HomeಮುಖಪುಟPUBG ನಿಷೇಧದ ಬೆನ್ನಿಗೆ FAU-G ಅನಾವರಣಗೊಳಿಸಿದ ನಟ ಅಕ್ಷಯ್ ಕುಮಾರ್‌

PUBG ನಿಷೇಧದ ಬೆನ್ನಿಗೆ FAU-G ಅನಾವರಣಗೊಳಿಸಿದ ನಟ ಅಕ್ಷಯ್ ಕುಮಾರ್‌

- Advertisement -
- Advertisement -

ಜನಪ್ರಿಯ ಮೊಬೈಲ್ ಗೇಮ್ PUBG ಸೇರಿದಂತೆ 118 ಮೊಬೈಲ್ ಅಪ್ಲಿಕೇಶನ್‌ಗಳನ್ನು ಭಾರತ ನಿಷೇಧಿಸಿದ ಎರಡು ದಿನಗಳ ನಂತರ, ಬೆಂಗಳೂರು ಮೂಲದ ಎನ್‌ಕೋರ್ ಗೇಮ್ಸ್ ಶೀಘ್ರದಲ್ಲೇ ‘ಫಿಯರ್‌ಲೆಸ್ ಮತ್ತು ಯುನೈಟೆಡ್: ಗಾರ್ಡ್ಸ್ (FAU-G)’ ಎಂಬ ಹೊಸ ಮಲ್ಟಿಪ್ಲೇಯರ್ ಮಿಡ್-ಕೋರ್ ಗೇಮಿಂಗ್ ಬಿಡುಗಡೆ ಮಾಡುವುದಾಗಿ ಘೋಷಿಸಿದೆ.

ಇದನ್ನೂ ಓದಿ: ಕೇವಲ ಆಪ್‌ಗಳನ್ನು ನಿಷೇಧಿಸಿದರೆ ಸಾಲದು; ಚೀನಾಕ್ಕೆ ತಕ್ಕ ಉತ್ತರ ನೀಡಬೇಕು: ಮಮತಾ ಬ್ಯಾನರ್ಜಿ

ಎನ್‌ಕೋರ್ ಪ್ರಕಾರ, ಈ ಗೇಮ್‌ ಭಾರತೀಯ ಭದ್ರತಾ ಪಡೆ ಎದುರಿಸುತ್ತಿರುವ ದೇಶೀಯ ಮತ್ತು ವಿದೇಶಿ ಬೆದರಿಕೆಗಳ ನೈಜ ಸನ್ನಿವೇಶಗಳನ್ನು ಆಧರಿಸಿದೆ. ಐದು ಜನ ತಂಡವಾಗಿ ಇದನ್ನು ಆಡಬಹುದಾಗಿದೆ.

ಪ್ರಸ್ತುತ FAU:G ಅಕ್ಟೋಬರ್ ಅಂತ್ಯದಲ್ಲಿ ಬಿಡುಗಡೆಯಾಗಲಿದ್ದು, ಗೇಮ್‌ನ ಮೊದಲ ಲೆವೆಲ್ ಗಾಲ್ವಾನ್ ಕಣಿವೆಯ ಹಿನ್ನಲೆಯಲ್ಲಿ ಪ್ರಾರಂಭವಾಗುವ ನಿರೀಕ್ಷೆಯಿದೆ. ಗೇಮ್‌ ಗೂಗಲ್ ಪ್ಲೇ ಸ್ಟೋರ್ ಮತ್ತು ಆಪಲ್ ಆಪ್ ಸ್ಟೋರ್‌ನಲ್ಲಿ ಲಭ್ಯವಿರುತ್ತದೆ.

ಬಾಲಿವುಡ್ ನಟ ಅಕ್ಷಯ್ ಕುಮಾರ್ ಗೇಮ್‌ ಪ್ರಾರಂಭದ ಬಗ್ಗೆ ಟ್ವೀಟ್ ಮಾಡಿದ್ದು, ಆಟದಿಂದ ಬರುವ ನಿವ್ವಳ ಆದಾಯದ 20% ವನ್ನು ’ಭಾರತ್ ಕೆ ವೀರ್ ಪ್ರತಿಷ್ಠಾನ’ಕ್ಕೆ ನೀಡಲಾಗುವುದು ಎಂದು ಹೇಳಿದರು.

ಇದನ್ನೂ ಓದಿ: PUBG ಸೇರಿದಂತೆ 118 ಜನಪ್ರಿಯ ಚೀನಿ ಅಪ್ಲಿಕೇಷನ್ ನಿಷೇಧಿಸಿದ ಭಾರತ

ಪ್ರಧಾನಿ ನರೇಂದ್ರ ಆತ್ಮನಿರ್ಭರ್ ಆಂದೋಲನವನ್ನು ಬೆಂಬಲಿಸಿ, FAU-G ಆಕ್ಷನ್ ಗೇಮ್‌ಅನ್ನು ಪ್ರಸ್ತುತಪಡಿಸಲು ಹೆಮ್ಮೆಯೆನಿಸುತ್ತದೆ. ಮನರಂಜನೆಯ ಜೊತೆಗೆ, ಆಟಗಾರರು ನಮ್ಮ ಸೈನಿಕರ ತ್ಯಾಗದ ಬಗ್ಗೆಯೂ ಕಲಿಯುತ್ತಾರೆ. ಗಳಿಸಿದ ನಿವ್ವಳ ಆದಾಯದ 20% ಅನ್ನು “ಭಾರತ್‌ಕೀವೀರ್ ಟ್ರಸ್ಟ್‌ಗೆ” ನೀಡಲಾಗುವುದು ಎಂದು ನಟ ಟ್ವೀಟ್ ಮಾಡಿದ್ದಾರೆ.

ಎನ್ಕೋರ್ ಪ್ರಕಾರ, “ಭಾರತ್ ಕೆ ವೀರ್ ಟ್ರಸ್ಟ್ ಅನ್ನು ಅಕ್ಷಯ್ ಕುಮಾರ್ ಅವರ ಪರಿಕಲ್ಪನೆಯಲ್ಲಿ ಮೂಡಿದ್ದಾಗಿದ್ದು, ಭಾರತದ ಸಶಸ್ತ್ರ ಪಡೆಗಳ ಹುತಾತ್ಮರ ಕುಟುಂಬಗಳನ್ನು ಬೆಂಬಲಿಸಲು ಗೃಹ ಸಚಿವಾಲಯವು ಇದನ್ನು ಜಾರಿಗೆ ತಂದಿದೆ” ಎಂದು ಹೇಳಿದೆ.

2018 ರಲ್ಲಿ ದಯಾನಿಧಿ ಎಂಜಿ ಮತ್ತು ವಿಶಾಲ್ ಗೊಂಡಾಲ್ ಸ್ಥಾಪಿಸಿದ ಎನ್‌ಕೋರ್ ಬೆಂಗಳೂರು ಮೂಲದ ಮೊಬೈಲ್ ಗೇಮಿಂಗ್ ಸ್ಟಾರ್ಟ್ಅಪ್ ಕಂಪೆನಿಯಾಗಿದೆ.


ಇದನ್ನೂ ಓದಿ: ತೆಲಂಗಾಣದ ಬಿಜೆಪಿ ಶಾಸಕನನ್ನು ನಿಷೇಧಿಸಿದ ಫೇಸ್‌ಬುಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...