Homeಮುಖಪುಟಎಸ್ಪಿ-ಕಾಂಗ್ರೆಸ್‌ ಸೀಟು ಹಂಚಿಕೆ ಘೋಷಿಸಿದ ಅಖಿಲೇಶ್‌: ಕಾಂಗ್ರೆಸ್ ಅಸಮ್ಮತಿ!

ಎಸ್ಪಿ-ಕಾಂಗ್ರೆಸ್‌ ಸೀಟು ಹಂಚಿಕೆ ಘೋಷಿಸಿದ ಅಖಿಲೇಶ್‌: ಕಾಂಗ್ರೆಸ್ ಅಸಮ್ಮತಿ!

- Advertisement -
- Advertisement -

ಬಿಹಾರ ಮತ್ತು ಪ.ಬಂಗಾಳದಲ್ಲಿ INDIA ಮೈತ್ರಿಯಲ್ಲಿ ಬಿರುಕು ಮೂಡಿರುವ ಬೆನ್ನಲ್ಲಿ ಸಮಾಜವಾದಿ ಪಕ್ಷದ ಮುಖ್ಯಸ್ಥ ಮತ್ತು ಉತ್ತರಪ್ರದೇಶದ ಮಾಜಿ ಸಿಎಂ ಅಖಿಲೇಶ್ ಯಾದವ್ ಅವರು ಕಾಂಗ್ರೆಸ್ ಜೊತೆಗಿನ ತಮ್ಮ ಪಕ್ಷದ ಮೈತ್ರಿಯು ರಾಜ್ಯದಲ್ಲಿ 11 ಲೋಕಸಭಾ ಸ್ಥಾನಗಳೊಂದಿಗೆ ಆರಂಭವಾಗಿದೆ ಎಂದು ಹೇಳಿಕೊಂಡಿದೆ. ಆದರೆ ಇಂಡಿಯಾ ಟುಡೇ ವರದಿ ಪ್ರಕಾರ ಇದಕ್ಕೆ ಕಾಂಗ್ರೆಸ್‌ ಅಸಮ್ಮತಿಸಿದೆ ಎಂದು ಹೇಳಿದೆ.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಉತ್ತರಪ್ರದೇಶದಲ್ಲಿ ಕಾಂಗ್ರೆಸ್‌ ಜತೆಗೆ ತಮ್ಮ ಪಕ್ಷವು ಮೈತ್ರಿ ಮಾಡಿಕೊಂಡಿರುವುದು ‘ಉತ್ತಮ ಬೆಳವಣಿಗೆ‘ ಎಂದು ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಅಖಿಲೇಶ್‌ ಯಾದವ್‌ ಹೇಳಿದ್ದಾರೆ. ಬಿಹಾರ ಸಿಎಂ ಮತ್ತು ಜನತಾ ದಳ (ಯುನೈಟೆಡ್) ಅಧ್ಯಕ್ಷ ನಿತೀಶ್ ಕುಮಾರ್ ಅವರು ಮಹಾಘಟಬಂಧನ್ ಸರ್ಕಾರವನ್ನು ಉರುಳಿಸಿ ಭಾರತೀಯ ಜನತಾ ಪಾರ್ಟಿ ನೇತೃತ್ವದ ಎನ್‌ಡಿಎಗೆ ಮರಳಬಹುದು ಎಂಬ ಊಹಾಪೋಹಗಳು ಹರಡಿರುವ ಮಧ್ಯೆ ಅಖಿಲೇಶ್ ಅವರು ಹೇಳಿಕೆಯನ್ನು ನೀಡಿದ್ದಾರೆ.

ಕಾಂಗ್ರೆಸ್ ಜೊತೆಗಿನ ನಮ್ಮ ಸೌಹಾರ್ದಯುತ ಮೈತ್ರಿಯು 11 ಪ್ರಬಲ ಸ್ಥಾನಗಳ ಮೈತ್ರಿಯೊಂದಿಗೆ ಉತ್ತಮ ಆರಂಭವಾಗಿದೆ. ಈ ಮೈತ್ರಿಯು ಗೆಲುವಿನ ಸಮೀಕರಣದೊಂದಿಗೆ ಮುಂದುವರಿಯುತ್ತದೆ. INDIA ತಂಡ ಮತ್ತು ‘ಪಿಡಿಎ’ ತಂತ್ರಗಾರಿಕೆ ಇತಿಹಾಸವನ್ನು ಬದಲಾಯಿಸಲಿದೆ ಎಂದು ಅಖಿಲೇಶ್‌ ಯಾದವ್ ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್‌ನಲ್ಲಿ ಹೇಳಿದ್ದಾರೆ.

ಮೂಲಗಳ ಪ್ರಕಾರ, ರಾಜ್ಯದ ಕಾಂಗ್ರೆಸ್ ನಾಯಕತ್ವವು ಈ ಒಪ್ಪಂದವನ್ನು ಒಪ್ಪಿಕೊಂಡಿಲ್ಲ, ನಿರ್ಧಾರವು ಅಖಿಲೇಶ್ ಯಾದವ್ ಅವರದ್ದು, ಕಾಂಗ್ರೆಸ್‌ನದ್ದಲ್ಲ ಎಂದು ಹೇಳಿದೆ.

ಉತ್ತರಪ್ರದೇಶವು 80 ಲೋಕಸಭಾ ಸ್ಥಾನಗಳನ್ನು ಹೊಂದಿದೆ, ಇದು ದೇಶದಲ್ಲೇ ಅತಿ ಹೆಚ್ಚು ಸಂಸತ್‌ ಸ್ಥಾನಗಳನ್ನು ಹೊಂದಿರುವ ರಾಜ್ಯವಾಗಿದೆ. 2019ರ ಚುನಾವಣೆಯಲ್ಲಿ, ಬಿಜೆಪಿ ಮತ್ತು ಅದರ ಮಿತ್ರ ಪಕ್ಷವಾದ ಅಪ್ನಾದಳ(ಎಸ್) 80 ಸ್ಥಾನಗಳಲ್ಲಿ 62 ಸ್ಥಾನಗಳನ್ನು ಗೆದ್ದಿದ್ದರೆ, ಎಸ್‌ಪಿ-ಬಿಎಸ್‌ಪಿ ಮೈತ್ರಿಕೂಟ 15 ಸ್ಥಾನಗಳನ್ನು ಗೆದ್ದುಕೊಂಡಿದೆ ಮತ್ತು ಕಾಂಗ್ರೆಸ್ ಕೇವಲ ಒಂದು ಸ್ಥಾನವನ್ನು ಮಾತ್ರ ಗೆಲ್ಲಲು ಸಾಧ್ಯವಾಗಿತ್ತು.

ಲೋಕಸಭೆ ಚುನಾವಣೆಯಲ್ಲಿ 50 ಸ್ಥಾನಗಳಲ್ಲಿ ಸ್ಪರ್ಧಿಸಲು ಕಾಂಗ್ರೆಸ್ ಚಿಂತಿಸಿದೆ ಎಂದು ಪಕ್ಷದ ಮೂಲಗಳು ಈ ಹಿಂದೆ ತಿಳಿಸಿದ್ದವು. 11 ಸ್ಥಾನಗಳ ಮೈತ್ರಿಯನ್ನು ತಿರಸ್ಕರಿಸಿದ ಕಾಂಗ್ರೆಸ್ ನಾಯಕರ ವರದಿಗಳ ನಂತರ, ಸಮಾಜವಾದಿ ಪಕ್ಷವು ಸ್ಪಷ್ಟೀಕರಣವನ್ನು ನೀಡಿದೆ. ಇದು ಪ್ರಸ್ತಾಪವಾಗಿದೆ ಮತ್ತು ಹೆಚ್ಚು ಸ್ಥಾನಗಳನ್ನು ಗೆಲ್ಲುವ ಅಭ್ಯರ್ಥಿಗಳ ಬಗ್ಗೆ ಕಾಂಗ್ರೆಸ್ ಅಖಿಲೇಶ್ ಯಾದವ್ ಅವರಿಗೆ ತಿಳಿಸಿದರೆ ಅದನ್ನು ಹೆಚ್ಚಿಸಬಹುದು ಎಂದು ಹೇಳಿಕೊಂಡಿದೆ.

ಶುಕ್ರವಾರ ಇಂಡಿಯಾ ಟುಡೇಗೆ ನೀಡಿದ ಸಂದರ್ಶನದಲ್ಲಿ ಅಖಿಲೇಶ್ ಯಾದವ್ ಅವರು INDIA ಬಣದಲ್ಲಿ ನಡೆಯುತ್ತಿರುವ ಬಿರುಕುಗಳಿಗೆ ಕಾಂಗ್ರೆಸ್‌ನ್ನು ದೂಷಿಸಿದ್ದಾರೆ ಮತ್ತು ಮೈತ್ರಿ ಪಾಲುದಾರರೊಂದಿಗೆ ಚರ್ಚಿಸಲು ಮತ್ತು ತೊಡಗಿಸಿಕೊಳ್ಳಲು ಪಕ್ಷವು ಉತ್ಸಾಹ ತೋರುತ್ತಿಲ್ಲ ಎಂದು ಹೇಳಿದ್ದರು.

ಬಿಹಾರದಲ್ಲಿ ನಿತೀಶ್ ಕುಮಾರ್ ಅವರು ಬಿಜೆಪಿಯೊಂದಿಗಿನ ಸಂಬಂಧವನ್ನು ಕಡಿದುಕೊಂಡ ನಂತರ ತಮ್ಮ ಮಾಜಿ ಬದ್ಧ ಎದುರಾಳಿ ಲಾಲು ಪ್ರಸಾದ್ ಸ್ಥಾಪಿಸಿದ ರಾಷ್ಟ್ರೀಯ ಜನತಾ ದಳದೊಂದಿಗೆ ಮೈತ್ರಿ ಮಾಡಿಕೊಂಡಿದ್ದರು. ಬಿಹಾರದ ಸುದೀರ್ಘ ಅವಧಿಯ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಬಿಜೆಪಿಯನ್ನು ಎದುರಿಸಲು ದೇಶಾದ್ಯಂತ ಎಲ್ಲಾ ಪಕ್ಷಗಳನ್ನು ಒಟ್ಟುಗೂಡಿಸುವ ಪ್ರಯತ್ನವನ್ನು ಕೈಗೊಂಡಿದ್ದರು. ಲೋಕಸಭಾ ಚುನಾವಣೆ ಬಳಿಕ ಮುಖ್ಯಮಂತ್ರಿ ಸ್ಥಾನವನ್ನು ನಿತೀಶ್‌ ಅವರು ತೇಜಸ್ವಿ ಅವರಿಗೆ ಬಿಟ್ಟುಕೊಡಬೇಕು ಎಂದು ಈ ಹಿಂದೆ ಮಾತುಕತೆ ಆಗಿತ್ತು ಎನ್ನಲಾಗಿದೆ. ಅದಕ್ಕೆ ಮತ್ತೆ ಎನ್‌ಡಿಎ ಜೊತೆ ಹೋಗುತ್ತಾರೆ ಎನ್ನಲಾಗಿದೆ. ಅಲ್ಲದೆ ‘ಇಂಡಿಯಾ’ ಮೈತ್ರಿಕೂಟದ ಸಂಚಾಲಕ ಸ್ಥಾನ ಸೇರಿದಂತೆ ಇತರ ವಿಷಯಗಳಿಂದಾಗಿ ನಿತೀಶ್‌ ಮುನಿಸಿಕೊಂಡಿರಬಹುದು ಎಂದೂ ಕಾಂಗ್ರೆಸ್‌ ಮೂಲಗಳು ಹೇಳುತ್ತಿದೆ.

ಇದನ್ನು ಓದಿ: ಮೋದಿ, ಕೇಂದ್ರ ಸರ್ಕಾರವನ್ನು ಟೀಕಿಸಿ ಕಿರುನಾಟಕ ಪ್ರದರ್ಶನ: ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಿದ ಕೇರಳ ಹೈಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...