Homeಮುಖಪುಟಮುಸ್ಲಿಮರ ಮತಗಳಿಗಾಗಿ ಅಖಿಲೇಶ್‌ ಯಾದವ್ ಮತಾಂತರಕ್ಕೂ ಸಿದ್ಧರಿದ್ದಾರೆ: ಬಿಜೆಪಿ ಸಚಿವ

ಮುಸ್ಲಿಮರ ಮತಗಳಿಗಾಗಿ ಅಖಿಲೇಶ್‌ ಯಾದವ್ ಮತಾಂತರಕ್ಕೂ ಸಿದ್ಧರಿದ್ದಾರೆ: ಬಿಜೆಪಿ ಸಚಿವ

- Advertisement -
- Advertisement -

ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್‌ ಯಾದವ್‌ ಅವರಿಗೆ ಪಾಕಿಸ್ತಾನದ ಬೇಹುಗಾರಿಕಾ ಸಂಸ್ಥೆ ಐಎಸ್‌ಐ ಬೆಂಬಲವಿದೆ. ಮುಸ್ಲಿಮರನ್ನು ಓಲೈಸಲು ಅವರು ಧಾರ್ಮಿಕ ಮತಾಂತರಕ್ಕೂ ಸಿದ್ಧರಿದ್ದಾರೆ ಎಂದು ಉತ್ತರ ಪ್ರದೇಶದ ಬಿಜೆಪಿ ಸಚಿವ ಆನಂದ್‌ ಸ್ವರೂಪ್‌ ಶುಕ್ಲಾ ಆರೋಪಿಸಿದ್ದಾರೆ.

ಮಂಗಳವಾರ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಅಖಿಲೇಶ್‌ ಅವರು ನೆರೆಯ ದೇಶದ ಇಂಟರ್‌ ಸರ್ವೀಸಸ್‌ ಇಂಟೆಲಿಜೆನ್ಸ್‌ (ಐಎಸ್‌ಐ)ನಿಂದ ಆರ್ಥಿಕ ಬೆಂಬಲವನ್ನು ಪಡೆಯುತ್ತಿರಬಹುದು ಎಂದು ಆರೋಪಿಸಿದ್ದಾರೆ.

‘ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಇಸ್ಲಾಮಿಕ್‌ ಜಗತ್ತಿಗೆ ಸವಾಲಾಗಿದ್ದಾರೆ. ಅಖಿಲೇಶ್‌ ಐಎಸ್‌ಐನಿಂದ ಪ್ರೋತ್ಸಾಹ ಮತ್ತು ಸಲಹೆ ಪಡೆಯುತ್ತಿದ್ದಾರೆ. ಇದರಿಂದ ಅವರಿಗೆ ಆರ್ಥಿಕ ಬೆಂಬಲವೂ ಸಿಗುವ ಸಾಧ್ಯತೆ ಇದೆ ಎಂದು ಬಿಜೆಪಿ ನಾಯಕ ಶುಕ್ಲಾ ಹೇಳಿದ್ದಾರೆ.

ಭಾನುವಾರ ಹರ್ದೋಯಿಯಲ್ಲಿ ಮಾಡಿದ ಭಾಷಣದಲ್ಲಿ ಯಾದವ್‌ ಅವರು ಮಹಾತ್ಮ ಗಾಂಧಿ, ಸರ್ದಾರ್‌ ವಲ್ಲಭಬಾಯಿ ಪಟೇಲ್‌, ಜವಾಹರ್‌ಲಾಲ್‌ ನೆರು ಮತ್ತು ಪಾಕಿಸ್ತಾನದ ಸಂಸ್ಥಾಪಕ ಮುಹಮ್ಮದ್‌ ಅಲಿ ಜಿನ್ನಾ ಅವರು ಭಾರತದ ಸ್ವಾತಂತ್ಯ್ರಕ್ಕಾಗಿ ಹೋರಾಡಿದ ನಾಯಕರು ಮಾತನಾಡಿದ್ದರು. ಇದರ ಬೆನ್ನಲ್ಲೆ ಶುಕ್ಲಾ ಅಖಿಲೇಶ್ ಯಾದವ್‌ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

‘ಮುಸ್ಲಿಮರನ್ನು ಓಲೈಸಲು ಯಾದವ್‌ ಅವರು ನಮಾಜ್‌ ಮತ್ತು ಉಪವಾಸ ಆಚರಿಸಿದರು. ಮುಸ್ಲಿಮರ ಮತಗಳನ್ನು ಪಡೆಯಲು ಅವರು ‘ಮತಾಂತರ’ ಮತ್ತು ‘ಖತ್ನಾ’ ವನ್ನು ಆಚರಿಸಬಹುದು’ ಎಂದು ಅವರು ತಿಳಿಸಿದ್ದಾರೆ.

ಐಎಸ್‌ಐ ನಿರ್ದೇಶನದ ಮೇರೆಗೆ ಯಾದವ್‌, ಜಿನ್ನಾ ಅವರನ್ನು ವೈಭವೀಕರಿಸುತ್ತಿದ್ದಾರೆ. ಪಾಕಿಸ್ತಾನ ಮತ್ತು ತಾಲಿಬಾನ್‌ಗೆ ಬೇಕಾದಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಸಂಸದೀಯ ವ್ಯವಹಾರಗಳ ರಾಜ್ಯ ಸಚಿವ ಶುಕ್ಲಾ ಆರೋಪಿಸಿದ್ದಾರೆ.

ಅಖಿಲೇಶ್‌ ಯಾದವ್‌ ಅವರು ಸರ್ದಾರ್‌ ವಲ್ಲಭಬಾಯಿ ಪಟೇಲ್‌ ಅವರನ್ನು ಜಿನ್ನಾ ಅವರೊಂದಿಗೆ ಹೋಲಿಸಿರುವುದು ಖಂಡನೀಯ ಮತ್ತು ಅವರು ಅದಕ್ಕಾಗಿ ಪಶ್ಚಾತ್ತಾಪ ಪಡಬೇಕು ಎಂದಿದ್ದಾರೆ.

ಹರ್ದೋಯಿಯಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್‌ ಅವರು, ’ಸರ್ದಾರ್‌ ಪಟೇಲ್‌, ಮಹಾತ್ಮ ಗಾಂಧಿ, ಜವಾಹರಲಾಲ್‌ ನೆಹರು ಮತ್ತು ಜಿನ್ನಾ ಒಂದೇ ಸಂಸ್ಥೆಯಲ್ಲಿ ಕಲಿತು ಬ್ಯಾರಿಸ್ಟರ್‌ಗಳಾದರು. ಅವರು ಭಾರತ ಸ್ವಾತಂತ್ಯ್ರ ಪಡೆಯಲು ಸಹಾಯ ಮಾಡಿದರು’ ಎಂದು ತಿಳಿಸಿದ್ದರು.

1948ರಲ್ಲಿ ಗೃಹ ಸಚಿವರಾಗಿದ್ದ ಪಟೇಲ್‌ ಅವರು ಗಾಂಧಿಯವರ ಹತ್ಯೆಯ ನಂತರ ಸ್ವಯಂಸೇವಕ ಸಂಘದ ಮೇಲೆ ವಿಧಿಸಿದ್ದ ನಿಷೇಧದ ಬಗ್ಗೆಯೂ ಯಾದವ್‌ ಉಲ್ಲೇಖಿಸಿದ್ದರು.


ಇದನ್ನೂ ಓದಿ: ಲಸಿಕೆ ಸರ್ಟಿಫಿಕೇಟ್‌ನಲ್ಲಿ ಮೋದಿ ಫೋಟೋ ತೆಗೆಯಿರಿ ಎಂದು ಕೇಳುವುದು ಅಪಾಯಕಾರಿ: ಕೇರಳ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...