Homeಮುಖಪುಟಇವಿಎಂ ಜನರ ಮನಸ್ಸಿನಲ್ಲಿ ಅಪನಂಬಿಕೆ ಸೃಷ್ಟಿಸಿದೆ: ಅಖಿಲೇಶ್ ಯಾದವ್

ಇವಿಎಂ ಜನರ ಮನಸ್ಸಿನಲ್ಲಿ ಅಪನಂಬಿಕೆ ಸೃಷ್ಟಿಸಿದೆ: ಅಖಿಲೇಶ್ ಯಾದವ್

- Advertisement -
- Advertisement -

ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್‌ ಬಳಕೆಗೆ ಆಗ್ರಹಿಸಿದ್ದು, ಇವಿಎಂಗಳನ್ನು ನೇರವಾಗಿ ಉಲ್ಲೇಖಿಸದೆ ಈ ಯಂತ್ರಗಳು ಮತ್ತು ಮತದಾನದ ಫಲಿತಾಂಶಗಳು ಜನರ ಮನಸ್ಸಿನಲ್ಲಿ ಅಪನಂಬಿಕೆಯ ಭಾವನೆಯನ್ನು ಮೂಡಿಸಿವೆ ಎಂದು ಹೇಳಿದ್ದಾರೆ.

ಅಮೆರಿಕ ಚುನಾವಣೆಯ ಬಗ್ಗೆ ಉದಾಹರಣೆಯನ್ನು ನೀಡಿದ ಯಾದವ್, ಭಾರತವು ಬರ್ಗರ್, ಪಿಝ್ಝಾ ಮತ್ತು ಜೀನ್ಸ್‌ನಲ್ಲಿ ಅಮೆರಿಕನ್ನರನ್ನು ಅನುಸರಿಸುತ್ತಿದೆ. ಅದರಂತೆ ಬ್ಯಾಲೆಟ್ ಪೇಪರ್‌ಗಳ ಬಳಕೆಯನ್ನು ಕೂಡ ಅನುಸರಿಸಬೇಕು ಎಂದು ಹೇಳಿದ್ದಾರೆ.

ನಾವು ತಂತ್ರಜ್ಞಾನವನ್ನು ಅರ್ಥಮಾಡಿಕೊಳ್ಳುತ್ತೇವೆ ಎಂದು ನಾನು ಹಲವಾರು ಬಾರಿ ಹೇಳಿದ್ದೆ. ನಾವು ತಂತ್ರಜ್ಞಾನದೊಂದಿಗೆ ಬೆಳೆದಿದ್ದೇವೆ. ಯುಪಿಯಲ್ಲಿ ಎಸ್‌ಪಿ ಸರ್ಕಾರವು ಗರಿಷ್ಠ ಸಂಖ್ಯೆಯ ಲ್ಯಾಪ್‌ಟಾಪ್‌ಗಳನ್ನು ವಿತರಿಸಿದೆ ಎಂದು ಹೇಳಿದ್ದಾರೆ.

ವಿಶ್ವದ ಅತ್ಯಂತ ಶಕ್ತಿಶಾಲಿ ದೇಶ ಅಮೆರಿಕ. ಅಲ್ಲಿ ತಿಂಗಳುಗಟ್ಟಲೆ ಮತದಾನ ಮಾಡಲಾಗುತ್ತದೆ ಮತ್ತು ನಂತರ ಎಣಿಕೆಗಾಗಿ ಸಮಯಾವಕಾಶವನ್ನು ತೆಗೆದುಕೊಳ್ಳಲಾಗುತ್ತದೆ. ಅಷ್ಟು ಪಾರದರ್ಶಕತೆಯಿಂದ ಮಾಡುತ್ತಾರೆ ಎಂದು ಹೇಳಿದ್ದಾರೆ.

140 ಕೋಟಿಗೂ ಹೆಚ್ಚು ಜನರು ದೇಶದ ಭವಿಷ್ಯವನ್ನು ನಿರ್ಧರಿಸುತ್ತಾರೆ. ನೀವು 3 ಗಂಟೆಗಳಲ್ಲಿ ಫಲಿತಾಂಶವನ್ನು ಏಕೆ ಬಯಸುತ್ತೀರಿ? ಒಂದು ತಿಂಗಳು ಏಕೆ ಎಣಿಕೆ ಮಾಡಬಾರದು? ಇಂದು ನಾವು ಬರ್ಗರ್, ಪಿಝ್ಝಾ ಅಥವಾ ಜೀನ್ಸ್ ಪ್ರತಿಯೊಂದು ವಿಚಾರದಲ್ಲೂ ಯುಎಸ್‌ನ್ನು ಅನುಸರಿಸುತ್ತಿದ್ದೇವೆ. ಅದರಂತೆ ನಾವು ಬ್ಯಾಲೆಟ್ ಪೇಪರ್‌ಗಳನ್ನು ಕೂಡ ನಕಲಿಸಬೇಕು ಎಂದು ಹೇಳಿದ್ದಾರೆ.

ಇತ್ತೀಚೆಗೆ ಉತ್ತರಾಖಂಡದ ಸುರಂಗದಲ್ಲಿ ರಕ್ಷಣಾ ಕಾರ್ಯಾಚರಣೆಯ ಸಂದರ್ಭದಲ್ಲಿ ಯುಎಸ್ ಯಂತ್ರಗಳು ವಿಫಲವಾಗಿದ್ದವು. ದೇಶದ ಯುವಕರು ಪ್ರಾಣವನ್ನು ಉಳಿಸಿದರು. 2022ರಲ್ಲಿ ಉತ್ತರಪ್ರದೇಶ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಪ್ರತಿ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯಿಂದ ಯಾದವ್‌ ಮತ್ತು ಮುಸ್ಲಿಂ ಸಮುದಾಯದ ಮತದಾರರನ್ನು ಸಾಮೂಹಿಕವಾಗಿ ಅಳಿಸಲಾಗಿದೆ ಎಂಬ ಆರೋಪವನ್ನು ಸಾಬೀತುಪಡಿಸಲು ಭಾರತದ ಚುನಾವಣಾ ಆಯೋಗವು ನನಗೆ ನೋಟಿಸ್ ನೀಡಿದೆ. ನಾನು ಮತದಾರರ ಹೆಸರುಗಳನ್ನು  ಅಫಿಡವಿಟ್‌ಗಳೊಂದಿಗೆ ಚುನಾವಣಾ ಆಯೋಗಕ್ಕೆ ಕಳುಹಿಸಿದ್ದೆ, ಆದರೆ ಆ ಅಧಿಕಾರಿಗಳ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು  ಅವರು ಇದೇ ವೇಳೆ ಹೇಳಿದ್ದಾರೆ.

ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಸೇರಿದಂತೆ ಇತರ ಹಲವು ನಾಯಕರು, ಡೇಟಾ ದುರ್ಬಳಕೆ ಮತ್ತು ತಿರುಚುವಿಕೆ ಸಾಧ್ಯತೆ ಇರುವುದರಿಂದ ಎಲೆಕ್ಟ್ರಾನಿಕ್ ಯಂತ್ರಗಳನ್ನು ಬಳಸಬಾರದು. ಹಲವು ದೇಶಗಳಲ್ಲಿ ಇವಿಎಂ ಬಳಸುತ್ತಿಲ್ಲ ಎಂದು ಹೇಳಿದ್ದರು. ಎಕ್ಸಿಟ್ ಪೋಲ್‌ಗಳು ಪ್ರತಿಪಕ್ಷಗಳ ಗೆಲುವಿನ ಭವಿಷ್ಯ ನುಡಿದಿರುವ ಛತ್ತೀಸ್‌ಗಢದಂತಹ ರಾಜ್ಯಗಳಲ್ಲಿಯೂ ಕೂಡ ಬಿಜೆಪಿ ಚುನಾವಣೆಯನ್ನು ಗೆದ್ದ ನಂತರ ಇವಿಎಂ ದುರ್ಬಳಕೆಯ ಬಗ್ಗೆ ಮತ್ತೆ ಪ್ರಶ್ನೆಗಳು ಕಾಡುತ್ತಿದೆ.

ಇದನ್ನು ಓದಿ: ಗಾಝಾದಲ್ಲಿ ಮಕ್ಕಳ ರಕ್ತಪಾತಕ್ಕೆ ಅಮೆರಿಕ ನೇರ ಹೊಣೆ: ಪ್ಯಾಲೆಸ್ತೀನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ: ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಇಬ್ಬರು ಮದರಸಾ ಶಿಕ್ಷಕರ ಬಂಧನ

ಹತ್ತು ವರ್ಷದ ವಿದ್ಯಾರ್ಥಿಯೊಬ್ಬನನ್ನು ಥಳಿಸಿದ ಆರೋಪದ ಮೇಲೆ ಇಬ್ಬರು ಮದರಸಾ ಶಿಕ್ಷಕರನ್ನು ಬಂಧಿಸಿರುವುದಾಗಿ ಉತ್ತರ ಪ್ರದೇಶ ಪೊಲೀಸರು ಶನಿವಾರ ತಿಳಿಸಿದ್ದಾರೆ.  ಈ ಸಂಬಂಧ ವೀಡಿಯೊ ಅಂತರ್ಜಾಲದಲ್ಲಿ ವೈರಲ್ ಆಗಿದ್ದು, ದಿನಾಂಕವಿಲ್ಲದ ವೀಡಿಯೊದಲ್ಲಿ ಒಬ್ಬ ಮದರಸಾ...

ಕೊಡಗು | ಚಾರಣಕ್ಕೆ ತೆರಳಿದ್ದ ಯುವತಿ ನಾಪತ್ತೆ ಪ್ರಕರಣ : 3 ದಿನ ಕಳೆದರೂ ಸಿಗದ ಸುಳಿವು, ಎಎನ್‌ಎಫ್‌ನಿಂದ ತೀವ್ರ ಶೋಧ

ಕೊಡಗು ಜಿಲ್ಲೆಯ ಕಕ್ಕಬ್ಬೆ ಸಮೀಪದ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿದ್ದ ಕೇರಳ ಮೂಲದ ಯುವತಿಯೊಬ್ಬರು ಮೂರು ದಿನಗಳಿಂದ ನಾಪತ್ತೆಯಾಗಿದ್ದಾರೆ. ಅವರಿಗಾಗಿ ಶೋಧ ಕಾರ್ಯ ನಡೆಯುತ್ತಿದ್ದು, ಇನ್ನೂ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ. ನಾಪತ್ತೆಯಾಗಿರುವ ಯುವತಿಯನ್ನು ಕೇರಳದ...

ಭವಿಷ್ಯದ ಸಂಘರ್ಷದಲ್ಲಿ ಪಾಕಿಸ್ತಾನ ಕೋಲ್ಕತ್ತಾ ಮೇಲೆ ದಾಳಿ ಮಾಡುತ್ತದೆ: ಪಾಕ್ ರಕ್ಷಣಾ ಸಚಿವ ಖವಾಜಾ ಆಸಿಫ್

 ಲಾಹೋರ್: ಭವಿಷ್ಯದಲ್ಲಿ ಯಾವುದೇ ದುಸ್ಸಾಹಸಗಳು ನಡೆದರೆ ಕೋಲ್ಕತ್ತಾದಲ್ಲಿ ದಾಳಿ ನಡೆಸುವ ಮೂಲಕ ಭಾರತಕ್ಕೆ ಪ್ರತ್ಯುತ್ತರ ನೀಡುವುದಾಗಿ ಪಾಕಿಸ್ತಾನ ರಕ್ಷಣಾ ಸಚಿವ ಖವಾಜಾ ಆಸಿಫ್ ಶನಿವಾರ ಎಚ್ಚರಿಕೆ ನೀಡಿದ್ದಾರೆ. "ಈ ಬಾರಿ ಭಾರತ ಯಾವುದೇ ಸುಳ್ಳು...

ಮಾಗಡಿ ಕಾಂಗ್ರೆಸ್ ಶಾಸಕ ಬಾಲಕೃಷ್ಣ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ

2018ರ ವಿಧಾನಸಭಾ ಚುನಾವಣೆಯ ವೇಳೆ ದಾಖಲಾಗಿದ್ದ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ ಮಾಗಡಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಹೆಚ್.ಸಿ ಬಾಲಕೃಷ್ಣ ವಿರುದ್ಧ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ (42ನೇ ಎಸಿಎಂಎಂ ಕೋರ್ಟ್) ಜಾಮೀನು...

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...