Homeಮುಖಪುಟಇವಿಎಂ ಜನರ ಮನಸ್ಸಿನಲ್ಲಿ ಅಪನಂಬಿಕೆ ಸೃಷ್ಟಿಸಿದೆ: ಅಖಿಲೇಶ್ ಯಾದವ್

ಇವಿಎಂ ಜನರ ಮನಸ್ಸಿನಲ್ಲಿ ಅಪನಂಬಿಕೆ ಸೃಷ್ಟಿಸಿದೆ: ಅಖಿಲೇಶ್ ಯಾದವ್

- Advertisement -
- Advertisement -

ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್‌ ಬಳಕೆಗೆ ಆಗ್ರಹಿಸಿದ್ದು, ಇವಿಎಂಗಳನ್ನು ನೇರವಾಗಿ ಉಲ್ಲೇಖಿಸದೆ ಈ ಯಂತ್ರಗಳು ಮತ್ತು ಮತದಾನದ ಫಲಿತಾಂಶಗಳು ಜನರ ಮನಸ್ಸಿನಲ್ಲಿ ಅಪನಂಬಿಕೆಯ ಭಾವನೆಯನ್ನು ಮೂಡಿಸಿವೆ ಎಂದು ಹೇಳಿದ್ದಾರೆ.

ಅಮೆರಿಕ ಚುನಾವಣೆಯ ಬಗ್ಗೆ ಉದಾಹರಣೆಯನ್ನು ನೀಡಿದ ಯಾದವ್, ಭಾರತವು ಬರ್ಗರ್, ಪಿಝ್ಝಾ ಮತ್ತು ಜೀನ್ಸ್‌ನಲ್ಲಿ ಅಮೆರಿಕನ್ನರನ್ನು ಅನುಸರಿಸುತ್ತಿದೆ. ಅದರಂತೆ ಬ್ಯಾಲೆಟ್ ಪೇಪರ್‌ಗಳ ಬಳಕೆಯನ್ನು ಕೂಡ ಅನುಸರಿಸಬೇಕು ಎಂದು ಹೇಳಿದ್ದಾರೆ.

ನಾವು ತಂತ್ರಜ್ಞಾನವನ್ನು ಅರ್ಥಮಾಡಿಕೊಳ್ಳುತ್ತೇವೆ ಎಂದು ನಾನು ಹಲವಾರು ಬಾರಿ ಹೇಳಿದ್ದೆ. ನಾವು ತಂತ್ರಜ್ಞಾನದೊಂದಿಗೆ ಬೆಳೆದಿದ್ದೇವೆ. ಯುಪಿಯಲ್ಲಿ ಎಸ್‌ಪಿ ಸರ್ಕಾರವು ಗರಿಷ್ಠ ಸಂಖ್ಯೆಯ ಲ್ಯಾಪ್‌ಟಾಪ್‌ಗಳನ್ನು ವಿತರಿಸಿದೆ ಎಂದು ಹೇಳಿದ್ದಾರೆ.

ವಿಶ್ವದ ಅತ್ಯಂತ ಶಕ್ತಿಶಾಲಿ ದೇಶ ಅಮೆರಿಕ. ಅಲ್ಲಿ ತಿಂಗಳುಗಟ್ಟಲೆ ಮತದಾನ ಮಾಡಲಾಗುತ್ತದೆ ಮತ್ತು ನಂತರ ಎಣಿಕೆಗಾಗಿ ಸಮಯಾವಕಾಶವನ್ನು ತೆಗೆದುಕೊಳ್ಳಲಾಗುತ್ತದೆ. ಅಷ್ಟು ಪಾರದರ್ಶಕತೆಯಿಂದ ಮಾಡುತ್ತಾರೆ ಎಂದು ಹೇಳಿದ್ದಾರೆ.

140 ಕೋಟಿಗೂ ಹೆಚ್ಚು ಜನರು ದೇಶದ ಭವಿಷ್ಯವನ್ನು ನಿರ್ಧರಿಸುತ್ತಾರೆ. ನೀವು 3 ಗಂಟೆಗಳಲ್ಲಿ ಫಲಿತಾಂಶವನ್ನು ಏಕೆ ಬಯಸುತ್ತೀರಿ? ಒಂದು ತಿಂಗಳು ಏಕೆ ಎಣಿಕೆ ಮಾಡಬಾರದು? ಇಂದು ನಾವು ಬರ್ಗರ್, ಪಿಝ್ಝಾ ಅಥವಾ ಜೀನ್ಸ್ ಪ್ರತಿಯೊಂದು ವಿಚಾರದಲ್ಲೂ ಯುಎಸ್‌ನ್ನು ಅನುಸರಿಸುತ್ತಿದ್ದೇವೆ. ಅದರಂತೆ ನಾವು ಬ್ಯಾಲೆಟ್ ಪೇಪರ್‌ಗಳನ್ನು ಕೂಡ ನಕಲಿಸಬೇಕು ಎಂದು ಹೇಳಿದ್ದಾರೆ.

ಇತ್ತೀಚೆಗೆ ಉತ್ತರಾಖಂಡದ ಸುರಂಗದಲ್ಲಿ ರಕ್ಷಣಾ ಕಾರ್ಯಾಚರಣೆಯ ಸಂದರ್ಭದಲ್ಲಿ ಯುಎಸ್ ಯಂತ್ರಗಳು ವಿಫಲವಾಗಿದ್ದವು. ದೇಶದ ಯುವಕರು ಪ್ರಾಣವನ್ನು ಉಳಿಸಿದರು. 2022ರಲ್ಲಿ ಉತ್ತರಪ್ರದೇಶ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಪ್ರತಿ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯಿಂದ ಯಾದವ್‌ ಮತ್ತು ಮುಸ್ಲಿಂ ಸಮುದಾಯದ ಮತದಾರರನ್ನು ಸಾಮೂಹಿಕವಾಗಿ ಅಳಿಸಲಾಗಿದೆ ಎಂಬ ಆರೋಪವನ್ನು ಸಾಬೀತುಪಡಿಸಲು ಭಾರತದ ಚುನಾವಣಾ ಆಯೋಗವು ನನಗೆ ನೋಟಿಸ್ ನೀಡಿದೆ. ನಾನು ಮತದಾರರ ಹೆಸರುಗಳನ್ನು  ಅಫಿಡವಿಟ್‌ಗಳೊಂದಿಗೆ ಚುನಾವಣಾ ಆಯೋಗಕ್ಕೆ ಕಳುಹಿಸಿದ್ದೆ, ಆದರೆ ಆ ಅಧಿಕಾರಿಗಳ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು  ಅವರು ಇದೇ ವೇಳೆ ಹೇಳಿದ್ದಾರೆ.

ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಸೇರಿದಂತೆ ಇತರ ಹಲವು ನಾಯಕರು, ಡೇಟಾ ದುರ್ಬಳಕೆ ಮತ್ತು ತಿರುಚುವಿಕೆ ಸಾಧ್ಯತೆ ಇರುವುದರಿಂದ ಎಲೆಕ್ಟ್ರಾನಿಕ್ ಯಂತ್ರಗಳನ್ನು ಬಳಸಬಾರದು. ಹಲವು ದೇಶಗಳಲ್ಲಿ ಇವಿಎಂ ಬಳಸುತ್ತಿಲ್ಲ ಎಂದು ಹೇಳಿದ್ದರು. ಎಕ್ಸಿಟ್ ಪೋಲ್‌ಗಳು ಪ್ರತಿಪಕ್ಷಗಳ ಗೆಲುವಿನ ಭವಿಷ್ಯ ನುಡಿದಿರುವ ಛತ್ತೀಸ್‌ಗಢದಂತಹ ರಾಜ್ಯಗಳಲ್ಲಿಯೂ ಕೂಡ ಬಿಜೆಪಿ ಚುನಾವಣೆಯನ್ನು ಗೆದ್ದ ನಂತರ ಇವಿಎಂ ದುರ್ಬಳಕೆಯ ಬಗ್ಗೆ ಮತ್ತೆ ಪ್ರಶ್ನೆಗಳು ಕಾಡುತ್ತಿದೆ.

ಇದನ್ನು ಓದಿ: ಗಾಝಾದಲ್ಲಿ ಮಕ್ಕಳ ರಕ್ತಪಾತಕ್ಕೆ ಅಮೆರಿಕ ನೇರ ಹೊಣೆ: ಪ್ಯಾಲೆಸ್ತೀನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...