Homeಕರೋನಾ ತಲ್ಲಣಎರಡು ದಿನಗಳ ಹಿಂದೆ ಕುಂಭಮೇಳಕ್ಕೆ ಭೇಟಿ ನೀಡಿದ್ದ ಅಖಿಲೇಶ್ ಯಾದವ್‌ಗೆ ಕೊರೊನಾ ಸೋಂಕು

ಎರಡು ದಿನಗಳ ಹಿಂದೆ ಕುಂಭಮೇಳಕ್ಕೆ ಭೇಟಿ ನೀಡಿದ್ದ ಅಖಿಲೇಶ್ ಯಾದವ್‌ಗೆ ಕೊರೊನಾ ಸೋಂಕು

- Advertisement -
- Advertisement -

ಏಪ್ರಿಲ್ 11 ರಂದು ಉತ್ತರಾಖಂಡದ ಹರಿದ್ವಾರದಲ್ಲಿ ನಡೆಯುತ್ತಿರುವ ಕುಂಭಮೇಳಕ್ಕೆ ಭೇಟಿ ನೀಡಿದ್ದ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಮತ್ತು ಉತ್ತರ ಪ್ರದೇಶದ ಸಚಿವ ಅಶುತೋಷ್ ಟಂಡನ್ ಅವರಿಗೆ ಬುಧವಾರ ಕೊರೊನಾ ಸೋಂಕು ದೃಢಪಟ್ಟಿದೆ.

ಈ ಕುರಿತು ಹಿಂದಿಯಲ್ಲಿ ಟ್ವೀಟ್ ಮಾಡಿರುವ ಅಖಿಲೇಶ್ ಯಾದವ್, “ನನ್ನ ಕೊರೊನಾ ಪರೀಕ್ಷಾ ವರದಿ ಬಂದಿದ್ದು, ಕೊರೊನಾ ಸೋಂಕು ದೃಢಪಟ್ಟಿದೆ. ನಾನು ಮನೆಯಲ್ಲಿಯೇ ಐಸೋಲೇಟ್ ಆಗಿದ್ದು, ಚಿಕಿತ್ಸೆಯನ್ನು ಪಡೆಯುತ್ತಿದ್ದೇನೆ. ಕಳೆದ ಕೆಲವು ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದವರು ಕಡ್ಡಾಯವಾಗಿ ಕೊರೊನಾ ಸೋಂಕು ಪರೀಕ್ಷೆ ಮಾಡಿಸಿಕೊಳ್ಳಿ. ಸ್ವಲ್ಪ ದಿನಗಳ ಕಾಲ ಮನೆಯಲ್ಲೇ ಪ್ರತ್ಯೇಕವಾಗಿರಿ” ಎಂದು ಮನವಿ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ಎಲ್ಲಾ ಹಿಂದೂಗಳು ಮುಸ್ಲಿಮರ ಕ್ಷಮೆ ಯಾಚಿಸಬೇಕಾಗಿದೆ: ಕುಂಭಮೇಳದ ಬಗ್ಗೆ ಚಿತ್ರ ನಿರ್ದೇಶಕ ರಾಮ್ ಗೋಪಾಲ್ ವರ್ಮಾ

ಅಖಿಲೇಶ್ ಯಾದವ್ ಅವರು ಇತ್ತೀಚೆಗೆ ಏಪ್ರಿಲ್ 11 ರಂದು ಹರಿದ್ವಾರಕ್ಕೆ ಭೇಟಿ ನೀಡಿದ್ದರು, ಅಲ್ಲಿನ ಕುಂಭಮೇಳದಲ್ಲಿ ಭಾಗವಹಿಸಿದ್ದರು. ಯಾದವ್ ಅವರೊಂದಿಗೆ ಅಖರಾ ಪರಿಷತ್ ಅಧ್ಯಕ್ಷ ಮಹಂತ್ ನರೇಂದ್ರ ಗಿರಿ ಸೇರಿದಂತೆ ವಿವಿಧ ಧಾರ್ಮಿಕ ಮುಖಂಡರನ್ನು ಭೇಟಿಯಾಗಿದ್ದರು.

ಅಲ್ಲಿಂದ ಬಂದು ಲಕ್ನೋ ತಲುಪಿದ ಅಖಿಲೇಶ್ ಯಾದವ್, ಮಂಗಳವಾರ ತಾವೇ ಸ್ವತಃ ಕೊರೊನಾ ಪರೀಕ್ಷೆಗೆ ಒಳಗಾಗಿದ್ದರು.

ಇನ್ನು ಉತ್ತರ ಪ್ರದೇಶದ ನಗರಾಭಿವೃದ್ಧಿ ಸಚಿವ ಅಶುತೋಷ್ ಟಂಡನ್ ಅವರು “ಕೊರೊನಾ ಆರಂಭಿಕ ರೋಗಲಕ್ಷಣಗಳನ್ನು ಗಮನಿಸಿದ ನಂತರ, ನಾನು ಕೊರೊನಾ ಪರೀಕ್ಷೆ ಮಾಡಿಸಿದ್ದು, ಸೋಂಕು ಧೃಢಪಟ್ಟಿದೆ.  ವೈದ್ಯರ ಸಲಹೆಯ ಮೇರೆಗೆ ನಾನು ಮನೆಯಲ್ಲಿ ಪ್ರತ್ಯೇಕವಾಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದಿದ್ದವರು ಎಲ್ಲರೂ ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಿ” ಎಂದು ಹೇಳಿದ್ದಾರೆ.

ಬುಧವಾರ ಕುಂಭಮೇಳದ ಮೂರನೇ ಮತ್ತು ಅತಿದೊಡ್ಡ ‘ಶಾಹಿ ಸ್ನಾನ’ದ ಸಂದರ್ಭದಲ್ಲಿ ಭಕ್ತರು ಹರಿದ್ವಾರದ ಗಂಗಾದಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ. ಪ್ರಮುಖ ಘಟನೆಗಳ ವೇಳಾಪಟ್ಟಿ ಪ್ರಕಾರ, ನಾಲ್ಕು ‘ಶಾಹಿ ಸ್ನಾನ’ ಮತ್ತು ಒಂಬತ್ತು ‘ಗಂಗಾ ಸ್ನಾನ’ಗಳು ಈ ವರ್ಷ ಹರಿದ್ವಾರದಲ್ಲಿ ನಡೆಯಲಿದೆ. ಇದರಲ್ಲಿ ಲಕ್ಷಾಂತರ ಜನರು ಭಾಗವಹಿಸಿದ್ದು, ಕೊರೊಣಾ ಹಾಟ್‌ಸ್ಪಾಟ್ ಆಗುವ ಸಂಭವವಿದೆ ಎನ್ನಲಾಗುತ್ತಿದೆ.


ಇದನ್ನೂ ಓದಿ: ಸುಗ್ರೀವಾಜ್ಞೆ ಹೊರಡಿಸುವಲ್ಲಿ ಯುಪಿಎಗಿಂತ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರವೇ ಮುಂದು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...