Homeಮುಖಪುಟಸಂಸತ್ ಸ್ಥಾನಕ್ಕೆ ರಾಜೀನಾಮೆ ನೀಡಿದ ಅಖಿಲೇಶ್ ಯಾದವ್: ವಿಪಕ್ಷ ನಾಯಕನಾಗಲಿರುವ ಉದ್ದೇಶವೇನು?

ಸಂಸತ್ ಸ್ಥಾನಕ್ಕೆ ರಾಜೀನಾಮೆ ನೀಡಿದ ಅಖಿಲೇಶ್ ಯಾದವ್: ವಿಪಕ್ಷ ನಾಯಕನಾಗಲಿರುವ ಉದ್ದೇಶವೇನು?

- Advertisement -
- Advertisement -

ಇತ್ತೀಚೆಗೆ ನಡೆದ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಶಾಸಕರಾಗಿ ಆಯ್ಕೆಯಾಗಿರುವ ಸಮಾಜವಾದಿ ಪಕ್ಷದ ಮುಖ್ಯಸ್ಥ ಮತ್ತು ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ತಾವು ಪ್ರತಿನಿಧಿಸುತ್ತಿದ್ದ ಅಜಂಘರ್ ಲೋಕಸಭಾ ಸಂಸತ್ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಆ ಮೂಲಕ ತಾವು ವಿಧಾನಸಭಾ ಸದ್ಯಸ್ಯರಾಗಿ ಮುಂದುವರೆಯಲು ಮತ್ತು ವಿಪಕ್ಷ ನಾಯಕನಾಗಿ ಕೆಲಸ ಮಾಡಲು ನಿರ್ಧರಿಸಿದ್ದಾರೆ.

ಮೈನ್‌ಪುರಿ ಜಿಲ್ಲೆಯ ಕರ್ಹಾಲ್ ವಿಧಾನಸಭಾ ಕ್ಷೇತ್ರದಿಂದ ಜಯಗಳಿಸಿದ್ದ ಅಖಿಲೇಶ್ ಯಾದವ್ ಆ ಸ್ಥಾನಕ್ಕೆ ರಾಜೀನಾಮೆ ನೀಡಿ ಸಂಸದರಾಗಿ ಮುಂದುವರೆಯುತ್ತಾರೆ ಎನ್ನಲಾಗಿತ್ತು. ಆದರೆ ಅದನ್ನು ಉಲ್ಟಾ ಮಾಡಿರುವ ಅಖಿಲೇಶ್ ಯಾದವ್ ರಾಜ್ಯ ರಾಜಕಾರಣದಲ್ಲಿ ಸಕ್ರಿಯವಾಗಿ ತೊಡಗಿಕೊಳ್ಳುವ ಮೂಲಕ 2024ರ ಸಂಸತ್ ಚುನಾವಣೆ ಮತ್ತು 2027ರ ಯುಪಿ ವಿಧಾನಸಭಾ ಚುನಾವಣೆಯನ್ನು ಎದುರಿಸಲು ಮುಂದಾಗಿದ್ದಾರೆ.

ಸಾಮಾನ್ಯವಾಗಿ ಯುಪಿ ಮುಖ್ಯಮಂತ್ರಿಗಳಾಗುವವರು ವಿಧಾನಸಭಾ ಚುನಾವಣೆಯನ್ನು ಎದುರಿಸುತ್ತಿರಲಿಲ್ಲ. ಈ ಬಾರಿ ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್ ಮತ್ತು ಬಿಜೆಪಿಯ ಯೋಗಿ ಆದಿತ್ಯನಾಥ್ ಇಬ್ಬರೂ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಜಯಗಳಿಸಿದ್ದಾರೆ. ವಿರೋಧ ಪಕ್ಷದ ನಾಯಕನಾಗಿ ಯೋಗಿ ಆದಿತ್ಯನಾಥ್‌ರವರನ್ನು ಎದುರುಗೊಳ್ಳುವ ಆಯ್ಕೆ ಮಾಡಿಕೊಂಡಿದ್ದಾರೆ.

2017ರಲ್ಲಿ ಭಾರೀ ಸೋಲಿನ ನಂತರ ಅಖಿಲೇಶ್ ಯಾದವ್ ರಾಜ್ಯ ರಾಜಕಾರಣದಲ್ಲಿ ಸಕ್ರಿಯರಾಗಿರಲಿಲ್ಲ. 2019ರ ಲೋಕಸಭಾ ಚುನಾವಣೆಯಲ್ಲಿ ಅವರ ಪಕ್ಷ 05 ಕ್ಷೇತ್ರಗಳಲ್ಲಿ ಮಾತ್ರ ಗೆಲುವು ಸಾಧಿಸಲು ಸಾಧ್ಯವಾಗಿತ್ತು. ಆದರೆ ರೈತ ಹೋರಾಟ ಹುಟ್ಟು ಹಾಕಿದ ಅಲೆಯ ನಂತರ ಅವರು ಉತ್ತರ ಪ್ರದೇಶ ಚುನಾವಣೆಗಳತ್ತ ಗಮನ ಹರಿಸಿದ್ದರು. ಈ ಚುನಾವಣೆಯಲ್ಲಿ ಅವರ ಪಕ್ಷ 111 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದರೂ ಬಹುಮತದಿಂದ ದೂರವೇ ಉಳಿಯಿತು. ಇನ್ನು ಈ ಬಾರಿಯೂ ಅವರು ವಿಧಾನಸಭಾ ಸ್ಥಾನಕ್ಕೆ ರಾಜೀನಾಮೆ ನೀಡಿದರೆ ಪಕ್ಷದಲ್ಲಿ ಉತ್ಸಾಹ ಇರುವುದಿಲ್ಲ ಎಂಬುದನ್ನು ಅರಿತು ಅವರು ಶಾಸಕರಾಗಿ ಮುಂದುವರೆಯಲು ಬಯಸಿದ್ದಾರೆ ಎನ್ನಲಾಗಿದೆ.

ಅದೇ ರೀತಿ ಶಾಸಕರಾಗಿ ಆಯ್ಕೆಯಾಗಿರುವ ಪಕ್ಷದ ಅಜಂಖಾನ್ ಸಹ ತಮ್ಮ ಲೋಕಸಭಾ ಸ್ಥಾನಕ್ಕೆ ರಾಜೀನಾಮೆ ನೀಡಿ ಶಾಸಕರಾಗಿ ಮುಂದುವರೆಯಲಿದ್ದಾರೆ ಎನ್ನಲಾಗಿದೆ. ಆಗ ಪಕ್ಷದ ಸಂಸತ್ ಸದಸ್ಯರ ಸಂಖ್ಯೆ 03ಕ್ಕೆ ಇಳಿಯಲಿದೆ.


ಇದನ್ನೂ ಓದಿ: ‘ಜೇಮ್ಸ್‌’ ಸಿನಿಮಾ ತೆಗೆದು ‘ಕಾಶ್ಮೀರ್‌ ಫೈಲ್ಸ್‌’ ತೋರಿಸಲು ಒತ್ತಡ: ಜೇಮ್ಸ್‌ ನಿರ್ಮಾಪಕರು ಹೇಳುವುದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...