HomeಮುಖಪುಟPUBG ನಿಷೇಧದ ಬೆನ್ನಿಗೆ FAU-G ಅನಾವರಣಗೊಳಿಸಿದ ನಟ ಅಕ್ಷಯ್ ಕುಮಾರ್‌

PUBG ನಿಷೇಧದ ಬೆನ್ನಿಗೆ FAU-G ಅನಾವರಣಗೊಳಿಸಿದ ನಟ ಅಕ್ಷಯ್ ಕುಮಾರ್‌

- Advertisement -
- Advertisement -

ಜನಪ್ರಿಯ ಮೊಬೈಲ್ ಗೇಮ್ PUBG ಸೇರಿದಂತೆ 118 ಮೊಬೈಲ್ ಅಪ್ಲಿಕೇಶನ್‌ಗಳನ್ನು ಭಾರತ ನಿಷೇಧಿಸಿದ ಎರಡು ದಿನಗಳ ನಂತರ, ಬೆಂಗಳೂರು ಮೂಲದ ಎನ್‌ಕೋರ್ ಗೇಮ್ಸ್ ಶೀಘ್ರದಲ್ಲೇ ‘ಫಿಯರ್‌ಲೆಸ್ ಮತ್ತು ಯುನೈಟೆಡ್: ಗಾರ್ಡ್ಸ್ (FAU-G)’ ಎಂಬ ಹೊಸ ಮಲ್ಟಿಪ್ಲೇಯರ್ ಮಿಡ್-ಕೋರ್ ಗೇಮಿಂಗ್ ಬಿಡುಗಡೆ ಮಾಡುವುದಾಗಿ ಘೋಷಿಸಿದೆ.

ಇದನ್ನೂ ಓದಿ: ಕೇವಲ ಆಪ್‌ಗಳನ್ನು ನಿಷೇಧಿಸಿದರೆ ಸಾಲದು; ಚೀನಾಕ್ಕೆ ತಕ್ಕ ಉತ್ತರ ನೀಡಬೇಕು: ಮಮತಾ ಬ್ಯಾನರ್ಜಿ

ಎನ್‌ಕೋರ್ ಪ್ರಕಾರ, ಈ ಗೇಮ್‌ ಭಾರತೀಯ ಭದ್ರತಾ ಪಡೆ ಎದುರಿಸುತ್ತಿರುವ ದೇಶೀಯ ಮತ್ತು ವಿದೇಶಿ ಬೆದರಿಕೆಗಳ ನೈಜ ಸನ್ನಿವೇಶಗಳನ್ನು ಆಧರಿಸಿದೆ. ಐದು ಜನ ತಂಡವಾಗಿ ಇದನ್ನು ಆಡಬಹುದಾಗಿದೆ.

ಪ್ರಸ್ತುತ FAU:G ಅಕ್ಟೋಬರ್ ಅಂತ್ಯದಲ್ಲಿ ಬಿಡುಗಡೆಯಾಗಲಿದ್ದು, ಗೇಮ್‌ನ ಮೊದಲ ಲೆವೆಲ್ ಗಾಲ್ವಾನ್ ಕಣಿವೆಯ ಹಿನ್ನಲೆಯಲ್ಲಿ ಪ್ರಾರಂಭವಾಗುವ ನಿರೀಕ್ಷೆಯಿದೆ. ಗೇಮ್‌ ಗೂಗಲ್ ಪ್ಲೇ ಸ್ಟೋರ್ ಮತ್ತು ಆಪಲ್ ಆಪ್ ಸ್ಟೋರ್‌ನಲ್ಲಿ ಲಭ್ಯವಿರುತ್ತದೆ.

ಬಾಲಿವುಡ್ ನಟ ಅಕ್ಷಯ್ ಕುಮಾರ್ ಗೇಮ್‌ ಪ್ರಾರಂಭದ ಬಗ್ಗೆ ಟ್ವೀಟ್ ಮಾಡಿದ್ದು, ಆಟದಿಂದ ಬರುವ ನಿವ್ವಳ ಆದಾಯದ 20% ವನ್ನು ’ಭಾರತ್ ಕೆ ವೀರ್ ಪ್ರತಿಷ್ಠಾನ’ಕ್ಕೆ ನೀಡಲಾಗುವುದು ಎಂದು ಹೇಳಿದರು.

ಇದನ್ನೂ ಓದಿ: PUBG ಸೇರಿದಂತೆ 118 ಜನಪ್ರಿಯ ಚೀನಿ ಅಪ್ಲಿಕೇಷನ್ ನಿಷೇಧಿಸಿದ ಭಾರತ

ಪ್ರಧಾನಿ ನರೇಂದ್ರ ಆತ್ಮನಿರ್ಭರ್ ಆಂದೋಲನವನ್ನು ಬೆಂಬಲಿಸಿ, FAU-G ಆಕ್ಷನ್ ಗೇಮ್‌ಅನ್ನು ಪ್ರಸ್ತುತಪಡಿಸಲು ಹೆಮ್ಮೆಯೆನಿಸುತ್ತದೆ. ಮನರಂಜನೆಯ ಜೊತೆಗೆ, ಆಟಗಾರರು ನಮ್ಮ ಸೈನಿಕರ ತ್ಯಾಗದ ಬಗ್ಗೆಯೂ ಕಲಿಯುತ್ತಾರೆ. ಗಳಿಸಿದ ನಿವ್ವಳ ಆದಾಯದ 20% ಅನ್ನು “ಭಾರತ್‌ಕೀವೀರ್ ಟ್ರಸ್ಟ್‌ಗೆ” ನೀಡಲಾಗುವುದು ಎಂದು ನಟ ಟ್ವೀಟ್ ಮಾಡಿದ್ದಾರೆ.

ಎನ್ಕೋರ್ ಪ್ರಕಾರ, “ಭಾರತ್ ಕೆ ವೀರ್ ಟ್ರಸ್ಟ್ ಅನ್ನು ಅಕ್ಷಯ್ ಕುಮಾರ್ ಅವರ ಪರಿಕಲ್ಪನೆಯಲ್ಲಿ ಮೂಡಿದ್ದಾಗಿದ್ದು, ಭಾರತದ ಸಶಸ್ತ್ರ ಪಡೆಗಳ ಹುತಾತ್ಮರ ಕುಟುಂಬಗಳನ್ನು ಬೆಂಬಲಿಸಲು ಗೃಹ ಸಚಿವಾಲಯವು ಇದನ್ನು ಜಾರಿಗೆ ತಂದಿದೆ” ಎಂದು ಹೇಳಿದೆ.

2018 ರಲ್ಲಿ ದಯಾನಿಧಿ ಎಂಜಿ ಮತ್ತು ವಿಶಾಲ್ ಗೊಂಡಾಲ್ ಸ್ಥಾಪಿಸಿದ ಎನ್‌ಕೋರ್ ಬೆಂಗಳೂರು ಮೂಲದ ಮೊಬೈಲ್ ಗೇಮಿಂಗ್ ಸ್ಟಾರ್ಟ್ಅಪ್ ಕಂಪೆನಿಯಾಗಿದೆ.


ಇದನ್ನೂ ಓದಿ: ತೆಲಂಗಾಣದ ಬಿಜೆಪಿ ಶಾಸಕನನ್ನು ನಿಷೇಧಿಸಿದ ಫೇಸ್‌ಬುಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...