Homeಮುಖಪುಟಅಖಿಲೇಶ್, ಮಾಯಾವತಿ ‘ಪ್ರೀತಿಸುವ ಭಾರತ’ ಬಯಸುತ್ತಾರೆ: ರಾಹುಲ್ ಗಾಂಧಿ

ಅಖಿಲೇಶ್, ಮಾಯಾವತಿ ‘ಪ್ರೀತಿಸುವ ಭಾರತ’ ಬಯಸುತ್ತಾರೆ: ರಾಹುಲ್ ಗಾಂಧಿ

- Advertisement -
- Advertisement -

“ಸಮಾಜವಾದಿ ಪಕ್ಷದ ಅಧ್ಯಕ್ಷರಾದ ಅಖಿಲೇಶ್ ಯಾದವ್ ಮತ್ತು ಬಹುಜನ ಸಮಾಜ ಪಕ್ಷದ ಮುಖ್ಯಸ್ಥರಾದ ಮಾಯಾವತಿಯವರು ‘ಪ್ರೀತಿಸುವ ಭಾರತ’ವನ್ನು ಬಯಸುತ್ತಾರೆ. ಕಾಂಗ್ರೆಸ್ ಅವರೊಂದಿಗೆ ಸೈದ್ಧಾಂತಿಕ ಸಂಬಂಧವನ್ನು ಹೊಂದಿದ” ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

“ದೇಶವನ್ನು ಒಂದುಗೂಡಿಸಲು ಬಯಸುವ ಎಲ್ಲರಿಗೂ ಭಾರತ್ ಜೋಡೋ ಯಾತ್ರೆಯ ಬಾಗಿಲುಗಳು ತೆರೆದಿರುತ್ತವೆ” ಎಂದು ಶನಿವಾರ ಹೇಳಿಕೆ ನೀಡಿರುವ ಅವರು, “ಕಾಂಗ್ರೆಸ್‌ ಕೈಗೊಂಡಿರುವ ಈ ಯಾತ್ರೆಗೆ ಎಲ್ಲಾ ವಿರೋಧ ಪಕ್ಷಗಳ ನಾಯಕರು ಬೆಂಬಲ ನೀಡುವುದು ಖಚಿತ” ಎಂದು ತಿಳಿಸಿದ್ದಾರೆ.

“ಆದರೆ ಇಂದಿನ ಭಾರತದಲ್ಲಿ ರಾಜಕೀಯ ಅಥವಾ ಇನ್ನಾವುದೇ ವಿಚಾರದಲ್ಲೂ ಒತ್ತಡಗಳು ಇವೆ. ಹಾಗಾಗಿ ಯಾರು [ಭಾರತ್ ಜೋಡೋ ಯಾತ್ರೆಗೆ] ಬರುತ್ತಿದ್ದಾರೆ ಮತ್ತು ಯಾರು ಬರುತ್ತಿಲ್ಲ ಎಂಬುದರ ಕುರಿತು ನಾನು ಪ್ರತಿಕ್ರಿಯಿಸಲು ಬಯಸುವುದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

“ಭಾರತ್ ಜೋಡೋ ಯಾತ್ರೆಗೆ ಸೇರಲು ನನಗೆ ಯಾವುದೇ ಆಹ್ವಾನ ಬಂದಿಲ್ಲ” ಎಂದು ಅಖಿಲೇಶ್‌ ಯಾದವ್ ಹೇಳಿಕೆ ನೀಡಿದ ಎರಡು ದಿನಗಳ ನಂತರ ರಾಹುಲ್‌ ಪ್ರತಿಕ್ರಿಯಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ ಯಾದವ್, “ನಮ್ಮ ಪಕ್ಷದ ತತ್ವಗಳು ವಿಭಿನ್ನವಾಗಿವೆ. ಭಾರತೀಯ ಜನತಾ ಪಕ್ಷ ಮತ್ತು ಕಾಂಗ್ರೆಸ್ ಒಂದೇ” ಎಂದು ಆರೋಪಿಸಿದ್ದರು.

ಸೆಪ್ಟೆಂಬರ್ 7 ರಂದು ತಮಿಳುನಾಡಿನ ಕನ್ಯಾಯಾಕುಮಾರಿಯಿಂದ ಆರಂಭವಾಗಿರುವ ಭಾರತ್ ಜೋಡೋ ಯಾತ್ರೆಯು, ಬಿಜೆಪಿ ಪ್ರತಿಪಾದಿಸುವ ದ್ವೇಷದ ರಾಜಕೀಯವನ್ನು ಎದುರಿಸುವ ಗುರಿಯನ್ನು ಹೊಂದಿದೆ ಎಂದು ಕಾಂಗ್ರೆಸ್ ಹೇಳಿದೆ. ಸದ್ಯಕ್ಕೆ ದೆಹಲಿಯಲ್ಲಿ ಯಾತ್ರೆಯು ವಿರಾಮ ಪಡೆದಿದೆ. ಜನವರಿ 3 ರಂದು ಪುನರಾರಂಭವಾಗಲಿದೆ.

ಡಿಎಂಕೆ ಪಕ್ಷದ ನಾಯಕ, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್, ಶಿವಸೇನೆಯ ಆದಿತ್ಯ ಠಾಕ್ರೆ (ಉದ್ಧವ್ ಬಾಳಾಸಾಹೇಬ್ ಠಾಕ್ರೆ) ಮತ್ತು ಮಕ್ಕಳ್ ನೀಧಿ ಮೈಯಂ ಪಕ್ಷದ ಕಮಲ್ ಹಾಸನ್ ಸೇರಿದಂತೆ ಹಲವಾರು ವಿರೋಧ ಪಕ್ಷದ ನಾಯಕರು ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಂಡು ಬೆಂಬಲಿಸಿದ್ದಾರೆ.

ಮಧ್ಯಪ್ರದೇಶ ಚುನಾವಣೆಯಲ್ಲಿ ಕಾಂಗ್ರೆಸ್‌ ಗೆಲ್ಲಲಿದೆ: ರಾಹುಲ್

ನವೆಂಬರ್‌ನಲ್ಲಿ ನಡೆಯಲಿರುವ ಮಧ್ಯಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸ್ವೀಪ್ ಮಾಡಲಿದೆ ಎಂದು ರಾಹುಲ್ ಗಾಂಧಿ ಭವಿಷ್ಯ ನುಡಿದಿದ್ದಾರೆ.

“ಮಧ್ಯಪ್ರದೇಶ ಚುನಾವಣೆಯಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಲಿದೆ ಎಂದು ನಾನು ನಿಮಗೆ ಲಿಖಿತವಾಗಿ ಹೇಳಬಲ್ಲೆ” ಎಂದು ಕಾಂಗ್ರೆಸ್ ನಾಯಕ ರಾಹುಲ್ ತಿಳಿಸಿದ್ದಾರೆ. “ಬಿಜೆಪಿ ಎಲ್ಲಿಯೂ ಕಾಣದಾಗುತ್ತದೆ. ಅದರ ಬಗ್ಗೆ ಯಾವುದೇ ಪ್ರಶ್ನೆಯಿಲ್ಲ” ಎಂದಿದ್ದಾರೆ.

“ಅಧಿಕಾರವನ್ನು ಕದಿಯುವ ಮೂಲಕ ಮತ್ತು ಹಣದ ಮೂಲಕ ಬಿಜೆಪಿ ಸರ್ಕಾರವನ್ನು ರಚಿಸಿದೆ ಎಂದು ಮಧ್ಯಪ್ರದೇಶದ ಪ್ರತಿಯೊಬ್ಬ ನಿವಾಸಿಗೂ ತಿಳಿದಿದೆ” ಎಂದು ಹೇಳಿದ್ದಾರೆ.

2018ರ ಡಿಸೆಂಬರ್‌ನಲ್ಲಿ ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿತ್ತು. ವಿಧಾನಸಭೆ ಚುನಾವಣೆಯಲ್ಲಿ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿತು. ಆದರೆ ಮಾರ್ಚ್ 2020ರಲ್ಲಿ ಜ್ಯೋತಿರಾದಿತ್ಯ ಸಿಂಧಿಯಾ ಅವರ ರಾಜೀನಾಮೆಯ ನಂತರ 22 ಕಾಂಗ್ರೆಸ್ ಶಾಸಕರು ಅಸೆಂಬ್ಲಿಯನ್ನು ತೆರೆದರು. ಹೀಗಾಗಿ ಕಮಲ್ ನಾಥ್ ನೇತೃತ್ವದ ಸರ್ಕಾರವು ಪತನಗೊಂಡಿತು. ನಂತರ ಸಿಂಧಿಯಾ ಬಿಜೆಪಿಗೆ ಸೇರ್ಪಡೆಯಾದರು. ಮಾರ್ಚ್ 23 ರಂದು ಬಿಜೆಪಿ ನಾಯಕ ಶಿವರಾಜ್ ಸಿಂಗ್ ಚೌಹಾಣ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ರಾಹುಲ್ ಗಾಂದಿ ದಿನೇದಿನೇ ಪ್ರಬುದ್ದರಾಗುತ್ತಿದ್ದಾರೆ. ಇದು ನಿಜಕ್ಕೂ ಒಂದು ಒಳ್ಳೆಯ ಬೆಳವಣಿಗೆ. ಈ ದೇಶಕ್ಕೆ ಒಳ್ಳೆಯ ನಾಯಕತ್ವವನ್ನು ಕೊಡುವಂತಹ ಗುಣಗಳು ರಾಹುಲ್‌ ಅವರಲ್ಲಿ ಗೋಚರಿಸುತ್ತಿದೆ.

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...