Homeಕರ್ನಾಟಕಕಾಂಗ್ರೆಸ್ ತೊರೆದ ಅಕ್ಕೈ ಪದ್ಮಶಾಲಿ: ಲಿಂಗತ್ವ, ಲೈಂಗಿಕತೆ ವಿಷಯಗಳಲ್ಲಿ ರಾಜಕೀಯ ಪ್ರಬುದ್ಧತೆಗೆ ಕರೆ

ಕಾಂಗ್ರೆಸ್ ತೊರೆದ ಅಕ್ಕೈ ಪದ್ಮಶಾಲಿ: ಲಿಂಗತ್ವ, ಲೈಂಗಿಕತೆ ವಿಷಯಗಳಲ್ಲಿ ರಾಜಕೀಯ ಪ್ರಬುದ್ಧತೆಗೆ ಕರೆ

- Advertisement -
- Advertisement -

ಲೈಂಗಿಕ ಅಲ್ಪಸಂಖ್ಯಾತ ಸಮುದಾಯದ ಹಕ್ಕುಗಳ ಹೋರಾಟಗಾರ್ತಿ ಡಾ.ಅಕ್ಕೈ ಪದ್ಮಶಾಲಿ ಅವರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ(ಕೆಪಿಸಿಸಿ) ಉಪಾಧ್ಯಕ್ಷೆ ಹುದ್ದೆ ಹಾಗೂ ಕಾಂಗ್ರೆಸ್‌ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಸೋಮವಾರ (ಆ.11) ರಾಜೀನಾಮೆ ನೀಡಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರಿಗೆ ಬರೆದ ರಾಜೀನಾಮೆ ಪತ್ರದಲ್ಲಿ, “ಸೆಪ್ಟೆಂಬರ್ 20, 2020ರಂದು ತನಗೆ ಕಾಂಗ್ರೆಸ್‌ನ ಪ್ರಾಥಮಿಕ ಸದಸ್ಯತ್ವ ಕೊಟ್ಟು, ಬಳಿಕ ಕೆಪಿಸಿಸಿಗೆ ತನ್ನನ್ನು ಸೇರಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಉಪಾಧ್ಯಕ್ಷೆ ಹುದ್ದೆಗಳನ್ನು ನೀಡಿರುವುದಕ್ಕೆ ತಾನು ಅಭಾರಿ” ಎಂದು ಅಕ್ಕೈ ಹೇಳಿದ್ದಾರೆ.

“ನಮ್ಮ ತುಳಿತಕ್ಕೊಳಗಾದ ಹಾಗೂ ಶೋಷಿತ ಅಂತರ್ಲಿಂಗಿ , ಲಿಂಗತ್ವ ಹಾಗೂ ಲೈಂಗಿಕ ಅಲ್ಪಸಂಖ್ಯಾತರು, ಲೈಂಗಿಕ ಕಾರ್ಯಕರ್ತೆಯ ಸಮುದಾಯವು ಇಂದಿನ ಪ್ರಸ್ತುತ ಸಾಮಾಜಿಕ, ಆರ್ಥಿಕ, ರಾಜಕೀಯ, ಶೈಕ್ಷಣಿಕ, ಕಾನೂನು, ಮೂಲಭೂತ ಹಕ್ಕುಗಳ ಹಾಗೂ ನೀತಿ ನಿರೂಪಣೆಗಳ ನೆಲೆಗಟ್ಟಿನಿಂದ ತೀರಾ ಹಿಂದುಳಿದಿದೆ. ನಮ್ಮ ಸಮುದಾಯವನ್ನು ರಾಷ್ಟ್ರದಾದ್ಯಂತ ಸಂಘಟಿಸುವ ಸಾಮಾಜಿಕ ಜವಾಬ್ದಾರಿ ಹಾಗೂ ಸಂವಿಧಾನದ ನೈತಿಕತೆಯನ್ನು ಎತ್ತಿ ಹಿಡಿಯುವ ಜವಾಬ್ದಾರಿ ನಿಭಾಯಿಸುವ ಸಲುವಾಗಿ ಕೆಪಿಸಿಸಿ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ” ಎಂದು ಅಕ್ಕೈ ತನ್ನ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.

ಟ್ರಾನ್ಸ್ಜೆಂಡರ್ ಸಮುದಾಯ, ಲೈಂಗಿಕ ಅಲ್ಪಸಂಖ್ಯಾತರು ಮತ್ತು ಲೈಂಗಿಕ ಕಾರ್ಯಕರ್ತರ ಸಮುದಾಯಗಳ ಹೋರಾಟಗಳಿಗೆ ಬೆಂಬಲ ನೀಡಿದ ಕಾಂಗ್ರೆಸ್ ನಾಯಕರಿಗೆ ಅವರು ಧನ್ಯವಾದ ಅರ್ಪಿಸಿದ್ದಾರೆ.

ರಾಜೀನಾಮೆ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಅಕ್ಕೈ, “ನಾವು ಸಮಾಜದ ಅತ್ಯಂತ ಅಂಚಿನಲ್ಲಿರುವ ವರ್ಗ. ಒಂದು ಪಕ್ಷದೊಳಗೆ ಇರುವುದು ಒಂದು ರೀತಿಯಾದರೆ, ಅದರಿಂದ ಹೊರಬರುವುದು ನನ್ನನ್ನು ಇನ್ನಷ್ಟು ಮುಕ್ತ ಮತ್ತು ಬಲಶಾಲಿಯಾಗಿ ಮಾಡುತ್ತದೆ ಎಂದು ನಾನು ಭಾವಿಸಿದ್ದೇನೆ. ಅದಕ್ಕಾಗಿಯೇ ಈ ರಾಜಕೀಯ ವ್ಯವಸ್ಥೆಯಿಂದ ಹೊರಬಂದು ನನ್ನ ಚಳವಳಿಯ ತೊಡಗಿಸಿಕೊಳ್ಳಲು ನಿರ್ಧರಿಸಿದೆ” ಎಂದು ಹೇಳಿದ್ದಾರೆ.

ರಾಜಕಾರಣಿಗಳ ಟ್ರಾನ್ಸ್ಜೆಂಡರ್ ವಿರೋಧಿ ಹೇಳಿಕೆಗಳನ್ನು ಉಲ್ಲೇಖಿಸಿದ ಅಕ್ಕೈ, ರಾಜಕೀಯ ವಾತಾವರಣವನ್ನು ಟೀಕಿಸಿದ್ದಾರೆ. ಚಳುವಳಿಯು ಇತರ ಎಲ್ಲಾ ವ್ಯವಸ್ಥೆಗಳಿಗಿಂತ ಹೆಚ್ಚು ಪ್ರಬಲವಾಗಿದೆ. ಈ ಕಾರಣಕ್ಕೆ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿ ಚಳವಳಿಯಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಳ್ಳುವ ನಿರ್ಧಾರ ಮಾಡಿದ್ದೇನೆ” ಎಂದಿದ್ದಾರೆ.

ಲಿಂಗತ್ವ ಮತ್ತು ಲೈಂಗಿಕತೆಯ ವಿಷಯಗಳ ಬಗ್ಗೆ ರಾಜಕೀಯ ಪ್ರಬುದ್ಧತೆಗೆ ಕರೆ ನೀಡಿದ ಅವರು, “ಲಿಂಗತ್ವ ಮತ್ತು ಲೈಂಗಿಕತೆಯ ಬಗ್ಗೆ ಮಾತನಾಡುವವರು ಬಹಳ ಕಡಿಮೆ. ಪ್ರತಿಯೊಂದು ರಾಜಕೀಯ ಪಕ್ಷವು ಸಾಂಕೇತಿಕವಾಗಿ ಮಾತ್ರ ಅಲ್ಲದೆ, ಲಿಂಗತ್ವ ಮತ್ತು ಲೈಂಗಿಕ ಅಲ್ಪಸಂಖ್ಯಾತರ ಸಮಸ್ಯೆಗಳನ್ನು ಮುಖ್ಯವಾಹಿನಿಗೆ ತರುವ ಆಂತರಿಕ ದೃಢಸಂಕಲ್ಪದ ಬಗ್ಗೆ ಮಾತನಾಡಬೇಕು” ಎಂದು ಆಗ್ರಹಿಸಿದ್ದಾರೆ.

“ನನಗೆ ರಾಜಕೀಯ ಬೇಕಾ..ಚಳುವಳಿ ಬೇಕಾ? ಎಂದು ಯೋಚಿಸಿದಾಗ ಚಳುವಳಿಯೇ ಸೂಕ್ತ ಆಯ್ಕೆ ಎಂದನಿಸಿತು. ಪ್ರಸ್ತುತ ಸನ್ನಿವೇಶದಲ್ಲಿ ನಮ್ಮ ಸಮುದಾಯದ ಹಕ್ಕುಗಳ ಸಂರಕ್ಷಣೆಯಲ್ಲಿ ತೊಡಗಿಸಿಕೊಳ್ಳುವ ಅಗತ್ಯತೆ ಇದೆ. ಅದು ಈಗಿನ ರಾಜಕೀಯ ವ್ಯವಸ್ಥೆಯೊಳಗೆಯಿದ್ದು ಸಾಧ್ಯವಿಲ್ಲ. ಹಾಗಾಗಿ, ಅದರಿಂದ ಹೊರಬಂದೆ” ಎಂದು ಅಕ್ಕೈ ತಿಳಿಸಿದ್ದಾರೆ.

ಸಚಿವ ಕೆ.ಎನ್. ರಾಜಣ್ಣ ವಜಾ: ಕಾಂಗ್ರೆಸ್‌ನ ‘ದಲಿತ ವಿರೋಧಿ’ ಮುಖವಾಡ ಬಯಲು- ಬಿಜೆಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...