Homeಮುಖಪುಟನೂತನ ಸಂಸತ್ ಕಟ್ಟಡದಲ್ಲಿ ‘ಅಖಂಡ ಭಾರತ’ ಚಿತ್ರ; ಭಾರತದ ಸ್ಪಷ್ಟನೆ ಬಯಸಿದ ಬಾಂಗ್ಲಾ

ನೂತನ ಸಂಸತ್ ಕಟ್ಟಡದಲ್ಲಿ ‘ಅಖಂಡ ಭಾರತ’ ಚಿತ್ರ; ಭಾರತದ ಸ್ಪಷ್ಟನೆ ಬಯಸಿದ ಬಾಂಗ್ಲಾ

ಪ್ರಹ್ಲಾದ್ ಜೋಶಿಯವರು ಮಾಡಿರುವ ಟ್ವೀಟ್‌ಗೆ ಪಾಕಿಸ್ತಾನ ಮತ್ತು ನೇಪಾಳದಲ್ಲಿ ಆಕ್ಷೇಪಗಳು ವ್ಯಕ್ತವಾಗಿವೆ.

- Advertisement -
- Advertisement -

ಹೊಸ ಸಂಸತ್ತಿನ ಕಟ್ಟಡದಲ್ಲಿ ಇರಿಸಲಾಗಿರುವ ‘ಅಖಂಡ ಭಾರತ’ ಚಿತ್ರದ ಬಗ್ಗೆ ಭಾರತೀಯ ವಿದೇಶಾಂಗ ವ್ಯವಹಾರಗಳ ಸಚಿವಾಲಯದಿಂದ ಸ್ಪಷ್ಟನೆ ಪಡೆಯಲು ಬಾಂಗ್ಲಾದೇಶ ಸರ್ಕಾರ ನಿರ್ಧರಿಸಿದೆ.

‘ಅಖಂಡ ಭಾರತ್‌’ ಎಂದು ಬಿಂಬಿಸಲಾಗಿರುವ ಚಿತ್ರ ಈಗ ಅಂತಾರಾಷ್ಟ್ರೀಯ ವಿದ್ಯಮಾನಕ್ಕೆ ಕಾರಣವಾಗಿದೆ. ಪಾಕಿಸ್ತಾನ ಮತ್ತು ನೇಪಾಳದಲ್ಲಿ ಪ್ರತಿಭಟನೆಗಳು ದಾಖಲಾಗಿವೆ. “ಈ ಸಂಬಂಧ ಬಾಂಗ್ಲಾದ ಅವಾಮಿ ಲೀಗ್ ಸರ್ಕಾರವು ಭಾರತದಿಂದ ಸ್ಪಷ್ಟೀಕರಣವನ್ನು ಪಡೆಯುವ ಪ್ರಕ್ರಿಯೆಯಲ್ಲಿದೆ” ಎಂದು ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಶಹರಿಯಾರ್ ಆಲಂ ಅವರು ಢಾಕಾದಲ್ಲಿ ಪತ್ರಕರ್ತರಿಗೆ ತಿಳಿಸಿದ್ದಾರೆ.

ಅಲ್ಲಿನ ವಿರೋಧ ಪಕ್ಷವಾದ ‘ಬಾಂಗ್ಲಾದೇಶ ನ್ಯಾಶನಲಿಸ್ಟ್ ಪಾರ್ಟಿ’ ನಾಯಕರು ಪ್ರತಿಕ್ರಿಯೆ ನೀಡಿದ್ದಾರೆ. ಆನಂತರ ಬಾಂಗ್ಲಾ ವಿದೇಶಾಂಗ ಸಚಿವರ ಹೇಳಿಕೆ ಹೊರಬಿದ್ದಿದೆ. “ಅಖಂಡ ಭಾರತ ಕಲ್ಪನೆಯು ಬಾಂಗ್ಲಾದೇಶದ ಸ್ವಾತಂತ್ರ್ಯ ಮತ್ತು ಸಾರ್ವಭೌಮತೆಗೆ ನೀಡಿರುವ ಬೆದರಿಕೆ” ಎಂದು ವಿರೋಧ ಪಕ್ಷ ಎಚ್ಚರಿಸಿದೆ.

ಸ್ಥಳೀಯ ಒತ್ತಡದಿಂದಾಗಿ ಬಾಂಗ್ಲಾ ಸರ್ಕಾರ ಈ ನಿರ್ಧಾರಕ್ಕೆ (ಸ್ಪಷ್ಟನೆ ಕೇಳುವುದಕ್ಕೆ) ಬಂದಿರಬಹುದೆಂದು ಭಾರತೀಯ ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ವಕ್ತಾರರು ಹೇಳಿದ್ದಾರೆ. ಅಶೋಕ ಸಾಮ್ರಾಜ್ಯದ ಕಾಲದಲ್ಲಿನ ಭಾರತದ ಗಡಿಗಳ ಬಗ್ಗೆ ತೋರಿಸುವ ಪ್ರಯತ್ನವೇ ಈ ಚಿತ್ರವಾಗಿದೆ. ಸಾಮ್ರಾಜ್ಯವನ್ನು ಪುನರುಜ್ಜೀನವಗೊಳಿಸುವ ಕಲ್ಪನೆಯದ್ದಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಬಾಂಗ್ಲಾದೇಶದ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಆಲಂ ಪ್ರತಿಕ್ರಿಯಿಸಿ,  “ಈ ವಿಷಯದ ಬಗ್ಗೆ ಭಾರತದ ಅಧಿಕೃತ ವಿವರಣೆಯನ್ನು ಪಡೆಯಲು ಭಾರತವನ್ನು ಸಂಪರ್ಕಿಸುವಂತೆ ದೆಹಲಿಯಲ್ಲಿರುವ ಬಾಂಗ್ಲಾದೇಶ ರಾಯಭಾರಿ ಕಚೇರಿಗೆ ಸೂಚನೆ ನೀಡಲಾಗಿದೆ” ಎಂದಿದ್ದಾರೆ. ಆಲಂ ಹೇಳಿಕೆ ಕುರಿತು ‘ಢಾಕಾ ಟ್ರಿಬ್ಯೂನ್’ ವರದಿ ಮಾಡಿದೆ.

ಭಿತ್ತಿಚಿತ್ರದ ವಿರುದ್ಧ ನೇಪಾಳದಲ್ಲಿ ಪ್ರತಿಭಟನೆಗಳು ಭುಗಿಲೆದ್ದಿದ್ದವು. ನಂತರ ಭಾರತೀಯ ವಿದೇಶಾಂಗ ಸಚಿವಾಲಯ ವಿವರಣೆ ನೀಡಿತು.

“ಇದು ಕ್ರಿಸ್ತನ ಜನನಕ್ಕೆ 300 ವರ್ಷಗಳ ಹಿಂದಿನ ಅಶೋಕ ಸಾಮ್ರಾಜ್ಯದ ನಕ್ಷೆ” ಎಂದು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರರು ಹೇಳಿದ್ದಾರೆ. “ಈ ಚಿತ್ರವು ಜನರ ಪ್ರಯಾಣವನ್ನು ಚಿತ್ರಿಸುತ್ತದೆ. ಸಾಂಸ್ಕೃತಿಕ ಸಾಮ್ಯತೆಗಳಿರಬಹುದು, ಆದರೆ ಅದಕ್ಕೂ ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲ” ಎಂದು ಆಲಂ ಅವರೂ ಪುನರುಚ್ಚರಿಸಿದ್ದಾರೆ.

ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಅವರು, “ಸಂಕಲ್ಪ ಸ್ಪಷ್ಟವಾಗಿದೆ – ಅಖಂಡ ಭಾರತ” ಎಂಬ ಶೀರ್ಷಿಕೆಯೊಂದಿಗೆ ಫೋಟೋವನ್ನು ಟ್ವೀಟ್ ಮಾಡಿದ ನಂತರ ಈ ಸಮಸ್ಯೆ ಉದ್ಭವವಾಗಿದೆ.

ನೇಪಾಳದಲ್ಲಿ ಭಿತ್ತಿಚಿತ್ರದ ಬಗ್ಗೆ ಬೀದಿ ಪ್ರತಿಭಟನೆಗಳು ನಡೆದವು. ಕೆಲವು ರಾಜಕಾರಣಿಗಳು ಪ್ರತಿಕ್ರಿಯಿಸಿ, “ಈ ಕ್ರಮವು ಕಠ್ಮಂಡು ಮತ್ತು ದೆಹಲಿ ನಡುವೆ ಈಗಾಗಲೇ ಇರುವ ವಿಶ್ವಾಸದ ಕೊರತೆಯನ್ನು ಉಲ್ಬಣಗೊಳಿಸಬಹುದು” ಎಂದು ಎಚ್ಚರಿಸಿದರು.

ಪಾಕಿಸ್ತಾನದ ವಿದೇಶಾಂಗ ಕಚೇರಿಯ ವಕ್ತಾರ ಮುಮ್ತಾಜ್ ಬಲೂಚ್ ಅವರು ಪ್ರತಿಕ್ರಿಯಿಸಿ, “ಜೋಶಿಯವರ ಹೇಳಿಕೆಯಿಂದ ಆಘಾತವಾಗಿದೆ. ‘ಅಖಂಡ ಭಾರತ’ದ ಅನಪೇಕ್ಷಿತ ಪ್ರತಿಪಾದನೆಯು ಪರಿಷ್ಕರಣೆ ಮತ್ತು ವಿಸ್ತರಣಾವಾದಿ ಮನಸ್ಥಿತಿಯ ದ್ಯೋತಕವಾಗಿದೆ. ಇದು ಭಾರತದ ನೆರೆಯ ರಾಷ್ಟ್ರಗಳ ಗುರುತು ಮತ್ತು ಸಂಸ್ಕೃತಿಯನ್ನು ಅಧೀನಗೊಳಿಸಲು ಪ್ರಯತ್ನಿಸುತ್ತಿದೆ. ಆದರೆ ತನ್ನದೇ ದೇಶದ ಧಾರ್ಮಿಕ ಅಲ್ಪಸಂಖ್ಯಾತರನ್ನೂ ಅಧೀನಗೊಳಿಸಲು ಯತ್ನಿಸಲಾಗಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿರಿ: ವಿಶ್ಲೇಷಣೆ: ಜಾತಿಗಣತಿ ಜಾರಿಗೊಳಿಸುವ ಸಿಎಂ ನಿರ್ಧಾರ ಸ್ವಾಗತಾರ್ಹವೇಕೆ?

ಕಳೆದ ವಾರ ಭಾರತೀಯ ವಿದೇಶಾಂಗ ವಕ್ತಾರ ಅರಿಂದಮ್ ಬಾಗ್ಚಿ ಪ್ರತಿಕ್ರಿಯಿಸಿ, “ಸದರಿ ಭಿತ್ತಿಚಿತ್ರವು ‘ಅಖಂಡ ಭಾರತ’ದ ಬಗ್ಗೆ ಇಲ್ಲ. ಪ್ರಾಚೀನ ಮೌರ್ಯ ಸಾಮ್ರಾಜ್ಯದಲ್ಲಿನ ಸಾಮ್ರಾಜ್ಯ ವಿಸ್ತರಣೆಗೆ ಸಂಬಂಧಿಸಿದೆ” ಎಂದಿದ್ದರು.

“ಟೀಕೆಗೆ ಗುರಿಯಾಗಿರುವ ಚಿತ್ರವು ಅಶೋಕ ಸಾಮ್ರಾಜ್ಯ, ಆತನ ಚಿಂತನೆ, ಆಡಳಿತದ ಸುಧಾರಣೆಗೆ ಸಂಬಂಧಿಸಿದೆ. ಚಿತ್ರದ ಮುಂಭಾಗದಲ್ಲಿರುವ ಫಲಕವು ಅದನ್ನೇ ಹೇಳುತ್ತದೆ. ಮತ್ತೇನೂ ಅಲ್ಲ” ಬಾಗ್ಚಿ ಸ್ಪಷ್ಟಪಡಿಸಿದ್ದರು.

ಜೋಶಿಯವರ ಟ್ವೀಟ್ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡದ ಅವರು, “ಇತರ ರಾಜಕೀಯ ನಾಯಕರು ನೀಡಬಹುದಾದ ಹೇಳಿಕೆಗಳ ಬಗ್ಗೆ ನಾನು ಖಂಡಿತವಾಗಿಯೂ ಪ್ರತಿಕ್ರಿಯಿಸುವುದಿಲ್ಲ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...

ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ಸಾವು : ಪಿತೂರಿ ಶಂಕೆ ವ್ಯಕ್ತಪಡಿಸಿದ ಮಮತಾ ಬ್ಯಾನರ್ಜಿ, ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದ ರಾಜಕೀಯ ನಾಯಕರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಸಾವಿಗೆ ಕಾರಣವಾದ ಬಾರಾಮತಿ ವಿಮಾನ ಪತನದ ಕುರಿತು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ಜ.28) ಒತ್ತಾಯಿಸಿದ್ದಾರೆ....

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು ಯುಜಿಸಿ ಹೊಸ ನಿಯಮ; ಮುಂದುವರೆದ ಪ್ರಬಲಜಾತಿ ಗುಂಪಿನ ವಿರೋಧ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ಪರಿಹರಿಸುವ ಗುರಿಯನ್ನು ಹೊಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಪರಿಷ್ಕೃತ ನಿಯಮಗಳ ಕುರಿತು ದೇಶದಲ್ಲಿ ಭಾರಿ ರಾಜಕೀಯ ವಾಗ್ವಾದ ಭುಗಿಲೆದ್ದಿದೆ. ಹೊಸ ಮಾರ್ಗಸೂಚಿಗಳ ಕುರಿತು...

ಜನಸೇನಾ ಶಾಸಕನಿಂದ ಅತ್ಯಾಚಾರ, ಬಲವಂತದ ಗರ್ಭಪಾತ : ಮಹಿಳೆ ಆರೋಪ

ಆಂಧ್ರ ಪ್ರದೇಶದ ರೈಲ್ವೆ ಕೊಡೂರು ವಿಧಾನಸಭಾ ಕ್ಷೇತ್ರದ ಜನ ಸೇನಾ ಶಾಸಕ ಮತ್ತು ಸರ್ಕಾರಿ ಸಚೇತಕ ಅರವ ಶ್ರೀಧರ್ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ ಮತ್ತು ಬಲವಂತದ ಗರ್ಭಪಾತ ಆರೋಪ ಮಾಡಿದ್ದಾರೆ. ಈ ಕುರಿತು ವಿಡಿಯೋ...

ಬಾರಾಮತಿ ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ನಿಧನ; ಸಂತಾಪ ಸೂಚಿಸಿದ ಪ್ರಮುಖರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ಐವರು ಜನರು ಪ್ರಯಾಣಿಸುತ್ತಿದ್ದ ವಿಮಾನ ಬುಧವಾರ ಬೆಳಿಗ್ಗೆ ಪುಣೆ ಜಿಲ್ಲೆಯಲ್ಲಿ ಪತನಗೊಂಡು ಸಾವನ್ನಪ್ಪಿದ್ದಾರೆ. ಎನ್‌ಸಿಪಿ ನಾಯಕರಾದ ಅಜಿತ್ ಪವಾರ್ (66) ಮತ್ತು ಇತರರನ್ನು ಹೊತ್ತೊಯ್ಯುತ್ತಿದ್ದ...

ಗುರುಗ್ರಾಮ ಮತ್ತು ಚಂಡೀಗಢದ ಶಾಲೆಗಳಲ್ಲಿ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ: ವಿದ್ಯಾರ್ಥಿಗಳ ಸ್ಥಳಾಂತರ

ಗುರುಗ್ರಾಮ್‌ನ ಕನಿಷ್ಠ ಆರು ಖಾಸಗಿ ಶಾಲೆಗಳಿಗೆ ಬುಧವಾರ ಬೆಳಿಗ್ಗೆ ಬಾಂಬ್ ಬೆದರಿಕೆ ಇಮೇಲ್‌ಗಳು ಬಂದಿದ್ದು, ದೊಡ್ಡ ಪ್ರಮಾಣದ ಸ್ಥಳಾಂತರ ಮತ್ತು ಭದ್ರತಾ ತಪಾಸಣೆಗಳನ್ನು ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಬೆಳಿಗ್ಗೆ 7:10 ರ ಸುಮಾರಿಗೆ...

ಜಿಲ್ಲಾ ಸಹಕಾರಿ ಬ್ಯಾಂಕ್‌ನಿಂದ ಮಹಾರಾಷ್ಟ್ರ ಡಿಸಿಎಂ ಆಗುವವರೆಗೆ: ಅಜಿತ್ ಪವಾರ್ ರಾಜಕೀಯ ಹೆಜ್ಜೆಗಳು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಬುಧವಾರ ಬಾರಾಮತಿಯಲ್ಲಿ ಲ್ಯಾಂಡ್‌ ಆಗಲು ಪ್ರಯತ್ನಿಸುವಾಗ ಅವರು ಪ್ರಯಾಣಿಸುತ್ತಿದ್ದ ವಿಮಾನ ಅಪಘಾತಕ್ಕೀಡಾಗಿ ನಿಧನರಾದರು. ಈ ಅಪಘಾತ ಮೂಲಕ, ಮಹಾರಾಷ್ಟ್ರದ ಅತ್ಯಂತ ಪ್ರಭಾವಶಾಲಿ ಮತ್ತು ಶಾಶ್ವತ ರಾಜಕೀಯ ವ್ಯಕ್ತಿಗಳಲ್ಲಿ...