Homeಮುಖಪುಟಸಂಸತ್ ಸ್ಥಾನಕ್ಕೆ ರಾಜೀನಾಮೆ ನೀಡಿದ ಅಖಿಲೇಶ್ ಯಾದವ್: ವಿಪಕ್ಷ ನಾಯಕನಾಗಲಿರುವ ಉದ್ದೇಶವೇನು?

ಸಂಸತ್ ಸ್ಥಾನಕ್ಕೆ ರಾಜೀನಾಮೆ ನೀಡಿದ ಅಖಿಲೇಶ್ ಯಾದವ್: ವಿಪಕ್ಷ ನಾಯಕನಾಗಲಿರುವ ಉದ್ದೇಶವೇನು?

- Advertisement -
- Advertisement -

ಇತ್ತೀಚೆಗೆ ನಡೆದ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಶಾಸಕರಾಗಿ ಆಯ್ಕೆಯಾಗಿರುವ ಸಮಾಜವಾದಿ ಪಕ್ಷದ ಮುಖ್ಯಸ್ಥ ಮತ್ತು ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ತಾವು ಪ್ರತಿನಿಧಿಸುತ್ತಿದ್ದ ಅಜಂಘರ್ ಲೋಕಸಭಾ ಸಂಸತ್ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಆ ಮೂಲಕ ತಾವು ವಿಧಾನಸಭಾ ಸದ್ಯಸ್ಯರಾಗಿ ಮುಂದುವರೆಯಲು ಮತ್ತು ವಿಪಕ್ಷ ನಾಯಕನಾಗಿ ಕೆಲಸ ಮಾಡಲು ನಿರ್ಧರಿಸಿದ್ದಾರೆ.

ಮೈನ್‌ಪುರಿ ಜಿಲ್ಲೆಯ ಕರ್ಹಾಲ್ ವಿಧಾನಸಭಾ ಕ್ಷೇತ್ರದಿಂದ ಜಯಗಳಿಸಿದ್ದ ಅಖಿಲೇಶ್ ಯಾದವ್ ಆ ಸ್ಥಾನಕ್ಕೆ ರಾಜೀನಾಮೆ ನೀಡಿ ಸಂಸದರಾಗಿ ಮುಂದುವರೆಯುತ್ತಾರೆ ಎನ್ನಲಾಗಿತ್ತು. ಆದರೆ ಅದನ್ನು ಉಲ್ಟಾ ಮಾಡಿರುವ ಅಖಿಲೇಶ್ ಯಾದವ್ ರಾಜ್ಯ ರಾಜಕಾರಣದಲ್ಲಿ ಸಕ್ರಿಯವಾಗಿ ತೊಡಗಿಕೊಳ್ಳುವ ಮೂಲಕ 2024ರ ಸಂಸತ್ ಚುನಾವಣೆ ಮತ್ತು 2027ರ ಯುಪಿ ವಿಧಾನಸಭಾ ಚುನಾವಣೆಯನ್ನು ಎದುರಿಸಲು ಮುಂದಾಗಿದ್ದಾರೆ.

ಸಾಮಾನ್ಯವಾಗಿ ಯುಪಿ ಮುಖ್ಯಮಂತ್ರಿಗಳಾಗುವವರು ವಿಧಾನಸಭಾ ಚುನಾವಣೆಯನ್ನು ಎದುರಿಸುತ್ತಿರಲಿಲ್ಲ. ಈ ಬಾರಿ ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್ ಮತ್ತು ಬಿಜೆಪಿಯ ಯೋಗಿ ಆದಿತ್ಯನಾಥ್ ಇಬ್ಬರೂ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಜಯಗಳಿಸಿದ್ದಾರೆ. ವಿರೋಧ ಪಕ್ಷದ ನಾಯಕನಾಗಿ ಯೋಗಿ ಆದಿತ್ಯನಾಥ್‌ರವರನ್ನು ಎದುರುಗೊಳ್ಳುವ ಆಯ್ಕೆ ಮಾಡಿಕೊಂಡಿದ್ದಾರೆ.

2017ರಲ್ಲಿ ಭಾರೀ ಸೋಲಿನ ನಂತರ ಅಖಿಲೇಶ್ ಯಾದವ್ ರಾಜ್ಯ ರಾಜಕಾರಣದಲ್ಲಿ ಸಕ್ರಿಯರಾಗಿರಲಿಲ್ಲ. 2019ರ ಲೋಕಸಭಾ ಚುನಾವಣೆಯಲ್ಲಿ ಅವರ ಪಕ್ಷ 05 ಕ್ಷೇತ್ರಗಳಲ್ಲಿ ಮಾತ್ರ ಗೆಲುವು ಸಾಧಿಸಲು ಸಾಧ್ಯವಾಗಿತ್ತು. ಆದರೆ ರೈತ ಹೋರಾಟ ಹುಟ್ಟು ಹಾಕಿದ ಅಲೆಯ ನಂತರ ಅವರು ಉತ್ತರ ಪ್ರದೇಶ ಚುನಾವಣೆಗಳತ್ತ ಗಮನ ಹರಿಸಿದ್ದರು. ಈ ಚುನಾವಣೆಯಲ್ಲಿ ಅವರ ಪಕ್ಷ 111 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದರೂ ಬಹುಮತದಿಂದ ದೂರವೇ ಉಳಿಯಿತು. ಇನ್ನು ಈ ಬಾರಿಯೂ ಅವರು ವಿಧಾನಸಭಾ ಸ್ಥಾನಕ್ಕೆ ರಾಜೀನಾಮೆ ನೀಡಿದರೆ ಪಕ್ಷದಲ್ಲಿ ಉತ್ಸಾಹ ಇರುವುದಿಲ್ಲ ಎಂಬುದನ್ನು ಅರಿತು ಅವರು ಶಾಸಕರಾಗಿ ಮುಂದುವರೆಯಲು ಬಯಸಿದ್ದಾರೆ ಎನ್ನಲಾಗಿದೆ.

ಅದೇ ರೀತಿ ಶಾಸಕರಾಗಿ ಆಯ್ಕೆಯಾಗಿರುವ ಪಕ್ಷದ ಅಜಂಖಾನ್ ಸಹ ತಮ್ಮ ಲೋಕಸಭಾ ಸ್ಥಾನಕ್ಕೆ ರಾಜೀನಾಮೆ ನೀಡಿ ಶಾಸಕರಾಗಿ ಮುಂದುವರೆಯಲಿದ್ದಾರೆ ಎನ್ನಲಾಗಿದೆ. ಆಗ ಪಕ್ಷದ ಸಂಸತ್ ಸದಸ್ಯರ ಸಂಖ್ಯೆ 03ಕ್ಕೆ ಇಳಿಯಲಿದೆ.


ಇದನ್ನೂ ಓದಿ: ‘ಜೇಮ್ಸ್‌’ ಸಿನಿಮಾ ತೆಗೆದು ‘ಕಾಶ್ಮೀರ್‌ ಫೈಲ್ಸ್‌’ ತೋರಿಸಲು ಒತ್ತಡ: ಜೇಮ್ಸ್‌ ನಿರ್ಮಾಪಕರು ಹೇಳುವುದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...