Homeಮುಖಪುಟಬಿಜೆಪಿ ಪರ ಕೆಲಸ ಮಾಡುತ್ತಿದ್ದವರನ್ನೇ ಪ್ರಶ್ನೆ ಕೇಳಿ ಸಮೀಕ್ಷೆ ನಡೆಸಲಾಗಿದೆ: ಅಖಿಲೇಶ್‌ ಯಾದವ್‌

ಬಿಜೆಪಿ ಪರ ಕೆಲಸ ಮಾಡುತ್ತಿದ್ದವರನ್ನೇ ಪ್ರಶ್ನೆ ಕೇಳಿ ಸಮೀಕ್ಷೆ ನಡೆಸಲಾಗಿದೆ: ಅಖಿಲೇಶ್‌ ಯಾದವ್‌

- Advertisement -
- Advertisement -

ಎಕ್ಸಿಟ್‌ ಪೋಲ್‌ಗಳ ಪಾರದರ್ಶಕತೆ ಬಗ್ಗೆ ಪ್ರಶ್ನಿಸಿದ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್‌ ಯಾದವ್‌,  ಬಿಜೆಪಿ ಪರ ಕೆಲಸ ಮಾಡುತ್ತಿದ್ದವರನ್ನೇ ಪ್ರಶ್ನೆ ಕೇಳಿ ಸಮೀಕ್ಷೆ ನಡೆಸಲಾಗಿದೆ, ಇದನ್ನು ನಡೆಸುವ ಏಜೆನ್ಸಿಗಳು ಬಿಜೆಪಿ ಪರವಾಗಿ ಅನುಕೂಲಕರ ವಾತಾವರಣವನ್ನು ಸೃಷ್ಟಿಸಲು ಪ್ರಯತ್ನಿಸುತ್ತಿವೆ ಎಂದು ಹೇಳಿದ್ದಾರೆ.

ಈ ಕುರಿತು ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಉತ್ತರಪ್ರದೇಶದ ಮಾಜಿ ಸಿಎಂ ಅಖಿಲೇಶ್‌ ಯಾದವ್‌, ಇಂಡಿಯಾ ಮೈತ್ರಿಕೂಟದ ಗೆಲುವು ದೇಶ ಮತ್ತು ದೇಶದ ಜನರ ಗೆಲುವು. ನಮ್ಮ ಎಕ್ಸಿಟ್‌ ಪೋಲ್‌ಗಳು ಉತ್ತರ ಪ್ರದೇಶದಲ್ಲಿ ಇಂಡಿಯಾ ಮೈತ್ರಿಕೂಟವು ಗರಿಷ್ಠ ಸಂಖ್ಯೆಯ ಸ್ಥಾನಗಳನ್ನು ಗೆಲ್ಲುತ್ತಿದೆ ಎಂದು ಹೇಳುತ್ತದೆ. ನಾನು ಆಂತರಿಕ ಸಮೀಕ್ಷೆಯನ್ನು ಮಾಡಿದ್ದೇನೆ ಅದರಲ್ಲಿ ಉತ್ತಮ ಫಲಿತಾಂಶ ಕಂಡು ಬಂದಿದೆ ಎಂದು ಹೇಳಿದ್ದಾರೆ.

ಪ್ರಜಾಪ್ರಭುತ್ವವನ್ನು ಬಲಪಡಿಸಲು ನಾವು ಮತ್ತು ಮಾಧ್ಯಮಗಳು ಜನರ ನಡುವೆ ಇದ್ದೇವೆ. ಬಿಜೆಪಿಯ  ರ್ಯಾಲಿಗಳಲ್ಲಿ ಜನರು ಇರಲಿಲ್ಲ, ಅವರ ಡೇರೆಗಳು ಖಾಲಿಯಾಗಿರುವುದನ್ನು ನಾವು ನೋಡಿದ್ದೇವೆ. ಅವರ ಪರವಾಗಿ ಏನೂ ಕಂಡುಬಂದಿಲ್ಲ ಎಂದು ಅಖಿಲೇಶ್‌ ಯಾದವ್ ಹೇಳಿದ್ದಾರೆ.

ಎಕ್ಸಿಟ್ ಪೋಲ್‌ಗಳ ಪಾರದರ್ಶಕತೆಯನ್ನು ಪ್ರಶ್ನಿಸಿದ ಅಖಿಲೇಶ್‌ ಯಾದವ್‌, ಎಕ್ಸಿಟ್ ಪೋಲ್‌ಗಳನ್ನು ನಡೆಸಿದ ಹಲವು ಏಜೆನ್ಸಿಗಳು ಬಿಜೆಪಿಯ ಬೂತ್ ನಿರ್ವಹಣೆಯ ಕೆಲಸವನ್ನು ಮಾಡಿದೆ. ಮತಗಟ್ಟೆ ಸಮೀಕ್ಷೆ ವೇಳೆ ಬಿಜೆಪಿ ಪರ ಬೂತ್ ಮಟ್ಟದಲ್ಲಿ ಕೆಲಸ ಮಾಡುತ್ತಿರುವವರ ಬಳಿಯೇ ಪ್ರಶ್ನೆ ಕೇಳಿ, ಉತ್ತರ ಪಡೆದು ವರದಿ ಸಿದ್ಧಪಡಿಸಲಾಗಿದೆ ಎಂದು ಅಖಿಲೇಶ್ ಯಾದವ್‌ ಹೇಳಿದ್ದಾರೆ.

ಬಿಜೆಪಿ ಪ್ರತಿಪಕ್ಷಗಳಿಗೆ ಬೆದರಿಕೆ ಹಾಕಲು ಬಯಸುತ್ತದೆ. ಇದು ಮೊದಲಿನಿಂದಲೂ ಅವರ ರಾಜಕೀಯವಾಗಿದೆ. ಆದರೆ ಈ ಬಾರಿ ಜನರು ಸಿದ್ಧರಾಗಿದ್ದಾರೆ. ನಮ್ಮ ಯುವಕರು ಮತ್ತು ಸಮಾಜದ ಎಲ್ಲಾ ವರ್ಗದವರು ತಾವು ಚಲಾಯಿಸುವ ಮತಗಳನ್ನು ರಕ್ಷಿಸಲು ಸಿದ್ಧರಾಗಿದ್ದಾರೆ ಎಂದು ಅಖಿಲೇಶ್‌ ಯಾದವ್ ಹೇಳಿದ್ದಾರೆ.

ಮತದಾನದ ದಿನಗಳ ನಂತರ ಚುನಾವಣಾ ಆಯೋಗವು ಮತದಾನದ ಶೇಕಡಾವಾರುಗಳನ್ನು ಪರಿಷ್ಕರಿಸಿದ ಕುರಿತು ಚುನಾವಣಾ ಆಯೋಗವು ಉತ್ತರಿಸಬೇಕು. ಚುನಾವಣಾ ಆಯೋಗವು ಎಲ್ಲಾ ನಿಯಮಗಳನ್ನು ಅನುಸರಿಸುತ್ತದೆ ಎಂದು ನಾನು ಭಾವಿಸುತ್ತೇನೆ. ವಿರೋಧ ಪಕ್ಷಗಳ ಏಜೆಂಟರಿಗೆ ಸಾಕಷ್ಟು ಭದ್ರತಾ ವ್ಯವಸ್ಥೆಗಳನ್ನು ಚುನಾವಣಾ ಆಯೋಗ ಮಾಡಬೇಕು. ಬಿಜೆಪಿ ದುರ್ಬಲವಾಗಿ ಕಂಡು ಬಂದಾಗ, ಆಡಳಿತ ಪಕ್ಷವಾಗಿರುವುದರಿಂದ ಏಜೆಂಟ್‌ಗಳಿಗೆ ಬೆದರಿಕೆ ಹಾಕಲು ಪ್ರಯತ್ನಿಸುತ್ತಾರೆ. ಇದು ಮತ ಎಣಿಕೆಯನ್ನು ನಿಧಾನಗೊಳಿಸಬಹುದು ಅಥವಾ ರಾತ್ರಿಯಲ್ಲಿ ವಿದ್ಯುತ್ ಕಡಿತಗೊಳಿಸಬಹುದು. ಚುನಾವಣೆಗಳು ಮುಗಿದಿವೆ, ಎಕ್ಸಿಟ್ ಪೋಲ್‌ಗಳು ಅನೇಕ ವಿಷಯಗಳನ್ನು ತೋರಿಸುತ್ತಿವೆ, ಅನೇಕ ವಿಷಯಗಳಿಗೆ ಬಿಜೆಪಿ ಕಾರಣವಾಗಿದೆ, ಅವರು ಶಾಂತಿ ಮತ್ತು ಸಹೋದರತ್ವವನ್ನು ಕದಡಿದರು, ಅವರು ಮೀಸಲಾತಿಯನ್ನು ಕೊನೆಗೊಳಿಸಲು ಸಂಚು ಮಾಡಿದರು, ಅವರು ಮಹಿಳೆಯರ ವಿರುದ್ಧದ ಅಪರಾಧಗಳನ್ನು ಹೆಚ್ಚಿಸಿದರು, ಅವರು ಹಣದುಬ್ಬರ ಮತ್ತು ನಿರುದ್ಯೋಗವನ್ನು ಪ್ರಚೋದಿಸಿದ್ದಾರೆ ಎಂದು ಅಖಿಲೇಶ್‌ ಯಾದವ್‌ ಹೇಳಿದ್ದಾರೆ.

ಇದನ್ನು ಓದಿ: ಇಸ್ರೇಲ್‌ ಪ್ರಜೆಗಳಿಗೆ ಪ್ರವೇಶ ನಿಷೇಧಿಸಿದ ಮಾಲ್ಡೀವ್ಸ್‌

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...