Homeಮುಖಪುಟಇವಿಎಂ ಜನರ ಮನಸ್ಸಿನಲ್ಲಿ ಅಪನಂಬಿಕೆ ಸೃಷ್ಟಿಸಿದೆ: ಅಖಿಲೇಶ್ ಯಾದವ್

ಇವಿಎಂ ಜನರ ಮನಸ್ಸಿನಲ್ಲಿ ಅಪನಂಬಿಕೆ ಸೃಷ್ಟಿಸಿದೆ: ಅಖಿಲೇಶ್ ಯಾದವ್

- Advertisement -
- Advertisement -

ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್‌ ಬಳಕೆಗೆ ಆಗ್ರಹಿಸಿದ್ದು, ಇವಿಎಂಗಳನ್ನು ನೇರವಾಗಿ ಉಲ್ಲೇಖಿಸದೆ ಈ ಯಂತ್ರಗಳು ಮತ್ತು ಮತದಾನದ ಫಲಿತಾಂಶಗಳು ಜನರ ಮನಸ್ಸಿನಲ್ಲಿ ಅಪನಂಬಿಕೆಯ ಭಾವನೆಯನ್ನು ಮೂಡಿಸಿವೆ ಎಂದು ಹೇಳಿದ್ದಾರೆ.

ಅಮೆರಿಕ ಚುನಾವಣೆಯ ಬಗ್ಗೆ ಉದಾಹರಣೆಯನ್ನು ನೀಡಿದ ಯಾದವ್, ಭಾರತವು ಬರ್ಗರ್, ಪಿಝ್ಝಾ ಮತ್ತು ಜೀನ್ಸ್‌ನಲ್ಲಿ ಅಮೆರಿಕನ್ನರನ್ನು ಅನುಸರಿಸುತ್ತಿದೆ. ಅದರಂತೆ ಬ್ಯಾಲೆಟ್ ಪೇಪರ್‌ಗಳ ಬಳಕೆಯನ್ನು ಕೂಡ ಅನುಸರಿಸಬೇಕು ಎಂದು ಹೇಳಿದ್ದಾರೆ.

ನಾವು ತಂತ್ರಜ್ಞಾನವನ್ನು ಅರ್ಥಮಾಡಿಕೊಳ್ಳುತ್ತೇವೆ ಎಂದು ನಾನು ಹಲವಾರು ಬಾರಿ ಹೇಳಿದ್ದೆ. ನಾವು ತಂತ್ರಜ್ಞಾನದೊಂದಿಗೆ ಬೆಳೆದಿದ್ದೇವೆ. ಯುಪಿಯಲ್ಲಿ ಎಸ್‌ಪಿ ಸರ್ಕಾರವು ಗರಿಷ್ಠ ಸಂಖ್ಯೆಯ ಲ್ಯಾಪ್‌ಟಾಪ್‌ಗಳನ್ನು ವಿತರಿಸಿದೆ ಎಂದು ಹೇಳಿದ್ದಾರೆ.

ವಿಶ್ವದ ಅತ್ಯಂತ ಶಕ್ತಿಶಾಲಿ ದೇಶ ಅಮೆರಿಕ. ಅಲ್ಲಿ ತಿಂಗಳುಗಟ್ಟಲೆ ಮತದಾನ ಮಾಡಲಾಗುತ್ತದೆ ಮತ್ತು ನಂತರ ಎಣಿಕೆಗಾಗಿ ಸಮಯಾವಕಾಶವನ್ನು ತೆಗೆದುಕೊಳ್ಳಲಾಗುತ್ತದೆ. ಅಷ್ಟು ಪಾರದರ್ಶಕತೆಯಿಂದ ಮಾಡುತ್ತಾರೆ ಎಂದು ಹೇಳಿದ್ದಾರೆ.

140 ಕೋಟಿಗೂ ಹೆಚ್ಚು ಜನರು ದೇಶದ ಭವಿಷ್ಯವನ್ನು ನಿರ್ಧರಿಸುತ್ತಾರೆ. ನೀವು 3 ಗಂಟೆಗಳಲ್ಲಿ ಫಲಿತಾಂಶವನ್ನು ಏಕೆ ಬಯಸುತ್ತೀರಿ? ಒಂದು ತಿಂಗಳು ಏಕೆ ಎಣಿಕೆ ಮಾಡಬಾರದು? ಇಂದು ನಾವು ಬರ್ಗರ್, ಪಿಝ್ಝಾ ಅಥವಾ ಜೀನ್ಸ್ ಪ್ರತಿಯೊಂದು ವಿಚಾರದಲ್ಲೂ ಯುಎಸ್‌ನ್ನು ಅನುಸರಿಸುತ್ತಿದ್ದೇವೆ. ಅದರಂತೆ ನಾವು ಬ್ಯಾಲೆಟ್ ಪೇಪರ್‌ಗಳನ್ನು ಕೂಡ ನಕಲಿಸಬೇಕು ಎಂದು ಹೇಳಿದ್ದಾರೆ.

ಇತ್ತೀಚೆಗೆ ಉತ್ತರಾಖಂಡದ ಸುರಂಗದಲ್ಲಿ ರಕ್ಷಣಾ ಕಾರ್ಯಾಚರಣೆಯ ಸಂದರ್ಭದಲ್ಲಿ ಯುಎಸ್ ಯಂತ್ರಗಳು ವಿಫಲವಾಗಿದ್ದವು. ದೇಶದ ಯುವಕರು ಪ್ರಾಣವನ್ನು ಉಳಿಸಿದರು. 2022ರಲ್ಲಿ ಉತ್ತರಪ್ರದೇಶ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಪ್ರತಿ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯಿಂದ ಯಾದವ್‌ ಮತ್ತು ಮುಸ್ಲಿಂ ಸಮುದಾಯದ ಮತದಾರರನ್ನು ಸಾಮೂಹಿಕವಾಗಿ ಅಳಿಸಲಾಗಿದೆ ಎಂಬ ಆರೋಪವನ್ನು ಸಾಬೀತುಪಡಿಸಲು ಭಾರತದ ಚುನಾವಣಾ ಆಯೋಗವು ನನಗೆ ನೋಟಿಸ್ ನೀಡಿದೆ. ನಾನು ಮತದಾರರ ಹೆಸರುಗಳನ್ನು  ಅಫಿಡವಿಟ್‌ಗಳೊಂದಿಗೆ ಚುನಾವಣಾ ಆಯೋಗಕ್ಕೆ ಕಳುಹಿಸಿದ್ದೆ, ಆದರೆ ಆ ಅಧಿಕಾರಿಗಳ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು  ಅವರು ಇದೇ ವೇಳೆ ಹೇಳಿದ್ದಾರೆ.

ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಸೇರಿದಂತೆ ಇತರ ಹಲವು ನಾಯಕರು, ಡೇಟಾ ದುರ್ಬಳಕೆ ಮತ್ತು ತಿರುಚುವಿಕೆ ಸಾಧ್ಯತೆ ಇರುವುದರಿಂದ ಎಲೆಕ್ಟ್ರಾನಿಕ್ ಯಂತ್ರಗಳನ್ನು ಬಳಸಬಾರದು. ಹಲವು ದೇಶಗಳಲ್ಲಿ ಇವಿಎಂ ಬಳಸುತ್ತಿಲ್ಲ ಎಂದು ಹೇಳಿದ್ದರು. ಎಕ್ಸಿಟ್ ಪೋಲ್‌ಗಳು ಪ್ರತಿಪಕ್ಷಗಳ ಗೆಲುವಿನ ಭವಿಷ್ಯ ನುಡಿದಿರುವ ಛತ್ತೀಸ್‌ಗಢದಂತಹ ರಾಜ್ಯಗಳಲ್ಲಿಯೂ ಕೂಡ ಬಿಜೆಪಿ ಚುನಾವಣೆಯನ್ನು ಗೆದ್ದ ನಂತರ ಇವಿಎಂ ದುರ್ಬಳಕೆಯ ಬಗ್ಗೆ ಮತ್ತೆ ಪ್ರಶ್ನೆಗಳು ಕಾಡುತ್ತಿದೆ.

ಇದನ್ನು ಓದಿ: ಗಾಝಾದಲ್ಲಿ ಮಕ್ಕಳ ರಕ್ತಪಾತಕ್ಕೆ ಅಮೆರಿಕ ನೇರ ಹೊಣೆ: ಪ್ಯಾಲೆಸ್ತೀನ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಮತಾ ವಿರುದ್ಧ ಅವಹೇಳನಕಾರಿ ಹೇಳಿಕೆ; 24 ಗಂಟೆ ಪ್ರಚಾರ ಮಾಡದಂತೆ ಬಿಜೆಪಿ ಅಭ್ಯರ್ಥಿಗೆ ನಿರ್ಬಂಧ

0
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕಾಗಿ ಕೇಂದ್ರ ಚುನಾವಣಾ ಆಯೋಗವು ಬಿಜೆಪಿಯ ತಮ್ಲುಕ್ ಅಭ್ಯರ್ಥಿ ಅಭಿಜಿತ್ ಗಂಗೋಪಾಧ್ಯಾಯ ಅವರ ಹೇಳಿಕೆಯನ್ನು ಖಂಡಿಸಿದ್ದು, ಮಂಗಳವಾರ ಸಂಜೆ 5 ರಿಂದ...