Homeಮುಖಪುಟಎಸ್ಪಿ-ಕಾಂಗ್ರೆಸ್‌ ಸೀಟು ಹಂಚಿಕೆ ಘೋಷಿಸಿದ ಅಖಿಲೇಶ್‌: ಕಾಂಗ್ರೆಸ್ ಅಸಮ್ಮತಿ!

ಎಸ್ಪಿ-ಕಾಂಗ್ರೆಸ್‌ ಸೀಟು ಹಂಚಿಕೆ ಘೋಷಿಸಿದ ಅಖಿಲೇಶ್‌: ಕಾಂಗ್ರೆಸ್ ಅಸಮ್ಮತಿ!

- Advertisement -
- Advertisement -

ಬಿಹಾರ ಮತ್ತು ಪ.ಬಂಗಾಳದಲ್ಲಿ INDIA ಮೈತ್ರಿಯಲ್ಲಿ ಬಿರುಕು ಮೂಡಿರುವ ಬೆನ್ನಲ್ಲಿ ಸಮಾಜವಾದಿ ಪಕ್ಷದ ಮುಖ್ಯಸ್ಥ ಮತ್ತು ಉತ್ತರಪ್ರದೇಶದ ಮಾಜಿ ಸಿಎಂ ಅಖಿಲೇಶ್ ಯಾದವ್ ಅವರು ಕಾಂಗ್ರೆಸ್ ಜೊತೆಗಿನ ತಮ್ಮ ಪಕ್ಷದ ಮೈತ್ರಿಯು ರಾಜ್ಯದಲ್ಲಿ 11 ಲೋಕಸಭಾ ಸ್ಥಾನಗಳೊಂದಿಗೆ ಆರಂಭವಾಗಿದೆ ಎಂದು ಹೇಳಿಕೊಂಡಿದೆ. ಆದರೆ ಇಂಡಿಯಾ ಟುಡೇ ವರದಿ ಪ್ರಕಾರ ಇದಕ್ಕೆ ಕಾಂಗ್ರೆಸ್‌ ಅಸಮ್ಮತಿಸಿದೆ ಎಂದು ಹೇಳಿದೆ.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಉತ್ತರಪ್ರದೇಶದಲ್ಲಿ ಕಾಂಗ್ರೆಸ್‌ ಜತೆಗೆ ತಮ್ಮ ಪಕ್ಷವು ಮೈತ್ರಿ ಮಾಡಿಕೊಂಡಿರುವುದು ‘ಉತ್ತಮ ಬೆಳವಣಿಗೆ‘ ಎಂದು ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಅಖಿಲೇಶ್‌ ಯಾದವ್‌ ಹೇಳಿದ್ದಾರೆ. ಬಿಹಾರ ಸಿಎಂ ಮತ್ತು ಜನತಾ ದಳ (ಯುನೈಟೆಡ್) ಅಧ್ಯಕ್ಷ ನಿತೀಶ್ ಕುಮಾರ್ ಅವರು ಮಹಾಘಟಬಂಧನ್ ಸರ್ಕಾರವನ್ನು ಉರುಳಿಸಿ ಭಾರತೀಯ ಜನತಾ ಪಾರ್ಟಿ ನೇತೃತ್ವದ ಎನ್‌ಡಿಎಗೆ ಮರಳಬಹುದು ಎಂಬ ಊಹಾಪೋಹಗಳು ಹರಡಿರುವ ಮಧ್ಯೆ ಅಖಿಲೇಶ್ ಅವರು ಹೇಳಿಕೆಯನ್ನು ನೀಡಿದ್ದಾರೆ.

ಕಾಂಗ್ರೆಸ್ ಜೊತೆಗಿನ ನಮ್ಮ ಸೌಹಾರ್ದಯುತ ಮೈತ್ರಿಯು 11 ಪ್ರಬಲ ಸ್ಥಾನಗಳ ಮೈತ್ರಿಯೊಂದಿಗೆ ಉತ್ತಮ ಆರಂಭವಾಗಿದೆ. ಈ ಮೈತ್ರಿಯು ಗೆಲುವಿನ ಸಮೀಕರಣದೊಂದಿಗೆ ಮುಂದುವರಿಯುತ್ತದೆ. INDIA ತಂಡ ಮತ್ತು ‘ಪಿಡಿಎ’ ತಂತ್ರಗಾರಿಕೆ ಇತಿಹಾಸವನ್ನು ಬದಲಾಯಿಸಲಿದೆ ಎಂದು ಅಖಿಲೇಶ್‌ ಯಾದವ್ ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್‌ನಲ್ಲಿ ಹೇಳಿದ್ದಾರೆ.

ಮೂಲಗಳ ಪ್ರಕಾರ, ರಾಜ್ಯದ ಕಾಂಗ್ರೆಸ್ ನಾಯಕತ್ವವು ಈ ಒಪ್ಪಂದವನ್ನು ಒಪ್ಪಿಕೊಂಡಿಲ್ಲ, ನಿರ್ಧಾರವು ಅಖಿಲೇಶ್ ಯಾದವ್ ಅವರದ್ದು, ಕಾಂಗ್ರೆಸ್‌ನದ್ದಲ್ಲ ಎಂದು ಹೇಳಿದೆ.

ಉತ್ತರಪ್ರದೇಶವು 80 ಲೋಕಸಭಾ ಸ್ಥಾನಗಳನ್ನು ಹೊಂದಿದೆ, ಇದು ದೇಶದಲ್ಲೇ ಅತಿ ಹೆಚ್ಚು ಸಂಸತ್‌ ಸ್ಥಾನಗಳನ್ನು ಹೊಂದಿರುವ ರಾಜ್ಯವಾಗಿದೆ. 2019ರ ಚುನಾವಣೆಯಲ್ಲಿ, ಬಿಜೆಪಿ ಮತ್ತು ಅದರ ಮಿತ್ರ ಪಕ್ಷವಾದ ಅಪ್ನಾದಳ(ಎಸ್) 80 ಸ್ಥಾನಗಳಲ್ಲಿ 62 ಸ್ಥಾನಗಳನ್ನು ಗೆದ್ದಿದ್ದರೆ, ಎಸ್‌ಪಿ-ಬಿಎಸ್‌ಪಿ ಮೈತ್ರಿಕೂಟ 15 ಸ್ಥಾನಗಳನ್ನು ಗೆದ್ದುಕೊಂಡಿದೆ ಮತ್ತು ಕಾಂಗ್ರೆಸ್ ಕೇವಲ ಒಂದು ಸ್ಥಾನವನ್ನು ಮಾತ್ರ ಗೆಲ್ಲಲು ಸಾಧ್ಯವಾಗಿತ್ತು.

ಲೋಕಸಭೆ ಚುನಾವಣೆಯಲ್ಲಿ 50 ಸ್ಥಾನಗಳಲ್ಲಿ ಸ್ಪರ್ಧಿಸಲು ಕಾಂಗ್ರೆಸ್ ಚಿಂತಿಸಿದೆ ಎಂದು ಪಕ್ಷದ ಮೂಲಗಳು ಈ ಹಿಂದೆ ತಿಳಿಸಿದ್ದವು. 11 ಸ್ಥಾನಗಳ ಮೈತ್ರಿಯನ್ನು ತಿರಸ್ಕರಿಸಿದ ಕಾಂಗ್ರೆಸ್ ನಾಯಕರ ವರದಿಗಳ ನಂತರ, ಸಮಾಜವಾದಿ ಪಕ್ಷವು ಸ್ಪಷ್ಟೀಕರಣವನ್ನು ನೀಡಿದೆ. ಇದು ಪ್ರಸ್ತಾಪವಾಗಿದೆ ಮತ್ತು ಹೆಚ್ಚು ಸ್ಥಾನಗಳನ್ನು ಗೆಲ್ಲುವ ಅಭ್ಯರ್ಥಿಗಳ ಬಗ್ಗೆ ಕಾಂಗ್ರೆಸ್ ಅಖಿಲೇಶ್ ಯಾದವ್ ಅವರಿಗೆ ತಿಳಿಸಿದರೆ ಅದನ್ನು ಹೆಚ್ಚಿಸಬಹುದು ಎಂದು ಹೇಳಿಕೊಂಡಿದೆ.

ಶುಕ್ರವಾರ ಇಂಡಿಯಾ ಟುಡೇಗೆ ನೀಡಿದ ಸಂದರ್ಶನದಲ್ಲಿ ಅಖಿಲೇಶ್ ಯಾದವ್ ಅವರು INDIA ಬಣದಲ್ಲಿ ನಡೆಯುತ್ತಿರುವ ಬಿರುಕುಗಳಿಗೆ ಕಾಂಗ್ರೆಸ್‌ನ್ನು ದೂಷಿಸಿದ್ದಾರೆ ಮತ್ತು ಮೈತ್ರಿ ಪಾಲುದಾರರೊಂದಿಗೆ ಚರ್ಚಿಸಲು ಮತ್ತು ತೊಡಗಿಸಿಕೊಳ್ಳಲು ಪಕ್ಷವು ಉತ್ಸಾಹ ತೋರುತ್ತಿಲ್ಲ ಎಂದು ಹೇಳಿದ್ದರು.

ಬಿಹಾರದಲ್ಲಿ ನಿತೀಶ್ ಕುಮಾರ್ ಅವರು ಬಿಜೆಪಿಯೊಂದಿಗಿನ ಸಂಬಂಧವನ್ನು ಕಡಿದುಕೊಂಡ ನಂತರ ತಮ್ಮ ಮಾಜಿ ಬದ್ಧ ಎದುರಾಳಿ ಲಾಲು ಪ್ರಸಾದ್ ಸ್ಥಾಪಿಸಿದ ರಾಷ್ಟ್ರೀಯ ಜನತಾ ದಳದೊಂದಿಗೆ ಮೈತ್ರಿ ಮಾಡಿಕೊಂಡಿದ್ದರು. ಬಿಹಾರದ ಸುದೀರ್ಘ ಅವಧಿಯ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಬಿಜೆಪಿಯನ್ನು ಎದುರಿಸಲು ದೇಶಾದ್ಯಂತ ಎಲ್ಲಾ ಪಕ್ಷಗಳನ್ನು ಒಟ್ಟುಗೂಡಿಸುವ ಪ್ರಯತ್ನವನ್ನು ಕೈಗೊಂಡಿದ್ದರು. ಲೋಕಸಭಾ ಚುನಾವಣೆ ಬಳಿಕ ಮುಖ್ಯಮಂತ್ರಿ ಸ್ಥಾನವನ್ನು ನಿತೀಶ್‌ ಅವರು ತೇಜಸ್ವಿ ಅವರಿಗೆ ಬಿಟ್ಟುಕೊಡಬೇಕು ಎಂದು ಈ ಹಿಂದೆ ಮಾತುಕತೆ ಆಗಿತ್ತು ಎನ್ನಲಾಗಿದೆ. ಅದಕ್ಕೆ ಮತ್ತೆ ಎನ್‌ಡಿಎ ಜೊತೆ ಹೋಗುತ್ತಾರೆ ಎನ್ನಲಾಗಿದೆ. ಅಲ್ಲದೆ ‘ಇಂಡಿಯಾ’ ಮೈತ್ರಿಕೂಟದ ಸಂಚಾಲಕ ಸ್ಥಾನ ಸೇರಿದಂತೆ ಇತರ ವಿಷಯಗಳಿಂದಾಗಿ ನಿತೀಶ್‌ ಮುನಿಸಿಕೊಂಡಿರಬಹುದು ಎಂದೂ ಕಾಂಗ್ರೆಸ್‌ ಮೂಲಗಳು ಹೇಳುತ್ತಿದೆ.

ಇದನ್ನು ಓದಿ: ಮೋದಿ, ಕೇಂದ್ರ ಸರ್ಕಾರವನ್ನು ಟೀಕಿಸಿ ಕಿರುನಾಟಕ ಪ್ರದರ್ಶನ: ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಿದ ಕೇರಳ ಹೈಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...