Homeಮುಖಪುಟಎಸ್ಪಿ-ಕಾಂಗ್ರೆಸ್‌ ಸೀಟು ಹಂಚಿಕೆ ಘೋಷಿಸಿದ ಅಖಿಲೇಶ್‌: ಕಾಂಗ್ರೆಸ್ ಅಸಮ್ಮತಿ!

ಎಸ್ಪಿ-ಕಾಂಗ್ರೆಸ್‌ ಸೀಟು ಹಂಚಿಕೆ ಘೋಷಿಸಿದ ಅಖಿಲೇಶ್‌: ಕಾಂಗ್ರೆಸ್ ಅಸಮ್ಮತಿ!

- Advertisement -
- Advertisement -

ಬಿಹಾರ ಮತ್ತು ಪ.ಬಂಗಾಳದಲ್ಲಿ INDIA ಮೈತ್ರಿಯಲ್ಲಿ ಬಿರುಕು ಮೂಡಿರುವ ಬೆನ್ನಲ್ಲಿ ಸಮಾಜವಾದಿ ಪಕ್ಷದ ಮುಖ್ಯಸ್ಥ ಮತ್ತು ಉತ್ತರಪ್ರದೇಶದ ಮಾಜಿ ಸಿಎಂ ಅಖಿಲೇಶ್ ಯಾದವ್ ಅವರು ಕಾಂಗ್ರೆಸ್ ಜೊತೆಗಿನ ತಮ್ಮ ಪಕ್ಷದ ಮೈತ್ರಿಯು ರಾಜ್ಯದಲ್ಲಿ 11 ಲೋಕಸಭಾ ಸ್ಥಾನಗಳೊಂದಿಗೆ ಆರಂಭವಾಗಿದೆ ಎಂದು ಹೇಳಿಕೊಂಡಿದೆ. ಆದರೆ ಇಂಡಿಯಾ ಟುಡೇ ವರದಿ ಪ್ರಕಾರ ಇದಕ್ಕೆ ಕಾಂಗ್ರೆಸ್‌ ಅಸಮ್ಮತಿಸಿದೆ ಎಂದು ಹೇಳಿದೆ.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಉತ್ತರಪ್ರದೇಶದಲ್ಲಿ ಕಾಂಗ್ರೆಸ್‌ ಜತೆಗೆ ತಮ್ಮ ಪಕ್ಷವು ಮೈತ್ರಿ ಮಾಡಿಕೊಂಡಿರುವುದು ‘ಉತ್ತಮ ಬೆಳವಣಿಗೆ‘ ಎಂದು ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಅಖಿಲೇಶ್‌ ಯಾದವ್‌ ಹೇಳಿದ್ದಾರೆ. ಬಿಹಾರ ಸಿಎಂ ಮತ್ತು ಜನತಾ ದಳ (ಯುನೈಟೆಡ್) ಅಧ್ಯಕ್ಷ ನಿತೀಶ್ ಕುಮಾರ್ ಅವರು ಮಹಾಘಟಬಂಧನ್ ಸರ್ಕಾರವನ್ನು ಉರುಳಿಸಿ ಭಾರತೀಯ ಜನತಾ ಪಾರ್ಟಿ ನೇತೃತ್ವದ ಎನ್‌ಡಿಎಗೆ ಮರಳಬಹುದು ಎಂಬ ಊಹಾಪೋಹಗಳು ಹರಡಿರುವ ಮಧ್ಯೆ ಅಖಿಲೇಶ್ ಅವರು ಹೇಳಿಕೆಯನ್ನು ನೀಡಿದ್ದಾರೆ.

ಕಾಂಗ್ರೆಸ್ ಜೊತೆಗಿನ ನಮ್ಮ ಸೌಹಾರ್ದಯುತ ಮೈತ್ರಿಯು 11 ಪ್ರಬಲ ಸ್ಥಾನಗಳ ಮೈತ್ರಿಯೊಂದಿಗೆ ಉತ್ತಮ ಆರಂಭವಾಗಿದೆ. ಈ ಮೈತ್ರಿಯು ಗೆಲುವಿನ ಸಮೀಕರಣದೊಂದಿಗೆ ಮುಂದುವರಿಯುತ್ತದೆ. INDIA ತಂಡ ಮತ್ತು ‘ಪಿಡಿಎ’ ತಂತ್ರಗಾರಿಕೆ ಇತಿಹಾಸವನ್ನು ಬದಲಾಯಿಸಲಿದೆ ಎಂದು ಅಖಿಲೇಶ್‌ ಯಾದವ್ ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್‌ನಲ್ಲಿ ಹೇಳಿದ್ದಾರೆ.

ಮೂಲಗಳ ಪ್ರಕಾರ, ರಾಜ್ಯದ ಕಾಂಗ್ರೆಸ್ ನಾಯಕತ್ವವು ಈ ಒಪ್ಪಂದವನ್ನು ಒಪ್ಪಿಕೊಂಡಿಲ್ಲ, ನಿರ್ಧಾರವು ಅಖಿಲೇಶ್ ಯಾದವ್ ಅವರದ್ದು, ಕಾಂಗ್ರೆಸ್‌ನದ್ದಲ್ಲ ಎಂದು ಹೇಳಿದೆ.

ಉತ್ತರಪ್ರದೇಶವು 80 ಲೋಕಸಭಾ ಸ್ಥಾನಗಳನ್ನು ಹೊಂದಿದೆ, ಇದು ದೇಶದಲ್ಲೇ ಅತಿ ಹೆಚ್ಚು ಸಂಸತ್‌ ಸ್ಥಾನಗಳನ್ನು ಹೊಂದಿರುವ ರಾಜ್ಯವಾಗಿದೆ. 2019ರ ಚುನಾವಣೆಯಲ್ಲಿ, ಬಿಜೆಪಿ ಮತ್ತು ಅದರ ಮಿತ್ರ ಪಕ್ಷವಾದ ಅಪ್ನಾದಳ(ಎಸ್) 80 ಸ್ಥಾನಗಳಲ್ಲಿ 62 ಸ್ಥಾನಗಳನ್ನು ಗೆದ್ದಿದ್ದರೆ, ಎಸ್‌ಪಿ-ಬಿಎಸ್‌ಪಿ ಮೈತ್ರಿಕೂಟ 15 ಸ್ಥಾನಗಳನ್ನು ಗೆದ್ದುಕೊಂಡಿದೆ ಮತ್ತು ಕಾಂಗ್ರೆಸ್ ಕೇವಲ ಒಂದು ಸ್ಥಾನವನ್ನು ಮಾತ್ರ ಗೆಲ್ಲಲು ಸಾಧ್ಯವಾಗಿತ್ತು.

ಲೋಕಸಭೆ ಚುನಾವಣೆಯಲ್ಲಿ 50 ಸ್ಥಾನಗಳಲ್ಲಿ ಸ್ಪರ್ಧಿಸಲು ಕಾಂಗ್ರೆಸ್ ಚಿಂತಿಸಿದೆ ಎಂದು ಪಕ್ಷದ ಮೂಲಗಳು ಈ ಹಿಂದೆ ತಿಳಿಸಿದ್ದವು. 11 ಸ್ಥಾನಗಳ ಮೈತ್ರಿಯನ್ನು ತಿರಸ್ಕರಿಸಿದ ಕಾಂಗ್ರೆಸ್ ನಾಯಕರ ವರದಿಗಳ ನಂತರ, ಸಮಾಜವಾದಿ ಪಕ್ಷವು ಸ್ಪಷ್ಟೀಕರಣವನ್ನು ನೀಡಿದೆ. ಇದು ಪ್ರಸ್ತಾಪವಾಗಿದೆ ಮತ್ತು ಹೆಚ್ಚು ಸ್ಥಾನಗಳನ್ನು ಗೆಲ್ಲುವ ಅಭ್ಯರ್ಥಿಗಳ ಬಗ್ಗೆ ಕಾಂಗ್ರೆಸ್ ಅಖಿಲೇಶ್ ಯಾದವ್ ಅವರಿಗೆ ತಿಳಿಸಿದರೆ ಅದನ್ನು ಹೆಚ್ಚಿಸಬಹುದು ಎಂದು ಹೇಳಿಕೊಂಡಿದೆ.

ಶುಕ್ರವಾರ ಇಂಡಿಯಾ ಟುಡೇಗೆ ನೀಡಿದ ಸಂದರ್ಶನದಲ್ಲಿ ಅಖಿಲೇಶ್ ಯಾದವ್ ಅವರು INDIA ಬಣದಲ್ಲಿ ನಡೆಯುತ್ತಿರುವ ಬಿರುಕುಗಳಿಗೆ ಕಾಂಗ್ರೆಸ್‌ನ್ನು ದೂಷಿಸಿದ್ದಾರೆ ಮತ್ತು ಮೈತ್ರಿ ಪಾಲುದಾರರೊಂದಿಗೆ ಚರ್ಚಿಸಲು ಮತ್ತು ತೊಡಗಿಸಿಕೊಳ್ಳಲು ಪಕ್ಷವು ಉತ್ಸಾಹ ತೋರುತ್ತಿಲ್ಲ ಎಂದು ಹೇಳಿದ್ದರು.

ಬಿಹಾರದಲ್ಲಿ ನಿತೀಶ್ ಕುಮಾರ್ ಅವರು ಬಿಜೆಪಿಯೊಂದಿಗಿನ ಸಂಬಂಧವನ್ನು ಕಡಿದುಕೊಂಡ ನಂತರ ತಮ್ಮ ಮಾಜಿ ಬದ್ಧ ಎದುರಾಳಿ ಲಾಲು ಪ್ರಸಾದ್ ಸ್ಥಾಪಿಸಿದ ರಾಷ್ಟ್ರೀಯ ಜನತಾ ದಳದೊಂದಿಗೆ ಮೈತ್ರಿ ಮಾಡಿಕೊಂಡಿದ್ದರು. ಬಿಹಾರದ ಸುದೀರ್ಘ ಅವಧಿಯ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಬಿಜೆಪಿಯನ್ನು ಎದುರಿಸಲು ದೇಶಾದ್ಯಂತ ಎಲ್ಲಾ ಪಕ್ಷಗಳನ್ನು ಒಟ್ಟುಗೂಡಿಸುವ ಪ್ರಯತ್ನವನ್ನು ಕೈಗೊಂಡಿದ್ದರು. ಲೋಕಸಭಾ ಚುನಾವಣೆ ಬಳಿಕ ಮುಖ್ಯಮಂತ್ರಿ ಸ್ಥಾನವನ್ನು ನಿತೀಶ್‌ ಅವರು ತೇಜಸ್ವಿ ಅವರಿಗೆ ಬಿಟ್ಟುಕೊಡಬೇಕು ಎಂದು ಈ ಹಿಂದೆ ಮಾತುಕತೆ ಆಗಿತ್ತು ಎನ್ನಲಾಗಿದೆ. ಅದಕ್ಕೆ ಮತ್ತೆ ಎನ್‌ಡಿಎ ಜೊತೆ ಹೋಗುತ್ತಾರೆ ಎನ್ನಲಾಗಿದೆ. ಅಲ್ಲದೆ ‘ಇಂಡಿಯಾ’ ಮೈತ್ರಿಕೂಟದ ಸಂಚಾಲಕ ಸ್ಥಾನ ಸೇರಿದಂತೆ ಇತರ ವಿಷಯಗಳಿಂದಾಗಿ ನಿತೀಶ್‌ ಮುನಿಸಿಕೊಂಡಿರಬಹುದು ಎಂದೂ ಕಾಂಗ್ರೆಸ್‌ ಮೂಲಗಳು ಹೇಳುತ್ತಿದೆ.

ಇದನ್ನು ಓದಿ: ಮೋದಿ, ಕೇಂದ್ರ ಸರ್ಕಾರವನ್ನು ಟೀಕಿಸಿ ಕಿರುನಾಟಕ ಪ್ರದರ್ಶನ: ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಿದ ಕೇರಳ ಹೈಕೋರ್ಟ್‌

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ದೌರ್ಜನ್ಯ ಪ್ರಕರಣ : ರೇವಣ್ಣ, ಪ್ರಜ್ವಲ್‌ಗೆ ಎಸ್‌ಐಟಿ ನೋಟಿಸ್

0
ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಗೆ ಹಾಜರಾಗಲು ಆರೋಪಿಗಳಾದ ಹೆಚ್‌.ಡಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣಗೆ ಎಸ್ಐಟಿ ಅಧಿಕಾರಿಗಳು ಇಂದು (ಏ.30) ನೋಟಿಸ್ ಜಾರಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಹಾಸನದ ಹೊಳೆನರಸೀಪುರ ನಗರ...