Homeಮುಖಪುಟಇವಿಎಂ ಜನರ ಮನಸ್ಸಿನಲ್ಲಿ ಅಪನಂಬಿಕೆ ಸೃಷ್ಟಿಸಿದೆ: ಅಖಿಲೇಶ್ ಯಾದವ್

ಇವಿಎಂ ಜನರ ಮನಸ್ಸಿನಲ್ಲಿ ಅಪನಂಬಿಕೆ ಸೃಷ್ಟಿಸಿದೆ: ಅಖಿಲೇಶ್ ಯಾದವ್

- Advertisement -
- Advertisement -

ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್‌ ಬಳಕೆಗೆ ಆಗ್ರಹಿಸಿದ್ದು, ಇವಿಎಂಗಳನ್ನು ನೇರವಾಗಿ ಉಲ್ಲೇಖಿಸದೆ ಈ ಯಂತ್ರಗಳು ಮತ್ತು ಮತದಾನದ ಫಲಿತಾಂಶಗಳು ಜನರ ಮನಸ್ಸಿನಲ್ಲಿ ಅಪನಂಬಿಕೆಯ ಭಾವನೆಯನ್ನು ಮೂಡಿಸಿವೆ ಎಂದು ಹೇಳಿದ್ದಾರೆ.

ಅಮೆರಿಕ ಚುನಾವಣೆಯ ಬಗ್ಗೆ ಉದಾಹರಣೆಯನ್ನು ನೀಡಿದ ಯಾದವ್, ಭಾರತವು ಬರ್ಗರ್, ಪಿಝ್ಝಾ ಮತ್ತು ಜೀನ್ಸ್‌ನಲ್ಲಿ ಅಮೆರಿಕನ್ನರನ್ನು ಅನುಸರಿಸುತ್ತಿದೆ. ಅದರಂತೆ ಬ್ಯಾಲೆಟ್ ಪೇಪರ್‌ಗಳ ಬಳಕೆಯನ್ನು ಕೂಡ ಅನುಸರಿಸಬೇಕು ಎಂದು ಹೇಳಿದ್ದಾರೆ.

ನಾವು ತಂತ್ರಜ್ಞಾನವನ್ನು ಅರ್ಥಮಾಡಿಕೊಳ್ಳುತ್ತೇವೆ ಎಂದು ನಾನು ಹಲವಾರು ಬಾರಿ ಹೇಳಿದ್ದೆ. ನಾವು ತಂತ್ರಜ್ಞಾನದೊಂದಿಗೆ ಬೆಳೆದಿದ್ದೇವೆ. ಯುಪಿಯಲ್ಲಿ ಎಸ್‌ಪಿ ಸರ್ಕಾರವು ಗರಿಷ್ಠ ಸಂಖ್ಯೆಯ ಲ್ಯಾಪ್‌ಟಾಪ್‌ಗಳನ್ನು ವಿತರಿಸಿದೆ ಎಂದು ಹೇಳಿದ್ದಾರೆ.

ವಿಶ್ವದ ಅತ್ಯಂತ ಶಕ್ತಿಶಾಲಿ ದೇಶ ಅಮೆರಿಕ. ಅಲ್ಲಿ ತಿಂಗಳುಗಟ್ಟಲೆ ಮತದಾನ ಮಾಡಲಾಗುತ್ತದೆ ಮತ್ತು ನಂತರ ಎಣಿಕೆಗಾಗಿ ಸಮಯಾವಕಾಶವನ್ನು ತೆಗೆದುಕೊಳ್ಳಲಾಗುತ್ತದೆ. ಅಷ್ಟು ಪಾರದರ್ಶಕತೆಯಿಂದ ಮಾಡುತ್ತಾರೆ ಎಂದು ಹೇಳಿದ್ದಾರೆ.

140 ಕೋಟಿಗೂ ಹೆಚ್ಚು ಜನರು ದೇಶದ ಭವಿಷ್ಯವನ್ನು ನಿರ್ಧರಿಸುತ್ತಾರೆ. ನೀವು 3 ಗಂಟೆಗಳಲ್ಲಿ ಫಲಿತಾಂಶವನ್ನು ಏಕೆ ಬಯಸುತ್ತೀರಿ? ಒಂದು ತಿಂಗಳು ಏಕೆ ಎಣಿಕೆ ಮಾಡಬಾರದು? ಇಂದು ನಾವು ಬರ್ಗರ್, ಪಿಝ್ಝಾ ಅಥವಾ ಜೀನ್ಸ್ ಪ್ರತಿಯೊಂದು ವಿಚಾರದಲ್ಲೂ ಯುಎಸ್‌ನ್ನು ಅನುಸರಿಸುತ್ತಿದ್ದೇವೆ. ಅದರಂತೆ ನಾವು ಬ್ಯಾಲೆಟ್ ಪೇಪರ್‌ಗಳನ್ನು ಕೂಡ ನಕಲಿಸಬೇಕು ಎಂದು ಹೇಳಿದ್ದಾರೆ.

ಇತ್ತೀಚೆಗೆ ಉತ್ತರಾಖಂಡದ ಸುರಂಗದಲ್ಲಿ ರಕ್ಷಣಾ ಕಾರ್ಯಾಚರಣೆಯ ಸಂದರ್ಭದಲ್ಲಿ ಯುಎಸ್ ಯಂತ್ರಗಳು ವಿಫಲವಾಗಿದ್ದವು. ದೇಶದ ಯುವಕರು ಪ್ರಾಣವನ್ನು ಉಳಿಸಿದರು. 2022ರಲ್ಲಿ ಉತ್ತರಪ್ರದೇಶ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಪ್ರತಿ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯಿಂದ ಯಾದವ್‌ ಮತ್ತು ಮುಸ್ಲಿಂ ಸಮುದಾಯದ ಮತದಾರರನ್ನು ಸಾಮೂಹಿಕವಾಗಿ ಅಳಿಸಲಾಗಿದೆ ಎಂಬ ಆರೋಪವನ್ನು ಸಾಬೀತುಪಡಿಸಲು ಭಾರತದ ಚುನಾವಣಾ ಆಯೋಗವು ನನಗೆ ನೋಟಿಸ್ ನೀಡಿದೆ. ನಾನು ಮತದಾರರ ಹೆಸರುಗಳನ್ನು  ಅಫಿಡವಿಟ್‌ಗಳೊಂದಿಗೆ ಚುನಾವಣಾ ಆಯೋಗಕ್ಕೆ ಕಳುಹಿಸಿದ್ದೆ, ಆದರೆ ಆ ಅಧಿಕಾರಿಗಳ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು  ಅವರು ಇದೇ ವೇಳೆ ಹೇಳಿದ್ದಾರೆ.

ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಸೇರಿದಂತೆ ಇತರ ಹಲವು ನಾಯಕರು, ಡೇಟಾ ದುರ್ಬಳಕೆ ಮತ್ತು ತಿರುಚುವಿಕೆ ಸಾಧ್ಯತೆ ಇರುವುದರಿಂದ ಎಲೆಕ್ಟ್ರಾನಿಕ್ ಯಂತ್ರಗಳನ್ನು ಬಳಸಬಾರದು. ಹಲವು ದೇಶಗಳಲ್ಲಿ ಇವಿಎಂ ಬಳಸುತ್ತಿಲ್ಲ ಎಂದು ಹೇಳಿದ್ದರು. ಎಕ್ಸಿಟ್ ಪೋಲ್‌ಗಳು ಪ್ರತಿಪಕ್ಷಗಳ ಗೆಲುವಿನ ಭವಿಷ್ಯ ನುಡಿದಿರುವ ಛತ್ತೀಸ್‌ಗಢದಂತಹ ರಾಜ್ಯಗಳಲ್ಲಿಯೂ ಕೂಡ ಬಿಜೆಪಿ ಚುನಾವಣೆಯನ್ನು ಗೆದ್ದ ನಂತರ ಇವಿಎಂ ದುರ್ಬಳಕೆಯ ಬಗ್ಗೆ ಮತ್ತೆ ಪ್ರಶ್ನೆಗಳು ಕಾಡುತ್ತಿದೆ.

ಇದನ್ನು ಓದಿ: ಗಾಝಾದಲ್ಲಿ ಮಕ್ಕಳ ರಕ್ತಪಾತಕ್ಕೆ ಅಮೆರಿಕ ನೇರ ಹೊಣೆ: ಪ್ಯಾಲೆಸ್ತೀನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...