Homeಕರ್ನಾಟಕಕಾಂಗ್ರೆಸ್ ತೊರೆದ ಅಕ್ಕೈ ಪದ್ಮಶಾಲಿ: ಲಿಂಗತ್ವ, ಲೈಂಗಿಕತೆ ವಿಷಯಗಳಲ್ಲಿ ರಾಜಕೀಯ ಪ್ರಬುದ್ಧತೆಗೆ ಕರೆ

ಕಾಂಗ್ರೆಸ್ ತೊರೆದ ಅಕ್ಕೈ ಪದ್ಮಶಾಲಿ: ಲಿಂಗತ್ವ, ಲೈಂಗಿಕತೆ ವಿಷಯಗಳಲ್ಲಿ ರಾಜಕೀಯ ಪ್ರಬುದ್ಧತೆಗೆ ಕರೆ

- Advertisement -
- Advertisement -

ಲೈಂಗಿಕ ಅಲ್ಪಸಂಖ್ಯಾತ ಸಮುದಾಯದ ಹಕ್ಕುಗಳ ಹೋರಾಟಗಾರ್ತಿ ಡಾ.ಅಕ್ಕೈ ಪದ್ಮಶಾಲಿ ಅವರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ(ಕೆಪಿಸಿಸಿ) ಉಪಾಧ್ಯಕ್ಷೆ ಹುದ್ದೆ ಹಾಗೂ ಕಾಂಗ್ರೆಸ್‌ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಸೋಮವಾರ (ಆ.11) ರಾಜೀನಾಮೆ ನೀಡಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರಿಗೆ ಬರೆದ ರಾಜೀನಾಮೆ ಪತ್ರದಲ್ಲಿ, “ಸೆಪ್ಟೆಂಬರ್ 20, 2020ರಂದು ತನಗೆ ಕಾಂಗ್ರೆಸ್‌ನ ಪ್ರಾಥಮಿಕ ಸದಸ್ಯತ್ವ ಕೊಟ್ಟು, ಬಳಿಕ ಕೆಪಿಸಿಸಿಗೆ ತನ್ನನ್ನು ಸೇರಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಉಪಾಧ್ಯಕ್ಷೆ ಹುದ್ದೆಗಳನ್ನು ನೀಡಿರುವುದಕ್ಕೆ ತಾನು ಅಭಾರಿ” ಎಂದು ಅಕ್ಕೈ ಹೇಳಿದ್ದಾರೆ.

“ನಮ್ಮ ತುಳಿತಕ್ಕೊಳಗಾದ ಹಾಗೂ ಶೋಷಿತ ಅಂತರ್ಲಿಂಗಿ , ಲಿಂಗತ್ವ ಹಾಗೂ ಲೈಂಗಿಕ ಅಲ್ಪಸಂಖ್ಯಾತರು, ಲೈಂಗಿಕ ಕಾರ್ಯಕರ್ತೆಯ ಸಮುದಾಯವು ಇಂದಿನ ಪ್ರಸ್ತುತ ಸಾಮಾಜಿಕ, ಆರ್ಥಿಕ, ರಾಜಕೀಯ, ಶೈಕ್ಷಣಿಕ, ಕಾನೂನು, ಮೂಲಭೂತ ಹಕ್ಕುಗಳ ಹಾಗೂ ನೀತಿ ನಿರೂಪಣೆಗಳ ನೆಲೆಗಟ್ಟಿನಿಂದ ತೀರಾ ಹಿಂದುಳಿದಿದೆ. ನಮ್ಮ ಸಮುದಾಯವನ್ನು ರಾಷ್ಟ್ರದಾದ್ಯಂತ ಸಂಘಟಿಸುವ ಸಾಮಾಜಿಕ ಜವಾಬ್ದಾರಿ ಹಾಗೂ ಸಂವಿಧಾನದ ನೈತಿಕತೆಯನ್ನು ಎತ್ತಿ ಹಿಡಿಯುವ ಜವಾಬ್ದಾರಿ ನಿಭಾಯಿಸುವ ಸಲುವಾಗಿ ಕೆಪಿಸಿಸಿ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ” ಎಂದು ಅಕ್ಕೈ ತನ್ನ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.

ಟ್ರಾನ್ಸ್ಜೆಂಡರ್ ಸಮುದಾಯ, ಲೈಂಗಿಕ ಅಲ್ಪಸಂಖ್ಯಾತರು ಮತ್ತು ಲೈಂಗಿಕ ಕಾರ್ಯಕರ್ತರ ಸಮುದಾಯಗಳ ಹೋರಾಟಗಳಿಗೆ ಬೆಂಬಲ ನೀಡಿದ ಕಾಂಗ್ರೆಸ್ ನಾಯಕರಿಗೆ ಅವರು ಧನ್ಯವಾದ ಅರ್ಪಿಸಿದ್ದಾರೆ.

ರಾಜೀನಾಮೆ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಅಕ್ಕೈ, “ನಾವು ಸಮಾಜದ ಅತ್ಯಂತ ಅಂಚಿನಲ್ಲಿರುವ ವರ್ಗ. ಒಂದು ಪಕ್ಷದೊಳಗೆ ಇರುವುದು ಒಂದು ರೀತಿಯಾದರೆ, ಅದರಿಂದ ಹೊರಬರುವುದು ನನ್ನನ್ನು ಇನ್ನಷ್ಟು ಮುಕ್ತ ಮತ್ತು ಬಲಶಾಲಿಯಾಗಿ ಮಾಡುತ್ತದೆ ಎಂದು ನಾನು ಭಾವಿಸಿದ್ದೇನೆ. ಅದಕ್ಕಾಗಿಯೇ ಈ ರಾಜಕೀಯ ವ್ಯವಸ್ಥೆಯಿಂದ ಹೊರಬಂದು ನನ್ನ ಚಳವಳಿಯ ತೊಡಗಿಸಿಕೊಳ್ಳಲು ನಿರ್ಧರಿಸಿದೆ” ಎಂದು ಹೇಳಿದ್ದಾರೆ.

ರಾಜಕಾರಣಿಗಳ ಟ್ರಾನ್ಸ್ಜೆಂಡರ್ ವಿರೋಧಿ ಹೇಳಿಕೆಗಳನ್ನು ಉಲ್ಲೇಖಿಸಿದ ಅಕ್ಕೈ, ರಾಜಕೀಯ ವಾತಾವರಣವನ್ನು ಟೀಕಿಸಿದ್ದಾರೆ. ಚಳುವಳಿಯು ಇತರ ಎಲ್ಲಾ ವ್ಯವಸ್ಥೆಗಳಿಗಿಂತ ಹೆಚ್ಚು ಪ್ರಬಲವಾಗಿದೆ. ಈ ಕಾರಣಕ್ಕೆ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿ ಚಳವಳಿಯಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಳ್ಳುವ ನಿರ್ಧಾರ ಮಾಡಿದ್ದೇನೆ” ಎಂದಿದ್ದಾರೆ.

ಲಿಂಗತ್ವ ಮತ್ತು ಲೈಂಗಿಕತೆಯ ವಿಷಯಗಳ ಬಗ್ಗೆ ರಾಜಕೀಯ ಪ್ರಬುದ್ಧತೆಗೆ ಕರೆ ನೀಡಿದ ಅವರು, “ಲಿಂಗತ್ವ ಮತ್ತು ಲೈಂಗಿಕತೆಯ ಬಗ್ಗೆ ಮಾತನಾಡುವವರು ಬಹಳ ಕಡಿಮೆ. ಪ್ರತಿಯೊಂದು ರಾಜಕೀಯ ಪಕ್ಷವು ಸಾಂಕೇತಿಕವಾಗಿ ಮಾತ್ರ ಅಲ್ಲದೆ, ಲಿಂಗತ್ವ ಮತ್ತು ಲೈಂಗಿಕ ಅಲ್ಪಸಂಖ್ಯಾತರ ಸಮಸ್ಯೆಗಳನ್ನು ಮುಖ್ಯವಾಹಿನಿಗೆ ತರುವ ಆಂತರಿಕ ದೃಢಸಂಕಲ್ಪದ ಬಗ್ಗೆ ಮಾತನಾಡಬೇಕು” ಎಂದು ಆಗ್ರಹಿಸಿದ್ದಾರೆ.

“ನನಗೆ ರಾಜಕೀಯ ಬೇಕಾ..ಚಳುವಳಿ ಬೇಕಾ? ಎಂದು ಯೋಚಿಸಿದಾಗ ಚಳುವಳಿಯೇ ಸೂಕ್ತ ಆಯ್ಕೆ ಎಂದನಿಸಿತು. ಪ್ರಸ್ತುತ ಸನ್ನಿವೇಶದಲ್ಲಿ ನಮ್ಮ ಸಮುದಾಯದ ಹಕ್ಕುಗಳ ಸಂರಕ್ಷಣೆಯಲ್ಲಿ ತೊಡಗಿಸಿಕೊಳ್ಳುವ ಅಗತ್ಯತೆ ಇದೆ. ಅದು ಈಗಿನ ರಾಜಕೀಯ ವ್ಯವಸ್ಥೆಯೊಳಗೆಯಿದ್ದು ಸಾಧ್ಯವಿಲ್ಲ. ಹಾಗಾಗಿ, ಅದರಿಂದ ಹೊರಬಂದೆ” ಎಂದು ಅಕ್ಕೈ ತಿಳಿಸಿದ್ದಾರೆ.

ಸಚಿವ ಕೆ.ಎನ್. ರಾಜಣ್ಣ ವಜಾ: ಕಾಂಗ್ರೆಸ್‌ನ ‘ದಲಿತ ವಿರೋಧಿ’ ಮುಖವಾಡ ಬಯಲು- ಬಿಜೆಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಾಜಿ ರಾಷ್ಟ್ರಪತಿ ಜಗದೀಪ್ ಧನ್ಕರ್ ರಾಜೀನಾಮೆ ಹಿಂದೆ ಇಡಿ ಒತ್ತಡ : ತನ್ನ ಹೊಸ ಪುಸ್ತಕದಲ್ಲಿ ಸಂಜಯ್ ರಾವುತ್ ಆರೋಪ

ಮಾಜಿ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರು ಮೋದಿ ಸರ್ಕಾರದ ವಿರುದ್ಧ ಕೈಗೊಂಡ ಸ್ವತಂತ್ರ ರಾಜಕೀಯ ನಡೆಗಳಿಗೆ ಪ್ರತಿಯಾಗಿ, ಜಾರಿ ನಿರ್ದೇಶನಾಲಯದ (ಇಡಿ) ಒತ್ತಡಕ್ಕೆ ಮಣಿದು 2025ರಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರು ಎಂದು...

ಯುಎನ್‌ಐ ಮಾಧ್ಯಮ ಕಚೇರಿಗೆ ಬೀಗ : ಪೊಲೀಸರ ವರ್ತನೆಗೆ ಪತ್ರಿಕಾ ಸಂಘಗಳು, ವಿಪಕ್ಷ ನಾಯಕರಿಂದ ತೀವ್ರ ಖಂಡನೆ

ಶುಕ್ರವಾರ (ಮಾ.20) ರಾತ್ರಿ ದೆಹಲಿ ಪೊಲೀಸರು ಯುನೈಟೆಡ್ ನ್ಯೂಸ್ ಆಫ್ ಇಂಡಿಯಾ (ಯುಎನ್‌ಐ) ಸುದ್ದಿ ಸಂಸ್ಥೆಯ ಕಚೇರಿಗೆ ಬೀಗ ಜಡಿದ ರೀತಿಗೆ ಪತ್ರಕರ್ತರ ಸಂಘಗಳು ಮತ್ತು ವಿರೋಧ ಪಕ್ಷಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ದೆಹಲಿಯ...

ಉಪಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿದ ಕಾಂಗ್ರೆಸ್: ದಾವಣಗೆರೆ ದಕ್ಷಿಣದಲ್ಲಿ ಶಾಮನೂರು ಕುಟುಂಬಕ್ಕೆ ಟಿಕೆಟ್

ಏಪ್ರಿಲ್ 9ರಂದು ನಡೆಯಲಿರುವ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ. ದಾವಣಗೆರೆ ದಕ್ಷಿಣದಲ್ಲಿ ಮುಸ್ಲಿಮರ ತೀವ್ರ ವಿರೋಧದ ನಡುವೆಯೂ ಕೃಷಿ ಸಚಿವ ಎಸ್‌.ಎಸ್‌ ಮಲ್ಲಿಕಾರ್ಜುನ್ ಅವರ...

ಕೇರಳ ವಿಧಾನಸಭೆ ಚುನಾವಣೆ : ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಕೆ. ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಕೇಸ್!

ಏಪ್ರಿಲ್ 9ರಂದು ನಡೆಯಲಿರುವ ಕೇರಳ ವಿಧಾನಸಭೆ ಚುನಾವಣೆಗೆ ಕಾಸರಗೋಡಿನ ಮಂಜೇಶ್ವರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಕೆ. ಸುರೇಂದ್ರನ್ ಮೇಲೆ ಬರೋಬ್ಬರಿ 242 ಕ್ರಿಮಿನಲ್ ಪ್ರಕರಣಗಳು ಬಾಕಿ ಇವೆ. ಈ ಮಾಹಿತಿ ಶನಿವಾರ...

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಆರು ಮಂದಿ ಶಾಸಕರನ್ನು ಅಮಾನತುಗೊಳಿಸಿದ ಬಿಜೆಡಿ

ಮಾರ್ಚ್ 16ರಂದು ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಆರು ಮಂದಿ ಶಾಸಕರನ್ನು ಒಡಿಶಾದ ಬಿಜು ಜನತಾದಳ (ಬಿಜೆಡಿ) ಅಮಾನತುಗೊಳಿಸಿದೆ ಎಂದು ವರದಿಯಾಗಿದೆ. ಒಟ್ಟು 8 ಶಾಸಕರು ಪಕ್ಷದ ವಿಪ್ ಉಲ್ಲಂಘಿಸಿದ್ದಾರೆ....

ಆಸ್ಕರ್ ನಾಮನಿರ್ದೇಶಿತ ‘ದಿ ವಾಯ್ಸ್ ಆಫ್ ಹಿಂದ್ ರಜಬ್’ ಚಿತ್ರ ಪ್ರದರ್ಶನಕ್ಕೆ ಭಾರತದಲ್ಲಿ ನಿರ್ಬಂಧ!

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ಳನ್ನು ಇಸ್ರೇಲಿ ಸೈನಿಕರು ಸುಮಾರು 300 ಸುತ್ತು ಗುಂಡಿಕ್ಕಿ ಭೀಕರವಾಗಿ ಹತ್ಯೆ ಮಾಡಿರುವ ಕಥೆಯನ್ನು ಹೇಳುವ, 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರದ ಪ್ರದರ್ಶನಕ್ಕೆ...

ವೈದ್ಯೆ ವಂದನಾ ದಾಸ್ ಹತ್ಯೆ ಪ್ರಕರಣ; ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೇರಳ ನ್ಯಾಯಾಲಯ

ಕೊಲ್ಲಂ: ಆಸ್ಪತ್ರೆಯಲ್ಲಿ ನಡೆದ ಡಾ. ವಂದನಾ ದಾಸ್ ಅವರ ಹತ್ಯೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಅಪರಾಧಿ ಜಿ. ಸಂದೀಪ್ ಗೆ ಶನಿವಾರ ಜೀವಾವಧಿ ಶಿಕ್ಷೆ ವಿಧಿಸಲಾಗಿದ್ದು, ಆರೋಪಿಗೆ ಮರಣದಂಡನೆ ವಿಧಿಸುವಂತೆ ಕೋರಿ ಮೇಲ್ಮನವಿ ಸಲ್ಲಿಸುವುದಾಗಿ...

ಕಾಂಗ್ರೆಸ್, ರಾಹುಲ್ ಗಾಂಧಿ ಬಿಜೆಪಿಯ ಬಿ-ಟೀಮ್: ಕೇರಳ ಸಿಎಂ ಪಿಣರಾಯಿ ವಿಜಯನ್

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಶನಿವಾರ ಕಾಂಗ್ರೆಸ್ ಮತ್ತು ಅದರ ನಾಯಕ ರಾಹುಲ್ ಗಾಂಧಿ ಅವರನ್ನು ಟೀಕಿಸಿದ್ದು, ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಬಿಜೆಪಿಯ ಬಿ-ಟೀಮ್ ಎಂದು ಆರೋಪಿಸಿದ್ದಾರೆ.   ಕೇಂದ್ರೀಯ ಸಂಸ್ಥೆಗಳು ಕೇರಳ...

‘ಬಿಜೆಪಿ ಮತದಾನದ ಹಕ್ಕನ್ನು ಕಸಿದುಕೊಳ್ಳಲು ಬಿಡುವುದಿಲ್ಲ, ಕೊನೆಯವರೆಗೂ ಹೋರಾಡುತ್ತೇವೆ’; ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಗೆ ಮುನ್ನ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಮತದಾರರ ಪಟ್ಟಿಯ ಪರಿಷ್ಕರಣೆಯ ಮೂಲಕ ಜನರ "ಮತದಾನದ ಹಕ್ಕನ್ನು ಕಸಿದುಕೊಳ್ಳಲು" ಪ್ರಯತ್ನಿಸುತ್ತಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.  "ಮೋದಿ ಜಿ...

ಏಳು ವರ್ಷಗಳ ನಂತರ ಯುಎಪಿಎ ಪ್ರಕರಣದಲ್ಲಿ ಇಬ್ಬರು ಕಾಶ್ಮೀರಿ ಯುವಕರನ್ನು ಖುಲಾಸೆಗೊಳಿಸಿದ ದೆಹಲಿ ನ್ಯಾಯಾಲಯ

ಏಳು ವರ್ಷಗಳಿಗೂ ಹೆಚ್ಚು ಕಾಲದ ನಂತರ, ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಬಂಧಿಸಲ್ಪಟ್ಟ ಇಬ್ಬರು ಕಾಶ್ಮೀರಿ ಯುವಕರನ್ನು ಗುರುವಾರ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಪ್ರಾಸಿಕ್ಯೂಷನ್ ತನ್ನ ಆರೋಪಗಳನ್ನು ಸಾಬೀತುಪಡಿಸಲು ವಿಫಲವಾಗಿದೆ ಮತ್ತು ದೆಹಲಿ ಪೊಲೀಸರು...