Homeಮುಖಪುಟಟೀಕೆಗೆ ಬೆದರಿದ ಚಿತ್ರತಂಡ: ಲಕ್ಷ್ಮೀ ಬಾಂಬ್ ಚಿತ್ರದ ಟೈಟಲ್‌ನಲ್ಲಿ 'ಬಾಂಬ್' ನಿಷ್ಕ್ರಿಯ!

ಟೀಕೆಗೆ ಬೆದರಿದ ಚಿತ್ರತಂಡ: ಲಕ್ಷ್ಮೀ ಬಾಂಬ್ ಚಿತ್ರದ ಟೈಟಲ್‌ನಲ್ಲಿ ‘ಬಾಂಬ್’ ನಿಷ್ಕ್ರಿಯ!

ಲಕ್ಷ್ಮೀ ಬಾಂಬ್ ಚಿತ್ರದ ಹೆಸರು ಹಿಂದೂ ದೇವತೆ ಲಕ್ಷ್ಮಿಗೆ ಸಾಕಷ್ಟು ಅವಹೇಳನಕಾರಿ ಎಂದು ರಜಪೂತ್ ಕರ್ಣಿ ಸೇನಾದ ಲೀಗಲ್ ನೋಟಿಸ್‌ನಲ್ಲಿ ಹೇಳಲಾಗಿದೆ.

- Advertisement -
- Advertisement -

ಬಾಲಿವುಡ್‌ನ ಬಹು ನಿರೀಕ್ಷಿತ ಚಿತ್ರ ಲಕ್ಷ್ಮೀ ಬಾಂಬ್ ಟ್ರೈಲರ್ ಮತ್ತು ಬುರ್ಜ್ ಖಲೀಫಾ ಹಾಡುಗಳು ಸಾಕಷ್ಟು  ಹವಾ ಕ್ರಿಯೇಟ್ ಮಾಡಿವೆ. ಇದು ಚಿತ್ರತಂಡಕ್ಕೆ ಖುಷಿಯ ವಿಚಾವಾದರೆ, ಇತ್ತ ಕೆಲ ಸಂಘಟನೆಗಳು ಚಿತ್ರವನ್ನು ಬ್ಯಾನ್ ಮಾಡಬೇಕು ಎಂದು ಒತ್ತಾಯಿಸಿವೆ.

ಲಕ್ಷ್ಮೀ ಬಾಂಬ್‌ನ ಟ್ರೈಲರ್‌ ತಮಾಷೆಯ ಮತ್ತು ಭಯಾನಕ ದೃಶ್ಯಗಳಿಂದ ಪ್ರೇಕ್ಷಕರನ್ನು ಮೆಚ್ಚಿಸುವಲ್ಲಿ ಯಶಸ್ವಿಯಾಯಿತು. ಲೈಂಗಿಕ ಅಲ್ಪಸಂಖ್ಯಾತರಾಗಿ ನಟ ಅಕ್ಷಯ್ ಕುಮಾರ್ ಪಾತ್ರವು ಈಗಾಗಲೇ ಸಾಕಷ್ಟು ಸಂಚಲನವನ್ನು ಸೃಷ್ಟಿಸುತ್ತಿದೆ.

ಆದರೆ ಇಂದು(ಅ.29) ರಾಘವ ಲಾರೆನ್ಸ್ ನಿರ್ದೇಶಿಸಿದ ಚಿತ್ರವು ತನ್ನ ಸೆನ್ಸಾರ್ ಪ್ರಮಾಣಪತ್ರಕ್ಕಾಗಿ ಹೋಗಿ ಸ್ಕ್ರೀನಿಂಗ್ ಅನ್ನು ಪೋಸ್ಟ್ ಮಾಡಿದೆ. ಜೊತೆಗೆ ಚಿತ್ರ ತಯಾರಕರು ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಶನ್ (ಸಿಬಿಎಫ್‌ಸಿ) ಯೊಂದಿಗೆ ಚರ್ಚಿಸಿ, ಚಿತ್ರದ ಶೀರ್ಷಿಕೆಯನ್ನು ಬದಲಾಯಿಸಲು ನಿರ್ಧರಿಸಿದ್ದಾರೆ.

ಚಿತ್ರದ ಶೀರ್ಷಿಕೆಗೆ ವಿರೋಧಗಳು ಬಂದ ಹಿನ್ನೆಲೆ, ಚಿತ್ರ ವೀಕ್ಷಕರ ಭಾವನೆಗಳನ್ನು ಗಮನದಲ್ಲಿಟ್ಟುಕೊಂಡು, ಚಿತ್ರದ ನಿರ್ಮಾಪಕರಾದ ಶಬಿನಾ ಖಾನ್, ತುಷಾರ್ ಕಪೂರ್ ಮತ್ತು ಅಕ್ಷಯ್ ಕುಮಾರ್ ಈಗ ತಮ್ಮ ಚಿತ್ರದ ಹೆಸರನ್ನು ಲಕ್ಷ್ಮೀ ಬಾಂಬ್ ಬದಲು ಲಕ್ಷ್ಮೀ ಎಂದು ಬದಲಾಯಿಸಲಿದ್ದಾರೆ.

ಇದನ್ನೂ ಓದಿ: ದ್ವೇಷಕಾರುವ ಚಾನೆಲ್‌ಗಳಿಗೆ ಜಾಹೀರಾತು ನಿಷೇಧ; ಬಜಾಜ್ & ಪಾರ್ಲೆಯನ್ನು ಶ್ಲಾಘಿಸಿದ ಬಾಲಿವುಡ್

ನವೆಂಬರ್ 9 ರಂದು ತೆರೆಗೆ ಬರಲಿರುವ ಚಿತ್ರಕ್ಕೆ ಅಖಿಲ ಭಾರತ ಹಿಂದೂ ಮಹಾಸಭಾ ವಿರೋಧ ವ್ಯಕ್ತಪಡಿಸಿತ್ತು. ಈ ಚಿತ್ರ ಹಿಂದೂಗಳ ಭಾವನೆಗಳನ್ನು ಘಾಸಿಗೊಳಿಸುತ್ತದೆ ಎಂದು ರಾಜ್ಯ ಕಾರ್ಯಕಾರಿ ಅಧ್ಯಕ್ಷ ರಾಜೇಶ್ ಪವಿತ್ರನ್ ಹೇಳಿದ್ದರು.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಿಂದೂಗಳ ಭಾವನೆಗಳನ್ನು ಈ ಚಿತ್ರ ಅವಮಾನಿಸಿದೆ. ಈ ಚಿತ್ರದಲ್ಲಿ ನಾಯಕನ ಹೆಸರು ಆಸಿಫ್, ನಾಯಕಿಯ ಹೆಸರು ಪ್ರಿಯಾ ಯಾದವ್ ಆಗಿದೆ. ಚಿತ್ರ “ಲವ್ ಜಿಹಾದ್” ಅನ್ನು ಪ್ರಚಾರ ಪಡಿಸುತ್ತದೆ ಹಾಗಾಗಿ ಚಲನಚಿತ್ರವನ್ನು ನಿಷೇಧಿಸುವಂತೆ ಸರ್ಕಾರಕ್ಕೆ ಕರೆ ನೀಡಿದ್ದರು.

“ಚಲನಚಿತ್ರ ನಿರ್ಮಾಪಕರು ಕೋಮು ಗಲಭೆಗಳನ್ನು ಪ್ರಚೋದಿಸಲು ಪ್ರಯತ್ನಿಸುತ್ತಿದ್ದಾರೆ. ದೀಪಾವಳಿ ಸಂದರ್ಭದಲ್ಲಿ ಲಕ್ಷ್ಮೀ ಬಾಂಬ್ ಎಂಬ ಚಲನಚಿತ್ರವನ್ನು ನಿರ್ಮಿಸುವವರು ಎಂದಾದರೂ ತಸ್ಲೀಮಾ ಬಾಂಬ್ ಎಂಬ ಚಿತ್ರ ಮಾಡಲು ಧೈರ್ಯ ಮಾಡುತ್ತಾರೆಯೇ?” ಎಂದು ಪ್ರಶ್ನಿಸಿದ್ದರು.

ಇನ್ನು ಈ ಚಿತ್ರವನ್ನು ಬಹಿಷ್ಕರಿಸುವಂತೆ ಅನೇಕ ಜನರು ಒತ್ತಾಯಿಸಿದ್ದಾರೆ. ಚಿತ್ರದ ಹೆಸರು ಹಿಂದು ದೇವತೆಗೆ ಅವಮಾನ ಮಾಡುತ್ತದೆ. ಇದರಿಂದ ಹಿಂದೂಗಳ ಭಾವನೆಗೆ ಪೆಟ್ಟು ಬೀಳುತ್ತದೆ ಎಂದು ಹೇಳಲಾಗಿದೆ. ಸಾಮಾಜಿಕ ಮಾಧ್ಯಮಗಳಲ್ಲೂ #bycottlaxmibomb ಟ್ರೆಂಡಿಂಗ್ ಆಗಿದೆ.

ಇದನ್ನೂ ಓದಿ: PUBG ನಿಷೇಧದ ಬೆನ್ನಿಗೆ FAU-G ಅನಾವರಣಗೊಳಿಸಿದ ನಟ ಅಕ್ಷಯ್ ಕುಮಾರ್‌

 

ಹೀಗಾಗಿ ಚಿತ್ರದ ಹೆಸರನ್ನು ಬದಲಾಯಿಸುವಂತೆ ಒತ್ತಾಯಿಸಿ ರಜಪೂತ್ ಕರ್ಣಿ ಸೇನಾ ಪರವಾಗಿ ವಕೀಲ ರಾಘವೇಂದ್ರ ಮೆಹ್ರೋತ್ರಾ ಚಿತ್ರದ ನಿರ್ಮಾಪಕರಿಗೆ ನಿನ್ನೆ(ಅ.28) ಲೀಗಲ್ ನೋಟಿಸ್ ಕಳುಹಿಸಿದ್ದರು. ಲಕ್ಷ್ಮೀ ಬಾಂಬ್ ಚಿತ್ರದ ಹೆಸರು ಹಿಂದೂ ದೇವತೆ ಲಕ್ಷ್ಮಿಗೆ ಸಾಕಷ್ಟು ಅವಹೇಳನಕಾರಿ ಎಂದು ಲೀಗಲ್ ನೋಟಿಸ್‌ನಲ್ಲಿ ಹೇಳಲಾಗಿದೆ. ಲಕ್ಷ್ಮಿ ದೇವಿಯನ್ನು ಅವಮಾನಿಸಲು ತಯಾರಕರು ಉದ್ದೇಶಪೂರ್ವಕವಾಗಿ ಚಿತ್ರದ ಶೀರ್ಷಿಕೆಯನ್ನು ಇಟ್ಟುಕೊಂಡಿದ್ದಾರೆ ಎಂದು ನೋಟಿಸ್‌ನಲ್ಲಿ ತಿಳಿಸಲಾಗಿತ್ತು.

ಅಕ್ಷಯ್ ಕುಮಾರ್ ಮತ್ತು ಕಿಯಾರಾ ಅಡ್ವಾಣಿ ಅಭಿನಯದ ಥ್ರಿಲ್ಲರ್ ಮತ್ತು ಹಾಸ್ಯ ತುಂಬಿರುವ ಚಿತ್ರ ಈಗ ಲಕ್ಷ್ಮಿ ಎಂದು ಹೆಸರು ಬದಲಾಗಿದೆ. ಈ ಚಿತ್ರವು ಲಾರೆನ್ಸ್ ನಿರ್ದೇಶನದ 2011 ರ ತಮಿಳು ಚಿತ್ರ ಕಾಂಚನ ರೀಮೇಕ್ ಆಗಿದೆ. ಇದು ಕನ್ನಡದಲ್ಲಿ ಕಲ್ಪನ ಹೆಸರಿನಲ್ಲಿಯಲ್ಲಿಯೂ ಸಹ ರೀಮೇಕ್ ಆಗಿತ್ತು. ‘ಲಕ್ಷ್ಮಿ’ ಲಾರೆನ್ಸ್  ಅವರ ನಿರ್ದೇಶನದ ಚೊಚ್ಚಲ ಹಿಂದಿ ಚಿತ್ರವಾಗಿದೆ.

ಚಿತ್ರದಲ್ಲಿ ಬರುವ ಕೆಲ ಪಾತ್ರಗಳ ಹೆಸರುಗಳನ್ನು ಇಟ್ಟುಕೊಂಡು ಚಿತ್ರ ಬಹಿಷ್ಕರಣೆಗೆ ಕರೆ ನೀಡುವುದು, ಚಿತ್ರದ ಹೆಸರು ಬದಲಾವಣೆಗೆ ಒತ್ತಾಯಿಸುವುದು ಇತ್ತಿಚೆಗೆ ಹೆಚ್ಚಾಗುತ್ತಿದೆ ಎಂದು ಕೆಲವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಹಿಂದೆ 2016 ರಲ್ಲಿ ತೆಲುಗಿನಲ್ಲಿ ಲಕ್ಷ್ಮಿ ಬಾಂಬ್ ಎಂಬ ಹೆಸರಿನ ಚಿತ್ರ ಬಿಡುಗಡೆಯಾಗಿತ್ತು.


ಇದನ್ನೂ ಓದಿ: ತನಿಷ್ಕ್ ಜಾಹೀರಾತಿಗೆ ಟ್ವಿಟ್ಟರ್‌ನಲ್ಲಿ ಭಾರಿ ಬೆಂಬಲ: ಅಂತರ್‌ಧರ್ಮೀಯ ವಿವಾಹಿತರ ಮನದಾಳದ ಮಾತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...