HomeಮುಖಪುಟPUBG ನಿಷೇಧದ ಬೆನ್ನಿಗೆ FAU-G ಅನಾವರಣಗೊಳಿಸಿದ ನಟ ಅಕ್ಷಯ್ ಕುಮಾರ್‌

PUBG ನಿಷೇಧದ ಬೆನ್ನಿಗೆ FAU-G ಅನಾವರಣಗೊಳಿಸಿದ ನಟ ಅಕ್ಷಯ್ ಕುಮಾರ್‌

- Advertisement -
- Advertisement -

ಜನಪ್ರಿಯ ಮೊಬೈಲ್ ಗೇಮ್ PUBG ಸೇರಿದಂತೆ 118 ಮೊಬೈಲ್ ಅಪ್ಲಿಕೇಶನ್‌ಗಳನ್ನು ಭಾರತ ನಿಷೇಧಿಸಿದ ಎರಡು ದಿನಗಳ ನಂತರ, ಬೆಂಗಳೂರು ಮೂಲದ ಎನ್‌ಕೋರ್ ಗೇಮ್ಸ್ ಶೀಘ್ರದಲ್ಲೇ ‘ಫಿಯರ್‌ಲೆಸ್ ಮತ್ತು ಯುನೈಟೆಡ್: ಗಾರ್ಡ್ಸ್ (FAU-G)’ ಎಂಬ ಹೊಸ ಮಲ್ಟಿಪ್ಲೇಯರ್ ಮಿಡ್-ಕೋರ್ ಗೇಮಿಂಗ್ ಬಿಡುಗಡೆ ಮಾಡುವುದಾಗಿ ಘೋಷಿಸಿದೆ.

ಇದನ್ನೂ ಓದಿ: ಕೇವಲ ಆಪ್‌ಗಳನ್ನು ನಿಷೇಧಿಸಿದರೆ ಸಾಲದು; ಚೀನಾಕ್ಕೆ ತಕ್ಕ ಉತ್ತರ ನೀಡಬೇಕು: ಮಮತಾ ಬ್ಯಾನರ್ಜಿ

ಎನ್‌ಕೋರ್ ಪ್ರಕಾರ, ಈ ಗೇಮ್‌ ಭಾರತೀಯ ಭದ್ರತಾ ಪಡೆ ಎದುರಿಸುತ್ತಿರುವ ದೇಶೀಯ ಮತ್ತು ವಿದೇಶಿ ಬೆದರಿಕೆಗಳ ನೈಜ ಸನ್ನಿವೇಶಗಳನ್ನು ಆಧರಿಸಿದೆ. ಐದು ಜನ ತಂಡವಾಗಿ ಇದನ್ನು ಆಡಬಹುದಾಗಿದೆ.

ಪ್ರಸ್ತುತ FAU:G ಅಕ್ಟೋಬರ್ ಅಂತ್ಯದಲ್ಲಿ ಬಿಡುಗಡೆಯಾಗಲಿದ್ದು, ಗೇಮ್‌ನ ಮೊದಲ ಲೆವೆಲ್ ಗಾಲ್ವಾನ್ ಕಣಿವೆಯ ಹಿನ್ನಲೆಯಲ್ಲಿ ಪ್ರಾರಂಭವಾಗುವ ನಿರೀಕ್ಷೆಯಿದೆ. ಗೇಮ್‌ ಗೂಗಲ್ ಪ್ಲೇ ಸ್ಟೋರ್ ಮತ್ತು ಆಪಲ್ ಆಪ್ ಸ್ಟೋರ್‌ನಲ್ಲಿ ಲಭ್ಯವಿರುತ್ತದೆ.

ಬಾಲಿವುಡ್ ನಟ ಅಕ್ಷಯ್ ಕುಮಾರ್ ಗೇಮ್‌ ಪ್ರಾರಂಭದ ಬಗ್ಗೆ ಟ್ವೀಟ್ ಮಾಡಿದ್ದು, ಆಟದಿಂದ ಬರುವ ನಿವ್ವಳ ಆದಾಯದ 20% ವನ್ನು ’ಭಾರತ್ ಕೆ ವೀರ್ ಪ್ರತಿಷ್ಠಾನ’ಕ್ಕೆ ನೀಡಲಾಗುವುದು ಎಂದು ಹೇಳಿದರು.

ಇದನ್ನೂ ಓದಿ: PUBG ಸೇರಿದಂತೆ 118 ಜನಪ್ರಿಯ ಚೀನಿ ಅಪ್ಲಿಕೇಷನ್ ನಿಷೇಧಿಸಿದ ಭಾರತ

ಪ್ರಧಾನಿ ನರೇಂದ್ರ ಆತ್ಮನಿರ್ಭರ್ ಆಂದೋಲನವನ್ನು ಬೆಂಬಲಿಸಿ, FAU-G ಆಕ್ಷನ್ ಗೇಮ್‌ಅನ್ನು ಪ್ರಸ್ತುತಪಡಿಸಲು ಹೆಮ್ಮೆಯೆನಿಸುತ್ತದೆ. ಮನರಂಜನೆಯ ಜೊತೆಗೆ, ಆಟಗಾರರು ನಮ್ಮ ಸೈನಿಕರ ತ್ಯಾಗದ ಬಗ್ಗೆಯೂ ಕಲಿಯುತ್ತಾರೆ. ಗಳಿಸಿದ ನಿವ್ವಳ ಆದಾಯದ 20% ಅನ್ನು “ಭಾರತ್‌ಕೀವೀರ್ ಟ್ರಸ್ಟ್‌ಗೆ” ನೀಡಲಾಗುವುದು ಎಂದು ನಟ ಟ್ವೀಟ್ ಮಾಡಿದ್ದಾರೆ.

ಎನ್ಕೋರ್ ಪ್ರಕಾರ, “ಭಾರತ್ ಕೆ ವೀರ್ ಟ್ರಸ್ಟ್ ಅನ್ನು ಅಕ್ಷಯ್ ಕುಮಾರ್ ಅವರ ಪರಿಕಲ್ಪನೆಯಲ್ಲಿ ಮೂಡಿದ್ದಾಗಿದ್ದು, ಭಾರತದ ಸಶಸ್ತ್ರ ಪಡೆಗಳ ಹುತಾತ್ಮರ ಕುಟುಂಬಗಳನ್ನು ಬೆಂಬಲಿಸಲು ಗೃಹ ಸಚಿವಾಲಯವು ಇದನ್ನು ಜಾರಿಗೆ ತಂದಿದೆ” ಎಂದು ಹೇಳಿದೆ.

2018 ರಲ್ಲಿ ದಯಾನಿಧಿ ಎಂಜಿ ಮತ್ತು ವಿಶಾಲ್ ಗೊಂಡಾಲ್ ಸ್ಥಾಪಿಸಿದ ಎನ್‌ಕೋರ್ ಬೆಂಗಳೂರು ಮೂಲದ ಮೊಬೈಲ್ ಗೇಮಿಂಗ್ ಸ್ಟಾರ್ಟ್ಅಪ್ ಕಂಪೆನಿಯಾಗಿದೆ.


ಇದನ್ನೂ ಓದಿ: ತೆಲಂಗಾಣದ ಬಿಜೆಪಿ ಶಾಸಕನನ್ನು ನಿಷೇಧಿಸಿದ ಫೇಸ್‌ಬುಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...