Homeಕರ್ನಾಟಕಕಾಂಗ್ರೆಸ್ ತೊರೆದ ಅಕ್ಕೈ ಪದ್ಮಶಾಲಿ: ಲಿಂಗತ್ವ, ಲೈಂಗಿಕತೆ ವಿಷಯಗಳಲ್ಲಿ ರಾಜಕೀಯ ಪ್ರಬುದ್ಧತೆಗೆ ಕರೆ

ಕಾಂಗ್ರೆಸ್ ತೊರೆದ ಅಕ್ಕೈ ಪದ್ಮಶಾಲಿ: ಲಿಂಗತ್ವ, ಲೈಂಗಿಕತೆ ವಿಷಯಗಳಲ್ಲಿ ರಾಜಕೀಯ ಪ್ರಬುದ್ಧತೆಗೆ ಕರೆ

- Advertisement -
- Advertisement -

ಲೈಂಗಿಕ ಅಲ್ಪಸಂಖ್ಯಾತ ಸಮುದಾಯದ ಹಕ್ಕುಗಳ ಹೋರಾಟಗಾರ್ತಿ ಡಾ.ಅಕ್ಕೈ ಪದ್ಮಶಾಲಿ ಅವರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ(ಕೆಪಿಸಿಸಿ) ಉಪಾಧ್ಯಕ್ಷೆ ಹುದ್ದೆ ಹಾಗೂ ಕಾಂಗ್ರೆಸ್‌ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಸೋಮವಾರ (ಆ.11) ರಾಜೀನಾಮೆ ನೀಡಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರಿಗೆ ಬರೆದ ರಾಜೀನಾಮೆ ಪತ್ರದಲ್ಲಿ, “ಸೆಪ್ಟೆಂಬರ್ 20, 2020ರಂದು ತನಗೆ ಕಾಂಗ್ರೆಸ್‌ನ ಪ್ರಾಥಮಿಕ ಸದಸ್ಯತ್ವ ಕೊಟ್ಟು, ಬಳಿಕ ಕೆಪಿಸಿಸಿಗೆ ತನ್ನನ್ನು ಸೇರಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಉಪಾಧ್ಯಕ್ಷೆ ಹುದ್ದೆಗಳನ್ನು ನೀಡಿರುವುದಕ್ಕೆ ತಾನು ಅಭಾರಿ” ಎಂದು ಅಕ್ಕೈ ಹೇಳಿದ್ದಾರೆ.

“ನಮ್ಮ ತುಳಿತಕ್ಕೊಳಗಾದ ಹಾಗೂ ಶೋಷಿತ ಅಂತರ್ಲಿಂಗಿ , ಲಿಂಗತ್ವ ಹಾಗೂ ಲೈಂಗಿಕ ಅಲ್ಪಸಂಖ್ಯಾತರು, ಲೈಂಗಿಕ ಕಾರ್ಯಕರ್ತೆಯ ಸಮುದಾಯವು ಇಂದಿನ ಪ್ರಸ್ತುತ ಸಾಮಾಜಿಕ, ಆರ್ಥಿಕ, ರಾಜಕೀಯ, ಶೈಕ್ಷಣಿಕ, ಕಾನೂನು, ಮೂಲಭೂತ ಹಕ್ಕುಗಳ ಹಾಗೂ ನೀತಿ ನಿರೂಪಣೆಗಳ ನೆಲೆಗಟ್ಟಿನಿಂದ ತೀರಾ ಹಿಂದುಳಿದಿದೆ. ನಮ್ಮ ಸಮುದಾಯವನ್ನು ರಾಷ್ಟ್ರದಾದ್ಯಂತ ಸಂಘಟಿಸುವ ಸಾಮಾಜಿಕ ಜವಾಬ್ದಾರಿ ಹಾಗೂ ಸಂವಿಧಾನದ ನೈತಿಕತೆಯನ್ನು ಎತ್ತಿ ಹಿಡಿಯುವ ಜವಾಬ್ದಾರಿ ನಿಭಾಯಿಸುವ ಸಲುವಾಗಿ ಕೆಪಿಸಿಸಿ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ” ಎಂದು ಅಕ್ಕೈ ತನ್ನ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.

ಟ್ರಾನ್ಸ್ಜೆಂಡರ್ ಸಮುದಾಯ, ಲೈಂಗಿಕ ಅಲ್ಪಸಂಖ್ಯಾತರು ಮತ್ತು ಲೈಂಗಿಕ ಕಾರ್ಯಕರ್ತರ ಸಮುದಾಯಗಳ ಹೋರಾಟಗಳಿಗೆ ಬೆಂಬಲ ನೀಡಿದ ಕಾಂಗ್ರೆಸ್ ನಾಯಕರಿಗೆ ಅವರು ಧನ್ಯವಾದ ಅರ್ಪಿಸಿದ್ದಾರೆ.

ರಾಜೀನಾಮೆ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಅಕ್ಕೈ, “ನಾವು ಸಮಾಜದ ಅತ್ಯಂತ ಅಂಚಿನಲ್ಲಿರುವ ವರ್ಗ. ಒಂದು ಪಕ್ಷದೊಳಗೆ ಇರುವುದು ಒಂದು ರೀತಿಯಾದರೆ, ಅದರಿಂದ ಹೊರಬರುವುದು ನನ್ನನ್ನು ಇನ್ನಷ್ಟು ಮುಕ್ತ ಮತ್ತು ಬಲಶಾಲಿಯಾಗಿ ಮಾಡುತ್ತದೆ ಎಂದು ನಾನು ಭಾವಿಸಿದ್ದೇನೆ. ಅದಕ್ಕಾಗಿಯೇ ಈ ರಾಜಕೀಯ ವ್ಯವಸ್ಥೆಯಿಂದ ಹೊರಬಂದು ನನ್ನ ಚಳವಳಿಯ ತೊಡಗಿಸಿಕೊಳ್ಳಲು ನಿರ್ಧರಿಸಿದೆ” ಎಂದು ಹೇಳಿದ್ದಾರೆ.

ರಾಜಕಾರಣಿಗಳ ಟ್ರಾನ್ಸ್ಜೆಂಡರ್ ವಿರೋಧಿ ಹೇಳಿಕೆಗಳನ್ನು ಉಲ್ಲೇಖಿಸಿದ ಅಕ್ಕೈ, ರಾಜಕೀಯ ವಾತಾವರಣವನ್ನು ಟೀಕಿಸಿದ್ದಾರೆ. ಚಳುವಳಿಯು ಇತರ ಎಲ್ಲಾ ವ್ಯವಸ್ಥೆಗಳಿಗಿಂತ ಹೆಚ್ಚು ಪ್ರಬಲವಾಗಿದೆ. ಈ ಕಾರಣಕ್ಕೆ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿ ಚಳವಳಿಯಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಳ್ಳುವ ನಿರ್ಧಾರ ಮಾಡಿದ್ದೇನೆ” ಎಂದಿದ್ದಾರೆ.

ಲಿಂಗತ್ವ ಮತ್ತು ಲೈಂಗಿಕತೆಯ ವಿಷಯಗಳ ಬಗ್ಗೆ ರಾಜಕೀಯ ಪ್ರಬುದ್ಧತೆಗೆ ಕರೆ ನೀಡಿದ ಅವರು, “ಲಿಂಗತ್ವ ಮತ್ತು ಲೈಂಗಿಕತೆಯ ಬಗ್ಗೆ ಮಾತನಾಡುವವರು ಬಹಳ ಕಡಿಮೆ. ಪ್ರತಿಯೊಂದು ರಾಜಕೀಯ ಪಕ್ಷವು ಸಾಂಕೇತಿಕವಾಗಿ ಮಾತ್ರ ಅಲ್ಲದೆ, ಲಿಂಗತ್ವ ಮತ್ತು ಲೈಂಗಿಕ ಅಲ್ಪಸಂಖ್ಯಾತರ ಸಮಸ್ಯೆಗಳನ್ನು ಮುಖ್ಯವಾಹಿನಿಗೆ ತರುವ ಆಂತರಿಕ ದೃಢಸಂಕಲ್ಪದ ಬಗ್ಗೆ ಮಾತನಾಡಬೇಕು” ಎಂದು ಆಗ್ರಹಿಸಿದ್ದಾರೆ.

“ನನಗೆ ರಾಜಕೀಯ ಬೇಕಾ..ಚಳುವಳಿ ಬೇಕಾ? ಎಂದು ಯೋಚಿಸಿದಾಗ ಚಳುವಳಿಯೇ ಸೂಕ್ತ ಆಯ್ಕೆ ಎಂದನಿಸಿತು. ಪ್ರಸ್ತುತ ಸನ್ನಿವೇಶದಲ್ಲಿ ನಮ್ಮ ಸಮುದಾಯದ ಹಕ್ಕುಗಳ ಸಂರಕ್ಷಣೆಯಲ್ಲಿ ತೊಡಗಿಸಿಕೊಳ್ಳುವ ಅಗತ್ಯತೆ ಇದೆ. ಅದು ಈಗಿನ ರಾಜಕೀಯ ವ್ಯವಸ್ಥೆಯೊಳಗೆಯಿದ್ದು ಸಾಧ್ಯವಿಲ್ಲ. ಹಾಗಾಗಿ, ಅದರಿಂದ ಹೊರಬಂದೆ” ಎಂದು ಅಕ್ಕೈ ತಿಳಿಸಿದ್ದಾರೆ.

ಸಚಿವ ಕೆ.ಎನ್. ರಾಜಣ್ಣ ವಜಾ: ಕಾಂಗ್ರೆಸ್‌ನ ‘ದಲಿತ ವಿರೋಧಿ’ ಮುಖವಾಡ ಬಯಲು- ಬಿಜೆಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೇಮಕಾತಿ ಅಕ್ರಮ ಖಂಡಿಸಿ ಜಾರ್ಖಂಡ್‌ನಲ್ಲಿ ಧರಣಿ: ವಿದ್ಯಾರ್ಥಿಗಳ ಹೋರಾಟಕ್ಕೆ ತಲೆಬಾಗಿದ ಸಿಎಂ ಹೇಮಂತ್ ಸೊರೇನ್, ‘ನ್ಯಾಯದ ಭರವಸೆ’

ಜಾರ್ಖಂಡ್‌ನ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳು ಹಾಗೂ ಯುವಜನತೆ ತಮ್ಮ ಭವಿಷ್ಯದ ಭದ್ರತೆಗಾಗಿ ಬೀದಿಗಿಳಿದು ನಡೆಸುತ್ತಿರುವ ಬೃಹತ್ ಪ್ರತಿಭಟನೆ ಈಗ ಇಡೀ ರಾಜ್ಯದ ಗಮನ ಸೆಳೆದಿದೆ. ಜಾರ್ಖಂಡ್ ಸಾರ್ವಜನಿಕ ಸೇವಾ ಆಯೋಗ (JPSC) ಮತ್ತು...

ಪ.ಬಂಗಾಳ : ಮಮತಾ ಬ್ಯಾನರ್ಜಿ ಕಾರಿನ ಮೇಲೆ ದಾಳಿ; ಕಲ್ಲು, ಚಪ್ಪಲಿ ತೂರಿದ ಗುಂಪು

ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದಾರೆ ಎನ್ನಲಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತನ ಮನೆಗೆ ಹೋಗುತ್ತಿದ್ದಾಗ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇದ್ದ ಕಾರಿನ ಮೇಲೆ ಗುಂಪೊಂದು ದಾಳಿ ನಡೆಸಿದ ಘಟನೆ ಭಾನುವಾರ...

SIR ನೆಪದಲ್ಲಿ 1 ಕೋಟಿ ಮತ ಡಿಲೀಟ್ ಮಾಡೋ ಸಂಚು: ಎಚ್ಚೆತ್ತುಕೊಳ್ಳುವಂತೆ ಕಾರ್ಯಕರ್ತರಿಗೆ ಡಿ.ಕೆ. ಶಿವಕುಮಾರ್ ಕರೆ

SIR ನೆಪದಲ್ಲಿ ಮತದಾರರ ಪಟ್ಟಿಯಿಂದ ಒಂದು ಕೋಟಿಗೂ ಹೆಚ್ಚು ಮತಗಳನ್ನು ಅಳಿಸುವ ಸಂಚು ನಡೆಯುತ್ತಿದೆ, ಕಾಂಗ್ರೆಸ್ ಕಾರ್ಯಕರ್ತರು ಈ ವಿಚಾರದಲ್ಲಿ ಎಚ್ಚೆತ್ತುಕೊಳ್ಳಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರೆ ನೀಡಿದರು. ಕೆಪಿಸಿಸಿ ಕಚೇರಿಯ...

‘ಮೋದಿ ದೇಶದ ಯುವಕರನ್ನು ಸಬಲೀಕರಣಗೊಳಿಸಲು ಶ್ರಮಿಸುತ್ತಿದ್ದಾರೆ ’: ‘ಜೆನ್ ಝೀ’ಗಳನ್ನು ‘ಬಾಹ್ಯ ಶಕ್ತಿಗಳು ದಾರಿ ತಪ್ಪಿಸುತ್ತಿವೆ’: ಒಡಿಶಾ ಸಿಎಂ ಮೋಹನ್ ಚರಣ್ ಮಾಝಿ

ಭುವನೇಶ್ವರ: ಜಾಗತಿಕ ವೇದಿಕೆಯಲ್ಲಿ "ತಮ್ಮನ್ನು ದಾರಿ ತಪ್ಪಿಸಲು ಮತ್ತು ಭಾರತವನ್ನು ದುರ್ಬಲಗೊಳಿಸಲು" ನಿರಂತರವಾಗಿ ಪ್ರಯತ್ನಿಸುತ್ತಿರುವ "ಬಾಹ್ಯ ಶಕ್ತಿಗಳಿಗೆ" ಬಲಿಯಾಗಬೇಡಿ ಎಂದು ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಭಾನುವಾರ ಜೆನ್ ಝೀ (GEN-Z)...

ಪದವಿ ಪ್ರದಾನ ಸಮಾರಂಭಕ್ಕೆ CJI ಆಹ್ವಾನಿಸಲು ಹೈದರಾಬಾದ್ ಕಾನೂನು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ವಿರೋಧ

ಹೈದರಾಬಾದ್‌ನ ‘ನಾಲ್ಸಾರ್’ (NALSAR) ಕಾನೂನು ವಿಶ್ವವಿದ್ಯಾಲಯದ ಪದವಿ ಪ್ರದಾನ ಸಮಾರಂಭಕ್ಕೆ ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಬಾರದು ಎಂದು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಒಂದು ಗುಂಪು ಆಡಳಿತ...

3ನೇ ಹಂತದ ‘SIR’ ಕರಡು ಮತದಾರರ ಪಟ್ಟಿ ಬಿಡುಗಡೆ: 12 ರಾಜ್ಯಗಳಲ್ಲಿ 1.58 ಕೋಟಿ ಮತದಾರರ ಹೆಸರು ಕೈಬಿಟ್ಟ ಆಯೋಗ, ಇನ್ನು ಕರ್ನಾಟಕ ಬಾಕಿ

3ನೇ ಹಂತದದಲ್ಲಿ ದೇಶದ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಜುಲೈನಿಂದ ನಡೆಸಲಾದ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಪ್ರಕ್ರಿಯೆಯ ಬಳಿಕ ಬಿಡುಗಡೆಯಾದ ಕರಡು ಮತದಾರರ ಪಟ್ಟಿಯಲ್ಲಿ ಭಾರಿ ಪ್ರಮಾಣದ ಹೆಸರುಗಳು...

ದಾರುಲ್ ಉಲೂಮ್ ದಿಯೋಬಂದ್ ಆವರಣದಲ್ಲಿ ಶಿವಲಿಂಗವಿದೆ ಎಂದ ಹಿಂದುತ್ವ ಸಂಘಟನೆ : ಆ.11ರಂದು ಗಂಗಾಜಲ ಅರ್ಪಿಸುವುದಾಗಿ ಘೋಷಣೆ

ಉತ್ತರ ಪ್ರದೇಶದ ದಿಯೋಬಂದ್‌ನಲ್ಲಿರುವ ಪ್ರಸಿದ್ದ ಮುಸ್ಲಿಂ ಶಿಕ್ಷಣ ಸಂಸ್ಥೆ ದಾರುಲ್ ಉಲೂಮ್ ಆವರಣದಲ್ಲಿ ಶಿವಲಿಂಗವಿದೆ ಎಂದು ಪ್ರತಿಪಾದಿಸಿರುವ ಹಿಂದೂ ರಕ್ಷಾ ದಳ ಸಂಘಟನೆ, ಆಗಸ್ಟ್ 11 ರಂದು ಸಂಸ್ಥೆಗೆ ಭೇಟಿ ನೀಡಿ ಗಂಗಾಜಲ...

‘ಮೋದಿ ನಮ್ಮನ್ನು ಗುಂಡಿಕ್ಕಿ ಕೊಂದರೂ ಈ ಜೀವಿತಾವಧಿಯಲ್ಲಿ ವಂದೇ ಮಾತರಂ ಪೂರ್ಣ ಆವೃತ್ತಿ ಹಾಡುವುದಿಲ್ಲ’: ಕೇರಳ ಕಾಂಗ್ರೆಸ್ ಸಂಸದ ರಾಜಮೋಹನ್ ಉನ್ನಿತ್ತಾನ್

ಕಾಸರಗೋಡು (ಕೇರಳ): ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ 'ಹರ್ ಘರ್ ತಿರಂಗಾ' ಅಭಿಯಾನದ ಸಮಯದಲ್ಲಿ ರಾಷ್ಟ್ರಗೀತೆ 'ವಂದೇ ಮಾತರಂ'ನ ಸಂಪೂರ್ಣ ವಾಗ್ವಾದ/ಆವೃತ್ತಿಯನ್ನು ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಸಂವಹನದ ಸುತ್ತ ಭಾರಿ ವಿವಾದ...

ಮೊಜ್ತಬಾ ಖಾಮಿನೈ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದ ಇಸ್ರೇಲ್ ಮಾಧ್ಯಮಗಳು : ವಿಡಿಯೋ ಬಿಡುಗಡೆ ಮಾಡಿ ಕೌಂಟರ್ ಕೊಟ್ಟ ಇರಾನ್

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಾಮಿನೈ ಅವರ ಆರೋಗ್ಯ ಸ್ಥಿತಿ 'ಅತ್ಯಂತ ಗಂಭೀರವಾಗಿದೆ' ಎಂದು ಇಸ್ರೇಲಿ ಮಾಧ್ಯಮಗಳು ವರದಿ ಮಾಡಿದ ಬೆನ್ನಲ್ಲೇ, ಅವರು ಉತ್ತಮ ಆರೋಗ್ಯದಿಂದ ಇರುವಂತೆ ಕಾಣಿಸುವ ದಿನಾಂಕವಿಲ್ಲದ ವಿಡಿಯೋ ಒಂದನ್ನು...

‘ಬ್ರಿಟಿಷರಿಂದ ಕಠಿಣ ಶಿಕ್ಷೆ ಅನುಭವಿಸಿದವರು ಸಾವರ್ಕರ್’ ಎಂಬ ಕೇರಳ ಶಾಲೆಯೊಂದರ ಕ್ವಿಜ್‌ ಪ್ರಶ್ನೆ ತಂದಿಟ್ಟ ವಿವಾದ

ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರಂ ಮತ್ತು ಕುಂಬಳೆ ಉಪಜಿಲ್ಲೆಗಳ ಕಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಸ್ವಾತಂತ್ರ್ಯ ದಿನಾಚರಣೆ ಕ್ವಿಜ್‌ನಲ್ಲಿ ವಿ ವಿನಾಯಕ ದಾಮೋದರ ಸಾವರ್ಕರ್ ಕುರಿತಾದ ಪ್ರಶ್ನೆಯೊಂದು ತೀವ್ರ ವಿವಾದಕ್ಕೆ ಕಾರಣವಾಗಿದೆ....