Homeಮುಖಪುಟಮುಸ್ಲಿಮರ ಮತಗಳಿಗಾಗಿ ಅಖಿಲೇಶ್‌ ಯಾದವ್ ಮತಾಂತರಕ್ಕೂ ಸಿದ್ಧರಿದ್ದಾರೆ: ಬಿಜೆಪಿ ಸಚಿವ

ಮುಸ್ಲಿಮರ ಮತಗಳಿಗಾಗಿ ಅಖಿಲೇಶ್‌ ಯಾದವ್ ಮತಾಂತರಕ್ಕೂ ಸಿದ್ಧರಿದ್ದಾರೆ: ಬಿಜೆಪಿ ಸಚಿವ

- Advertisement -
- Advertisement -

ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್‌ ಯಾದವ್‌ ಅವರಿಗೆ ಪಾಕಿಸ್ತಾನದ ಬೇಹುಗಾರಿಕಾ ಸಂಸ್ಥೆ ಐಎಸ್‌ಐ ಬೆಂಬಲವಿದೆ. ಮುಸ್ಲಿಮರನ್ನು ಓಲೈಸಲು ಅವರು ಧಾರ್ಮಿಕ ಮತಾಂತರಕ್ಕೂ ಸಿದ್ಧರಿದ್ದಾರೆ ಎಂದು ಉತ್ತರ ಪ್ರದೇಶದ ಬಿಜೆಪಿ ಸಚಿವ ಆನಂದ್‌ ಸ್ವರೂಪ್‌ ಶುಕ್ಲಾ ಆರೋಪಿಸಿದ್ದಾರೆ.

ಮಂಗಳವಾರ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಅಖಿಲೇಶ್‌ ಅವರು ನೆರೆಯ ದೇಶದ ಇಂಟರ್‌ ಸರ್ವೀಸಸ್‌ ಇಂಟೆಲಿಜೆನ್ಸ್‌ (ಐಎಸ್‌ಐ)ನಿಂದ ಆರ್ಥಿಕ ಬೆಂಬಲವನ್ನು ಪಡೆಯುತ್ತಿರಬಹುದು ಎಂದು ಆರೋಪಿಸಿದ್ದಾರೆ.

‘ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಇಸ್ಲಾಮಿಕ್‌ ಜಗತ್ತಿಗೆ ಸವಾಲಾಗಿದ್ದಾರೆ. ಅಖಿಲೇಶ್‌ ಐಎಸ್‌ಐನಿಂದ ಪ್ರೋತ್ಸಾಹ ಮತ್ತು ಸಲಹೆ ಪಡೆಯುತ್ತಿದ್ದಾರೆ. ಇದರಿಂದ ಅವರಿಗೆ ಆರ್ಥಿಕ ಬೆಂಬಲವೂ ಸಿಗುವ ಸಾಧ್ಯತೆ ಇದೆ ಎಂದು ಬಿಜೆಪಿ ನಾಯಕ ಶುಕ್ಲಾ ಹೇಳಿದ್ದಾರೆ.

ಭಾನುವಾರ ಹರ್ದೋಯಿಯಲ್ಲಿ ಮಾಡಿದ ಭಾಷಣದಲ್ಲಿ ಯಾದವ್‌ ಅವರು ಮಹಾತ್ಮ ಗಾಂಧಿ, ಸರ್ದಾರ್‌ ವಲ್ಲಭಬಾಯಿ ಪಟೇಲ್‌, ಜವಾಹರ್‌ಲಾಲ್‌ ನೆರು ಮತ್ತು ಪಾಕಿಸ್ತಾನದ ಸಂಸ್ಥಾಪಕ ಮುಹಮ್ಮದ್‌ ಅಲಿ ಜಿನ್ನಾ ಅವರು ಭಾರತದ ಸ್ವಾತಂತ್ಯ್ರಕ್ಕಾಗಿ ಹೋರಾಡಿದ ನಾಯಕರು ಮಾತನಾಡಿದ್ದರು. ಇದರ ಬೆನ್ನಲ್ಲೆ ಶುಕ್ಲಾ ಅಖಿಲೇಶ್ ಯಾದವ್‌ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

‘ಮುಸ್ಲಿಮರನ್ನು ಓಲೈಸಲು ಯಾದವ್‌ ಅವರು ನಮಾಜ್‌ ಮತ್ತು ಉಪವಾಸ ಆಚರಿಸಿದರು. ಮುಸ್ಲಿಮರ ಮತಗಳನ್ನು ಪಡೆಯಲು ಅವರು ‘ಮತಾಂತರ’ ಮತ್ತು ‘ಖತ್ನಾ’ ವನ್ನು ಆಚರಿಸಬಹುದು’ ಎಂದು ಅವರು ತಿಳಿಸಿದ್ದಾರೆ.

ಐಎಸ್‌ಐ ನಿರ್ದೇಶನದ ಮೇರೆಗೆ ಯಾದವ್‌, ಜಿನ್ನಾ ಅವರನ್ನು ವೈಭವೀಕರಿಸುತ್ತಿದ್ದಾರೆ. ಪಾಕಿಸ್ತಾನ ಮತ್ತು ತಾಲಿಬಾನ್‌ಗೆ ಬೇಕಾದಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಸಂಸದೀಯ ವ್ಯವಹಾರಗಳ ರಾಜ್ಯ ಸಚಿವ ಶುಕ್ಲಾ ಆರೋಪಿಸಿದ್ದಾರೆ.

ಅಖಿಲೇಶ್‌ ಯಾದವ್‌ ಅವರು ಸರ್ದಾರ್‌ ವಲ್ಲಭಬಾಯಿ ಪಟೇಲ್‌ ಅವರನ್ನು ಜಿನ್ನಾ ಅವರೊಂದಿಗೆ ಹೋಲಿಸಿರುವುದು ಖಂಡನೀಯ ಮತ್ತು ಅವರು ಅದಕ್ಕಾಗಿ ಪಶ್ಚಾತ್ತಾಪ ಪಡಬೇಕು ಎಂದಿದ್ದಾರೆ.

ಹರ್ದೋಯಿಯಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್‌ ಅವರು, ’ಸರ್ದಾರ್‌ ಪಟೇಲ್‌, ಮಹಾತ್ಮ ಗಾಂಧಿ, ಜವಾಹರಲಾಲ್‌ ನೆಹರು ಮತ್ತು ಜಿನ್ನಾ ಒಂದೇ ಸಂಸ್ಥೆಯಲ್ಲಿ ಕಲಿತು ಬ್ಯಾರಿಸ್ಟರ್‌ಗಳಾದರು. ಅವರು ಭಾರತ ಸ್ವಾತಂತ್ಯ್ರ ಪಡೆಯಲು ಸಹಾಯ ಮಾಡಿದರು’ ಎಂದು ತಿಳಿಸಿದ್ದರು.

1948ರಲ್ಲಿ ಗೃಹ ಸಚಿವರಾಗಿದ್ದ ಪಟೇಲ್‌ ಅವರು ಗಾಂಧಿಯವರ ಹತ್ಯೆಯ ನಂತರ ಸ್ವಯಂಸೇವಕ ಸಂಘದ ಮೇಲೆ ವಿಧಿಸಿದ್ದ ನಿಷೇಧದ ಬಗ್ಗೆಯೂ ಯಾದವ್‌ ಉಲ್ಲೇಖಿಸಿದ್ದರು.


ಇದನ್ನೂ ಓದಿ: ಲಸಿಕೆ ಸರ್ಟಿಫಿಕೇಟ್‌ನಲ್ಲಿ ಮೋದಿ ಫೋಟೋ ತೆಗೆಯಿರಿ ಎಂದು ಕೇಳುವುದು ಅಪಾಯಕಾರಿ: ಕೇರಳ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...