Homeಮುಖಪುಟನೂತನ ಸಂಸತ್ ಕಟ್ಟಡದಲ್ಲಿ ‘ಅಖಂಡ ಭಾರತ’ ಚಿತ್ರ; ಭಾರತದ ಸ್ಪಷ್ಟನೆ ಬಯಸಿದ ಬಾಂಗ್ಲಾ

ನೂತನ ಸಂಸತ್ ಕಟ್ಟಡದಲ್ಲಿ ‘ಅಖಂಡ ಭಾರತ’ ಚಿತ್ರ; ಭಾರತದ ಸ್ಪಷ್ಟನೆ ಬಯಸಿದ ಬಾಂಗ್ಲಾ

ಪ್ರಹ್ಲಾದ್ ಜೋಶಿಯವರು ಮಾಡಿರುವ ಟ್ವೀಟ್‌ಗೆ ಪಾಕಿಸ್ತಾನ ಮತ್ತು ನೇಪಾಳದಲ್ಲಿ ಆಕ್ಷೇಪಗಳು ವ್ಯಕ್ತವಾಗಿವೆ.

- Advertisement -
- Advertisement -

ಹೊಸ ಸಂಸತ್ತಿನ ಕಟ್ಟಡದಲ್ಲಿ ಇರಿಸಲಾಗಿರುವ ‘ಅಖಂಡ ಭಾರತ’ ಚಿತ್ರದ ಬಗ್ಗೆ ಭಾರತೀಯ ವಿದೇಶಾಂಗ ವ್ಯವಹಾರಗಳ ಸಚಿವಾಲಯದಿಂದ ಸ್ಪಷ್ಟನೆ ಪಡೆಯಲು ಬಾಂಗ್ಲಾದೇಶ ಸರ್ಕಾರ ನಿರ್ಧರಿಸಿದೆ.

‘ಅಖಂಡ ಭಾರತ್‌’ ಎಂದು ಬಿಂಬಿಸಲಾಗಿರುವ ಚಿತ್ರ ಈಗ ಅಂತಾರಾಷ್ಟ್ರೀಯ ವಿದ್ಯಮಾನಕ್ಕೆ ಕಾರಣವಾಗಿದೆ. ಪಾಕಿಸ್ತಾನ ಮತ್ತು ನೇಪಾಳದಲ್ಲಿ ಪ್ರತಿಭಟನೆಗಳು ದಾಖಲಾಗಿವೆ. “ಈ ಸಂಬಂಧ ಬಾಂಗ್ಲಾದ ಅವಾಮಿ ಲೀಗ್ ಸರ್ಕಾರವು ಭಾರತದಿಂದ ಸ್ಪಷ್ಟೀಕರಣವನ್ನು ಪಡೆಯುವ ಪ್ರಕ್ರಿಯೆಯಲ್ಲಿದೆ” ಎಂದು ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಶಹರಿಯಾರ್ ಆಲಂ ಅವರು ಢಾಕಾದಲ್ಲಿ ಪತ್ರಕರ್ತರಿಗೆ ತಿಳಿಸಿದ್ದಾರೆ.

ಅಲ್ಲಿನ ವಿರೋಧ ಪಕ್ಷವಾದ ‘ಬಾಂಗ್ಲಾದೇಶ ನ್ಯಾಶನಲಿಸ್ಟ್ ಪಾರ್ಟಿ’ ನಾಯಕರು ಪ್ರತಿಕ್ರಿಯೆ ನೀಡಿದ್ದಾರೆ. ಆನಂತರ ಬಾಂಗ್ಲಾ ವಿದೇಶಾಂಗ ಸಚಿವರ ಹೇಳಿಕೆ ಹೊರಬಿದ್ದಿದೆ. “ಅಖಂಡ ಭಾರತ ಕಲ್ಪನೆಯು ಬಾಂಗ್ಲಾದೇಶದ ಸ್ವಾತಂತ್ರ್ಯ ಮತ್ತು ಸಾರ್ವಭೌಮತೆಗೆ ನೀಡಿರುವ ಬೆದರಿಕೆ” ಎಂದು ವಿರೋಧ ಪಕ್ಷ ಎಚ್ಚರಿಸಿದೆ.

ಸ್ಥಳೀಯ ಒತ್ತಡದಿಂದಾಗಿ ಬಾಂಗ್ಲಾ ಸರ್ಕಾರ ಈ ನಿರ್ಧಾರಕ್ಕೆ (ಸ್ಪಷ್ಟನೆ ಕೇಳುವುದಕ್ಕೆ) ಬಂದಿರಬಹುದೆಂದು ಭಾರತೀಯ ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ವಕ್ತಾರರು ಹೇಳಿದ್ದಾರೆ. ಅಶೋಕ ಸಾಮ್ರಾಜ್ಯದ ಕಾಲದಲ್ಲಿನ ಭಾರತದ ಗಡಿಗಳ ಬಗ್ಗೆ ತೋರಿಸುವ ಪ್ರಯತ್ನವೇ ಈ ಚಿತ್ರವಾಗಿದೆ. ಸಾಮ್ರಾಜ್ಯವನ್ನು ಪುನರುಜ್ಜೀನವಗೊಳಿಸುವ ಕಲ್ಪನೆಯದ್ದಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಬಾಂಗ್ಲಾದೇಶದ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಆಲಂ ಪ್ರತಿಕ್ರಿಯಿಸಿ,  “ಈ ವಿಷಯದ ಬಗ್ಗೆ ಭಾರತದ ಅಧಿಕೃತ ವಿವರಣೆಯನ್ನು ಪಡೆಯಲು ಭಾರತವನ್ನು ಸಂಪರ್ಕಿಸುವಂತೆ ದೆಹಲಿಯಲ್ಲಿರುವ ಬಾಂಗ್ಲಾದೇಶ ರಾಯಭಾರಿ ಕಚೇರಿಗೆ ಸೂಚನೆ ನೀಡಲಾಗಿದೆ” ಎಂದಿದ್ದಾರೆ. ಆಲಂ ಹೇಳಿಕೆ ಕುರಿತು ‘ಢಾಕಾ ಟ್ರಿಬ್ಯೂನ್’ ವರದಿ ಮಾಡಿದೆ.

ಭಿತ್ತಿಚಿತ್ರದ ವಿರುದ್ಧ ನೇಪಾಳದಲ್ಲಿ ಪ್ರತಿಭಟನೆಗಳು ಭುಗಿಲೆದ್ದಿದ್ದವು. ನಂತರ ಭಾರತೀಯ ವಿದೇಶಾಂಗ ಸಚಿವಾಲಯ ವಿವರಣೆ ನೀಡಿತು.

“ಇದು ಕ್ರಿಸ್ತನ ಜನನಕ್ಕೆ 300 ವರ್ಷಗಳ ಹಿಂದಿನ ಅಶೋಕ ಸಾಮ್ರಾಜ್ಯದ ನಕ್ಷೆ” ಎಂದು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರರು ಹೇಳಿದ್ದಾರೆ. “ಈ ಚಿತ್ರವು ಜನರ ಪ್ರಯಾಣವನ್ನು ಚಿತ್ರಿಸುತ್ತದೆ. ಸಾಂಸ್ಕೃತಿಕ ಸಾಮ್ಯತೆಗಳಿರಬಹುದು, ಆದರೆ ಅದಕ್ಕೂ ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲ” ಎಂದು ಆಲಂ ಅವರೂ ಪುನರುಚ್ಚರಿಸಿದ್ದಾರೆ.

ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಅವರು, “ಸಂಕಲ್ಪ ಸ್ಪಷ್ಟವಾಗಿದೆ – ಅಖಂಡ ಭಾರತ” ಎಂಬ ಶೀರ್ಷಿಕೆಯೊಂದಿಗೆ ಫೋಟೋವನ್ನು ಟ್ವೀಟ್ ಮಾಡಿದ ನಂತರ ಈ ಸಮಸ್ಯೆ ಉದ್ಭವವಾಗಿದೆ.

ನೇಪಾಳದಲ್ಲಿ ಭಿತ್ತಿಚಿತ್ರದ ಬಗ್ಗೆ ಬೀದಿ ಪ್ರತಿಭಟನೆಗಳು ನಡೆದವು. ಕೆಲವು ರಾಜಕಾರಣಿಗಳು ಪ್ರತಿಕ್ರಿಯಿಸಿ, “ಈ ಕ್ರಮವು ಕಠ್ಮಂಡು ಮತ್ತು ದೆಹಲಿ ನಡುವೆ ಈಗಾಗಲೇ ಇರುವ ವಿಶ್ವಾಸದ ಕೊರತೆಯನ್ನು ಉಲ್ಬಣಗೊಳಿಸಬಹುದು” ಎಂದು ಎಚ್ಚರಿಸಿದರು.

ಪಾಕಿಸ್ತಾನದ ವಿದೇಶಾಂಗ ಕಚೇರಿಯ ವಕ್ತಾರ ಮುಮ್ತಾಜ್ ಬಲೂಚ್ ಅವರು ಪ್ರತಿಕ್ರಿಯಿಸಿ, “ಜೋಶಿಯವರ ಹೇಳಿಕೆಯಿಂದ ಆಘಾತವಾಗಿದೆ. ‘ಅಖಂಡ ಭಾರತ’ದ ಅನಪೇಕ್ಷಿತ ಪ್ರತಿಪಾದನೆಯು ಪರಿಷ್ಕರಣೆ ಮತ್ತು ವಿಸ್ತರಣಾವಾದಿ ಮನಸ್ಥಿತಿಯ ದ್ಯೋತಕವಾಗಿದೆ. ಇದು ಭಾರತದ ನೆರೆಯ ರಾಷ್ಟ್ರಗಳ ಗುರುತು ಮತ್ತು ಸಂಸ್ಕೃತಿಯನ್ನು ಅಧೀನಗೊಳಿಸಲು ಪ್ರಯತ್ನಿಸುತ್ತಿದೆ. ಆದರೆ ತನ್ನದೇ ದೇಶದ ಧಾರ್ಮಿಕ ಅಲ್ಪಸಂಖ್ಯಾತರನ್ನೂ ಅಧೀನಗೊಳಿಸಲು ಯತ್ನಿಸಲಾಗಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿರಿ: ವಿಶ್ಲೇಷಣೆ: ಜಾತಿಗಣತಿ ಜಾರಿಗೊಳಿಸುವ ಸಿಎಂ ನಿರ್ಧಾರ ಸ್ವಾಗತಾರ್ಹವೇಕೆ?

ಕಳೆದ ವಾರ ಭಾರತೀಯ ವಿದೇಶಾಂಗ ವಕ್ತಾರ ಅರಿಂದಮ್ ಬಾಗ್ಚಿ ಪ್ರತಿಕ್ರಿಯಿಸಿ, “ಸದರಿ ಭಿತ್ತಿಚಿತ್ರವು ‘ಅಖಂಡ ಭಾರತ’ದ ಬಗ್ಗೆ ಇಲ್ಲ. ಪ್ರಾಚೀನ ಮೌರ್ಯ ಸಾಮ್ರಾಜ್ಯದಲ್ಲಿನ ಸಾಮ್ರಾಜ್ಯ ವಿಸ್ತರಣೆಗೆ ಸಂಬಂಧಿಸಿದೆ” ಎಂದಿದ್ದರು.

“ಟೀಕೆಗೆ ಗುರಿಯಾಗಿರುವ ಚಿತ್ರವು ಅಶೋಕ ಸಾಮ್ರಾಜ್ಯ, ಆತನ ಚಿಂತನೆ, ಆಡಳಿತದ ಸುಧಾರಣೆಗೆ ಸಂಬಂಧಿಸಿದೆ. ಚಿತ್ರದ ಮುಂಭಾಗದಲ್ಲಿರುವ ಫಲಕವು ಅದನ್ನೇ ಹೇಳುತ್ತದೆ. ಮತ್ತೇನೂ ಅಲ್ಲ” ಬಾಗ್ಚಿ ಸ್ಪಷ್ಟಪಡಿಸಿದ್ದರು.

ಜೋಶಿಯವರ ಟ್ವೀಟ್ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡದ ಅವರು, “ಇತರ ರಾಜಕೀಯ ನಾಯಕರು ನೀಡಬಹುದಾದ ಹೇಳಿಕೆಗಳ ಬಗ್ಗೆ ನಾನು ಖಂಡಿತವಾಗಿಯೂ ಪ್ರತಿಕ್ರಿಯಿಸುವುದಿಲ್ಲ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಹಲ್ಗಾಮ್ ದಾಳಿ ಕುರಿತ ಪೋಸ್ಟ್‌: ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗೆ ಸಂಬಂಧಿಸಿದಂತೆ ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ಅವರಿಗೆ ನಿರೀಕ್ಷಣಾ ಜಾಮೀನು...

ಮಧ್ಯಪ್ರಾಚ್ಯ ಉದ್ವಿಗ್ನತೆ: ಎಲ್‌ಪಿಜಿ ಕೊರತೆಗೆ ಮುಂಬೈನಲ್ಲಿ ಶೇ. 20 ರಷ್ಟು ಹೋಟೆಲ್‌, ರೆಸ್ಟೋರೆಂಟ್‌ ಬಂದ್: ಬೆಂಗಳೂರು, ಚೆನ್ನೈನಲ್ಲೂ ಸಮಸ್ಯೆ

ಪಶ್ಚಿಮ ಏಷ್ಯಾ ಸಂಘರ್ಷ ಹತ್ತು ದಿನಗಳಿಗೂ ಹೆಚ್ಚು ಕಾಲ ಮುಂದುವರಿದಿರುವುದರಿಂದ, ಭಾರತದ ಹೋಟೆಲ್‌ಗಳು ಮತ್ತು ಇತರ ಉಧ್ಯಮಗಳು ಎಲ್‌ಪಿಜಿ ಪೂರೈಕೆ ಬಿಕ್ಕಟ್ಟನ್ನು ಎದುರಿಸುತ್ತಿವೆ. ಬೆಂಗಳೂರಿನ ನಂತರ, ಚೆನ್ನೈ ಮತ್ತು ಮುಂಬೈನಂತಹ ಇತರ ನಗರಗಳು ಸಹ...

‘ಕೋವಿಡ್ ಲಸಿಕೆ ಪೀಡಿತರಿಗಾಗಿ ಪರಿಹಾರ ನೀತಿ ಅಳವಡಿಸಿಕೊಳ್ಳಿ..’; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿಯಾಗಿ ಲಸಿಕೆ ನೀಡಿದ ನಂತರ ಉಂಟಾಗುವ ಪ್ರತಿಕೂಲ ಪರಿಣಾಮಗಳ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನವನ್ನು ಮುಂದುವರಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಅದೇ ಸಮಯದಲ್ಲಿ, ಕೋವಿಡ್ -19 ವ್ಯಾಕ್ಸಿನೇಷನ್ ನಂತರದ...

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...

ಸಂವಿಧಾನ, ಸದನದ ಘನತೆ ಉಳಿಸಲು ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಕಾಂಗ್ರೆಸ್ ಸಂಸದ ಗೊಗೊಯ್

ಸ್ಪೀಕರ್ ಓಂ ಬಿರ್ಲಾ ಪಕ್ಷಪಾತಿ ವರ್ತನೆ ಹೊಂದಿದ್ದಾರೆ. ಹಾಗಾಗಿ, ಸಂವಿಧಾನ ಉಳಿಸಲು ವಿರೋಧ ಪಕ್ಷವು ಅವರನ್ನು ಪದಚ್ಯುತಗೊಳಿಸುವ ನಿರ್ಣಯ ತರಬೇಕಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ (ಮಾ.10) ಲೋಕಸಭೆಯಲ್ಲಿ ಹೇಳಿದರು....

ನಿರಂತರ ಎಲ್‌ಪಿಜಿ ಪೂರೈಕೆ ಖಚಿತಪಡಿಸಿಕೊಳ್ಳಲು ‘ಅಗತ್ಯ ಸರಕು ಕಾಯ್ದೆ’ ಜಾರಿಗೆ ತಂದ ಕೇಂದ್ರ

ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಕುರಿತು ದೂರು ನೀಡಿದ ನಂತರ, ದೇಶೀಯ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 'ಅಗತ್ಯ ಸರಕು ಕಾಯ್ದೆ'ಯನ್ನು ಜಾರಿಗೆ ತಂದಿದೆ ಎಂದು...

‘ಯುದ್ಧ ಯಾವಾಗ ಕೊನೆಗೊಳ್ಳುತ್ತದೆ ಎಂಬುದನ್ನು ಇರಾನ್ ನಿರ್ಧರಿಸುತ್ತದೆ’: ಟ್ರಂಪ್ ‘ಅಲ್ಪಾವಧಿಯ ಸಂಘರ್ಷ’ ಹೇಳಿಕೆಗೆ ಇರಾನ್ ತಿರುಗೇಟು 

ಟೆಹ್ರಾನ್: ಇರಾನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಟೆಹ್ರಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅಮೆರಿಕ ಮತ್ತು ಇಸ್ರೇಲಿ ಗುರಿಗಳ ವಿರುದ್ಧದ ಮಿಲಿಟರಿ ಕ್ರಮಗಳು ಯಾವಾಗ ನಿಂತವು ಎಂಬುದನ್ನು...

ಮಹಿಳಾ ಮೀಸಲಾತಿ ಮಸೂದೆ; ತ್ವರಿತ ಅನುಷ್ಠಾನಕ್ಕೆ ವಿಪಕ್ಷಗಳ ಅಭಿಪ್ರಾಯ ಕೇಳಿದ ಕೇಂದ್ರ ಸರ್ಕಾರ

ನವದೆಹಲಿ: ಮಹಿಳಾ ಮೀಸಲಾತಿ ಕಾನೂನಿನ ಅನುಷ್ಠಾನವನ್ನು ತ್ವರಿತಗೊಳಿಸುವ ಪ್ರಯತ್ನದಲ್ಲಿ, ಲೋಕಸಭೆ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ನೀಡುವ ಶಾಸನವನ್ನು ತಿದ್ದುಪಡಿ ಮಾಡುವ ಪ್ರಸ್ತಾಪದ ಕುರಿತು ಅಭಿಪ್ರಾಯಗಳನ್ನು...

ಕೋಲ್ಕತ್ತಾ : ಕಾಳಿಘಾಟ್ ಬಳಿಕ ದಕ್ಷಿಣೇಶ್ವರದಲ್ಲೂ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ‘ಗೋ ಬ್ಯಾಕ್ ಘೋಷಣೆ’

ಕಾಳಿಘಾಟ್ ಬಳಿಕ ಕೋಲ್ಕತ್ತಾದ ದಕ್ಷಿಣೇಶ್ವರ ದೇವಸ್ಥಾನದಲ್ಲೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ದ 'ಗೋ ಬ್ಯಾಕ್ ಘೋಷಣೆಗಳು' ಕೇಳಿ ಬಂದಿವೆ. ಮಂಗಳವಾರ (ಮಾ.10) ಬೆಳಿಗ್ಗೆ ಜ್ಞಾನೇಶ್ ಕುಮಾರ್ ದಕ್ಷಿಣೇಶ್ವರ ಕಾಳಿ ದೇವಸ್ಥಾನಕ್ಕೆ ಭೇಟಿ...

ಉತ್ತರ ಪ್ರದೇಶ| ಹೋಳಿ ಹಬ್ಬದ ಶುಭ ಕೋರಿದ ದಲಿತ ಯುವಕನನ್ನು ಕೊಂದ ಪ್ರಬಲಜಾತಿ ಕುಟುಂಬ

ಉತ್ತರ ಪ್ರದೇಶದ ಲಕ್ನೋದ ದುಬಗ್ಗಾ ಪ್ರದೇಶದಲ್ಲಿ, ಹೋಳಿ ಹಬ್ಬದ ಸಂದರ್ಭದಲ್ಲಿ ಶುಭಕೋರಿದ 22 ವರ್ಷದ ದಲಿತ ವ್ಯಕ್ತಿಯನ್ನು ಬ್ರಾಹ್ಮಣ ಕುಟುಂಬದ ಸದಸ್ಯರು ಇರಿದು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆ ಮಾರ್ಚ್ 4...