Homeಮುಖಪುಟಮುಸ್ಲಿಮರ ಮತಗಳಿಗಾಗಿ ಅಖಿಲೇಶ್‌ ಯಾದವ್ ಮತಾಂತರಕ್ಕೂ ಸಿದ್ಧರಿದ್ದಾರೆ: ಬಿಜೆಪಿ ಸಚಿವ

ಮುಸ್ಲಿಮರ ಮತಗಳಿಗಾಗಿ ಅಖಿಲೇಶ್‌ ಯಾದವ್ ಮತಾಂತರಕ್ಕೂ ಸಿದ್ಧರಿದ್ದಾರೆ: ಬಿಜೆಪಿ ಸಚಿವ

- Advertisement -
- Advertisement -

ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್‌ ಯಾದವ್‌ ಅವರಿಗೆ ಪಾಕಿಸ್ತಾನದ ಬೇಹುಗಾರಿಕಾ ಸಂಸ್ಥೆ ಐಎಸ್‌ಐ ಬೆಂಬಲವಿದೆ. ಮುಸ್ಲಿಮರನ್ನು ಓಲೈಸಲು ಅವರು ಧಾರ್ಮಿಕ ಮತಾಂತರಕ್ಕೂ ಸಿದ್ಧರಿದ್ದಾರೆ ಎಂದು ಉತ್ತರ ಪ್ರದೇಶದ ಬಿಜೆಪಿ ಸಚಿವ ಆನಂದ್‌ ಸ್ವರೂಪ್‌ ಶುಕ್ಲಾ ಆರೋಪಿಸಿದ್ದಾರೆ.

ಮಂಗಳವಾರ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಅಖಿಲೇಶ್‌ ಅವರು ನೆರೆಯ ದೇಶದ ಇಂಟರ್‌ ಸರ್ವೀಸಸ್‌ ಇಂಟೆಲಿಜೆನ್ಸ್‌ (ಐಎಸ್‌ಐ)ನಿಂದ ಆರ್ಥಿಕ ಬೆಂಬಲವನ್ನು ಪಡೆಯುತ್ತಿರಬಹುದು ಎಂದು ಆರೋಪಿಸಿದ್ದಾರೆ.

‘ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಇಸ್ಲಾಮಿಕ್‌ ಜಗತ್ತಿಗೆ ಸವಾಲಾಗಿದ್ದಾರೆ. ಅಖಿಲೇಶ್‌ ಐಎಸ್‌ಐನಿಂದ ಪ್ರೋತ್ಸಾಹ ಮತ್ತು ಸಲಹೆ ಪಡೆಯುತ್ತಿದ್ದಾರೆ. ಇದರಿಂದ ಅವರಿಗೆ ಆರ್ಥಿಕ ಬೆಂಬಲವೂ ಸಿಗುವ ಸಾಧ್ಯತೆ ಇದೆ ಎಂದು ಬಿಜೆಪಿ ನಾಯಕ ಶುಕ್ಲಾ ಹೇಳಿದ್ದಾರೆ.

ಭಾನುವಾರ ಹರ್ದೋಯಿಯಲ್ಲಿ ಮಾಡಿದ ಭಾಷಣದಲ್ಲಿ ಯಾದವ್‌ ಅವರು ಮಹಾತ್ಮ ಗಾಂಧಿ, ಸರ್ದಾರ್‌ ವಲ್ಲಭಬಾಯಿ ಪಟೇಲ್‌, ಜವಾಹರ್‌ಲಾಲ್‌ ನೆರು ಮತ್ತು ಪಾಕಿಸ್ತಾನದ ಸಂಸ್ಥಾಪಕ ಮುಹಮ್ಮದ್‌ ಅಲಿ ಜಿನ್ನಾ ಅವರು ಭಾರತದ ಸ್ವಾತಂತ್ಯ್ರಕ್ಕಾಗಿ ಹೋರಾಡಿದ ನಾಯಕರು ಮಾತನಾಡಿದ್ದರು. ಇದರ ಬೆನ್ನಲ್ಲೆ ಶುಕ್ಲಾ ಅಖಿಲೇಶ್ ಯಾದವ್‌ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

‘ಮುಸ್ಲಿಮರನ್ನು ಓಲೈಸಲು ಯಾದವ್‌ ಅವರು ನಮಾಜ್‌ ಮತ್ತು ಉಪವಾಸ ಆಚರಿಸಿದರು. ಮುಸ್ಲಿಮರ ಮತಗಳನ್ನು ಪಡೆಯಲು ಅವರು ‘ಮತಾಂತರ’ ಮತ್ತು ‘ಖತ್ನಾ’ ವನ್ನು ಆಚರಿಸಬಹುದು’ ಎಂದು ಅವರು ತಿಳಿಸಿದ್ದಾರೆ.

ಐಎಸ್‌ಐ ನಿರ್ದೇಶನದ ಮೇರೆಗೆ ಯಾದವ್‌, ಜಿನ್ನಾ ಅವರನ್ನು ವೈಭವೀಕರಿಸುತ್ತಿದ್ದಾರೆ. ಪಾಕಿಸ್ತಾನ ಮತ್ತು ತಾಲಿಬಾನ್‌ಗೆ ಬೇಕಾದಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಸಂಸದೀಯ ವ್ಯವಹಾರಗಳ ರಾಜ್ಯ ಸಚಿವ ಶುಕ್ಲಾ ಆರೋಪಿಸಿದ್ದಾರೆ.

ಅಖಿಲೇಶ್‌ ಯಾದವ್‌ ಅವರು ಸರ್ದಾರ್‌ ವಲ್ಲಭಬಾಯಿ ಪಟೇಲ್‌ ಅವರನ್ನು ಜಿನ್ನಾ ಅವರೊಂದಿಗೆ ಹೋಲಿಸಿರುವುದು ಖಂಡನೀಯ ಮತ್ತು ಅವರು ಅದಕ್ಕಾಗಿ ಪಶ್ಚಾತ್ತಾಪ ಪಡಬೇಕು ಎಂದಿದ್ದಾರೆ.

ಹರ್ದೋಯಿಯಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್‌ ಅವರು, ’ಸರ್ದಾರ್‌ ಪಟೇಲ್‌, ಮಹಾತ್ಮ ಗಾಂಧಿ, ಜವಾಹರಲಾಲ್‌ ನೆಹರು ಮತ್ತು ಜಿನ್ನಾ ಒಂದೇ ಸಂಸ್ಥೆಯಲ್ಲಿ ಕಲಿತು ಬ್ಯಾರಿಸ್ಟರ್‌ಗಳಾದರು. ಅವರು ಭಾರತ ಸ್ವಾತಂತ್ಯ್ರ ಪಡೆಯಲು ಸಹಾಯ ಮಾಡಿದರು’ ಎಂದು ತಿಳಿಸಿದ್ದರು.

1948ರಲ್ಲಿ ಗೃಹ ಸಚಿವರಾಗಿದ್ದ ಪಟೇಲ್‌ ಅವರು ಗಾಂಧಿಯವರ ಹತ್ಯೆಯ ನಂತರ ಸ್ವಯಂಸೇವಕ ಸಂಘದ ಮೇಲೆ ವಿಧಿಸಿದ್ದ ನಿಷೇಧದ ಬಗ್ಗೆಯೂ ಯಾದವ್‌ ಉಲ್ಲೇಖಿಸಿದ್ದರು.


ಇದನ್ನೂ ಓದಿ: ಲಸಿಕೆ ಸರ್ಟಿಫಿಕೇಟ್‌ನಲ್ಲಿ ಮೋದಿ ಫೋಟೋ ತೆಗೆಯಿರಿ ಎಂದು ಕೇಳುವುದು ಅಪಾಯಕಾರಿ: ಕೇರಳ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...

ನಾಗಾಲ್ಯಾಂಡ್‌| ಕೇಂದ್ರದ ‘ವಂದೇ ಮಾತರಂ’ ಕಡ್ಡಾಯ ನಿರ್ದೇಶನ ವಿರೋಧಿಸಿ ನಾಗಾ ವಿದ್ಯಾರ್ಥಿ ಒಕ್ಕೂಟದಿಂದ ಪ್ರತಿಭಟನೆ

ಸರ್ಕಾರದ ಅಧಿಕೃತ ಕಾರ್ಯಕ್ರಮಗಳ ಸಮಯದಲ್ಲಿ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ವಂದೇ ಮಾತರಂ ಹಾಡುವುದನ್ನು ಕಡ್ಡಾಯಗೊಳಿಸುವ ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರ ನೀಡಿರುವ ನಿರ್ದೇಶನವನ್ನು ವಿರೋಧಿಸಿ ಸೋಮವಾರ ನಾಗಾ ವಿದ್ಯಾರ್ಥಿ ಒಕ್ಕೂಟದ (ಎನ್‌ಎಸ್‌ಎಫ್) ಬ್ಯಾನರ್...

‘ಹೇಡಿತನದ, ಅವಿವೇಕದ ಹಿಂಸಾಚಾರ’: 400 ಜನರನ್ನು ಬಲಿತೆಗೆದುಕೊಂಡ ಕಾಬೂಲ್ ಆಸ್ಪತ್ರೆಯ ಮೇಲಿನ ಪಾಕ್ ದಾಳಿ ಖಂಡಿಸಿದ ಭಾರತ 

ಕಾಬೂಲ್‌ನ ಆಸ್ಪತ್ರೆಯ ಮೇಲೆ ಪಾಕಿಸ್ತಾನ ನಡೆಸಿದ ವಾಯುದಾಳಿಯನ್ನು ಭಾರತ ಮಂಗಳವಾರ ಖಂಡಿಸಿದೆ. ಈ ದಾಳಿಯಲ್ಲಿ ಕನಿಷ್ಠ 400 ಜನರು ಅಸ್ವಸ್ಥರಾಗಿ 250 ಜನರು ಗಾಯಗೊಂಡಿದ್ದರು. ಈ ಬಗ್ಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA)...

ಮೂಡುಬಿದಿರೆ ಠಾಣೆ ಇನ್‌ಸ್ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ: ತನಿಖೆಗೆ ಕಮಿಷನರ್ ಆದೇಶ

ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಸಂದೇಶ್ ಬಿ.ಜಿ ವಿರುದ್ಧ ಮಹಿಳೆಯರಿಗೆ ಲೈಂಗಿಕ, ಮಾನಸಿಕ ಕಿರುಕುಳ ನೀಡಿದ್ದಲ್ಲದೆ, ಹಣ ಕೊಡುವಂತೆ ಪೀಡಿಸಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದ್ದು, ಈ...

ಅಸ್ಸಾಂ: ರಂಜಾನ್ ಆಹಾರ ವ್ಯವಸ್ಥೆಗಾಗಿ ಮೀನು ಹಿಡಿಯುತ್ತಿದ್ದ ಮುಸ್ಲಿಂ ಸಹೋದರರ ಮೇಲೆ ಬಿಎಸ್‌ಎಫ್ ಗುಂಡಿನ ದಾಳಿ: ಗಂಭೀರ ಗಾಯ

ಅಸ್ಸಾಂನ ದಕ್ಷಿಣ ಸಲ್ಮಾರಾ–ಮಂಕಚಾರ್ ಜಿಲ್ಲೆಯ ಇಬ್ಬರು ಸಹೋದರರು ಭಾರತದ ಭೂಪ್ರದೇಶದೊಳಗಿನ ನದಿನೀರಿನಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸಿಬ್ಬಂದಿ ಗುಂಡು ಹಾರಿಸಿ ಪ್ರಾಣಕ್ಕಾಗಿ ಹೋರಾಡುತ್ತಿದ್ದಾರೆ. ಈ ಘಟನೆ ಮಾರ್ಚ್ 8-9, 2026...

ಊನಾ ದಲಿತ ದೌರ್ಜನ್ಯ ಪ್ರಕರಣ: ಐವರು ದೋಷಿಗಳೆಂದು ತೀರ್ಪು ನೀಡಿದ ನ್ಯಾಯಾಲಯ; 37 ಆರೋಪಿಗಳು ಖುಲಾಸೆ

ದೇಶದಲ್ಲಿ ನಡೆಯುತ್ತಿರುವ ದಲಿತ ದೌರ್ಜನ್ಯ ಪ್ರಕರಣಗಳಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದ ಗುಜರಾತ್‌ನ ಊನಾ ದಲಿತರ ಮೇಲೆ ಹಲ್ಲೆ ಪ್ರಕರಣದಲ್ಲಿ, ಗಿರ್ ಸೋಮನಾಥ್ ಜಿಲ್ಲೆಯ ವೆರಾವಲ್ ನ್ಯಾಯಾಲಯವು ಸೋಮವಾರ ತನ್ನ ತೀರ್ಪು ನೀಡಿದ್ದು,...

ರಾಜ್ಯಸಭೆ ಚುನಾವಣೆ : ಬಿಹಾರದ ಎಲ್ಲಾ ಐದು ಸ್ಥಾನಗಳು ಎನ್‌ಡಿಎ ಪಾಲು; ಒಡಿಶಾದ ಮೂರು ಸ್ಥಾನಗಳಲ್ಲಿ ಗೆಲುವು

ರಾಜ್ಯಸಭೆಯ 37 ಸ್ಥಾನಗಳಿಗೆ ಸೋಮವಾರ (ಮಾ.16) ನಡೆದ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ 21 ಸ್ಥಾನಗಳನ್ನು ಗೆದ್ದುಕೊಂಡಿದೆ. ಈ ಪೈಕಿ ಬಿಜೆಪಿ ಮಾತ್ರ 11 ಸ್ಥಾನಗಳನ್ನು ಪಡೆದಿದೆ. ವಿಪಕ್ಷಗಳ ಇಂಡಿಯಾ ಮೈತ್ರಿಕೂಟ ಒಟ್ಟು 11 ಸ್ಥಾನಗಳನ್ನು...

ಅಫ್ಘಾನಿಸ್ತಾನದ ಆಸ್ಪತ್ರೆ ಮೇಲೆ ಪಾಕಿಸ್ತಾನದಿಂದ ವಾಯುದಾಳಿ ; ಕನಿಷ್ಠ 400 ಸಾವು : ವರದಿ

ರಾಜಧಾನಿ ಕಾಬೂಲ್‌ನಲ್ಲಿ ಮಾದಕ ವ್ಯಸನಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ಆಸ್ಪತ್ರೆಯ ಮೇಲೆ ಪಾಕಿಸ್ತಾನದ ಮಿಲಿಟರಿ ವಾಯು ದಾಳಿ ನಡೆಸಿದ್ದು, ಕನಿಷ್ಠ 400 ಜನರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ಆರೋಪಿಸಿದೆ. ಅಲ್‌-ಜಝೀರಾ ವರದಿಯ ಪ್ರಕಾರ, ಅಫ್ಘಾನಿಸ್ತಾನದ ಆರೋಪವನ್ನು...