Homeಕರ್ನಾಟಕಕಾಂಗ್ರೆಸ್ ತೊರೆದ ಅಕ್ಕೈ ಪದ್ಮಶಾಲಿ: ಲಿಂಗತ್ವ, ಲೈಂಗಿಕತೆ ವಿಷಯಗಳಲ್ಲಿ ರಾಜಕೀಯ ಪ್ರಬುದ್ಧತೆಗೆ ಕರೆ

ಕಾಂಗ್ರೆಸ್ ತೊರೆದ ಅಕ್ಕೈ ಪದ್ಮಶಾಲಿ: ಲಿಂಗತ್ವ, ಲೈಂಗಿಕತೆ ವಿಷಯಗಳಲ್ಲಿ ರಾಜಕೀಯ ಪ್ರಬುದ್ಧತೆಗೆ ಕರೆ

- Advertisement -
- Advertisement -

ಲೈಂಗಿಕ ಅಲ್ಪಸಂಖ್ಯಾತ ಸಮುದಾಯದ ಹಕ್ಕುಗಳ ಹೋರಾಟಗಾರ್ತಿ ಡಾ.ಅಕ್ಕೈ ಪದ್ಮಶಾಲಿ ಅವರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ(ಕೆಪಿಸಿಸಿ) ಉಪಾಧ್ಯಕ್ಷೆ ಹುದ್ದೆ ಹಾಗೂ ಕಾಂಗ್ರೆಸ್‌ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಸೋಮವಾರ (ಆ.11) ರಾಜೀನಾಮೆ ನೀಡಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರಿಗೆ ಬರೆದ ರಾಜೀನಾಮೆ ಪತ್ರದಲ್ಲಿ, “ಸೆಪ್ಟೆಂಬರ್ 20, 2020ರಂದು ತನಗೆ ಕಾಂಗ್ರೆಸ್‌ನ ಪ್ರಾಥಮಿಕ ಸದಸ್ಯತ್ವ ಕೊಟ್ಟು, ಬಳಿಕ ಕೆಪಿಸಿಸಿಗೆ ತನ್ನನ್ನು ಸೇರಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಉಪಾಧ್ಯಕ್ಷೆ ಹುದ್ದೆಗಳನ್ನು ನೀಡಿರುವುದಕ್ಕೆ ತಾನು ಅಭಾರಿ” ಎಂದು ಅಕ್ಕೈ ಹೇಳಿದ್ದಾರೆ.

“ನಮ್ಮ ತುಳಿತಕ್ಕೊಳಗಾದ ಹಾಗೂ ಶೋಷಿತ ಅಂತರ್ಲಿಂಗಿ , ಲಿಂಗತ್ವ ಹಾಗೂ ಲೈಂಗಿಕ ಅಲ್ಪಸಂಖ್ಯಾತರು, ಲೈಂಗಿಕ ಕಾರ್ಯಕರ್ತೆಯ ಸಮುದಾಯವು ಇಂದಿನ ಪ್ರಸ್ತುತ ಸಾಮಾಜಿಕ, ಆರ್ಥಿಕ, ರಾಜಕೀಯ, ಶೈಕ್ಷಣಿಕ, ಕಾನೂನು, ಮೂಲಭೂತ ಹಕ್ಕುಗಳ ಹಾಗೂ ನೀತಿ ನಿರೂಪಣೆಗಳ ನೆಲೆಗಟ್ಟಿನಿಂದ ತೀರಾ ಹಿಂದುಳಿದಿದೆ. ನಮ್ಮ ಸಮುದಾಯವನ್ನು ರಾಷ್ಟ್ರದಾದ್ಯಂತ ಸಂಘಟಿಸುವ ಸಾಮಾಜಿಕ ಜವಾಬ್ದಾರಿ ಹಾಗೂ ಸಂವಿಧಾನದ ನೈತಿಕತೆಯನ್ನು ಎತ್ತಿ ಹಿಡಿಯುವ ಜವಾಬ್ದಾರಿ ನಿಭಾಯಿಸುವ ಸಲುವಾಗಿ ಕೆಪಿಸಿಸಿ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ” ಎಂದು ಅಕ್ಕೈ ತನ್ನ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.

ಟ್ರಾನ್ಸ್ಜೆಂಡರ್ ಸಮುದಾಯ, ಲೈಂಗಿಕ ಅಲ್ಪಸಂಖ್ಯಾತರು ಮತ್ತು ಲೈಂಗಿಕ ಕಾರ್ಯಕರ್ತರ ಸಮುದಾಯಗಳ ಹೋರಾಟಗಳಿಗೆ ಬೆಂಬಲ ನೀಡಿದ ಕಾಂಗ್ರೆಸ್ ನಾಯಕರಿಗೆ ಅವರು ಧನ್ಯವಾದ ಅರ್ಪಿಸಿದ್ದಾರೆ.

ರಾಜೀನಾಮೆ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಅಕ್ಕೈ, “ನಾವು ಸಮಾಜದ ಅತ್ಯಂತ ಅಂಚಿನಲ್ಲಿರುವ ವರ್ಗ. ಒಂದು ಪಕ್ಷದೊಳಗೆ ಇರುವುದು ಒಂದು ರೀತಿಯಾದರೆ, ಅದರಿಂದ ಹೊರಬರುವುದು ನನ್ನನ್ನು ಇನ್ನಷ್ಟು ಮುಕ್ತ ಮತ್ತು ಬಲಶಾಲಿಯಾಗಿ ಮಾಡುತ್ತದೆ ಎಂದು ನಾನು ಭಾವಿಸಿದ್ದೇನೆ. ಅದಕ್ಕಾಗಿಯೇ ಈ ರಾಜಕೀಯ ವ್ಯವಸ್ಥೆಯಿಂದ ಹೊರಬಂದು ನನ್ನ ಚಳವಳಿಯ ತೊಡಗಿಸಿಕೊಳ್ಳಲು ನಿರ್ಧರಿಸಿದೆ” ಎಂದು ಹೇಳಿದ್ದಾರೆ.

ರಾಜಕಾರಣಿಗಳ ಟ್ರಾನ್ಸ್ಜೆಂಡರ್ ವಿರೋಧಿ ಹೇಳಿಕೆಗಳನ್ನು ಉಲ್ಲೇಖಿಸಿದ ಅಕ್ಕೈ, ರಾಜಕೀಯ ವಾತಾವರಣವನ್ನು ಟೀಕಿಸಿದ್ದಾರೆ. ಚಳುವಳಿಯು ಇತರ ಎಲ್ಲಾ ವ್ಯವಸ್ಥೆಗಳಿಗಿಂತ ಹೆಚ್ಚು ಪ್ರಬಲವಾಗಿದೆ. ಈ ಕಾರಣಕ್ಕೆ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿ ಚಳವಳಿಯಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಳ್ಳುವ ನಿರ್ಧಾರ ಮಾಡಿದ್ದೇನೆ” ಎಂದಿದ್ದಾರೆ.

ಲಿಂಗತ್ವ ಮತ್ತು ಲೈಂಗಿಕತೆಯ ವಿಷಯಗಳ ಬಗ್ಗೆ ರಾಜಕೀಯ ಪ್ರಬುದ್ಧತೆಗೆ ಕರೆ ನೀಡಿದ ಅವರು, “ಲಿಂಗತ್ವ ಮತ್ತು ಲೈಂಗಿಕತೆಯ ಬಗ್ಗೆ ಮಾತನಾಡುವವರು ಬಹಳ ಕಡಿಮೆ. ಪ್ರತಿಯೊಂದು ರಾಜಕೀಯ ಪಕ್ಷವು ಸಾಂಕೇತಿಕವಾಗಿ ಮಾತ್ರ ಅಲ್ಲದೆ, ಲಿಂಗತ್ವ ಮತ್ತು ಲೈಂಗಿಕ ಅಲ್ಪಸಂಖ್ಯಾತರ ಸಮಸ್ಯೆಗಳನ್ನು ಮುಖ್ಯವಾಹಿನಿಗೆ ತರುವ ಆಂತರಿಕ ದೃಢಸಂಕಲ್ಪದ ಬಗ್ಗೆ ಮಾತನಾಡಬೇಕು” ಎಂದು ಆಗ್ರಹಿಸಿದ್ದಾರೆ.

“ನನಗೆ ರಾಜಕೀಯ ಬೇಕಾ..ಚಳುವಳಿ ಬೇಕಾ? ಎಂದು ಯೋಚಿಸಿದಾಗ ಚಳುವಳಿಯೇ ಸೂಕ್ತ ಆಯ್ಕೆ ಎಂದನಿಸಿತು. ಪ್ರಸ್ತುತ ಸನ್ನಿವೇಶದಲ್ಲಿ ನಮ್ಮ ಸಮುದಾಯದ ಹಕ್ಕುಗಳ ಸಂರಕ್ಷಣೆಯಲ್ಲಿ ತೊಡಗಿಸಿಕೊಳ್ಳುವ ಅಗತ್ಯತೆ ಇದೆ. ಅದು ಈಗಿನ ರಾಜಕೀಯ ವ್ಯವಸ್ಥೆಯೊಳಗೆಯಿದ್ದು ಸಾಧ್ಯವಿಲ್ಲ. ಹಾಗಾಗಿ, ಅದರಿಂದ ಹೊರಬಂದೆ” ಎಂದು ಅಕ್ಕೈ ತಿಳಿಸಿದ್ದಾರೆ.

ಸಚಿವ ಕೆ.ಎನ್. ರಾಜಣ್ಣ ವಜಾ: ಕಾಂಗ್ರೆಸ್‌ನ ‘ದಲಿತ ವಿರೋಧಿ’ ಮುಖವಾಡ ಬಯಲು- ಬಿಜೆಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...

ಬಿಹಾರ-ಬಂಗಾಳದ ಬಳಿಕ ಕರ್ನಾಟಕದ ಸರತಿ; ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

ಭಾಗ-1 ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತರಾತುರಿಯಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಜಾರಿ ಮಾಡಿದ ಹಿಂದಿನ ದುರುದ್ದೇಶ ಬಿಹಾರದ ಬಳಿಕ ಈಗ ಪಶ್ಚಿಮ ಬಂಗಾಳದಲ್ಲಿ ಸಾಬೀತಾಗಿದೆ. ಹಿಂದಿನ ಚುನಾವಣೆಗಳಲ್ಲಿ ಕಡಿಮೆ...

ವಿಜಯ್ ಪಕ್ಷದ ಗೆಲುವಿಗೆ ಕಾರಣವಾದ ಡಿಎಂಕೆ-ಎಐಎಡಿಎಂಕೆ ಪಕ್ಷದ ವಲಸೆ ನಾಯಕರು

50 ವರ್ಷಗಳಿಂದ ಡಿಎಂಕೆ (DMK) ಮತ್ತು ಎಐಎಡಿಎಂಕೆ (AIADMK) ಎಂಬ ಎರಡು ದ್ರಾವಿಡ ಪಕ್ಷಗಳ ಅಧಿಪತ್ಯದಲ್ಲಿದ್ದ ತಮಿಳು ಮಣ್ಣಿನಲ್ಲಿ ಈಗ ಮಹತ್ವದ ಬದಲಾವಣೆ ಗಾಳಿ ಬೀಸಿದೆ. ನಟ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ...

ಪಶ್ಚಿಮ ಬಂಗಾಳದ ಬಿಜೆಪಿ ಗೆಲುವು ಎಸ್‌ಐಆರ್‌ ಕುತಂತ್ರದ ಫಲ?

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 293 ಕ್ಷೇತ್ರಗಳ ಪೈಕಿ 200ರಲ್ಲಿ ಬಿಜಿಪಿ...

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...