HomeಮುಖಪುಟINDIA ಮೈತ್ರಿಕೂಟಕ್ಕೆ BSP? ಒಕ್ಕೂಟ ತ್ಯಜಿಸುವ ಬೆದರಿಕೆ ಹಾಕಿದ ಅಖಿಲೇಶ್

INDIA ಮೈತ್ರಿಕೂಟಕ್ಕೆ BSP? ಒಕ್ಕೂಟ ತ್ಯಜಿಸುವ ಬೆದರಿಕೆ ಹಾಕಿದ ಅಖಿಲೇಶ್

- Advertisement -
- Advertisement -

INDIA ಮೈತ್ರಿಕೂಟಕ್ಕೆ ಬಹುಜನ ಸಮಾಜಪಕ್ಷವನ್ನು ಸೇರಿಸಬಾರದು, ಬಿಎಸ್ಪಿಯನ್ನು ಸೇರಿಸಿದರೆ ನಮ್ಮ ಪಕ್ಷವು  INDIA ಮೈತ್ರಿಕೂಟವನ್ನು ತೊರೆಯಲಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಬೆದರಿಕೆ ಹಾಕಿದ್ದಾರೆ.

ಡಿ.19ರಂದು ನಡೆದ INDIA ಸಭೆಯಲ್ಲಿ ಬಹುಜನ ಸಮಾಜ ಪಕ್ಷವನ್ನು ಒಕ್ಕೂಟಕ್ಕೆ ಸೇರಿಸುವ ಬಗ್ಗೆ ಅಖಿಲೇಶ್ ಯಾದವ್ ಆಕ್ರೋಶ ವ್ಯಕ್ತಪಡಿಸಿದ್ದು, ಹಾಜರಿದ್ದ ಹೆಚ್ಚಿನ ವಿರೋಧಪಕ್ಷದ ನಾಯಕರನ್ನು ಈ ಬೆಳವಣಿಗೆ ಅಚ್ಚರಿಗೊಳಿಸಿದೆ ಎಂದು ಇಂಡಿಯನ್‌ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಮಾಯಾವತಿ ಅವರನ್ನು ಒಕ್ಕೂಟಕ್ಕೆ ಸೇರಿಸುವ ಪ್ರಯತ್ನ ನಡೆಯುತ್ತಿದೆ. ಬಹುಜನ ಸಮಾಜ ಪಕ್ಷವನ್ನು ಸೇರ್ಪಡೆ ಮಾಡಿದರೆ ತಮ್ಮ ಪಕ್ಷವು ಒಕ್ಕೂಟವನ್ನು ತೊರೆಯಲಿದೆ ಎಂದು ಅಖಿಲೇಶ್ ಸಭೆಯಲ್ಲಿ ಘೋಷಿಸಿದ್ದರು. ಈವರೆಗೆ ನಡೆದ ಒಕ್ಕೂಟದ 4 ಸಭೆಗಳಲ್ಲಿ ಬಿಎಸ್‌ಪಿ ಸೇರ್ಪಡೆ ಕುರಿತು ಯಾವುದೇ ಚರ್ಚೆ ನಡೆಯದ ಕಾರಣ ಸಭೆಯಲ್ಲಿ ಉಪಸ್ಥಿತರಿದ್ದ ವಿರೋಧ ಪಕ್ಷಗಳ ಮುಖಂಡರು ಎಸ್‌ಪಿ ಮುಖ್ಯಸ್ಥರ ಹೇಳಿಕೆಯಿಂದ ಆಚ್ಚರಿಗೊಂಡಿದ್ದರು.

ಮೂಲಗಳ ಪ್ರಕಾರ ಕಾಂಗ್ರೆಸ್‌ ಉತ್ತರ ಪ್ರದೇಶದಲ್ಲಿ ಬಿಎಸ್‌ಪಿಯೊಂದಿಗೆ ಮೈತ್ರಿ ಮಾಡಿಕೊಳ್ಳಲು ಉತ್ಸುಕವಾಗಿದೆ ಎಂದು ಅಖಿಲೇಶ್ ಭಾವಿಸಿದ್ದಾರೆ ಮತ್ತು ಬಿಎಸ್ಪಿಯನ್ನು ಸೇರ್ಪಡೆಗೊಳಿಸುವ ಮೊದಲು ಅಖಿಲೇಶ್‌ ಈ ಬಗ್ಗೆ ಎಚ್ಚರಿಕೆಯನ್ನು ನೀಡಲು ಬಯಸಿದ್ದರು ಎಂದು ಹೇಳಲಾಗಿದೆ.

ಇಂಡಿಯಾ ಮೈತ್ರಿಕೂಟ ಹಾಗೂ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟದಿಂದ ದೂರವಿರುವ ಮಾಯಾವತಿ ಈ ಬೆಳವಣಿಗೆ ಬಗ್ಗೆ ಪ್ರತಿಕ್ರಿಯಿಸಿ ಜನರು ಮತ್ತು ದೇಶಕ್ಕಾಗಿ ಭವಿಷ್ಯದಲ್ಲಿ ಯಾರಿಗೆ ಯಾರ ಸಹಾಯ ಬೇಕೆಂಬುದು ಯಾರಿಗೂ ತಿಳಿದಿಲ್ಲ. ಅಖಿಲೇಶ್‌ ಯಾದವ್‌ ಅವರನ್ನು ನೇರವಾಗಿ ಗುರಿಯಾಗಿಸಿ ಮಾತನಾಡಿದ ಮಾಯಾವತಿ ಇಂತಹ ಹೇಳಿಕೆಗಳನ್ನು ನೀಡುವ ಪಕ್ಷಗಳು ನಂತರ ಮುಜುಗರಕ್ಕೊಳಗಾಗಬೇಕಾಗಬಹುದು ಎಂದು ಹೇಳಿದ್ದಾರೆ. ಅಖಿಲೇಶ್‌ ವಿರುದ್ಧ ತಕ್ಷಣ ಮಾಯಾವತಿ ತಿರುಗೇಟು ನೀಡಿರುವುದು ಅವರು ವಿಪಕ್ಷದೊಂದಿಗೆ ಹೊಂದಾಣಿಕೆಗೆ ಸಿದ್ಧ ಎಂಬುದನ್ನು ಸೂಚಿಸುತ್ತದೆ ಎಂಬುದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

2024ರ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿ ಕೂಟಕ್ಕೆ ಪ್ರತಿಯಾಗಿ ಪ್ರತಿಪಕ್ಷಗಳು INDIA ಮೈತ್ರಿಕೂಟವನ್ನು ರಚಿಸಿತ್ತು. INDIA ಮೈತ್ರಿಕೂಟದಲ್ಲಿ ಕಾಂಗ್ರೆಸ್‌,  ಟಿಎಂಸಿ, ಡಿಎಂಕೆ, ಆಮ್‌ ಆದ್ಮಿ ಪಾರ್ಟಿ, ಜೆಡಿಯು, ಆರ್‌ಜೆಡಿ,  ಎನ್‌ಸಿಪಿ (ಶರದ್‌ ಪವಾರ್‌), ಜೆಎಂಎಂ, ಶಿವಸೇನೆ(ಉದ್ಧವ್‌), ಎಸ್‌ಪಿ, ಆರ್‌ಎಲ್‌ಡಿ, ಅಪ್ನಾದಳ (ಕಾಮೇರವಾಡಿ), ನ್ಯಾಷನಲ್‌ ಕಾನ್ಫರೆನ್ಸ್‌, ಪಿಡಿಪಿ, ಸಿಪಿಐ (ಎಂ), ಸಿಪಿಐ, ಆರ್‌ಎಸ್‌ಪಿ,  ಎಎಫ್‌ಬಿ, ಎಂಡಿಎಂಕೆ, ವಿಸಿಕೆ, ಕೆಎಂಡಿಕೆ, ಎಂಎಂಕೆ, ಐಯುಎಂಎಲ್, ಕೇರಳ ಕಾಂಗ್ರೆಸ್‌, ಕೇರಳ ಕಾಂಗ್ರೆಸ್‌ (ಜೆ), ಸಿಪಿಐ (ಎಂ) ಎಲ್‌ ಸೇರಿ 26 ಪಕ್ಷಗಳು ಇವೆ. ಆದರೆ ಬಿಎಸ್ಪಿ ಈವೆರೆಗೆ INDIA ಮೈತ್ರಿಕೂಟ ಅಥವಾ ಎನ್‌ಡಿಎ ಮೈತ್ರಿ ಕೂಟಕ್ಕೆ ಸೇರದೆ ಸ್ವತಂತ್ರವಾಗಿ ಉಳಿದಿದೆ.

ಇದನ್ನು ಓದಿ: ಪೂಂಛ್‌ನಲ್ಲಿ ಸೈನಿಕರ ಚಿತ್ರಹಿಂಸೆಯಿಂದ ಮೂವರು ನಾಗರಿಕರು ಸಾವು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...