Homeಮುಖಪುಟಎಸ್ಪಿ-ಕಾಂಗ್ರೆಸ್‌ ಸೀಟು ಹಂಚಿಕೆ ಘೋಷಿಸಿದ ಅಖಿಲೇಶ್‌: ಕಾಂಗ್ರೆಸ್ ಅಸಮ್ಮತಿ!

ಎಸ್ಪಿ-ಕಾಂಗ್ರೆಸ್‌ ಸೀಟು ಹಂಚಿಕೆ ಘೋಷಿಸಿದ ಅಖಿಲೇಶ್‌: ಕಾಂಗ್ರೆಸ್ ಅಸಮ್ಮತಿ!

- Advertisement -
- Advertisement -

ಬಿಹಾರ ಮತ್ತು ಪ.ಬಂಗಾಳದಲ್ಲಿ INDIA ಮೈತ್ರಿಯಲ್ಲಿ ಬಿರುಕು ಮೂಡಿರುವ ಬೆನ್ನಲ್ಲಿ ಸಮಾಜವಾದಿ ಪಕ್ಷದ ಮುಖ್ಯಸ್ಥ ಮತ್ತು ಉತ್ತರಪ್ರದೇಶದ ಮಾಜಿ ಸಿಎಂ ಅಖಿಲೇಶ್ ಯಾದವ್ ಅವರು ಕಾಂಗ್ರೆಸ್ ಜೊತೆಗಿನ ತಮ್ಮ ಪಕ್ಷದ ಮೈತ್ರಿಯು ರಾಜ್ಯದಲ್ಲಿ 11 ಲೋಕಸಭಾ ಸ್ಥಾನಗಳೊಂದಿಗೆ ಆರಂಭವಾಗಿದೆ ಎಂದು ಹೇಳಿಕೊಂಡಿದೆ. ಆದರೆ ಇಂಡಿಯಾ ಟುಡೇ ವರದಿ ಪ್ರಕಾರ ಇದಕ್ಕೆ ಕಾಂಗ್ರೆಸ್‌ ಅಸಮ್ಮತಿಸಿದೆ ಎಂದು ಹೇಳಿದೆ.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಉತ್ತರಪ್ರದೇಶದಲ್ಲಿ ಕಾಂಗ್ರೆಸ್‌ ಜತೆಗೆ ತಮ್ಮ ಪಕ್ಷವು ಮೈತ್ರಿ ಮಾಡಿಕೊಂಡಿರುವುದು ‘ಉತ್ತಮ ಬೆಳವಣಿಗೆ‘ ಎಂದು ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಅಖಿಲೇಶ್‌ ಯಾದವ್‌ ಹೇಳಿದ್ದಾರೆ. ಬಿಹಾರ ಸಿಎಂ ಮತ್ತು ಜನತಾ ದಳ (ಯುನೈಟೆಡ್) ಅಧ್ಯಕ್ಷ ನಿತೀಶ್ ಕುಮಾರ್ ಅವರು ಮಹಾಘಟಬಂಧನ್ ಸರ್ಕಾರವನ್ನು ಉರುಳಿಸಿ ಭಾರತೀಯ ಜನತಾ ಪಾರ್ಟಿ ನೇತೃತ್ವದ ಎನ್‌ಡಿಎಗೆ ಮರಳಬಹುದು ಎಂಬ ಊಹಾಪೋಹಗಳು ಹರಡಿರುವ ಮಧ್ಯೆ ಅಖಿಲೇಶ್ ಅವರು ಹೇಳಿಕೆಯನ್ನು ನೀಡಿದ್ದಾರೆ.

ಕಾಂಗ್ರೆಸ್ ಜೊತೆಗಿನ ನಮ್ಮ ಸೌಹಾರ್ದಯುತ ಮೈತ್ರಿಯು 11 ಪ್ರಬಲ ಸ್ಥಾನಗಳ ಮೈತ್ರಿಯೊಂದಿಗೆ ಉತ್ತಮ ಆರಂಭವಾಗಿದೆ. ಈ ಮೈತ್ರಿಯು ಗೆಲುವಿನ ಸಮೀಕರಣದೊಂದಿಗೆ ಮುಂದುವರಿಯುತ್ತದೆ. INDIA ತಂಡ ಮತ್ತು ‘ಪಿಡಿಎ’ ತಂತ್ರಗಾರಿಕೆ ಇತಿಹಾಸವನ್ನು ಬದಲಾಯಿಸಲಿದೆ ಎಂದು ಅಖಿಲೇಶ್‌ ಯಾದವ್ ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್‌ನಲ್ಲಿ ಹೇಳಿದ್ದಾರೆ.

ಮೂಲಗಳ ಪ್ರಕಾರ, ರಾಜ್ಯದ ಕಾಂಗ್ರೆಸ್ ನಾಯಕತ್ವವು ಈ ಒಪ್ಪಂದವನ್ನು ಒಪ್ಪಿಕೊಂಡಿಲ್ಲ, ನಿರ್ಧಾರವು ಅಖಿಲೇಶ್ ಯಾದವ್ ಅವರದ್ದು, ಕಾಂಗ್ರೆಸ್‌ನದ್ದಲ್ಲ ಎಂದು ಹೇಳಿದೆ.

ಉತ್ತರಪ್ರದೇಶವು 80 ಲೋಕಸಭಾ ಸ್ಥಾನಗಳನ್ನು ಹೊಂದಿದೆ, ಇದು ದೇಶದಲ್ಲೇ ಅತಿ ಹೆಚ್ಚು ಸಂಸತ್‌ ಸ್ಥಾನಗಳನ್ನು ಹೊಂದಿರುವ ರಾಜ್ಯವಾಗಿದೆ. 2019ರ ಚುನಾವಣೆಯಲ್ಲಿ, ಬಿಜೆಪಿ ಮತ್ತು ಅದರ ಮಿತ್ರ ಪಕ್ಷವಾದ ಅಪ್ನಾದಳ(ಎಸ್) 80 ಸ್ಥಾನಗಳಲ್ಲಿ 62 ಸ್ಥಾನಗಳನ್ನು ಗೆದ್ದಿದ್ದರೆ, ಎಸ್‌ಪಿ-ಬಿಎಸ್‌ಪಿ ಮೈತ್ರಿಕೂಟ 15 ಸ್ಥಾನಗಳನ್ನು ಗೆದ್ದುಕೊಂಡಿದೆ ಮತ್ತು ಕಾಂಗ್ರೆಸ್ ಕೇವಲ ಒಂದು ಸ್ಥಾನವನ್ನು ಮಾತ್ರ ಗೆಲ್ಲಲು ಸಾಧ್ಯವಾಗಿತ್ತು.

ಲೋಕಸಭೆ ಚುನಾವಣೆಯಲ್ಲಿ 50 ಸ್ಥಾನಗಳಲ್ಲಿ ಸ್ಪರ್ಧಿಸಲು ಕಾಂಗ್ರೆಸ್ ಚಿಂತಿಸಿದೆ ಎಂದು ಪಕ್ಷದ ಮೂಲಗಳು ಈ ಹಿಂದೆ ತಿಳಿಸಿದ್ದವು. 11 ಸ್ಥಾನಗಳ ಮೈತ್ರಿಯನ್ನು ತಿರಸ್ಕರಿಸಿದ ಕಾಂಗ್ರೆಸ್ ನಾಯಕರ ವರದಿಗಳ ನಂತರ, ಸಮಾಜವಾದಿ ಪಕ್ಷವು ಸ್ಪಷ್ಟೀಕರಣವನ್ನು ನೀಡಿದೆ. ಇದು ಪ್ರಸ್ತಾಪವಾಗಿದೆ ಮತ್ತು ಹೆಚ್ಚು ಸ್ಥಾನಗಳನ್ನು ಗೆಲ್ಲುವ ಅಭ್ಯರ್ಥಿಗಳ ಬಗ್ಗೆ ಕಾಂಗ್ರೆಸ್ ಅಖಿಲೇಶ್ ಯಾದವ್ ಅವರಿಗೆ ತಿಳಿಸಿದರೆ ಅದನ್ನು ಹೆಚ್ಚಿಸಬಹುದು ಎಂದು ಹೇಳಿಕೊಂಡಿದೆ.

ಶುಕ್ರವಾರ ಇಂಡಿಯಾ ಟುಡೇಗೆ ನೀಡಿದ ಸಂದರ್ಶನದಲ್ಲಿ ಅಖಿಲೇಶ್ ಯಾದವ್ ಅವರು INDIA ಬಣದಲ್ಲಿ ನಡೆಯುತ್ತಿರುವ ಬಿರುಕುಗಳಿಗೆ ಕಾಂಗ್ರೆಸ್‌ನ್ನು ದೂಷಿಸಿದ್ದಾರೆ ಮತ್ತು ಮೈತ್ರಿ ಪಾಲುದಾರರೊಂದಿಗೆ ಚರ್ಚಿಸಲು ಮತ್ತು ತೊಡಗಿಸಿಕೊಳ್ಳಲು ಪಕ್ಷವು ಉತ್ಸಾಹ ತೋರುತ್ತಿಲ್ಲ ಎಂದು ಹೇಳಿದ್ದರು.

ಬಿಹಾರದಲ್ಲಿ ನಿತೀಶ್ ಕುಮಾರ್ ಅವರು ಬಿಜೆಪಿಯೊಂದಿಗಿನ ಸಂಬಂಧವನ್ನು ಕಡಿದುಕೊಂಡ ನಂತರ ತಮ್ಮ ಮಾಜಿ ಬದ್ಧ ಎದುರಾಳಿ ಲಾಲು ಪ್ರಸಾದ್ ಸ್ಥಾಪಿಸಿದ ರಾಷ್ಟ್ರೀಯ ಜನತಾ ದಳದೊಂದಿಗೆ ಮೈತ್ರಿ ಮಾಡಿಕೊಂಡಿದ್ದರು. ಬಿಹಾರದ ಸುದೀರ್ಘ ಅವಧಿಯ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಬಿಜೆಪಿಯನ್ನು ಎದುರಿಸಲು ದೇಶಾದ್ಯಂತ ಎಲ್ಲಾ ಪಕ್ಷಗಳನ್ನು ಒಟ್ಟುಗೂಡಿಸುವ ಪ್ರಯತ್ನವನ್ನು ಕೈಗೊಂಡಿದ್ದರು. ಲೋಕಸಭಾ ಚುನಾವಣೆ ಬಳಿಕ ಮುಖ್ಯಮಂತ್ರಿ ಸ್ಥಾನವನ್ನು ನಿತೀಶ್‌ ಅವರು ತೇಜಸ್ವಿ ಅವರಿಗೆ ಬಿಟ್ಟುಕೊಡಬೇಕು ಎಂದು ಈ ಹಿಂದೆ ಮಾತುಕತೆ ಆಗಿತ್ತು ಎನ್ನಲಾಗಿದೆ. ಅದಕ್ಕೆ ಮತ್ತೆ ಎನ್‌ಡಿಎ ಜೊತೆ ಹೋಗುತ್ತಾರೆ ಎನ್ನಲಾಗಿದೆ. ಅಲ್ಲದೆ ‘ಇಂಡಿಯಾ’ ಮೈತ್ರಿಕೂಟದ ಸಂಚಾಲಕ ಸ್ಥಾನ ಸೇರಿದಂತೆ ಇತರ ವಿಷಯಗಳಿಂದಾಗಿ ನಿತೀಶ್‌ ಮುನಿಸಿಕೊಂಡಿರಬಹುದು ಎಂದೂ ಕಾಂಗ್ರೆಸ್‌ ಮೂಲಗಳು ಹೇಳುತ್ತಿದೆ.

ಇದನ್ನು ಓದಿ: ಮೋದಿ, ಕೇಂದ್ರ ಸರ್ಕಾರವನ್ನು ಟೀಕಿಸಿ ಕಿರುನಾಟಕ ಪ್ರದರ್ಶನ: ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಿದ ಕೇರಳ ಹೈಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...