Homeಮುಖಪುಟಎಸ್ಪಿ-ಕಾಂಗ್ರೆಸ್‌ ಸೀಟು ಹಂಚಿಕೆ ಘೋಷಿಸಿದ ಅಖಿಲೇಶ್‌: ಕಾಂಗ್ರೆಸ್ ಅಸಮ್ಮತಿ!

ಎಸ್ಪಿ-ಕಾಂಗ್ರೆಸ್‌ ಸೀಟು ಹಂಚಿಕೆ ಘೋಷಿಸಿದ ಅಖಿಲೇಶ್‌: ಕಾಂಗ್ರೆಸ್ ಅಸಮ್ಮತಿ!

- Advertisement -
- Advertisement -

ಬಿಹಾರ ಮತ್ತು ಪ.ಬಂಗಾಳದಲ್ಲಿ INDIA ಮೈತ್ರಿಯಲ್ಲಿ ಬಿರುಕು ಮೂಡಿರುವ ಬೆನ್ನಲ್ಲಿ ಸಮಾಜವಾದಿ ಪಕ್ಷದ ಮುಖ್ಯಸ್ಥ ಮತ್ತು ಉತ್ತರಪ್ರದೇಶದ ಮಾಜಿ ಸಿಎಂ ಅಖಿಲೇಶ್ ಯಾದವ್ ಅವರು ಕಾಂಗ್ರೆಸ್ ಜೊತೆಗಿನ ತಮ್ಮ ಪಕ್ಷದ ಮೈತ್ರಿಯು ರಾಜ್ಯದಲ್ಲಿ 11 ಲೋಕಸಭಾ ಸ್ಥಾನಗಳೊಂದಿಗೆ ಆರಂಭವಾಗಿದೆ ಎಂದು ಹೇಳಿಕೊಂಡಿದೆ. ಆದರೆ ಇಂಡಿಯಾ ಟುಡೇ ವರದಿ ಪ್ರಕಾರ ಇದಕ್ಕೆ ಕಾಂಗ್ರೆಸ್‌ ಅಸಮ್ಮತಿಸಿದೆ ಎಂದು ಹೇಳಿದೆ.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಉತ್ತರಪ್ರದೇಶದಲ್ಲಿ ಕಾಂಗ್ರೆಸ್‌ ಜತೆಗೆ ತಮ್ಮ ಪಕ್ಷವು ಮೈತ್ರಿ ಮಾಡಿಕೊಂಡಿರುವುದು ‘ಉತ್ತಮ ಬೆಳವಣಿಗೆ‘ ಎಂದು ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಅಖಿಲೇಶ್‌ ಯಾದವ್‌ ಹೇಳಿದ್ದಾರೆ. ಬಿಹಾರ ಸಿಎಂ ಮತ್ತು ಜನತಾ ದಳ (ಯುನೈಟೆಡ್) ಅಧ್ಯಕ್ಷ ನಿತೀಶ್ ಕುಮಾರ್ ಅವರು ಮಹಾಘಟಬಂಧನ್ ಸರ್ಕಾರವನ್ನು ಉರುಳಿಸಿ ಭಾರತೀಯ ಜನತಾ ಪಾರ್ಟಿ ನೇತೃತ್ವದ ಎನ್‌ಡಿಎಗೆ ಮರಳಬಹುದು ಎಂಬ ಊಹಾಪೋಹಗಳು ಹರಡಿರುವ ಮಧ್ಯೆ ಅಖಿಲೇಶ್ ಅವರು ಹೇಳಿಕೆಯನ್ನು ನೀಡಿದ್ದಾರೆ.

ಕಾಂಗ್ರೆಸ್ ಜೊತೆಗಿನ ನಮ್ಮ ಸೌಹಾರ್ದಯುತ ಮೈತ್ರಿಯು 11 ಪ್ರಬಲ ಸ್ಥಾನಗಳ ಮೈತ್ರಿಯೊಂದಿಗೆ ಉತ್ತಮ ಆರಂಭವಾಗಿದೆ. ಈ ಮೈತ್ರಿಯು ಗೆಲುವಿನ ಸಮೀಕರಣದೊಂದಿಗೆ ಮುಂದುವರಿಯುತ್ತದೆ. INDIA ತಂಡ ಮತ್ತು ‘ಪಿಡಿಎ’ ತಂತ್ರಗಾರಿಕೆ ಇತಿಹಾಸವನ್ನು ಬದಲಾಯಿಸಲಿದೆ ಎಂದು ಅಖಿಲೇಶ್‌ ಯಾದವ್ ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್‌ನಲ್ಲಿ ಹೇಳಿದ್ದಾರೆ.

ಮೂಲಗಳ ಪ್ರಕಾರ, ರಾಜ್ಯದ ಕಾಂಗ್ರೆಸ್ ನಾಯಕತ್ವವು ಈ ಒಪ್ಪಂದವನ್ನು ಒಪ್ಪಿಕೊಂಡಿಲ್ಲ, ನಿರ್ಧಾರವು ಅಖಿಲೇಶ್ ಯಾದವ್ ಅವರದ್ದು, ಕಾಂಗ್ರೆಸ್‌ನದ್ದಲ್ಲ ಎಂದು ಹೇಳಿದೆ.

ಉತ್ತರಪ್ರದೇಶವು 80 ಲೋಕಸಭಾ ಸ್ಥಾನಗಳನ್ನು ಹೊಂದಿದೆ, ಇದು ದೇಶದಲ್ಲೇ ಅತಿ ಹೆಚ್ಚು ಸಂಸತ್‌ ಸ್ಥಾನಗಳನ್ನು ಹೊಂದಿರುವ ರಾಜ್ಯವಾಗಿದೆ. 2019ರ ಚುನಾವಣೆಯಲ್ಲಿ, ಬಿಜೆಪಿ ಮತ್ತು ಅದರ ಮಿತ್ರ ಪಕ್ಷವಾದ ಅಪ್ನಾದಳ(ಎಸ್) 80 ಸ್ಥಾನಗಳಲ್ಲಿ 62 ಸ್ಥಾನಗಳನ್ನು ಗೆದ್ದಿದ್ದರೆ, ಎಸ್‌ಪಿ-ಬಿಎಸ್‌ಪಿ ಮೈತ್ರಿಕೂಟ 15 ಸ್ಥಾನಗಳನ್ನು ಗೆದ್ದುಕೊಂಡಿದೆ ಮತ್ತು ಕಾಂಗ್ರೆಸ್ ಕೇವಲ ಒಂದು ಸ್ಥಾನವನ್ನು ಮಾತ್ರ ಗೆಲ್ಲಲು ಸಾಧ್ಯವಾಗಿತ್ತು.

ಲೋಕಸಭೆ ಚುನಾವಣೆಯಲ್ಲಿ 50 ಸ್ಥಾನಗಳಲ್ಲಿ ಸ್ಪರ್ಧಿಸಲು ಕಾಂಗ್ರೆಸ್ ಚಿಂತಿಸಿದೆ ಎಂದು ಪಕ್ಷದ ಮೂಲಗಳು ಈ ಹಿಂದೆ ತಿಳಿಸಿದ್ದವು. 11 ಸ್ಥಾನಗಳ ಮೈತ್ರಿಯನ್ನು ತಿರಸ್ಕರಿಸಿದ ಕಾಂಗ್ರೆಸ್ ನಾಯಕರ ವರದಿಗಳ ನಂತರ, ಸಮಾಜವಾದಿ ಪಕ್ಷವು ಸ್ಪಷ್ಟೀಕರಣವನ್ನು ನೀಡಿದೆ. ಇದು ಪ್ರಸ್ತಾಪವಾಗಿದೆ ಮತ್ತು ಹೆಚ್ಚು ಸ್ಥಾನಗಳನ್ನು ಗೆಲ್ಲುವ ಅಭ್ಯರ್ಥಿಗಳ ಬಗ್ಗೆ ಕಾಂಗ್ರೆಸ್ ಅಖಿಲೇಶ್ ಯಾದವ್ ಅವರಿಗೆ ತಿಳಿಸಿದರೆ ಅದನ್ನು ಹೆಚ್ಚಿಸಬಹುದು ಎಂದು ಹೇಳಿಕೊಂಡಿದೆ.

ಶುಕ್ರವಾರ ಇಂಡಿಯಾ ಟುಡೇಗೆ ನೀಡಿದ ಸಂದರ್ಶನದಲ್ಲಿ ಅಖಿಲೇಶ್ ಯಾದವ್ ಅವರು INDIA ಬಣದಲ್ಲಿ ನಡೆಯುತ್ತಿರುವ ಬಿರುಕುಗಳಿಗೆ ಕಾಂಗ್ರೆಸ್‌ನ್ನು ದೂಷಿಸಿದ್ದಾರೆ ಮತ್ತು ಮೈತ್ರಿ ಪಾಲುದಾರರೊಂದಿಗೆ ಚರ್ಚಿಸಲು ಮತ್ತು ತೊಡಗಿಸಿಕೊಳ್ಳಲು ಪಕ್ಷವು ಉತ್ಸಾಹ ತೋರುತ್ತಿಲ್ಲ ಎಂದು ಹೇಳಿದ್ದರು.

ಬಿಹಾರದಲ್ಲಿ ನಿತೀಶ್ ಕುಮಾರ್ ಅವರು ಬಿಜೆಪಿಯೊಂದಿಗಿನ ಸಂಬಂಧವನ್ನು ಕಡಿದುಕೊಂಡ ನಂತರ ತಮ್ಮ ಮಾಜಿ ಬದ್ಧ ಎದುರಾಳಿ ಲಾಲು ಪ್ರಸಾದ್ ಸ್ಥಾಪಿಸಿದ ರಾಷ್ಟ್ರೀಯ ಜನತಾ ದಳದೊಂದಿಗೆ ಮೈತ್ರಿ ಮಾಡಿಕೊಂಡಿದ್ದರು. ಬಿಹಾರದ ಸುದೀರ್ಘ ಅವಧಿಯ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಬಿಜೆಪಿಯನ್ನು ಎದುರಿಸಲು ದೇಶಾದ್ಯಂತ ಎಲ್ಲಾ ಪಕ್ಷಗಳನ್ನು ಒಟ್ಟುಗೂಡಿಸುವ ಪ್ರಯತ್ನವನ್ನು ಕೈಗೊಂಡಿದ್ದರು. ಲೋಕಸಭಾ ಚುನಾವಣೆ ಬಳಿಕ ಮುಖ್ಯಮಂತ್ರಿ ಸ್ಥಾನವನ್ನು ನಿತೀಶ್‌ ಅವರು ತೇಜಸ್ವಿ ಅವರಿಗೆ ಬಿಟ್ಟುಕೊಡಬೇಕು ಎಂದು ಈ ಹಿಂದೆ ಮಾತುಕತೆ ಆಗಿತ್ತು ಎನ್ನಲಾಗಿದೆ. ಅದಕ್ಕೆ ಮತ್ತೆ ಎನ್‌ಡಿಎ ಜೊತೆ ಹೋಗುತ್ತಾರೆ ಎನ್ನಲಾಗಿದೆ. ಅಲ್ಲದೆ ‘ಇಂಡಿಯಾ’ ಮೈತ್ರಿಕೂಟದ ಸಂಚಾಲಕ ಸ್ಥಾನ ಸೇರಿದಂತೆ ಇತರ ವಿಷಯಗಳಿಂದಾಗಿ ನಿತೀಶ್‌ ಮುನಿಸಿಕೊಂಡಿರಬಹುದು ಎಂದೂ ಕಾಂಗ್ರೆಸ್‌ ಮೂಲಗಳು ಹೇಳುತ್ತಿದೆ.

ಇದನ್ನು ಓದಿ: ಮೋದಿ, ಕೇಂದ್ರ ಸರ್ಕಾರವನ್ನು ಟೀಕಿಸಿ ಕಿರುನಾಟಕ ಪ್ರದರ್ಶನ: ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಿದ ಕೇರಳ ಹೈಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಾರಣಾಸಿಯಲ್ಲಿ ಆಚರಿಸುವ ಪ್ರಸಿದ್ಧ ‘ಭಸ್ಮ ಹೋಳಿ’ಗೆ ಸಂಸ್ಕೃತ ವಿದ್ವಾಂಸರು ಮತ್ತು ಕಾಶಿ ವಿದ್ವತ್ ಪರಿಷತ್ ವಿರೋಧ 

ವಾರಣಾಸಿ (ಉತ್ತರ ಪ್ರದೇಶ): ನಗರದ ಸ್ಮಶಾನ ಭೂಮಿಗಳಾದ ಮಣಿಕರ್ಣಿಕಾ ಮತ್ತು ಹರಿಶ್ಚಂದ್ರ ಘಾಟ್‌ಗಳಲ್ಲಿ 'ಮಸಾನೆ ಕಿ ಹೋ ಲಿ ' ನುಡಿಸುವ ಸಂಪ್ರದಾಯವನ್ನು ಸಂಸ್ಕೃತ ವಿದ್ವಾಂಸರು ಮತ್ತು ಹಿಂದೂ ಧರ್ಮಗ್ರಂಥಗಳ ತಜ್ಞರ ಪರಿಷತ್ತು...

ಮುಸ್ಲಿಮರೆಂದು ತಿಳಿದು ಮಹಿಳೆಯರಿಗೆ ವಿತರಿಸಿದ್ದ ಕಂಬಳಿ ವಾಪಸ್ ಪಡೆದ ಬಿಜೆಪಿ ಮಾಜಿ ಸಂಸದ

ಬಿಜೆಪಿಯ ಮಾಜಿ ಸಂಸದ ಸುಖ್‌ವೀರ್ ಸಿಂಗ್ ಜೌನ್‌ಪುರಿಯಾ ಅವರು, ಮುಸ್ಲಿಮರೆಂದು ಗೊತ್ತಾದ ಬಳಿಕ ಮಹಿಳೆಯರಿಗೆ ವಿತರಿಸಿದ್ದ ಕಂಬಳಿಯನ್ನು ವಾಪಸ್ ಪಡೆದಿದ್ದಾರೆ ಎಂದು ರಾಜಸ್ಥಾನ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಟಿಕರಾಮ್ ಜುಲ್ಲಿ ಭಾನುವಾರ...

ಜೆಎನ್‌ಯು: ಎಡಪಂಥೀಯ ವಿದ್ಯಾರ್ಥಿ ಸಂಘಟನೆ ಮತ್ತು ಎಬಿವಿಪಿ ನಡುವೆ ಘರ್ಷಣೆ: ಉದ್ವಿಗ್ನತೆ  

ಸೋಮವಾರ ಮುಂಜಾನೆ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಎಡಪಂಥೀಯ ಮತ್ತು ಬಲಪಂಥೀಯ ವಿದ್ಯಾರ್ಥಿ ಗುಂಪುಗಳು ಪರಸ್ಪರ ಹಿಂಸಾಚಾರವನ್ನು ಬಿಚ್ಚಿಟ್ಟಿದ್ದಾರೆ ಎಂದು ಆರೋಪಿಸಿದ ನಂತರ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್‌ಯು) ಆವರಣದಲ್ಲಿ ಉದ್ವಿಗ್ನತೆ ಉಂಟಾಗಿದೆ.  ಸೋಮವಾರ ಬೆಳಗಿನ...

ಡ್ರಗ್ ದೊರೆ ‘ಎಲ್ ಮೆಂಚೊ’ ಹತ್ಯೆ : ಮೆಕ್ಸಿಕೋದಲ್ಲಿ ಭುಗಿಲೆದ್ದ ಹಿಂಸಾಚಾರ

'ಎಲ್ ಮೆಂಚೊ' ಎಂದೇ ಪರಿಚಿತನಾಗಿದ್ದ ಡ್ರಗ್ ದೊರೆ ನೆಮೆಸಿಯೊ ಒಸೆಗುಯೆರಾನನ್ನು ಕಾರ್ಯಾಚರಣೆಯೊಂದರಲ್ಲಿ ಕೊಂದಿರುವುದಾಗಿ ಮೆಕ್ಸಿಕನ್ ಸೇನೆ ಭಾನುವಾರ (ಫೆ.22) ಘೋಷಿಸಿದೆ. ಆ ಬಳಿಕ ದೇಶದ ವಿವಿಧ ಭಾಗಗಳಲ್ಲಿ ಭಾರೀ ಹಿಂಸಾಚಾರ ಭುಗಿಲೆದ್ದಿದೆ ಎಂದು...

ನೇಪಾಳ ಬಸ್ ಅಪಘಾತ: ಧಾಡಿಂಗ್‌ನಲ್ಲಿ ತ್ರಿಶೂಲಿ ನದಿಗೆ ಬಸ್ ಬಿದ್ದು 18 ಮಂದಿ ಸಾವು; ಮುಂದುವರಿದ ರಕ್ಷಣಾ ಕಾರ್ಯಾಚರಣೆ

ಧಾಡಿಂಗ್ (ನೇಪಾಳ): ಸೋಮವಾರ ಮುಂಜಾನೆ ನೇಪಾಳದ ಧಾಡಿಂಗ್‌ನಲ್ಲಿ ಪ್ರಯಾಣಿಕರ ಬಸ್ ತ್ರಿಶೂಲಿ ನದಿಗೆ ಉರುಳಿಬಿದ್ದ ಪರಿಣಾಮ ಕನಿಷ್ಠ 18 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ 24 ಕ್ಕೂ ಹೆಚ್ಚು ಪ್ರಯಾಣಿಕರು...

ಅಜಿತ್ ಪವಾರ್ ಸಾವು | ಪತನಗೊಂಡ ವಿಮಾನದ ನಿರ್ವಹಣಾ ಸಂಸ್ಥೆಗೂ ಟಿಡಿಪಿಗೂ ನಂಟು : ರೋಹಿತ್ ಪವಾರ್

ಅಜಿತ್ ಪವಾರ್ ಸಾವಿಗೆ ಕಾರಣವಾದ ಪತನಗೊಂಡ ವಿಮಾನದ ನಿರ್ವಾಹಕ ಸಂಸ್ಥೆ ವಿಎಸ್ಆರ್ ವೆಂಚರ್ಸ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಡುವೆ ಸಂಬಂಧವಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಶರದ್ ಪವಾರ್ ಬಣದ)...

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....