸ ಮುಖ್ಯಮಂತ್ರಿಯಾಗಿರುವ ಕಾಂಗ್ರೆಸ್‌ನ ರೇವಂತ್ ರೆಡ್ಡಿ ಅವರು ಮಾಜಿ ಸಿಎಂ ಕೆ ಚಂದ್ರಶೇಖರ ರಾವ್ ಅವರಂತೆ ಎಐಎಂಐಎಂಗೆ ಹೆದರುತ್ತಾರೆ. ಹೀಗಾಗಿ ಅಕ್ಬರುದ್ದೀನ್ ಓವೈಸಿಗೆ ಹಂಗಾಮಿ ಸ್ಪೀಕರ್ ಆಗಲು ಅವಕಾಶ ನೀಡಿದ್ದಾರೆ” ಎಂದು ರಾಜಾಸಿಂಗ್ ಆರೋಪಿಸಿದ್ದಾರೆ.

ಇದನ್ನೂ ಓದಿ : ಕಾಂಗ್ರೆಸ್ ಗ್ಯಾರಂಟಿ: ಇಂದಿನಿಂದ ತೆಲಂಗಾಣದ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...